Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹಿಂದೂ ಧರ್ಮ ಉಳಿದರೆ ಮಾತ್ರ ದೇಶ ಉಳಿಯಲು ಸಾಧ್ಯ: ಶ್ರೀ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ

30/01/2026 10:42 PM

BREAKING: ಲಕ್ಕುಂಡಿ ಉತ್ಖನನದ ನಿರ್ದೇಶಕರನ್ನಾಗಿ ನೇಮಿಸಿದ್ದ ಟಿ.ಎಂ ಕೇಶವ್ ನಿಧನ

30/01/2026 9:52 PM

ಪಿಂಚಣಿ ಹೆಚ್ಚಳದ ನಿರೀಕ್ಷೆಯಲ್ಲಿದ್ದವ್ರಿಗೆ ಬಿಗ್ ಶಾಕ್ ; “ಹೆಚ್ಚಳದ ಮಾತೇ ಇಲ್ಲ” ಎಂದ ಕೇಂದ್ರ ಸರ್ಕಾರ!

30/01/2026 9:47 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಜಾತಿ-ಧರ್ಮ‌ ಬದಿಗಿಟ್ಟು, ದೇಶಪ್ರೇಮ ಬೆಳೆಸಲು ಸಿಎಂ ಸಿದ್ದರಾಮಯ್ಯ ಕರೆ!
KARNATAKA

ಜಾತಿ-ಧರ್ಮ‌ ಬದಿಗಿಟ್ಟು, ದೇಶಪ್ರೇಮ ಬೆಳೆಸಲು ಸಿಎಂ ಸಿದ್ದರಾಮಯ್ಯ ಕರೆ!

By kannadanewsnow5726/10/2024 6:25 AM

ಬೆಳಗಾವಿ : ಎಲ್ಲರಿಗೂ ಆರ್ಥಿಕ ಸ್ವಾತಂತ್ರ್ಯ ಹಾಗೂ ಸಮಾನತೆ ದೊರೆತಾಗ ಮಾತ್ರ ಜಾತಿ ವ್ಯವಸ್ಥೆ ವಿನಾಶಗೊಳಿಸುವುದು ಸಾಧ್ಯ. ಜಾತಿ ವ್ಯವಸ್ಥೆ ವಿರುದ್ಧ 12 ನೇ ಶತಮಾನದಲ್ಲಿಯೇ ಕ್ರಾಂತಿ ಆರಂಭಿಸಿದ್ದರೂ ಇದುವರೆಗೆ ಸಾಮಾಜಿಕ ಸಮಾನತೆ ಸಾಧ್ಯವಾಗುತ್ತಿಲ್ಲ. ಆದ್ದರಿಂದ ನಮ್ಮ ಸರಕಾರವು ಸಾಮಾಜಿಕ ಸಮಾನತೆಯ ತತ್ವದ ಆಧಾರದ ಮೇಲೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ‌ ಹೇಳಿದರು.

ಬೆಳಗಾವಿ ಜಿಲ್ಲಾಡಳಿತ, ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಶ್ರಯದಲ್ಲಿ ಕಿತ್ತೂರಿನ ಕೋಟೆ ಆವರಣದಲ್ಲಿ ಮೂರು ದಿನಗಳ ಕಾಲ ನಡೆದ ಕಿತ್ತೂರು ಉತ್ಸವ ಮತ್ತು ಚನ್ನಮ್ಮನ ವಿಜಯೋತ್ಸವದ 200 ನೇ ವರ್ಷಾಚರಣೆಯ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಬಲಿಷ್ಠ ಬ್ರಿಟೀಷರ ವಿರುದ್ಧ ಹೋರಾಟದ‌ ಕಹಳೆ ಮೊಳಗಿಸಿದ ಚನ್ನಮ್ಮನ ಬಗ್ಗೆ ಯುವಪೀಳಿಗೆಗೆ ತಿಳಿಸಿಕೊಡಲು ಕ್ರಮ ಕೈಗೊಳ್ಳಲಾಗಿದೆ.

ರಾಯಣ್ಣ ಮತ್ತು ಬಾಳಪ್ಪನವರು ಚನ್ನಮ್ಮನ ಹೋರಾಟದಲ್ಲಿ ಜತೆಗಿದ್ದವರು. ದೇಶಪ್ರೇಮ ಬೆಳೆಸಲು ಇವರ ಹೋರಾಟ ಸ್ಫೂರ್ತಿಯಾಗಿದೆ. ಜಾತಿಧರ್ಮ ಬದಿಗಿಟ್ಟು ಪ್ರತಿಯೊಬ್ಬರು ಪರಸ್ಪರ ಪ್ರೀತಿಸುವ ಮೂಲಕ ದೇಶಪ್ರೇಮವನ್ನು ಪ್ರದರ್ಶಿಸಬೇಕು ಕಿತ್ತೂರು ಸಂಸ್ಥಾನದ ಚನ್ನಮ್ಮ ಕಪ್ಪ ಕಾಣಿಕೆ ಏಕೆ ಕೊಡಬೇಕು ಎಂದು ಪ್ರಶ್ನಿಸುವುದರ ಜತೆಗೆ ದತ್ತು ಮಕ್ಕಳಗೆ ಹಕ್ಕಿಲ್ಲ ಎಂಬ ಕಾಯ್ದೆ ವಿರುದ್ಧ ಮೊಟ್ಟಮೊದಲ‌ ಬಾರಿಗೆ ಯುದ್ಧ ಸಾರಿ ಜಯಗಳಿಸಿರುವುದು ಹೆಮ್ಮೆಯ‌ ವಿಷಯ. ವಿಜಯೋತ್ಸವದ 200 ವರ್ಷಾಚರಣೆ ಅದ್ಧೂರಿಯಾಗಿ, ಅರ್ಥಪೂರ್ಣವಾಗಿ ಆಚರಿಸಲು ಶಾಸಕ ಬಾಬಾಸಾಹೇಬ್ ಪಾಟೀಲರ ಒತ್ತಾಯದ ಮೇರೆಗೆ ಹೆಚ್ಚಿನ ಅನುದಾನ ನೀಡಲಾಗಿದೆ. ಚನ್ನಮ್ಮನವರ ಜಯಂತ್ಯೋತ್ಸವವನ್ನು ಸರಕಾರದ ವತಿಯಿಂದ ಆಚರಿಸಲು ಆದೇಶ ಮಾಡಿದ್ದು ನಮ್ಮ ಸರಕಾರ; ಅದು ಸಿದ್ದರಾಮಯ್ಯನವರ ಸರಕಾರ ಎಂದರು.

ಚನ್ನಮ್ಮನವರನ್ನು ವೈಭವೀಕರಿಸಲು ಜಯಂತ್ಯೋತ್ಸವ ಮಾಡುತ್ತಿಲ್ಲ; ಚನ್ನಮ್ಮನ ಐತಿಹಾಸಿಕ ಹೋರಾಟ ಜನರಿಗೆ ತಿಳಿಸಲು ಆಚರಿಸಲಾಗುತ್ತಿದೆ. ಅದೇ ರೀತಿ ಕಿತ್ತೂರು ವಿಜಯೋತ್ಸವದ 200 ನೇ ವರ್ಷಾಚರಣೆಯನ್ನು ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಗಿದೆ. ಹುಟ್ಟುವಾಗ ವಿಶ್ವಮಾನವ ಬೆಳಿತಾ‌ ಬೆಳಿತಾ ಅಲ್ಪಮಾನವರಾಗುತ್ತಾರೆ. ನಾವು ಬೆಳಿತಾ ಬೆಳಿತಾ ವಿಶ್ವಮಾನವರಾಗಬೇಕಿದೆ ಎಂದು ಕುವೆಂಪು ಹೇಳಿದ್ದಾರೆ. ಅದೇ ರೀತಿ ನಾವು ವಿಶ್ವಮಾನವರಾಗಬೇಕಿದೆ.

ಅನೇಕರ ತ್ಯಾಗ ಬಲಿದಾನಗಳಿಂದ ನಾವು ಗಳಿಸಿರುವ ಸ್ವಾತಂತ್ರ್ಯವನ್ನು ಉಳಿಸಿಕೊಂಡು ಸಮ ಸಮಾಜ ನಿರ್ಮಿಸಬೇಕಿದೆ. ಬಸವಣ್ಣನವರ ಆಶಯದಂತೆ ಜಾತಿ, ಮೌಢ್ಯ, ಕಂದಾಚಾರಗಳನ್ನು ತಿರಸ್ಕರಿಸಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕರೆ ನೀಡಿದರು.

CM Siddaramaiah calls to keep caste-religion aside and develop patriotism! ಜಾತಿ-ಧರ್ಮ‌ ಬದಿಗಿಟ್ಟು ದೇಶಪ್ರೇಮ ಬೆಳೆಸಲು ಸಿಎಂ ಸಿದ್ದರಾಮಯ್ಯ ಕರೆ!
Share. Facebook Twitter LinkedIn WhatsApp Email

Related Posts

ಹಿಂದೂ ಧರ್ಮ ಉಳಿದರೆ ಮಾತ್ರ ದೇಶ ಉಳಿಯಲು ಸಾಧ್ಯ: ಶ್ರೀ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ

30/01/2026 10:42 PM2 Mins Read

BREAKING: ಲಕ್ಕುಂಡಿ ಉತ್ಖನನದ ನಿರ್ದೇಶಕರನ್ನಾಗಿ ನೇಮಿಸಿದ್ದ ಟಿ.ಎಂ ಕೇಶವ್ ನಿಧನ

30/01/2026 9:52 PM1 Min Read

ಉದ್ಯಮಿ ಸಿ.ಜೆ ರಾಯ್ ನನಗೆ ಅಪ್ಪನಂತಿದ್ದರು: ಮೊಹಮ್ಮದ್ ನಲಪಾಡ್

30/01/2026 9:33 PM1 Min Read
Recent News

ಹಿಂದೂ ಧರ್ಮ ಉಳಿದರೆ ಮಾತ್ರ ದೇಶ ಉಳಿಯಲು ಸಾಧ್ಯ: ಶ್ರೀ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ

30/01/2026 10:42 PM

BREAKING: ಲಕ್ಕುಂಡಿ ಉತ್ಖನನದ ನಿರ್ದೇಶಕರನ್ನಾಗಿ ನೇಮಿಸಿದ್ದ ಟಿ.ಎಂ ಕೇಶವ್ ನಿಧನ

30/01/2026 9:52 PM

ಪಿಂಚಣಿ ಹೆಚ್ಚಳದ ನಿರೀಕ್ಷೆಯಲ್ಲಿದ್ದವ್ರಿಗೆ ಬಿಗ್ ಶಾಕ್ ; “ಹೆಚ್ಚಳದ ಮಾತೇ ಇಲ್ಲ” ಎಂದ ಕೇಂದ್ರ ಸರ್ಕಾರ!

30/01/2026 9:47 PM

BREAKING : ಅಮೆರಿಕ ಜೊತೆಗಿನ ಉದ್ವಿಗ್ನತೆ ನಡುವೆ ವೆನೆಜುವೆಲಾ ನಾಯಕಿ ಜೊತೆ ಪ್ರಧಾನಿ ಮೋದಿ ಮಾತುಕತೆ!

30/01/2026 9:39 PM
State News
KARNATAKA

ಹಿಂದೂ ಧರ್ಮ ಉಳಿದರೆ ಮಾತ್ರ ದೇಶ ಉಳಿಯಲು ಸಾಧ್ಯ: ಶ್ರೀ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ

By kannadanewsnow0930/01/2026 10:42 PM KARNATAKA 2 Mins Read

ಮಂಡ್ಯ : ಭಾರತೀಯರು ಜಗತ್ತಿಗೆ ಸಂಸ್ಕೃತಿ, ನಾಗರಿಕತೆ ಹಾಗೂ ಬದುಕುವ ಕಲೆಯನ್ನು ಹೇಳಿಕೊಟ್ಟವರು. ನಮ್ಮ ದೇಶ ಉಳಿಯಬೇಕೆಂದರೆ ನಮ್ಮ ಹಿಂದೂ…

BREAKING: ಲಕ್ಕುಂಡಿ ಉತ್ಖನನದ ನಿರ್ದೇಶಕರನ್ನಾಗಿ ನೇಮಿಸಿದ್ದ ಟಿ.ಎಂ ಕೇಶವ್ ನಿಧನ

30/01/2026 9:52 PM

ಉದ್ಯಮಿ ಸಿ.ಜೆ ರಾಯ್ ನನಗೆ ಅಪ್ಪನಂತಿದ್ದರು: ಮೊಹಮ್ಮದ್ ನಲಪಾಡ್

30/01/2026 9:33 PM

ಉದ್ಯಮಿ ಸಿ.ಜೆ ರಾಯ್ ಆತ್ಮಹತ್ಯೆ ಕೇಸ್: ಉನ್ನತ ಮಟ್ಟದ ತನಿಖೆ- ಡಿಸಿಎಂ ಡಿ.ಕೆ ಶಿವಕುಮಾರ್ ಘೋಷಣೆ

30/01/2026 9:00 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.