Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರು ಇಸ್ಕಾನ್ ಹರೇ ಕೃಷ್ಣ ದೇಗುಲದ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು | Hare Krishna Temple

17/05/2025 8:12 AM

BIG NEWS : ರಾಜ್ಯ ಸರ್ಕಾರಿ ನೌಕರರಿಗೆ `ಆರೋಗ್ಯ ಸಂಜೀವಿನಿ ಯೋಜನೆ’ : `ಘೋಷಣೆ/ಪ್ರಮಾಣ ಪತ್ರ’ದ ಬಗ್ಗೆ ಇಲ್ಲಿದೆ ಮಾಹಿತಿ

17/05/2025 8:09 AM

ಇಂದು ಉದ್ಯಾನ ನಗರಿಯಲ್ಲಿ ‘ಬೆಂಗಳೂರು ಹಬ್ಬ’ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ.!

17/05/2025 8:06 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ‘ನಂದಿನಿ ಹಾಲಿನ ದರ’ ಹೆಚ್ಚಳದ ಬಗ್ಗೆ ಈ ಸ್ಪಷ್ಟನೆ ಕೊಟ್ಟ ‘ಸಿಎಂ ಸಿದ್ಧರಾಮಯ್ಯ’ | Nandini Milk Price Hike
KARNATAKA

BIG NEWS: ‘ನಂದಿನಿ ಹಾಲಿನ ದರ’ ಹೆಚ್ಚಳದ ಬಗ್ಗೆ ಈ ಸ್ಪಷ್ಟನೆ ಕೊಟ್ಟ ‘ಸಿಎಂ ಸಿದ್ಧರಾಮಯ್ಯ’ | Nandini Milk Price Hike

By kannadanewsnow0925/06/2024 3:59 PM

ಬೆಂಗಳೂರು: ನಾಳೆಯಿಂದ ಜಾರಿಗೆ ಬರುವಂತೆ ರಾಜ್ಯಾಧ್ಯಂತ ನಂದಿನಿ ಹಾಲಿನ ದರವನ್ನು ರೂ.2 ಹೆಚ್ಚಳ ಮಾಡಲಾಗಿದೆ. ಈ ಬಗ್ಗೆ ಸಿಎಂ ಸಿದ್ಧರಾಮಯ್ಯ ಅವರು ಏನು ಸ್ಪಷ್ಟನೆ ಕೊಟ್ಟಿದ್ದಾರೆ ಅಂತ ಮುಂದೆ ಓದಿ.

ಈ ಕುರಿತಂತೆ ಸಿಎಂ ಸಿದ್ಧರಾಮಯ್ಯ ಅವರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ನಂದಿನಿ ಹಾಲಿನ ಪ್ಯಾಕೇಟ್‌ ಗಳಲ್ಲಿ ಹಾಲಿನ ಪ್ರಮಾಣವನ್ನು 50 ಎಂ.ಎಲ್‌ ಹೆಚ್ಚಳ ಮಾಡಿ, ಹೆಚ್ಚುವರಿ ಹಾಲಿಗೆ 2ರೂ ದರ ನಿಗದಿಪಡಿಸಿ ಗ್ರಾಹಕರಿಂದ ಸಂಗ್ರಹಿಸಲಾಗುತ್ತಿದೆಯೇ ವಿನಃ ಹಾಲಿನ ಬೆಲೆಯಲ್ಲಿ ಏರಿಕೆ ಮಾಡಿಲ್ಲ. ಅರ್ಧಲೀಟರ್‌ ಹಾಲಿನ ಪ್ಯಾಕೇಟ್‌ ನಲ್ಲಿ ಮುಂದೆ 550 ಎಂಎಲ್‌ ಹಾಲು ಹಾಗೂ ಲೀಟರ್‌ ಪ್ಯಾಕೇಟ್‌ ನಲ್ಲಿ 1,050 ಎಂಎಲ್‌ ಹಾಲು ಸಿಗಲಿದೆ ಅಂತ ತಿಳಿಸಿದ್ದಾರೆ.

ಹಾಲು ಸಂಗ್ರಹಣಾ ಕೇಂದ್ರಗಳಲ್ಲಿ ಯಾವುದೇ ಕಾರಣಕ್ಕೂ ರೈತರು ಹೆಚ್ಚುವರಿಯಾಗಿ ತರುತ್ತಿರುವ ಹಾಲನ್ನು ನಿರಾಕರಿಸಬಾರದು ಎಂಬ ಸದುದ್ದೇಶದಿಂದ ಕೆಎಂಎಫ್‌ ಸಂಸ್ಥೆ ಪ್ಯಾಕೇಟ್‌ ಗಳಲ್ಲಿ ಹಾಲಿನ ಪ್ರಮಾಣವನ್ನು ಹೆಚ್ಚಳ ಮಾಡುವ ತೀರ್ಮಾನ ಮಾಡಿದೆ ಎಂದು ಹೇಳಿದ್ದಾರೆ.

ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ರಾಜ್ಯದಲ್ಲಿ ಈ ಬಾರಿ ಹಾಲಿನ ಉತ್ಪಾದನೆ ಶೇ.15 ಹೆಚ್ಚಳವಾಗಿದೆ. ಹಿಂದಿನ ವರ್ಷಗಳಲ್ಲಿ ಈ ವೇಳೆಗೆ ನಿತ್ಯ ಸರಾಸರಿ 90 ಲಕ್ಷ ಲೀಟರ್‌ ಉತ್ಪಾದನೆಯಾಗುತ್ತಿದ್ದ ಹಾಲಿನ ಪ್ರಮಾಣ ಈ ಬಾರಿ ಸರಾಸರಿ 99 ಲಕ್ಷ ಲೀಟರ್‌ ಗೆ ಏರಿಕೆಯಾಗಿದೆ. ಹೀಗೆ ಹೆಚ್ಚುವರಿಯಾಗಿ ಉತ್ಪಾದನೆಯಾಗುವ ಹಾಲನ್ನು ರೈತರಿಂದ ಖರೀದಿ ಮಾಡಬೇಕು, ಯಾವುದೇ ಕಾರಣಕ್ಕೂ ಅವರಿಂದ ಹಾಲು ಪಡೆಯಲು ನಿರಾಕರಿಸಬಾರದು ಎಂಬ ಸದುದ್ದೇಶದಿಂದ ಒಂದು ಲೀಟರ್‌ ಹಾಲಿನ ಪ್ಯಾಕೇಟಿಗೆ ಹೆಚ್ಚುವರಿಯಾಗಿ 50 ಮಿ.ಲೀ ಹಾಲನ್ನು ಸೇರಿಸಿ, ಈ ಹೆಚ್ಚುವರಿ ಹಾಲಿನ ಬೆಲೆ 2 ರೂಪಾಯಿಯನ್ನು ಮಾತ್ರ ಗ್ರಾಹಕರಿಂದ ಸಂಗ್ರಹಿಸಲಾಗುತ್ತಿದೆ. ಹಾಲಿನ ಬೆಲೆಯಲ್ಲಿ ಯಾವುದೇ ಹೆಚ್ಚಳವಾಗಿರುವುದಿಲ್ಲ ಎಂಬುದಾಗಿ ಮನವರಿಕೆ ಮಾಡಿದ್ದಾರೆ.

ಈ ವರೆಗೆ 1,000 ಮಿ.ಲೀ ಹಾಲಿಗೆ ರೂ.42 ಹಾಗೂ 500 ಮಿ.ಲೀ ಹಾಲಿಗೆ ರೂ.22 ದರವನ್ನು ನಿಗದಿಪಡಿಸಲಾಗಿತ್ತು, ಇನ್ನು ಮುಂದೆ 1,050 ಮಿ.ಲೀ ಹಾಗೂ 550 ಮಿ.ಲೀ ಹಾಲಿನ ಪ್ಯಾಕೇಟ್‌ ಗಳನ್ನು ಮಾರಾಟ ಮಾಡಲಾಗುತ್ತಿದ್ದು, ಅದಕ್ಕೆ ಕ್ರಮವಾಗಿ ರೂ.44 ಹಾಗೂ ರೂ.24 ದರ ನಿಗದಿಪಡಿಸಲಾಗುತ್ತದೆ. ಇದು ನಾಡಿನ ಲಕ್ಷಾಂತರ ಹೈನುಗಾರರ ಹಿತದೃಷ್ಟಿಯಿಂದ ಕೆ.ಎಂ.ಎಫ್‌ ಸಂಸ್ಥೆಯು ತೆಗೆದುಕೊಂಡ ನಿರ್ಣಯವಾಗಿದ್ದು, ಹೆಚ್ಚುವರಿಯಾಗಿ ಉದ್ಪಾದನೆಯಾಗುತ್ತಿರುವ ಹಾಲನ್ನು ಗ್ರಾಹಕರಿಗೆ ನೇರವಾಗಿ ತಲುಪಿಸುವ ಸದುದ್ದೇಶವನ್ನು ಹೊಂದಿದೆ ಅಂತ ತಿಳಿಸಿದ್ದಾರೆ.

ಈಗಾಗಲೇ ಗರಿಷ್ಟ ಪ್ರಮಾಣದ ಹಾಲನ್ನು ಹಾಲಿನ ಪೌಡರ್‌ ತಯಾರಿಕೆ ಮಾಡುವ ಉದ್ದೇಶಕ್ಕೆ ಬಳಕೆ ಮಾಡಲಾಗುತ್ತಿದೆ. ನಿತ್ಯ ಸುಮಾರು 30 ಲಕ್ಷ ಲೀಟರ್‌ ಹಾಲು ಪೌಡರ್‌ ತಯಾರಿಕೆಗಾಗಿ ಬಳಸಲ್ಪಡುತ್ತಿದ್ದು, 250 ಮೆಟ್ರಿಕ್‌ ಟನ್‌ ಹಾಲಿನ ಪೌಡರ್‌ ತಯಾರಿಸಲಾಗುತ್ತಿದೆ. ಇದು ಹಾಲಿನ ಪೌಡರ್‌ ಗೆ ಇರುವ ಬೇಡಿಕೆಗೆ ಅನುಗುಣವಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ನಮ್ಮ ಸರ್ಕಾರ ಅಧಿಕಾರಕ್ಕೆ ಬರುವ ವೇಳೆ ರಾಜ್ಯದಲ್ಲಿ ನಿತ್ಯ ಸರಾಸರಿ 72 ಲಕ್ಷ ಲೀಟರ್‌ ಗಳಷ್ಟು ಹಾಲು ಸಂಗ್ರಹವಾಗುತ್ತಿತ್ತು. ಈ ಹಿಂದೆ ಹಾಲಿನ ಬೆಲೆಯಲ್ಲಿ ರೂ.3 ಹೆಚ್ಚಳ ಮಾಡಿ ಆ ಹೆಚ್ಚುವರಿ ಹಣವನ್ನು ರೈತರಿಗೆ ನೇರವಾಗಿ ವರ್ಗಾಯಿಸುವ ಪ್ರೋತ್ಸಾಹದಾಯಕ ಕ್ರಮ ಕೈಗೊಂಡಿದ್ದರಿಂದ ಹೈನೋದ್ಯಮವು ಹಿಂದಿಗಿಂತ ಲಾಭ ತಂದುಕೊಡುವ ಉದ್ಯೋಗವಾಯಿತು ಜೊತೆಗೆ ಈ ಬಾರಿ ಉತ್ತಮ ಮಳೆಯಾಗಿರುವುದರಿಂದ ಜಾನುವಾರುಗಳಿಗೆ ಹಸಿರು ಮೇವು ಲಭ್ಯವಾಗುತ್ತಿದೆ. ಈ ಎರಡು ಕಾರಣಗಳಿಂದಾಗಿ ರಾಜ್ಯದಲ್ಲಿ ಹಾಲಿನ ಉತ್ಪಾದನೆ ಇಂದು ನಿತ್ಯ ಸರಿಸುಮಾರು 1 ಕೋಟಿ ಲೀಟರ್‌ ತಲುಪುವ ಹಂತಕ್ಕೆ ಬಂದಿದೆ ಎಂದಿದ್ದಾರೆ.

ಹೀಗೆ ಹೆಚ್ಚುವರಿಯಾಗಿ ಉತ್ಪಾದನೆಯಾಗುತ್ತಿರುವ ಹಾಲನ್ನು ರೈತರಿಂದ ಖರೀದಿಸಿ, ಗ್ರಾಹಕರಿಗೂ ಹೊರೆಯಾಗದ ರೀತಿಯಲ್ಲಿ ಮಾರಾಟ ಮಾಡುವ ಸಲುವಾಗಿ ಕೆ.ಎಂ.ಎಫ್‌ ಸಂಸ್ಥೆ ಈ ನಿರ್ಧಾರ ಕೈಗೊಂಡಿದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಸ್ಪಷ್ಟ ಪಡಿಸಿದ್ದಾರೆ.

‘ಅಂಗನವಾಡಿ ಕಾರ್ಯಕರ್ತೆ’ಯರನ್ನು ಖಾಯಂ, ಇದು ಕಾಂಗ್ರೆಸ್ ಸರ್ಕಾರದ ‘6ನೇ ಗ್ಯಾರಂಟಿ’: ಶಾಸಕ ಬೇಳೂರು ಗೋಪಾಲಕೃಷ್ಣ

BREAKING: ದೆಹಲಿ CM ಅರವಿಂದ್ ಕೇಜ್ರಿವಾಲ್‌ಗೆ ಜೈಲೇಗತಿ, ಜಾಮೀನು ಆದೇಶಕ್ಕೆ ದೆಹಲಿ ಹೈಕೋರ್ಟ್‌ ತಡೆ

Share. Facebook Twitter LinkedIn WhatsApp Email

Related Posts

ಬೆಂಗಳೂರು ಇಸ್ಕಾನ್ ಹರೇ ಕೃಷ್ಣ ದೇಗುಲದ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು | Hare Krishna Temple

17/05/2025 8:12 AM1 Min Read

BIG NEWS : ರಾಜ್ಯ ಸರ್ಕಾರಿ ನೌಕರರಿಗೆ `ಆರೋಗ್ಯ ಸಂಜೀವಿನಿ ಯೋಜನೆ’ : `ಘೋಷಣೆ/ಪ್ರಮಾಣ ಪತ್ರ’ದ ಬಗ್ಗೆ ಇಲ್ಲಿದೆ ಮಾಹಿತಿ

17/05/2025 8:09 AM1 Min Read

ಇಂದು ಉದ್ಯಾನ ನಗರಿಯಲ್ಲಿ ‘ಬೆಂಗಳೂರು ಹಬ್ಬ’ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ.!

17/05/2025 8:06 AM1 Min Read
Recent News

ಬೆಂಗಳೂರು ಇಸ್ಕಾನ್ ಹರೇ ಕೃಷ್ಣ ದೇಗುಲದ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು | Hare Krishna Temple

17/05/2025 8:12 AM

BIG NEWS : ರಾಜ್ಯ ಸರ್ಕಾರಿ ನೌಕರರಿಗೆ `ಆರೋಗ್ಯ ಸಂಜೀವಿನಿ ಯೋಜನೆ’ : `ಘೋಷಣೆ/ಪ್ರಮಾಣ ಪತ್ರ’ದ ಬಗ್ಗೆ ಇಲ್ಲಿದೆ ಮಾಹಿತಿ

17/05/2025 8:09 AM

ಇಂದು ಉದ್ಯಾನ ನಗರಿಯಲ್ಲಿ ‘ಬೆಂಗಳೂರು ಹಬ್ಬ’ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ.!

17/05/2025 8:06 AM

EPC ಶೃಂಗಸಭೆಯಲ್ಲಿ ಇಟಲಿಯ ಜಾರ್ಜಿಯಾ ಮೆಲೋನಿಯನ್ನು ಮಂಡಿಯೂರಿ ಸ್ವಾಗತಿಸಿದ ಅಲ್ಬೇನಿಯನ್ ಪ್ರಧಾನಿ | Watch video

17/05/2025 8:04 AM
State News
KARNATAKA

ಬೆಂಗಳೂರು ಇಸ್ಕಾನ್ ಹರೇ ಕೃಷ್ಣ ದೇಗುಲದ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು | Hare Krishna Temple

By kannadanewsnow8917/05/2025 8:12 AM KARNATAKA 1 Min Read

ನವದೆಹಲಿ: ಬೆಂಗಳೂರಿನ ಪ್ರಸಿದ್ಧ ಹರೇ ಕೃಷ್ಣ ದೇವಾಲಯದ ಮಾಲೀಕತ್ವ ಮತ್ತು ನಿಯಂತ್ರಣದ ಬಗ್ಗೆ ಇಸ್ಕಾನ್ ಮುಂಬೈನೊಂದಿಗೆ 24 ವರ್ಷಗಳ ಕಾನೂನು…

BIG NEWS : ರಾಜ್ಯ ಸರ್ಕಾರಿ ನೌಕರರಿಗೆ `ಆರೋಗ್ಯ ಸಂಜೀವಿನಿ ಯೋಜನೆ’ : `ಘೋಷಣೆ/ಪ್ರಮಾಣ ಪತ್ರ’ದ ಬಗ್ಗೆ ಇಲ್ಲಿದೆ ಮಾಹಿತಿ

17/05/2025 8:09 AM

ಇಂದು ಉದ್ಯಾನ ನಗರಿಯಲ್ಲಿ ‘ಬೆಂಗಳೂರು ಹಬ್ಬ’ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ.!

17/05/2025 8:06 AM
vidhana soudha

BIG NEWS : ರಾಜ್ಯದ ವೈದ್ಯಾಧಿಕಾರಿಗಳಿಗೆ `ಗ್ರಾಮೀಣ ಸೇವೆ’ ಕಡ್ಡಾಯ : ರಾಜ್ಯ ಸರ್ಕಾರ ಮಹತ್ವದ ಆದೇಶ.!

17/05/2025 7:59 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.