Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹಾರ್ಮುಜ್ ಜಲಸಂಧಿಯಲ್ಲಿ ಸಿಲುಕಿದ ಭಾರತದ 1.7 ಮಿಲಿಯನ್ ಟನ್ ಇಂಧನ: ತೈಲ, ಗ್ಯಾಸ್ ಪೂರೈಕೆಯಲ್ಲಿ ಭಾರಿ ವ್ಯತ್ಯಯ!

18/03/2026 10:14 PM

ಪ್ರತಿ ಬಾರಿ ಬಾಚಿದಾಗ್ಲೂ ‘ಕೂದಲು’ ಉದುರುತ್ತಿಯೇ? ಎಚ್ಚರ, ಅಪಾಯಕಾರಿ ಕಾಯಿಲೆ ಸಂಕೇತವಾಗಿರ್ಬೋದು!

18/03/2026 9:58 PM

Good News ; ರೈತರಿಗೆ ಸಿಹಿ ಸುದ್ದಿ ; ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ, ‘ರಸಗೊಬ್ಬರ ಉತ್ಪಾದನೆ’ಗೆ 600 ಕೋಟಿ ರೂ. ಹಂಚಿಕೆ!

18/03/2026 9:38 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಜೆಡಿಎಸ್ ಶಾಸಕರಿಗೆ ಪಕ್ಷಾಂತರ ಮಾಡುವಂತೆ ಸಿಎಂ ಸಿದ್ದರಾಮಯ್ಯ ನೇರ ಆಮಿಷ: ಶಾಸಕ ಎಂ.ಟಿ.ಕೃಷ್ಣಪ್ಪ ಗಂಭೀರ ಆರೋಪ
KARNATAKA

BIG NEWS: ಜೆಡಿಎಸ್ ಶಾಸಕರಿಗೆ ಪಕ್ಷಾಂತರ ಮಾಡುವಂತೆ ಸಿಎಂ ಸಿದ್ದರಾಮಯ್ಯ ನೇರ ಆಮಿಷ: ಶಾಸಕ ಎಂ.ಟಿ.ಕೃಷ್ಣಪ್ಪ ಗಂಭೀರ ಆರೋಪ

By kannadanewsnow0912/04/2025 4:51 PM

ಬೆಂಗಳೂರು: ಸಾಕಪ್ಪಾ ಸಾಕು ಕಾಂಗ್ರೆಸ್ ಸರ್ಕಾರ ಎನ್ನುವ ಘೋಷ ವಾಕ್ಯದೊಂದಿಗೆ ಬೀದಿಗಿಳಿದು ಹೋರಾಟ ನಡೆಸಿದ ಜೆಡಿಎಸ್ ಪಕ್ಷ ರಾಜ್ಯ ಕಾಂಗ್ರೆಸ್ ಸರ್ಕಾರದ ಸರಣಿ ದರ ಏರಿಕೆ ಹಾಗೂ ಭ್ರಷ್ಟಾಚಾರದ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ನಡೆಸಿತು.

ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಕೇಂದ್ರ ಸಚಿವರು ಹಾಗೂ ಪಕ್ಷದ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು, ಶಾಸಕಾಂಗ ಪಕ್ಷದ ನಾಯಕರಾದ ಸುರೇಶ್ ಬಾಬು, ಸಂಸದರಾದ ಮಲ್ಲೇಶ್ ಬಾಬು ಸೇರಿದಂತೆ ಪಕ್ಷದ ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ಜಿಲ್ಲಾ ಅಧ್ಯಕ್ಷರು ಸೇರಿದಂತೆ ಅನೇಕ ನಾಯಕರು ಅಸಂಖ್ಯಾತ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಅಧಿಕಾರಕ್ಕೆ ಬಂದಾಗಿನಿಂದ ದರ ಏರಿಕೆ

ಸುರೇಶ್ ಬಾಬು, ಹೆಚ್.ಡಿ. ಕುಮಾರಸ್ವಾಮಿ, ಶಾಸಕಾಂಗ ಪಕ್ಷದ ಉಪ ನಾಯಕಿ ಶಾರದಾ ಪೂರ್ಯ ನಾಯಕ್, ಹಿರಿಯ ಶಾಸಕ ಎಂ.ಟಿ. ಕೃಷ್ಣಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯ ಕೆ. ಎ ತಿಪ್ಪೇಸ್ವಾಮಿ, ಮಾಜಿ ಶಾಸಕ ದೊಡ್ಡನಗೌಡ ಪಾಟೀಲ್ ಸೇರಿದಂತೆ ಅನೇಕ ಮುಖಂಡರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ರಾಜ್ಯ ಐದು ಗ್ಯಾರಂಟಿ ಕೊಟ್ಟಿದೆ ನಿಜ. ಆದರೆ, ಗ್ಯಾರಂಟಿ ಪಡೆದ ಪಾಪಕ್ಕೆ ಜನರು ದಿನನಿತ್ಯ ಬೆಲೆ ಏರಿಕೆ ಬರೆಗೆ ತುತ್ತಾಗುತ್ತಿದ್ದಾರೆ. ದಿನಕ್ಕೊಂದು ದರ ಏರಿಕೆ ಮಾಡುತ್ತಿದ್ದಾರೆ. ಕೊಟ್ಟಿದ್ದು ಅಲ್ಪ, ಜನರ ಮೇಲೆ ಬೆಟ್ಟದಷ್ಟು ಹೇರಿಕೆ ಮಾಡಿದ್ದಾರೆ. ಇದನ್ನು ಸಹಿಸುವ ಅಗತ್ಯ ಇಲ್ಲ. ಜನರು ಸರ್ಕಾರದ ವಿರುದ್ಧ ದಂಗೆ ಏಳದೇ ಬೇರೆ ದಾರಿ ಇಲ್ಲ ಎಂದು ನಾಯಕರು ಹೇಳಿದರು.

ರಾಜ್ಯದ ವಿವಿಧ ಜಿಲ್ಲೆಗಳಿಂದ ಅಸಂಖ್ಯಾತ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಬಂದಿದ್ದರು. ಎಲ್ಲೆಡೆ ಸಾಕಪ್ಪಾ ಸಾಕು ಕಾಂಗ್ರೆಸ್ ಸರ್ಕಾರ ಎನ್ನುವ ಫಲಕಗಳು ರಾರಾಜಿಸಿದವು.

ವಿಧಾನಸೌಧ ಮುತ್ತಿಗೆ ಯತ್ನಿಸಿದ ನಾಯಕರ ಬಂಧನ, ಬಿಡುಗಡೆ

ಪ್ರತಿಭಟನಾ ಸಭೆ ಮುಕ್ತಾಯವಾದ ನಂತರ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಾಯಕರು, ಕಾರ್ಯಕರ್ತರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು.

ಈ ಸಂದರ್ಭದಲ್ಲಿ ಅಡ್ಡಗಟ್ಟಿದ ಪೊಲೀಸರು ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಪಕ್ಷದ ಶಾಸಕರು, ಮುಖಂಡರನ್ನು ವಶಕ್ಕೆ ತೆಗೆದುಕೊಂಡು ನಂತರ ಬಿಡುಗಡೆ ಮಾಡಿದರು.

ಮುಖ್ಯಮಂತ್ರಿಯಿಂದ ಶಾಸಕರಿಗೆ ನೇರ ಆಮಿಷ; ಹಿರಿಯ ಶಾಸಕ ಎಂ.ಟಿ. ಕೃಷ್ಣಪ್ಪ ನೇರ ಆರೋಪ

ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ತುರುವೇಕೆರೆ ಕ್ಷೇತ್ರದ ಶಾಸಕ ಎಂ.ಟಿ. ಕೃಷ್ಣಪ್ಪ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರತಿಪಕ್ಷ ಶಾಸಕರಿಗೆ ಆಮಿಷ ಒಡ್ಡುತ್ತಿರುವ ಬಗ್ಗೆ ನೇರ ಆರೋಪವನ್ನೇ ಮಾಡಿದರು.

ನಾನು ನನ್ನ ಕ್ಷೇತ್ರಕ್ಕೆ ಪಾಲಿಟೆಕ್ನಿಕ್ ಕಾಲೇಜು ಕೊಡಿ ಎಂದು ಕೇಳಿದರೆ ಕಾಂಗ್ರೆಸ್ ಪಕ್ಷಕ್ಕೆ ಬಾ ಎಂದು ಕರೆಯುತ್ತಾರೆ ಸಿದ್ದರಾಮಯ್ಯ. ಒಬ್ಬ ಮುಖ್ಯಮಂತ್ರಿ ಹೀಗೆ ಮಾಡಬಹುದಾ? ಎಂದು ಬೇಸರ ವ್ಯಕ್ತಪಡಿಸಿದರು ಅವರು.

ನಾವು ಎಂಎಲ್ಎ ಗಳಾಗಿ ಎರಡು ವರ್ಷವಾಯಿತು. ಕ್ಷೇತ್ರಗಳ ಅಭಿವೃದ್ಧಿಗೆ ಕೊನೆಪಕ್ಷ ₹50 ಕೋಟಿ ಕೊಟ್ಟಿಲ್ಲ. ಒಂದು ರಸ್ತೆಯ ಗುಂಡಿ ಮುಚ್ಚೋಕೆ ದುಡ್ಡು ಕೊಡುತ್ತಿಲ್ಲ. ಬರೀ ಲೂಟಿ ಬಿಟ್ಟರೆ ಬರೀ ಏನು ಮಾಡುತ್ತಿಲ್ಲ. ಇದು ದಾರಿದ್ರ್ಯ ಸರ್ಕಾರ. ಗುಂಡಿ ಮುಚ್ಚೋಕೆ ಯೋಗ್ಯತೆ ಇಲ್ಲದವರು ಎರಡು ಸಾವಿರ ದುಡ್ಡು ಕೊಡ್ತಾರೆ. ಪಾಲಿಟೆಕ್ನಿಕ್ ಕಾಲೇಜು ಕೇಳಿದ್ರೆ ಕಾಂಗ್ರೆಸ್ ಗೆ ಬಾ ಅಂತಾರೆ ಸಿದ್ದರಾಮಯ್ಯ. ಯಾಕಪ್ಪ ಕಾಂಗ್ರೆಸ್ಸೂ..? ಕಾಂಗ್ರೆಸ್ ಮುಳುಗುತ್ತಿರುವ ಪಕ್ಷ. ನಾನು ಇನ್ನೂ ಇಪ್ಪತ್ತು ವರ್ಷಗಳಾದರೂ ಜೆಡಿಎಸ್ ನಲ್ಲಿಯೇ ಇರುತ್ತೇನೆ ಎಂದು ಅವರು ಹೇಳಿದರು.

Watch Video: ಜನಸಾಮಾನ್ಯರಂತೆ ‘ಸಾರಿಗೆ ಬಸ್’ನಲ್ಲಿ ಪ್ರಯಾಣಿಸಿ ಗಮನ ಸೆಳೆದ ‘ಕಂದಾಯ ಸಚಿವ ಕೃಷ್ಣಬೈರೇಗೌಡ’

ಫಲಿತಾಂಶ ಉತ್ತಮಕ್ಕೆ ಇದೆ ಇನ್ನೂ ಎರಡು ಅವಕಾಶ: PUC ಅಂಕ ಕಡಿಮೆ ಬಂತೆಂದು CET ಮಿಸ್ ಮಾಡ್ಕೊಬೇಡಿ

Share. Facebook Twitter LinkedIn WhatsApp Email

Related Posts

ಐಟಿಎಂಎಸ್ (ITMS) ಸಂಚಾರ ದಂಡವನ್ನು ಆನ್‌ಲೈನ್ ಮೂಲಕ ಪಾವತಿಸುವುದು ಹೇಗೆ? ಇಲ್ಲಿದೆ ಮಾಹಿತಿ

18/03/2026 8:59 PM2 Mins Read

BREAKING: ಹೊಸ ಹಾಡನ್ನು ಬರೆದು ಬಿಡುಗಡೆ: ಸರ್ಸೆ ಸೆರಗ ಸರ್ಸೆ ಹಾಡಿಗೆ ಕ್ಷಮೆಯಾಚಿಸಿ ನಟ ಪ್ರೇಮ್‌

18/03/2026 8:50 PM1 Min Read

ಇನ್ಮುಂದೆ ಸಾಗರ ತಾಲ್ಲೂಕಲ್ಲಿ ಸಂಚಾರ ನಿಯಮ ಉಲ್ಲಂಘಿಸಿದರೆ ಮನೆಗೆ ಬರಲಿದೆ ದಂಡದ ನೋಟಿಸ್!

18/03/2026 8:37 PM2 Mins Read
Recent News

ಹಾರ್ಮುಜ್ ಜಲಸಂಧಿಯಲ್ಲಿ ಸಿಲುಕಿದ ಭಾರತದ 1.7 ಮಿಲಿಯನ್ ಟನ್ ಇಂಧನ: ತೈಲ, ಗ್ಯಾಸ್ ಪೂರೈಕೆಯಲ್ಲಿ ಭಾರಿ ವ್ಯತ್ಯಯ!

18/03/2026 10:14 PM

ಪ್ರತಿ ಬಾರಿ ಬಾಚಿದಾಗ್ಲೂ ‘ಕೂದಲು’ ಉದುರುತ್ತಿಯೇ? ಎಚ್ಚರ, ಅಪಾಯಕಾರಿ ಕಾಯಿಲೆ ಸಂಕೇತವಾಗಿರ್ಬೋದು!

18/03/2026 9:58 PM

Good News ; ರೈತರಿಗೆ ಸಿಹಿ ಸುದ್ದಿ ; ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ, ‘ರಸಗೊಬ್ಬರ ಉತ್ಪಾದನೆ’ಗೆ 600 ಕೋಟಿ ರೂ. ಹಂಚಿಕೆ!

18/03/2026 9:38 PM

BREAKING : ಹಾರ್ಮುಜ್ ಜಲಸಂಧಿಯಲ್ಲಿ ಹಡಗು ರಕ್ಷಿಸುವ ಅಮೆರಿಕ ನೇತೃತ್ವದ ಪ್ರಯತ್ನಕ್ಕೆ ‘UAE’ ಕೈಜೋಡಿಸ್ಬೋದು!

18/03/2026 9:13 PM
State News
KARNATAKA

ಐಟಿಎಂಎಸ್ (ITMS) ಸಂಚಾರ ದಂಡವನ್ನು ಆನ್‌ಲೈನ್ ಮೂಲಕ ಪಾವತಿಸುವುದು ಹೇಗೆ? ಇಲ್ಲಿದೆ ಮಾಹಿತಿ

By kannadanewsnow0918/03/2026 8:59 PM KARNATAKA 2 Mins Read

ಬೆಂಗಳೂರು: ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಸಂಚಾರ ಪೊಲೀಸರು ಈಗ ಡಿಜಿಟಲ್ ಆಗಿದ್ದಾರೆ. ರಸ್ತೆಯ ಕ್ಯಾಮೆರಾಗಳು ನಿಮ್ಮ ನಿಯಮ ಉಲ್ಲಂಘನೆಯನ್ನು ಪತ್ತೆಹಚ್ಚಿದಾಗ, ನಿಮ್ಮ…

BREAKING: ಹೊಸ ಹಾಡನ್ನು ಬರೆದು ಬಿಡುಗಡೆ: ಸರ್ಸೆ ಸೆರಗ ಸರ್ಸೆ ಹಾಡಿಗೆ ಕ್ಷಮೆಯಾಚಿಸಿ ನಟ ಪ್ರೇಮ್‌

18/03/2026 8:50 PM

ಇನ್ಮುಂದೆ ಸಾಗರ ತಾಲ್ಲೂಕಲ್ಲಿ ಸಂಚಾರ ನಿಯಮ ಉಲ್ಲಂಘಿಸಿದರೆ ಮನೆಗೆ ಬರಲಿದೆ ದಂಡದ ನೋಟಿಸ್!

18/03/2026 8:37 PM

ರಾಜ್ಯದಲ್ಲಿ ಕಂದಾಯ ಇಲಾಖೆ ಸಿಬ್ಬಂದಿಗೆ ಇಲ್ಲ ಯುಗಾದಿ ರಜೆ: ಹಬ್ಬದ ದಿನವೂ ಕೆಲಸಕ್ಕೆ ಹಾಜರಾಗಲು ಸರ್ಕಾರ ಆದೇಶ

18/03/2026 8:30 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.