ಬೆಂಗಳೂರು : ಗೃಹಲಕ್ಷ್ಮೀ ಯೋಜನೆಯ ಹಣ ಕೂಡಿಟ್ಟು ಊರಿಗೆಲ್ಲ ಹೋಳಿಗೆ ಊಟ ಹಾಕಿಸಿದ ರಾಯಬಾಗ ತಾಲೂಕಿನ ಸುಟ್ಟಟ್ಟಿಯ ಅಕ್ಕಾತಾಯಿ ಲಂಗೂಟಿ ಅವರನ್ನು ಸಿಎಂ ಸಿದ್ದರಾಮಯ್ಯ ಸನ್ಮಾನಿಸಿದ್ದಾರೆ.
ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ, ಗೃಹಲಕ್ಷ್ಮೀ ಯೋಜನೆಯ ಹಣ ಕೂಡಿಟ್ಟು ಊರಿಗೆಲ್ಲ ಹೋಳಿಗೆ ಊಟ ಹಾಕಿಸಿದ ರಾಯಬಾಗ ತಾಲೂಕಿನ ಸುಟ್ಟಟ್ಟಿಯ ಅಕ್ಕಾತಾಯಿ ಲಂಗೂಟಿ ಅವರನ್ನು ಸಿಎಂ ಸಿದ್ದರಾಮಯ್ಯ ಸನ್ಮಾನಿಸಿದ್ದಾರೆ. ಇದೇ ವೇಳೆ ಅಜ್ಜಿಯ ಹೋಳಿಗೆ ಊಟಕ್ಕೆ ಸಾತ್ ನೀಡಿದ್ದ ಇನ್ನೂ 6-7 ಮಹಿಳೆಯರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪರವಾಗಿ ಸೀರೆ ನೀಡಿ ಗೌರವಿಸಲಾಯಿತು.
ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶಣ್ಣ ಜಾರಕಿಹೊಳಿ ಹಾಗೂ ಜಿಲ್ಲೆಯ ಶಾಸಕರು ಇದ್ದರು.