ಚಾಮರಾಜನಗರ : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ನಿನ್ನೆ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಸೇರಿದನೇ ಹಲವು ನಾಯಕರು ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಮಾಡಿ ಚರ್ಚಿಸಿದರು. ಇನ್ನು ಈ ವಿಚಾರವಾಗಿ ಸಚಿವ ಎಚ್ ಸಿ ಮಹದೇವಪ್ಪ ಅವರು ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ತಪ್ಪೇ ಮಾಡಿಲ್ಲ ಎಂದು ತಿಳಿಸಿದರು.
ಚಾಮರಾಜನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜನರು 136 ಸೀಟುಗಳನ್ನು ಗೆಲ್ಲಿಸಿರುವುದು ರಾಜೀನಾಮೆ ಕೊಡೋಕ ವಿಜಯೇಂದ್ರ ಕೇಳಿದ್ದಕ್ಕೆ ರಾಜೀನಾಮೆ ಕೊಡೋದಕ್ಕೆ ಜನ ಗೆಲ್ಲಿಸಿದ್ದ? ಬಿವೈ ವಿಜಯೇಂದ್ರ, ಬಿಎಸ್ ಯಡಿಯೂರಪ್ಪ, ಆರ್ ಅಶೋಕ್, ಎಚ್ ಡಿ ಕುಮಾರಸ್ವಾಮಿ, ಜನಾರ್ಧನ ರೆಡ್ಡಿ ಹಾಗೂ ಶಶಿಕಲಾ ಜೊಲ್ಲೆ ಮೇಲೆ ಸಾಕಷ್ಟು ಪ್ರಕರಣಗಳಿವೆ. ಬಿಜೆಪಿ ನಾಯಕರು ಮೊದಲು ತಮ್ಮದೆಲ್ಲವೂ ಶುದ್ಧಿ ಮಾಡಿಕೊಳ್ಳಲಿ ಎಂದು ತಿರುಗೇಟು ನೀಡಿದರು.
ಕಾಂಗ್ರೆಸ್ ಶಾಸಕರು ಮಂತ್ರಿಗಳು ಸಿಎಂ ಸಿದ್ದರಾಮಯ್ಯ ಪರವಾಗಿ ಇದ್ದಾರೆ. ಸಿಎಂ ಸಿದ್ದರಾಮಯ್ಯ ತಪ್ಪೇ ಮಾಡಿಲ್ಲ. ಇನ್ನು ಮುಡಾ ಹಗರಣ ವೈಟ್ನರ್ ಬಳಸಿ ದಾಖಲೆ ತಿದ್ದಿರುವ ಆರೋಪದ ವಿಚಾರವಾಗಿ ಮಾತನಾಡಿದ ಅವರು, ಇದರಲ್ಲಿ ಸಿಎಂ ಪಾತ್ರ ಇಲ್ಲದಿದ್ದರೂ ರಾಜಕೀಯ ಮಾಡುತ್ತಿದ್ದಾರೆ. ಅತಿವೃಷ್ಟಿಯಿಂದ ಜನರು ತತ್ತರಿಸಿ ಹೋಗಿದ್ದಾರೆ. ಆ ಕಡೆ ಗಮನ ಕೊಡುತ್ತಿಲ್ಲ ನ್ಯಾಯಾಂಗ ತನಿಖೆಗೆ ಆದೇಶ ಇದೆ ಕೋರ್ಟ್ ಮುಂದೆ ಪ್ರಕರಣವಿದೆ ಎಂದರು.
ಹಿಂದುಳಿದ ವರ್ಗದ ನಾಯಕನ ವ್ಯಕ್ತಿತ್ವಕ್ಕೆ ಧಕ್ಕೆ ತರುವ ಪ್ರಯತ್ನ ಮಾಡಲಾಗುತ್ತಿದೆ.ಸಿದ್ದರಾಮಯ್ಯ ಪ್ರಮಾಣಿಕ ಬದ್ಧತೆಯ ನಾಯಕ. ಸಿಎಂ ಸಾರ್ವಜನಿಕ ಜೀವನಕ್ಕೆ ಕಪ್ಪು ಚುಕ್ಕೆ ತರುವ ಪ್ರಯತ್ನ ನಡೆಯುತ್ತಿದೆ.ಜೆಡಿಎಸ್ ಬಿಜೆಪಿ ಹಾಗೂ ಕೇಂದ್ರ ಸರ್ಕಾರದಿಂದ ಪಿತೂರಿ ನಡೆಯುತ್ತಿದೆ ಎಂದು ಚಾಮರಾಜನಗರದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಚಿವ ಎಚ್ ಸಿ ಮಹದೇವಪ್ಪ ಆರೋಪಿಸಿದರು.
ಸಿಎಂ ಬದಲಾವಣೆ ಇಲ್ಲ : ಮಂಕಾಳು ವೈದ್ಯ
ಸಿಎಂ ರಾಜೀನಾಮೆ ನೀಡುತ್ತಾರೆ ಎಂದು ಬಿವೈ ವಿಜಯೇಂದ್ರ ಹೇಳಿಕೆ ವಿಚಾರವಾಗಿ ಬಿಜೆಪಿಯವರು ಸುಖಾಸುಮನೆ ಸುಳ್ಳು ಹೇಳಿಕೆಗಳನ್ನು ನೀಡುತ್ತಿದ್ದಾರೆ. 136 ಶಾಸಕರ ಬೆಂಬಲದಿಂದ ಸರ್ಕಾರ ರಚನೆಯಾಗಿದೆ. ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಆಗಿ ಮುಂದುವರೆಯುತ್ತಾರೆ ಕಾಂಗ್ರೆಸ್ ನಲ್ಲಿ ಸಿಎಂ ಬದಲಾವಣೆ ಇಲ್ಲ ಎಂದು ಮಂಕಾಳು ವೈದ್ಯ ತಿಳಿಸಿದರು.
ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವ ಪ್ರಶ್ನೆಯೇ ಬರಲ್ಲ. ಬಿಜೆಪಿ ಹಾಗೂ ಜೆಡಿಎಸ್ ಸುಖಾಸುಮನೆ ಪಾದಯಾತ್ರೆ ಮಾಡಿದ್ದಾರೆ. ಈ ವಿಚಾರದಲ್ಲಿ ರಾಜ್ಯಪಾಲರು ಕೇಂದ್ರದ ಬಿಜೆಪಿ ಏಜೆಂಟರಂತೆ ವರ್ತಿಸುತ್ತಿದ್ದಾರೆ ಎಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಸಚಿವ ಮಂಕಾಳು ವೈದ್ಯ ಹೇಳಿಕೆ ನೀಡಿದರು