Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ರೈತರಿಗೆ ಗುಡ್ ನ್ಯೂಸ್ : `ಪಹಣಿ’ ದೋಷಗಳಿಗೆ ಇನ್ನು ಮುಕ್ತಿ, ಭೂ ದಾಖಲೆಗಳ ಶುದ್ದೀಕರಣಕ್ಕೆ ಸರ್ಕಾರದ ಮಾಸ್ಟರ್ ಪ್ಲ್ಯಾನ್.!

13/04/2026 5:54 AM

ಅಫ್ಶಾನ್ ಯಾಸ್ಮಿನ್ ಅವರಿಗೆ ‘ಕೆ.ಎನ್. ಸುಬ್ರಮಣ್ಯ ಪ್ರಶಸ್ತಿ’ ಪ್ರದಾನ: ಪತ್ರಿಕೋದ್ಯಮದ ಅಪ್ರತಿಮ ಸಾಧನೆಗೆ ಸಂದ ಗೌರವ

12/04/2026 11:01 PM

ಸಾಗರದ ಪತ್ರಕರ್ತ ಮಹೇಶ್ ಹೆಗಡೆ ಅವರಿಗೆ ರಾಜ್ಯಮಟ್ಟದ ‘ಅಭಿಮಾನಿ ಪ್ರಕಾಶನ ಪ್ರಶಸ್ತಿ’ ಪ್ರದಾನ

12/04/2026 10:22 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಾಗಡಿಯ ಸರ್ವತೋಮುಖ ಅಭಿವೃದ್ಧಿಗೆ ಎಲ್ಲ ರೀತಿಯ ಸಹಕಾರ: ಸಿಎಂ ಸಿದ್ದರಾಮಯ್ಯ ಭರವಸೆ
KARNATAKA

ಮಾಗಡಿಯ ಸರ್ವತೋಮುಖ ಅಭಿವೃದ್ಧಿಗೆ ಎಲ್ಲ ರೀತಿಯ ಸಹಕಾರ: ಸಿಎಂ ಸಿದ್ದರಾಮಯ್ಯ ಭರವಸೆ

By kannadanewsnow0913/09/2024 5:02 PM

ಮಾಗಡಿ : ಮಾಗಡಿ ತಾಲ್ಲೂಕಿನ ಸರ್ವತೋಮುಖ ಅಭಿವೃದ್ಧಿಗೆ ನಮ್ಮ ಸರ್ಕಾರ ಎಲ್ಲಾ ರೀತಿಯ ಸಹಕಾರ ಬೆಂಬಲವನ್ನು ಕೊಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಅವರು ಇಂದು ಮಾಗಡಿ ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ, ನೂತನವಾಗಿ ನಿರ್ಮಾಣಗೊಂಡಿರುವ ಬೆಂಗಳೂರು ಹಾಲು ಒಕ್ಕೂಟದ ಮಾಗಡಿ ನೂತನ ಶಿಬಿರ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದರು.

ಬೆಂಗಳೂರಿನ ಹೊರವಲಯದಲ್ಲಿರುವ ಮಾಗಡಿ ಬಹಳ ಪ್ರಮುಖ ಪಟ್ಟಣ. ಕೆಂಪೇಗೌಡರ ರಾಜಧಾನಿಯಾಗಿದ್ದ ನಗರ. ಮಾಗಡಿ ಅಭಿವೃದ್ಧಿಯಾಗಬೇಕು ಎನ್ನುವ ವಾದದಲ್ಲಿ ನನ್ನ ಸಹಮತವೂ ಇದೆ ಎಂದರು. ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಕೆಂಪೇಗೌಡರ ಜಯಂತಿ ಕಾರ್ಯಕ್ರಮವನ್ನು ಆಚರಣೆಗೆ ತಂದು ಪ್ರಾಧಿಕಾರವನ್ನೂ ರಚನೆ ಮಾಡಲಾಯಿತು. ಇದರ ಉದ್ದೇಶ ಕೆಂಪೇಗೌಡರನ್ನು ಎಲ್ಲರೂ ಸ್ಮರಿಸಬೇಕು ಎನ್ನುವುದಾಗಿತ್ತು. ಒಕ್ಕಲಿಗರ ನಾಯಕರು ಎಂದು ಹೇಳಿಕೊಳ್ಳುವವರು ಇದನ್ನು ಮಾಡಲಿಲ್ಲ. ಕೆಂಪೇಗೌಡರು ಬೆಂಗಳೂರನ್ನು ಕಟ್ಟಿದ್ದು, ಅವರ ಜಯಂತ್ಯೋತ್ಸವವನ್ನು ಆಚರಿಸುವುದು ಸರ್ಕಾರದ ಕರ್ತವ್ಯ ಎಂದು ಭಾವಿಸಿ 2016-17 ರಲ್ಲಿ ಆಚರಣೆಗೆ ತಂದಿದ್ದ ನಮ್ಮ ಸರ್ಕಾರ ಎಂದರು.

ಬಿಜೆಪಿ ಸುಳ್ಳು ಆರೋಪ ಮಾಡುತ್ತಿದೆ

ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ ಮೇಲೆ ಅಭಿವೃದ್ಧಿ ಕೆಲಸಗಳಿಗೆ ಹಣವಿಲ್ಲ ಎಂದು ವಿರೋಧ ಪಕ್ಷದವರು ಆರೋಪಿಸುತ್ತಿದ್ದಾರೆ. ಹಾಗಾದರೆ ಅಭಿವೃದ್ಧಿ ಕೆಲಸಗಳಿಗೆ 120 ಕೋಟಿ ರೂ.ಗಳನ್ನು ಅನುದಾನವನ್ನು ಏಕೆ ಮೀಸಲಿಡಲಾಗಿದೆ ಎಂದು ಪ್ರಶ್ನಿಸಿದರು. ಬಿಜೆಪಿಯವರು ಸುಳ್ಳು ಆರೋಪಗಳನ್ನು ಮಾಡುತ್ತಾರೆ. ಹಾಲಿಗೆ ಬೆಲೆಏರಿಸಲಾಗಿದೆ ಎಂದು ಬಿಜೆಪಿ ಆರೋಪಿಸಿದರು, ರೈತರಿಗೆ ಹಣ ಸೇರಬೇಡವೇ? ರೈತರಿಗೆ ಇದನ್ನು ಪ್ರಶ್ನಿಸಲು ಸಾಧ್ಯವಿಲ್ಲವೇ ಎಂದು ಪ್ರಶ್ನಿಸಿದರು. ಹಾಲಿಗೆ 5.೦೦ ರೂ.ಗಳ ಪ್ರೋತ್ಸಾಹಧನ ಘೋಷಿಸಿದ್ದು ನಮ್ಮ ಸರ್ಕಾರ. ಕ್ಷೀರಭಾಗ್ಯ ಯೋಜನೆಯನ್ನು ಜಾರಿಗೆ ತಂದು ರೈತರಿಗೆ ಅನುಕೂಲ ಮಾಡಿಕೊಡಲಾಗಿದೆ. ಏನೂ ಮಾಡದೇ ರೈತರ ಮಕ್ಕಳು ,ಮಣ್ಣಿನ ಮಕ್ಕಳು ಎನ್ನುತ್ತಾರೆ. ಅಭಿವೃದ್ಧಿಗಾಗಿ ಮೀಸಲಿಡಲಾಗಿದೆ ಎಂದರು.

ಮೋದಿಯವರ 10 ವರ್ಷದ ಅವಧಿಯಲ್ಲಿ ದೇಶದ ಸಾಲ 182 ಲಕ್ಷ ಕೋಟಿಗೆ ತಲುಪಿದೆ

ಗ್ಯಾರಂಟಿ ಯೋಜನೆಗಳಿಗೆ 56 ಸಾವಿರ ಕೋಟಿ ರೂ.ಗಳನ್ನು ಮೀಸಲಿರಿಸಲಾಗಿದೆ. ರಾಜ್ಯದ ಸುಮಾರು 1.20 ಲಕ್ಷ ಕುಟುಂಬಗಳಿಗೆ ವಾರ್ಷಿಕವಾಗಿ 50 ರಿಂದ 60 ಸಾವಿರ ರೂ.ಗಳ ಆರ್ಥಿಕ ಸಹಾಯವನ್ನು ಗ್ಯಾರಂಟಿಗಳ ಮೂಲಕ ಒದಗಿಸಲಾಗುತ್ತಿದೆ. ದೇಶದ ಸ್ವಾತಂತ್ರ್ಯಕ್ಕೆ ದುಡಿದ ನೆಹರೂ ರವರು ಹಾಗೂ ಇಂದಿರಾಗಾಂಧಿ ಸೇರಿದಂತೆ ಹಲವು ನಾಯಕರು ದೇಶಕ್ಕಾಗಿ ದುಡಿದಿದ್ದಾರೆ. ನರೇಂದ್ರ ಮೋದಿ ಸುಳ್ಳು ಹೇಳುತ್ತಾರೆ ಎಂದು ಈ ಬಾರಿ ಮೋದಿಯವರಿಗ ವೋಟು ನೀಡಲಾಗಿದೆಯೇ ಎಂದು ಪ್ರಶ್ನಿಸಿದ್ದಾರೆ. ಭಾರತದ ಮೇಲಿನ ಸಾಲ 182 ಲಕ್ಷ ಕೋಟಿಯನ್ನು ಮೀರುತ್ತಿದೆ. ಹಿಂದೆ ಸಾಲದ ಮೊತ್ತ 53.11 ಲಕ್ಷ ಕೋಟಿ ಇದ್ದ ಸಾಲದ ಮೊತ್ತ ಈಗ ಕಳೆದ 10 ವರ್ಷದಲ್ಲಿ 182 ಲಕ್ಷ ಕೋಟಿ ರೂ.ಗೆ ತಲುಪಿದೆ. ಗರೀಬಿ ಹಠಾವೋ, ಆಹಾರಸ್ವಾವಲಂಬನೆಯಂತ ಜನಪರ ಕಾರ್ಯಕ್ರಮಗಳನ್ನು ಕಾಂಗ್ರೆಸ್ ಪಕ್ಷ ದೇಶಕ್ಕೆ ಕೊಟ್ಟಿದೆ ಎಂದರು.

ಎಸ್ ಸಿ ಎಸ್ ಪಿ / ಟಿಎಸ್ ಪಿ ಜಾರಿಗೆ ತಂದಿದ್ದು ಕಾಂಗ್ರೆಸ್ ಸರ್ಕಾರ

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದವರ ಅನುದಾನವನ್ನು ಬೇರೆಯವರಿಗೆ ನೀಡಲಾಗಿದೆ ಎಂದು ಸುಳ್ಳು ನುಡಿದರು. ಆದರೆ 89.62 ಕೋಟಿ ಮೊತ್ತದ ಅವ್ಯವಹಾರವಾಗಿದ್ದು, ಅದರಲ್ಲಿ 56 ಕೋಟಿ ವಸೂಲು ಮಾಡಲಾಗಿದೆ. ಆದರೂ ಅಭಿವೃದ್ಧಿ ನಿಗಮಕ್ಕೆ ಈ ಮುಂಚೆ ನಿಗದಿಪಡಿಸಿರುವಂತೆ ಅನುದಾನವನ್ನು ನೀಡಿ, ಸಮುದಾಯದ ಅಭಿವೃದ್ಧಿಗೆ ಬಳಸಲಾಗುವುದು. ಎಸ್ ಸಿ ಎಸ್ ಪಿ / ಟಿಎಸ್ ಪಿ ಕಾನೂನನ್ನು ಜಾರಿಗೆ ತಂದಿದ್ದು ಕಾಂಗ್ರೆಸ್ ಸರ್ಕಾರ. ಈ ರೀತಿಯ ಜನಪರ ಕಾನೂನು ಬಿಜೆಪಿ ಆಡಳಿತದಲ್ಲಿರುವ ಯಾವುದೇ ರಾಜ್ಯದಲ್ಲಿ ಜಾರಿಯಾಗಿಲ್ಲ. ಬಿಜೆಪಿಯವರಿಗೆ ಕಾಂಗ್ರೆಸ್ ಸರ್ಕಾರವನ್ನು ಮೂದಲಿಸಲು ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದವರ ಜನಸಂಖ್ಯೆಗೆ ಅನುಗುಣವಾಗಿ ಅವರ ಅಭಿವೃದ್ಧೀಗೆ ಪ್ರತ್ಯೇಕ ಅನುದಾನ ನೀಡುವ ಕಾನೂನು ಕಾಂಗ್ರೆಸ್ ಸರ್ಕಾರ ಎಂದರು.

ಮೋದಿಯವರು ಬಂಡವಾಳಶಾಹಿಗಳ ಪರ

ಬಿಜೆಪಿಯವರ ಬಡವರ ಹಾಗೂ ರೈತರ ವಿರೋಧಿಗಳಾಗಿದ್ದಾರೆ. ಬಿಜೆಪಿಯವರು ಕೈಗಾರಿಕೋದ್ಯಮಿಗಳ 16 ಲಕ್ಷ ಕೋಟಿ ರೂ.ಗಳ ಸಾಲವನ್ನು ಮನ್ನಾ ಮಾಡಿದರು. ಮೋದಿಯವರು ಬಂಡವಾಳಶಾಹಿಗಳ ಪರವಾಗಿದ್ದಾರೆ. ರಾಜ್ಯದ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಬಹಳಷ್ಟು ಹಗರಣಗಳು ನಡೆದಿವೆ. ಸುಳ್ಳು ಹೇಳುವ ಬಿಜೆಪಿ ಪಕ್ಷವನ್ನು ನಂಬಬೇಡಿ ಎಂದು ಜನರಿಗೆ ತಿಳಿಸಿದರು. ಕಾಂಗ್ರೆಸ್ ಸರ್ಕಾರ ಸದಾ ಬಡಜನರ ಪರವಾಗಿದೆ. ಶಕ್ತಿ ಯೋಜನೆಯಡಿ 3.50 ಕೋಟಿ ಜನ ಉಚಿತವಾಗಿ ಪ್ರಯಾಣಿಸಿದ್ದು, ಇದುವರೆಗೆ 287 ಕೋಟಿ ಮಹಿಳೆಯರು ಯೋಜನೆಯ ಲಾಭ ಪಡೆದಿದ್ದಾರೆ. ನಾನು ಬಡವರ ಏಳಿಗೆಗಾಗಿಯೇ ಅಧಿಕಾರದಲ್ಲಿರುವುದು ಎಂದು ತಿಳಿಸಿರುವುದು. ಸರ್ಕಾರ ಹಾಲು ಉತ್ಪಾದಕರ , ದಲಿತರ, ಅಲ್ಪಸಂಖ್ಯಾತರ, ಬಡವರ ಪರವಾಗಿರಲಿದೆ. ನನ್ನ ಜೀವನ ತೆರೆದ ಪುಸ್ತಕವಿದ್ದಂತೆ.ರಾಜ್ಯದ ಜನರ ಅಭಿವೃದ್ಧಿಯಲ್ಲಿ ಯಾವುದೇ ರಾಜಿ ಇಲ್ಲ ಎಂದು ತಿಳಿಸಿದರು.

ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ಇಬ್ಬರು ‘IPS ಅಧಿಕಾರಿ’ಗಳ ವರ್ಗಾವಣೆ | IPS Officer Transfer

BIG NEWS : ಕೇಜ್ರಿವಾಲ್ ಗೆ ಸುಪ್ರೀಂಕೋರ್ಟ್ ಜಾಮೀನು ನೀಡಿದ್ದು ಕೇಂದ್ರ ಸರ್ಕಾರಕ್ಕೆ ಕೊಟ್ಟ ತಪರಾಕಿ : ಸಿಎಂ ಸಿದ್ದರಾಮಯ್ಯ

BREAKING: ಶೀಘ್ರವೇ ನಂದಿನಿ ಹಾಲಿನ ದರ ಹೆಚ್ಚಳ: ಸಿಎಂ ಸಿದ್ದರಾಮಯ್ಯ ಘೋಷಣೆ | Nandini Milk Price Hike

Share. Facebook Twitter LinkedIn WhatsApp Email

Related Posts

ರಾಜ್ಯದ ರೈತರಿಗೆ ಗುಡ್ ನ್ಯೂಸ್ : `ಪಹಣಿ’ ದೋಷಗಳಿಗೆ ಇನ್ನು ಮುಕ್ತಿ, ಭೂ ದಾಖಲೆಗಳ ಶುದ್ದೀಕರಣಕ್ಕೆ ಸರ್ಕಾರದ ಮಾಸ್ಟರ್ ಪ್ಲ್ಯಾನ್.!

13/04/2026 5:54 AM2 Mins Read

ಅಫ್ಶಾನ್ ಯಾಸ್ಮಿನ್ ಅವರಿಗೆ ‘ಕೆ.ಎನ್. ಸುಬ್ರಮಣ್ಯ ಪ್ರಶಸ್ತಿ’ ಪ್ರದಾನ: ಪತ್ರಿಕೋದ್ಯಮದ ಅಪ್ರತಿಮ ಸಾಧನೆಗೆ ಸಂದ ಗೌರವ

12/04/2026 11:01 PM2 Mins Read

ಸಾಗರದ ಪತ್ರಕರ್ತ ಮಹೇಶ್ ಹೆಗಡೆ ಅವರಿಗೆ ರಾಜ್ಯಮಟ್ಟದ ‘ಅಭಿಮಾನಿ ಪ್ರಕಾಶನ ಪ್ರಶಸ್ತಿ’ ಪ್ರದಾನ

12/04/2026 10:22 PM2 Mins Read
Recent News

ರಾಜ್ಯದ ರೈತರಿಗೆ ಗುಡ್ ನ್ಯೂಸ್ : `ಪಹಣಿ’ ದೋಷಗಳಿಗೆ ಇನ್ನು ಮುಕ್ತಿ, ಭೂ ದಾಖಲೆಗಳ ಶುದ್ದೀಕರಣಕ್ಕೆ ಸರ್ಕಾರದ ಮಾಸ್ಟರ್ ಪ್ಲ್ಯಾನ್.!

13/04/2026 5:54 AM

ಅಫ್ಶಾನ್ ಯಾಸ್ಮಿನ್ ಅವರಿಗೆ ‘ಕೆ.ಎನ್. ಸುಬ್ರಮಣ್ಯ ಪ್ರಶಸ್ತಿ’ ಪ್ರದಾನ: ಪತ್ರಿಕೋದ್ಯಮದ ಅಪ್ರತಿಮ ಸಾಧನೆಗೆ ಸಂದ ಗೌರವ

12/04/2026 11:01 PM

ಸಾಗರದ ಪತ್ರಕರ್ತ ಮಹೇಶ್ ಹೆಗಡೆ ಅವರಿಗೆ ರಾಜ್ಯಮಟ್ಟದ ‘ಅಭಿಮಾನಿ ಪ್ರಕಾಶನ ಪ್ರಶಸ್ತಿ’ ಪ್ರದಾನ

12/04/2026 10:22 PM

‘ಅರುಣಾಚಲ ಪ್ರದೇಶ ಎಂದಿಗೂ ನಮ್ಮದೇ, ಸತ್ಯ ಬದಲಾಗಲ್ಲ!’: ಚೀನಾದ ‘ಹೆಸರು ಬದಲಾವಣೆ’ ತಂತ್ರಕ್ಕೆ ಭಾರತ ತಿರುಗೇಟು

12/04/2026 9:01 PM
State News
KARNATAKA

ರಾಜ್ಯದ ರೈತರಿಗೆ ಗುಡ್ ನ್ಯೂಸ್ : `ಪಹಣಿ’ ದೋಷಗಳಿಗೆ ಇನ್ನು ಮುಕ್ತಿ, ಭೂ ದಾಖಲೆಗಳ ಶುದ್ದೀಕರಣಕ್ಕೆ ಸರ್ಕಾರದ ಮಾಸ್ಟರ್ ಪ್ಲ್ಯಾನ್.!

By kannadanewsnow5713/04/2026 5:54 AM KARNATAKA 2 Mins Read

ಬೆಂಗಳೂರು: ರಾಜ್ಯದ ರೈತರ ದಶಕಗಳ ಸಮಸ್ಯೆಗೆ ಮುಕ್ತಿ ನೀಡಲು ಮುಂದಾಗಿರುವ ಕರ್ನಾಟಕ ಸರ್ಕಾರ, ಕಂದಾಯ ದಾಖಲೆಗಳನ್ನು ಸಂಪೂರ್ಣ ದೋಷಮುಕ್ತಗೊಳಿಸಲು ‘ಡಾಟಾ…

ಅಫ್ಶಾನ್ ಯಾಸ್ಮಿನ್ ಅವರಿಗೆ ‘ಕೆ.ಎನ್. ಸುಬ್ರಮಣ್ಯ ಪ್ರಶಸ್ತಿ’ ಪ್ರದಾನ: ಪತ್ರಿಕೋದ್ಯಮದ ಅಪ್ರತಿಮ ಸಾಧನೆಗೆ ಸಂದ ಗೌರವ

12/04/2026 11:01 PM

ಸಾಗರದ ಪತ್ರಕರ್ತ ಮಹೇಶ್ ಹೆಗಡೆ ಅವರಿಗೆ ರಾಜ್ಯಮಟ್ಟದ ‘ಅಭಿಮಾನಿ ಪ್ರಕಾಶನ ಪ್ರಶಸ್ತಿ’ ಪ್ರದಾನ

12/04/2026 10:22 PM

ಶಿಕ್ಷಣ ಕ್ಷೇತ್ರದಲ್ಲಿ ಹೊಸ ಕ್ರಾಂತಿ: ಇವೈ ಇಂಡಿಯಾ ಹಾಗೂ ಯು.ಪಿ.ಇ.ಎಸ್ ಮೈತ್ರಿ; ಉದ್ಯೋಗಾಧಾರಿತ 7 ಹೊಸ ಕಾರ್ಯಕ್ರಮಗಳ ಲಾಂಚ್

12/04/2026 7:03 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.