Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Big News: ರಾಯಗಢ ಕರಾವಳಿಯಲ್ಲಿ ಅನುಮಾನಾಸ್ಪದ ದೋಣಿ ಪತ್ತೆ, ಪೊಲೀಸ್, ಬಾಂಬ್ ಸ್ಕ್ವಾಡ್ ಮತ್ತು ಕೋಸ್ಟ್ ಗಾರ್ಡ್ ನಿಯೋಜನೆ

07/07/2025 1:13 PM

Big News: ಪಾಕಿಸ್ತಾನದಲ್ಲಿ ಕಟ್ಟಡ ಕುಸಿತ: 27 ಮಂದಿ ಸಾವು

07/07/2025 1:03 PM

BREAKING : ರಾಜ್ಯದಲ್ಲಿ ಹೃದಯವಿದ್ರಾವಕ ಘಟನೆ : ನೀರು ಕಾಯಿಸುವ ಹಂಡೆಯಲ್ಲಿ ಮುಳುಗಿಸಿ ಹೆತ್ತ ಮಗುವನ್ನೆ ಕೊಂದ ತಾಯಿ!

07/07/2025 1:01 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘NEET ಪರೀಕ್ಷಾ ಅಕ್ರಮ’ದ ಬಗ್ಗೆ ತನಿಖೆಗೆ ‘ಸಿಎಂ ಸಿದ್ಧರಾಮಯ್ಯ’ ಒತ್ತಾಯ
KARNATAKA

‘NEET ಪರೀಕ್ಷಾ ಅಕ್ರಮ’ದ ಬಗ್ಗೆ ತನಿಖೆಗೆ ‘ಸಿಎಂ ಸಿದ್ಧರಾಮಯ್ಯ’ ಒತ್ತಾಯ

By kannadanewsnow0907/06/2024 4:44 PM

ಬೆಂಗಳೂರು: ಪ್ರಧಾನಿ ಮೋದಿಯವರ ಸರ್ಕಾರ ರಚನೆ ಮತ್ತು ಸಂಸದರ ಖರೀದಿಯ ಕಸರತ್ತು ಮುಗಿದಿದ್ದರೆ ನೊಂದ ನೀಟ್ ಪರೀಕ್ಷಾರ್ಥಿಗಳ ಅಹವಾಲು ಆಲಿಸಲಿ. ನೀಟ್ ಪರೀಕ್ಷಾ ಅಕ್ರಮದ ಬಗ್ಗೆ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಒತ್ತಾಯಿಸಿದ್ದಾರೆ.

ಈ ಕುರಿತಂತೆ ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ನೀಟ್‌ ಫಲಿತಾಂಶದಲ್ಲಿ ಭಾರಿ ಅಕ್ರಮದ ನಡೆದಿರಬಹುದಾದ ಶಂಕೆ ದೇಶಾದ್ಯಂತ ವ್ಯಕ್ತವಾಗುತ್ತಿದ್ದು, ಪರೀಕ್ಷೆ ಬರೆದಿರುವ 24 ಲಕ್ಷ ಯುವಜನರು, ಅವರ ಪೋಷಕರಲ್ಲಿ ಮೂಡಿರುವ ಆತಂಕಕ್ಕೆ, ಪರೀಕ್ಷೆಯ ವಿಶ್ವಾಸಾರ್ಹತೆ ಬಗ್ಗೆ ಎದ್ದಿರುವ ಪ್ರಶ್ನೆಗಳಿಗೆ ಎನ್‌ಟಿಎ ಆಗಲಿ, ಕೇಂದ್ರದ ನರೇಂದ್ರ ಮೋದಿಯವರ ಸರ್ಕಾರವಾಗಲೀ ಉತ್ತರಿಸದೆ ಲಕ್ಷಾಂತರ ಯುವಜನರ ಭವಿಷ್ಯವನ್ನು ಮಣ್ಣುಪಾಲು ಮಾಡಲು ಹೊರಟಿದೆ.

NEET (ನೀಟ್) ಪರೀಕ್ಷೆಯಲ್ಲಿ 67 ಅಭ್ಯರ್ಥಿಗಳಿಗೆ 720ಕ್ಕೆ 720 ಅಂಕಗಳು ಬಂದಿವೆ. ಅಂದರೆ 100% ಅಂಕಗಳು‌ ಬಂದಿದೆ. ಆದರೆ ಈ ಹಿಂದೆ ಬಂದ ಟಾಪರ್‍‌ಗಳ ಸಂಖ್ಯೆ ಎಷ್ಟು? ಎಂಬುದನ್ನು ಹೋಲಿಕೆ ಮಾಡಿ ನೋಡಿದರೆ ಈ ಬಾರಿಯ ಫಲಿತಾಂಶದಲ್ಲಿ ಅಕ್ರಮದ ವಾಸನೆ ಬಡಿಯುತ್ತದೆ.

2019ರಲ್ಲಿ ಒಬ್ಬ ವಿದ್ಯಾರ್ಥಿ, 2020ರಲ್ಲಿ ಒಬ್ಬ, 2021ರಲ್ಲಿ ಮೂವರು, 2022ರಲ್ಲಿ ಒಬ್ಬ, 2023ರಲ್ಲಿ ಇಬ್ಬರು ವಿದ್ಯಾರ್ಥಿಗಳು ನೂರಕ್ಕೆ ನೂರು ಪ್ರತಿಶತ ಅಂಕ ಪಡೆದಿದ್ದರೆ ಈ ವರ್ಷ – 67 ವಿದ್ಯಾರ್ಥಿಗಳು ಟಾಪರ್‍ಗಳಾಗಿ ಹೊರಹೊಮ್ಮಿದ್ದಾರೆ.
ನೀಟ್‌ ಪರೀಕ್ಷೆಯಲ್ಲಿ ಪ್ರತಿ ತಪ್ಪು ಉತ್ತರಕ್ಕೆ ಋಣಾತ್ಮಕ ಅಂಕಗಳಿರುವ ಕಾರಣ ಇಷ್ಟೊಂದು ಮಂದಿ ನೂರು ಪ್ರತಿಶತ ಅಂಕ ಗಳಿಸುವುದು ಅಸಾಧ್ಯ ಎನ್ನಿಸುತ್ತದೆ.
ಇದು ಕಾಕತಾಳೀಯವೋ ಅಥವಾ ಹೊಸ ಪ್ರಯೋಗವೋ? ಇದನ್ನು ಮೋದಿ ಸರ್ಕಾರವೇ ಸ್ಪಷ್ಟಪಡಿಸಬೇಕು.

ನೀಟ್‌ನ 67 ಟಾಪರ್‌ಗಳಲ್ಲಿ 44 ಮಂದಿ ‘ಗ್ರೇಸ್‌ಮಾರ್ಕ್‌’ ಆಧಾರದ ಮೇಲೆ ಟಾಪರ್‌ಗಳಾಗಿದ್ದಾರೆ.
ಗ್ರೇಸ್ ಅಂಕಗಳ ಆಧಾರದ ಮೇಲೆ ಇಷ್ಟೊಂದು ಪರೀಕ್ಷಾರ್ಥಿಗಳು ಟಾಪರ್‌ಗಳಾದಾಗ, “ಮಾರ್ಕಿಂಗ್ ಪ್ರಕ್ರಿಯೆ” ಮತ್ತು “ಪರೀಕ್ಷಾ ವ್ಯವಸ್ಥೆಯ ವಿಶ್ವಾಸಾರ್ಹತೆ ಮತ್ತು ಸಿಂಧುತ್ವ”ದ ಮೇಲೆ ಪ್ರಶ್ನೆ ಹುಟ್ಟುಹಾಕುವುದಿಲ್ಲವೆ?
ಇನ್ನೊಂದು ಅಚ್ಚರಿಯ ವಿಷಯವೇನೆಂದರೆ 62 ರಿಂದ 69 ರವರೆಗಿನ ಸರಣಿ ಸಂಖ್ಯೆಗಳೊಂದಿಗೆ ನೀಟ್‌ ಟಾಪರ್‌ಗಳು ಹರಿಯಾಣದ ಫರಿದಾಬಾದ್‌ನಲ್ಲಿರುವ ಒಂದೇ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆದವರು. ಈ ಪೈಕಿ 6 ಜನರು 720/720 ಅಂಕಗಳೊಂದಿಗೆ ನೀಟ್‌ನಲ್ಲಿ ಅಗ್ರಸ್ಥಾನದಲ್ಲಿದ್ದಾರೆ ಮತ್ತು 718 ಮತ್ತು 719 ಅಂಕಗಳನ್ನು 2 ಮಂದಿ ಪಡೆದಿದ್ದಾರೆ.
ಮೇಲ್ನೋಟಕ್ಕೆ ಪರೀಕ್ಷಾ ಅಕ್ರಮ ನಡೆದಿರುವುದು ಕಂಡುಬಂದರೂ ಎನ್‌ಟಿಎ ಮತ್ತು ಮೋದಿ ಸರ್ಕಾರ ಈ ಫಲಿತಾಂಶವನ್ನು ಸಮರ್ಥಿಸುತ್ತಿದೆ. ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಚೆಲ್ಲಾಟವಾಡಲು ಹೊರಟಿರುವ ಕೇಂದ್ರ ಬಿಜೆಪಿ ಸರ್ಕಾರವು ಚುನಾವಣಾ ಸೋಲಿನಿಂದಲೂ ಪಾಠ ಕಲಿತಂತೆ ಕಾಣುತ್ತಿಲ್ಲ.

ಫರಿದಾಬಾದ್‌ನ ನೀಟ್‌ ಪರೀಕ್ಷಾ ಕೇಂದ್ರದಲ್ಲಿ ತಪ್ಪು ಪತ್ರಿಕೆಯನ್ನು ವಿತರಿಸಲಾಗಿತ್ತು. ಇದರಿಂದಾಗಿ ಅಭ್ಯರ್ಥಿಗಳು 45 ನಿಮಿಷಗಳನ್ನು ಕಳೆದುಕೊಳ್ಳವಂತಾಯಿತು. ಹಾಗಾಗಿ ಈ ಸಮಯಕ್ಕೆ ಪ್ರತಿಯಾಗಿ ಎನ್‌ಟಿಎ ಈ ಕೇಂದ್ರದ ಅಭ್ಯರ್ಥಿಗಳಿಗೆ ‘ಗ್ರೇಸ್‌ಮಾರ್ಕ್‌’ ನೀಡಿದೆ. ಇದು ನೂರು ಪ್ರತಿಶತ ಅಂಕ ಗಳಿಕೆಗೆ ಕಾರಣ ಎಂದು ಕೇಂದ್ರ ಸರ್ಕಾರ ಸಮಜಾಯಿಷಿ ನೀಡುತ್ತಿದೆ.
“ಎನ್‌ಟಿಎ ಪ್ರಾಸ್ಪೆಕ್ಟಸ್”, “ನೀಟ್ ಬ್ರೋಷರ್” ಮತ್ತು “ಸರ್ಕಾರಿ ಸೂಚನೆಗಳಲ್ಲಿ” ಈ ರೀತಿಯಲ್ಲಿ ಗ್ರೇಸ್ ಅಂಕಗಳನ್ನು ನೀಡುವ ಅವಕಾಶ ಇರುವ ಕುರಿತು ಯಾವುದೇ ಮಾಹಿತಿ ಇಲ್ಲ. ಹಾಗಾದರೆ ಈ ಗ್ರೇಸ್ ಮಾರ್ಕ್‌ಗಳನ್ನು ಯಾವ ಆಧಾರದ ಮೇಲೆ ನೀಡಲಾಗಿದೆ? ಈ ಬಗ್ಗೆ ಮೋದಿ ಸರ್ಕಾರದಿಂದ ಸಾರ್ವಜನಿಕ ಸೂಚನೆ ಅಥವಾ ಜಾಹೀರಾತು ನೀಡಲಾಗಿದೆಯೇ? ಬೇರೆ ಯಾವುದಾದರೂ ಕೇಂದ್ರದಲ್ಲಿ ಇದೇ ರೀತಿ ಗ್ರೇಸ್ ಮಾರ್ಕ್ಸ್ ನೀಡಲಾಗಿದೆಯೇ? ಎಂಬಿತ್ಯಾದಿ ಮಾಹಿತಿಯನ್ನು ಆತಂಕದಲ್ಲಿರುವ ವಿದ್ಯಾರ್ಥಿಗಳಿಗೆ ಮತ್ತು ಅವರ ಪೋಷಕರಿಗೆ ನೀಡಬೇಕು.

2019 ರಿಂದ 2023 ರವರೆಗೆ, ನೀಟ್‌ ಪರೀಕ್ಷೆಯಲ್ಲಿ 600 ಅಂಕಗಳನ್ನು ಗಳಿಸಿದವರು ಕೈಗೆಟುಕುವ ಶುಲ್ಕದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಸುಲಭವಾಗಿ ಪ್ರವೇಶ ಪಡೆದಿದ್ದರು. ಈ ವರ್ಷ ನೀಟ್ ಪರೀಕ್ಷೆಯ ಅಂಕಮಿತಿಯು 137 ಅಂಕಗಳಿಂದ 164 ಕ್ಕೆ ಏರಿಕೆಯಾಗಿದೆ. ಈ ಬಾರಿ 660 ಅಂಕ ಗಳಿಸಿದ ಅಭ್ಯರ್ಥಿಗಳು ಮಾತ್ರ ಕೈಗೆಟಕುವ ಶುಲ್ಕದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಪ್ರವೇಶ ಪಡೆಯಬಹುದು.
ನೀಟ್ ಪರೀಕ್ಷೆಗೆ ಹಾಜರಾಗಿರುವ 24 ಲಕ್ಷಕ್ಕೂ ಹೆಚ್ಚು ಯುವಕರು ಬಹುತೇಕ ಬಡ-ಮಧ್ಯಮ ವರ್ಗದ ಕುಟುಂಬಗಳಿಂದ ಬಂದವರು. ವೈದ್ಯರಾಗುವ ಹಂಬಲ ಹೊಂದಿದವರು. ಆದರೆ ಈ ಪರೀಕ್ಷಾ ಗೊಂದಲದಿಂದಾಗಿ ಲಕ್ಷಾಂತರ ಯುವಕರ ಕನಸುಗಳು ನುಚ್ಚುನೂರಾಗಿದೆ.

ನಿಗದಿತ ವೇಳಾಪಟ್ಟಿಯಂತೆ ನೀಟ್ ಪರೀಕ್ಷೆಯನ್ನು ಮೇ 5, 2024 ರಂದು ನಡೆಸಲಾಯಿತು ಮತ್ತು ಅದರ ಫಲಿತಾಂಶವನ್ನು ಜೂನ್ 14, 2024 ರಂದು ಪ್ರಕಟವಾಗಬೇಕಿತ್ತು. ಆದರೆ ಇದ್ದಕ್ಕಿದ್ದಂತೆ ಫಲಿತಾಂಶವನ್ನು ಜೂನ್ 4, 2024 ರಂದು ಪ್ರಕಟಿಸಲಾಯಿತು. ಇದೇ ದಿನ ದೇಶದ ಸಂಸತ್ ಚುನಾವಣೆಯ ಫಲಿತಾಂಶ ಬಂದಿದ್ದು, ಇಡೀ ದೇಶವೇ ಲೋಕಸಭೆ ಚುನಾವಣೆಯ ಫಲಿತಾಂಶವನ್ನು ಕೇಳುವುದರಲ್ಲಿ ನಿರತವಾಗಿತ್ತು. ಈ ಗದ್ದಲದಲ್ಲಿ ನೀಟ್‌ ಫಲಿತಾಂಶವನ್ನು ತರಾತುರಿಯಲ್ಲಿ ಬಿಡುಗಡೆ ಮಾಡಿದ್ದು, ಪರೀಕ್ಷೆಯ ಅಕ್ರಮಗಳನ್ನು ಮುಚ್ಚಿಹಾಕಬಹುದು ಎಂಬ ಕಾರಣಕ್ಕಾಗಿಯೇ? ಅಲ್ಲದಿದ್ದರೆ ತರಾತುರಿಯಲ್ಲಿ ಫಲಿತಾಂಶ ಬಿಡುಗಡೆ ಮಾಡಿದ್ದು ಯಾಕೆ?

ಕೇಂದ್ರ ಸರ್ಕಾರ ಮತ್ತು ಎನ್‌ಟಿಎ ಮಾಡಿರುವ ಯಡವಟ್ಟಿನಿಂದಾಗಿ ನೀಟ್ ಫಲಿತಾಂಶ ಪ್ರಕಟವಾದ ನಂತರ ದೌಸಾದಲ್ಲಿ ಅಜಿತ್ ಎಂಬ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಧ್ಯಪ್ರದೇಶದ ರೇವಾ ಯುವತಿ ಬಗೀಶಾ ತಿವಾರಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಬರೀ ವಿವಾದಗಳಿಂದಲೇ ತುಂಬಿರುವ ಮತ್ತು ಯುವಜನರು ಆತ್ಮಹತ್ಯೆಗೆ ಶರಣಾಗುವಂತೆ ಮಾಡಿರುವ ಎನ್‌ಟಿಎಯ ನೀಟ್ ಪರೀಕ್ಷಾ ವ್ಯವಸ್ಥೆ ನಿಜಕ್ಕೂ ಎಂತಹದ್ದು ಎಂಬ ಪ್ರಶ್ನೆ ಕಾಡಲಾರಂಭಿಸಿದೆ. ನರೇಂದ್ರ ಮೋದಿಯವರ ಸರ್ಕಾರ ರಚನೆ ಮತ್ತು ಸಂಸದರ ಖರೀದಿಯ ಕಸರತ್ತು ಮುಗಿದಿದ್ದರೆ ಮತ್ತಷ್ಟು ಯುವಜನರು ಪ್ರಾಣ ಕಳೆದುಕೊಳ್ಳುವ ಮುನ್ನ ಪರೀಕ್ಷಾ ಅಕ್ರಮದ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಮತ್ತು ನೊಂದ ಪರೀಕ್ಷಾರ್ಥಿಗಳ ಅಹವಾಲು ಆಲಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಿದ್ದಾರೆ.

BREAKING: ಬಿಗ್ ಬಾಸ್ ಸ್ಪರ್ಧಿ ‘ಚಂದನ್ ಶೆಟ್ಟಿ-ನಿವೇದಿತಾ’ ದಾಂಪತ್ಯ ಜೀವನದಲ್ಲಿ ಬಿರುಕು: ‘ವಿಚ್ಚೇದನ’ಕ್ಕಾಗಿ ಅರ್ಜಿ ಸಲ್ಲಿಕೆ

ನಾಳೆ ಲೋಕಸಭಾ ಚುನಾವಣೆ ಫಲಿತಾಂಶ ಕುರಿತು ಚರ್ಚಿಸಲು ‘CWC ಸಭೆ’ ಕರೆದ ಮಲ್ಲಿಕಾರ್ಜುನ ಖರ್ಗೆ

Share. Facebook Twitter LinkedIn WhatsApp Email

Related Posts

BREAKING : ರಾಜ್ಯದಲ್ಲಿ ಹೃದಯವಿದ್ರಾವಕ ಘಟನೆ : ನೀರು ಕಾಯಿಸುವ ಹಂಡೆಯಲ್ಲಿ ಮುಳುಗಿಸಿ ಹೆತ್ತ ಮಗುವನ್ನೆ ಕೊಂದ ತಾಯಿ!

07/07/2025 1:01 PM1 Min Read

BIG BREAKING : ಆರ್ಥಿಕ ಪರಿಸ್ಥಿತಿ ಸುಧಾರಣೆ ಆದರೆ, ಗಂಡು ಮಕ್ಕಳಿಗೂ ಉಚಿತ ಪ್ರಯಾಣ : ಬಸವರಾಜ್ ರಾಯರೆಡ್ಡಿ ಹೇಳಿಕೆ

07/07/2025 12:51 PM1 Min Read

BREAKING : ಮಂಡ್ಯದಲ್ಲಿ ಘೋರ ಘಟನೆ : ಫೋಟೋ ತೆಗೆಸಿಕೊಳ್ಳುವಾಗ ಆಯತಪ್ಪಿ ಬಿದ್ದು, ನದಿಯಲ್ಲಿ ಕೊಚ್ಚಿ ಹೋದ ವ್ಯಕ್ತಿ!

07/07/2025 12:32 PM1 Min Read
Recent News

Big News: ರಾಯಗಢ ಕರಾವಳಿಯಲ್ಲಿ ಅನುಮಾನಾಸ್ಪದ ದೋಣಿ ಪತ್ತೆ, ಪೊಲೀಸ್, ಬಾಂಬ್ ಸ್ಕ್ವಾಡ್ ಮತ್ತು ಕೋಸ್ಟ್ ಗಾರ್ಡ್ ನಿಯೋಜನೆ

07/07/2025 1:13 PM

Big News: ಪಾಕಿಸ್ತಾನದಲ್ಲಿ ಕಟ್ಟಡ ಕುಸಿತ: 27 ಮಂದಿ ಸಾವು

07/07/2025 1:03 PM

BREAKING : ರಾಜ್ಯದಲ್ಲಿ ಹೃದಯವಿದ್ರಾವಕ ಘಟನೆ : ನೀರು ಕಾಯಿಸುವ ಹಂಡೆಯಲ್ಲಿ ಮುಳುಗಿಸಿ ಹೆತ್ತ ಮಗುವನ್ನೆ ಕೊಂದ ತಾಯಿ!

07/07/2025 1:01 PM

BIG BREAKING : ಆರ್ಥಿಕ ಪರಿಸ್ಥಿತಿ ಸುಧಾರಣೆ ಆದರೆ, ಗಂಡು ಮಕ್ಕಳಿಗೂ ಉಚಿತ ಪ್ರಯಾಣ : ಬಸವರಾಜ್ ರಾಯರೆಡ್ಡಿ ಹೇಳಿಕೆ

07/07/2025 12:51 PM
State News
KARNATAKA

BREAKING : ರಾಜ್ಯದಲ್ಲಿ ಹೃದಯವಿದ್ರಾವಕ ಘಟನೆ : ನೀರು ಕಾಯಿಸುವ ಹಂಡೆಯಲ್ಲಿ ಮುಳುಗಿಸಿ ಹೆತ್ತ ಮಗುವನ್ನೆ ಕೊಂದ ತಾಯಿ!

By kannadanewsnow0507/07/2025 1:01 PM KARNATAKA 1 Min Read

ಬೆಂಗಳೂರು : ರಾಜ್ಯದಲ್ಲೊಂದು ಹೃದಯವಿದ್ರಾವಕ ಘಟನೆ ನಡೆದಿದ್ದು, ಬೆಂಗಳೂರು ಗ್ತಾಮಂತರ ಜಿಲ್ಲೆಯ ನೆಲಮಂಗಲದಲ್ಲಿ 45 ದಿನದ ಮಗುವನ್ನು ತಾಯಿ ಒಬ್ಬಳು…

BIG BREAKING : ಆರ್ಥಿಕ ಪರಿಸ್ಥಿತಿ ಸುಧಾರಣೆ ಆದರೆ, ಗಂಡು ಮಕ್ಕಳಿಗೂ ಉಚಿತ ಪ್ರಯಾಣ : ಬಸವರಾಜ್ ರಾಯರೆಡ್ಡಿ ಹೇಳಿಕೆ

07/07/2025 12:51 PM

BREAKING : ಮಂಡ್ಯದಲ್ಲಿ ಘೋರ ಘಟನೆ : ಫೋಟೋ ತೆಗೆಸಿಕೊಳ್ಳುವಾಗ ಆಯತಪ್ಪಿ ಬಿದ್ದು, ನದಿಯಲ್ಲಿ ಕೊಚ್ಚಿ ಹೋದ ವ್ಯಕ್ತಿ!

07/07/2025 12:32 PM

BREAKING : ರಾಜ್ಯದ ಜನತೆಗೆ ಬಿಗ್ ಶಾಕ್ : ಇಂದಿನಿಂದ ರಾಜ್ಯಾದ್ಯಂತ ‘ಅನ್ನಭಾಗ್ಯ’ ಆಹಾರ ಧಾನ್ಯ ಸಾಗಾಣಿಕೆ ಬಂದ್!

07/07/2025 12:20 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.