Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಿಹಿ ವಿಷ : ಮಾರುಕಟ್ಟೆಯಲ್ಲಿ ಸಿಗುವ ಈ ದ್ರಾಕ್ಷಿ ಹಣ್ಣುಗಳನ್ನು ತಿನ್ನುವುದರಿಂದ ಜೀವಕ್ಕೆ ಅಪಾಯ.!

26/01/2026 9:55 AM

ದಾನ-ಧರ್ಮದ ನೆಲೆ, ಶ್ರೀ ಕ್ಷೇತ್ರ ಧರ್ಮಸ್ಥಳ – ಹಿನ್ನಲೆ

26/01/2026 9:48 AM

BREAKING : ರಾಜ್ಯದಲ್ಲಿ ’77ನೇ ಗಣರಾಜ್ಯೋತ್ಸವ’ ಸಂಭ್ರಮ : ರಾಜ್ಯಪಾಲರ ಭಾಷಣದ ಸಂಪೂರ್ಣ ವಿವರ ಇಲ್ಲಿದೆ | Republic Day 2026

26/01/2026 9:43 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕಲಬುರ್ಗಿಯ ‘ಜಯದೇವ ಹೃದ್ರೋಗ ಆಸ್ಪತ್ರೆ’ಯನ್ನು ಸಿಎಂ ಸಿದ್ಧರಾಮಯ್ಯ ಲೋಕಾರ್ಪಣೆ
KARNATAKA

ಕಲಬುರ್ಗಿಯ ‘ಜಯದೇವ ಹೃದ್ರೋಗ ಆಸ್ಪತ್ರೆ’ಯನ್ನು ಸಿಎಂ ಸಿದ್ಧರಾಮಯ್ಯ ಲೋಕಾರ್ಪಣೆ

By kannadanewsnow0922/12/2024 3:01 PM

ಕಲಬುರಗಿ : ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 371 ಜೆ ಜಾರಿಯಾದ ದಶಮಾನೋತ್ಸವದ ಪ್ರಯುಕ್ತ 371 ಹಾಸಿಗೆಗಳ ಅತ್ಯುನ್ನತ ಆರೋಗ್ಯ ಸೌಕರ್ಯಗಳಿರುವ ಜಯದೇವ ಹೃದ್ರೋಗ ಆಸ್ಪತ್ರೆಯನ್ನು ಲೋಕಾರ್ಪಣೆಗೊಳಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ಕಲಬುರಗಿಯಲ್ಲಿ 371 ಹಾಸಿಗೆಗಳ ಜಯದೇವ ಹೃದ್ರೋಗ ಆಸ್ಪತ್ರೆಯ ನೂತನ ಕಟ್ಟಡವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

ಬೆಂಗಳೂರು, ಮೈಸೂರಿನಲ್ಲಿರುವ ಜಯದೇವ ಹೃದ್ರೋಗ ಆಸ್ಪತ್ರೆ ಶುಚಿತ್ವ ಮತ್ತು ನಿರ್ವಹಣೆಯಲ್ಲಿ ಉತ್ತಮ ಗುಣಮಟ್ಟ ಕಾಯ್ದುಕೊಂಡಿದೆ. ಕಲಬುರಗಿಯ ಜಯದೇವ ಇವೆರಡೂ ಆಸ್ಪತ್ರೆಗಳಿಗಿಂತ ಇನ್ನೂ ಹೆಚ್ಚಿನ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು ಎಂದು ಸೂಚಿಸಿದರು.

ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿರುವ ಜನತೆ ಹೃದ್ರೋಗ ಸಮಸ್ಯೆಗಳಿಗೆ ಈಗ ಬೆಂಗಳೂರಿಗೆ ಬರುವ ಅಗತ್ಯವೇ ಇಲ್ಲ. ಕಲಬುರಗಿಯಲ್ಲೇ ಜಯದೇವ ಲೋಕಾರ್ಪಣೆಗೊಳಿಸಿದ್ದೇವೆ ಎಂದರು‌.

ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ ಸಂಗತಿಗಳನ್ನು ಉಲ್ಲೇಖಿಸಿದ ಮುಖ್ಯಮಂತ್ರಿಗಳು, “ಕಲಬುರಗಿಯಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿ, ಈ ಬಗ್ಗೆ ಬೇಗ ತೀರ್ಮಾನ ತೆಗೆದುಕೊಳ್ಳುವಂತೆ ವೇದಿಕೆಯಲ್ಲಿದ್ದ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಅವರಿಗೆ ಸೂಚಿಸಿದರು. ಮೈಸೂರಿಗೂ ನಿಮ್ಹಾನ್ಸ್ ಘಟಕದ ಅಗತ್ಯವಿದ್ದು ಅದನ್ನು ಮರೆಯಬೇಡಿ ಎಂದರು‌.

371 ಜೆ ಜಾರಿಯಿಂದ ಈ ಭಾಗದ ಸಹಸ್ರಾರು ವಿದ್ಯಾವಂತರು ಉತ್ತಮ ಹುದ್ದೆಗಳನ್ನು ಪಡೆಯಲು ಸಾಧ್ಯವಾಗಿದೆ. ನಮ್ಮ ಸರ್ಕಾರ ಉತ್ತರ ಕರ್ನಾಟಕ ಸೇರಿದಂತೆ ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ನೀಲನಕ್ಷೆ ಸಿದ್ದಪಡಿಸಿಕೊಂಡಿದ್ದೇವೆ. ಇದು ನಮ್ಮ ಸರ್ಕಾರದ ಬದ್ಧತೆ ಎಂದರು.

ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು. ಇಲ್ಲಿನ ವಿಶ್ವ ವಿದ್ಯಾಲಯಗಳಲ್ಲಿ ನೂತನ ಹೊಸ ಕೋರ್ಸ್ ಗಳನ್ನು ಆರಂಭಿಸುವುದು ಮತ್ತು ಖಾಲಿ ಇರುವ ಹುದ್ದೆಗಳನ್ನು ತುಂಬುವ ಕೆಲಸವನ್ನೂ ಮಾಡಲಾಗುವುದು ಎಂದರು.

ತೊಗರಿ ಬೆಳೆ ಪ್ಯಾಕೇಜ್ ಬಗ್ಗೆ KKRDB ಅಧ್ಯಕ್ಷರಾದ ಅಜಯ್ ಸಿಂಗ್ ಮತ್ತು ಇಲ್ಲಿನ ಶಾಸಕರು, ಸಚಿವರು ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ವರದಿ ಕೇಳಿದ್ದೇನೆ. ವರದಿ ಬಂದ ಕೂಡಲೇ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಅನುಭವ ಮಂಟಪ ಪೂರ್ವ ಕ್ಕೆ ಹಣ

ಈಗಾಗಲೇ ಅನುಭವ ಮಂಟಪ ನಿರ್ಮಾಣ ಅರ್ಧ ಮುಗಿದಿದೆ. ಪೂರ್ಣಗೊಳಿಸಲು ಅಗತ್ಯ ಹಣ ನೀಡಲಾಗಿದೆ. ಇನ್ನೂ ಅಗತ್ಯಬಿದ್ದರೆ ಹಣ ನೀಡಲಾಗುವುದು ಎಂದು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.

BREAKING: ವಿವಾದದ ನಡುವೆಯೂ ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಹಂಚಿಕೆ: ಪೊಲೀಸರಿಂದ ಸೀಜ್

‘ಒಂದು ರಾಷ್ಟ್ರ ಒಂದು ಚುನಾವಣೆ’ ಮಸೂದೆಗಳು ಸಂಸತ್ತಿನಲ್ಲಿ ಅಂಗೀಕಾರಗೊಳ್ಳುವ ಸಾಧ್ಯತೆಯಿಲ್ಲ: ದಿಗ್ವಿಜಯ್ ಸಿಂಗ್

Share. Facebook Twitter LinkedIn WhatsApp Email

Related Posts

ಸಿಹಿ ವಿಷ : ಮಾರುಕಟ್ಟೆಯಲ್ಲಿ ಸಿಗುವ ಈ ದ್ರಾಕ್ಷಿ ಹಣ್ಣುಗಳನ್ನು ತಿನ್ನುವುದರಿಂದ ಜೀವಕ್ಕೆ ಅಪಾಯ.!

26/01/2026 9:55 AM1 Min Read

ದಾನ-ಧರ್ಮದ ನೆಲೆ, ಶ್ರೀ ಕ್ಷೇತ್ರ ಧರ್ಮಸ್ಥಳ – ಹಿನ್ನಲೆ

26/01/2026 9:48 AM3 Mins Read

BREAKING : ರಾಜ್ಯದಲ್ಲಿ ’77ನೇ ಗಣರಾಜ್ಯೋತ್ಸವ’ ಸಂಭ್ರಮ : ರಾಜ್ಯಪಾಲರ ಭಾಷಣದ ಸಂಪೂರ್ಣ ವಿವರ ಇಲ್ಲಿದೆ | Republic Day 2026

26/01/2026 9:43 AM1 Min Read
Recent News

ಸಿಹಿ ವಿಷ : ಮಾರುಕಟ್ಟೆಯಲ್ಲಿ ಸಿಗುವ ಈ ದ್ರಾಕ್ಷಿ ಹಣ್ಣುಗಳನ್ನು ತಿನ್ನುವುದರಿಂದ ಜೀವಕ್ಕೆ ಅಪಾಯ.!

26/01/2026 9:55 AM

ದಾನ-ಧರ್ಮದ ನೆಲೆ, ಶ್ರೀ ಕ್ಷೇತ್ರ ಧರ್ಮಸ್ಥಳ – ಹಿನ್ನಲೆ

26/01/2026 9:48 AM

BREAKING : ರಾಜ್ಯದಲ್ಲಿ ’77ನೇ ಗಣರಾಜ್ಯೋತ್ಸವ’ ಸಂಭ್ರಮ : ರಾಜ್ಯಪಾಲರ ಭಾಷಣದ ಸಂಪೂರ್ಣ ವಿವರ ಇಲ್ಲಿದೆ | Republic Day 2026

26/01/2026 9:43 AM

ಮ್ಯಾನ್ಮಾರ್ ಗಡಿಯಲ್ಲಿ ಭಾರತೀಯ ಸೇನೆಯ ‘ಸರ್ಜಿಕಲ್ ಸ್ಟ್ರೈಕ್’ ಖಚಿತ: 2025ರ ಗುಪ್ತ ಕಾರ್ಯಾಚರಣೆಯ ರಹಸ್ಯ ಬಯಲು!

26/01/2026 9:41 AM
State News
KARNATAKA

ಸಿಹಿ ವಿಷ : ಮಾರುಕಟ್ಟೆಯಲ್ಲಿ ಸಿಗುವ ಈ ದ್ರಾಕ್ಷಿ ಹಣ್ಣುಗಳನ್ನು ತಿನ್ನುವುದರಿಂದ ಜೀವಕ್ಕೆ ಅಪಾಯ.!

By kannadanewsnow5726/01/2026 9:55 AM KARNATAKA 1 Min Read

ದ್ರಾಕ್ಷಿಗಳು ಋತುವಿನಲ್ಲಿ ಲಭ್ಯವಿರುವ ಅತ್ಯಂತ ರುಚಿಕರವಾದ ಹಣ್ಣುಗಳಲ್ಲಿ ಒಂದಾಗಿದೆ. ಹೋಳಿ ಹಬ್ಬದವರೆಗೆ ಜನರು ಅವುಗಳನ್ನು ಹೆಚ್ಚಿನ ಪ್ರಮಾಣದಲ್ಲಿ ತಿನ್ನುತ್ತಾರೆ. ಒಂದು…

ದಾನ-ಧರ್ಮದ ನೆಲೆ, ಶ್ರೀ ಕ್ಷೇತ್ರ ಧರ್ಮಸ್ಥಳ – ಹಿನ್ನಲೆ

26/01/2026 9:48 AM

BREAKING : ರಾಜ್ಯದಲ್ಲಿ ’77ನೇ ಗಣರಾಜ್ಯೋತ್ಸವ’ ಸಂಭ್ರಮ : ರಾಜ್ಯಪಾಲರ ಭಾಷಣದ ಸಂಪೂರ್ಣ ವಿವರ ಇಲ್ಲಿದೆ | Republic Day 2026

26/01/2026 9:43 AM

BREAKING : 77ನೇ ಗಣರಾಜ್ಯೋತ್ಸವದ ಅಂಗವಾಗಿ ನಾಡಿನ ಜನತೆಗೆ CM ಸಿದ್ದರಾಮಯ್ಯ ಸಂದೇಶ

26/01/2026 9:34 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.