ರಾಯಚೂರು: ಜಿಲ್ಲೆ ಯ 1406 ಗ್ರಾ ಮೀಣ ಜನವಸತಿಗಳಿಗೆ ಹಾಗೂ 7 ನಗರ ಸ್ಥಳೀಯ ಸಂಸ್ಥೆಗಳಿಗೆ ಬಹುಗ್ರಾ ಮ ಕುಡಿಯುವ ನೀರು ಸರಬರಾಜು ಮಾಡುವ 2978 ಕೋಟಿ ರೂ.ಗಳ ಯೋಜನೆಗೆ ರಾಯಚೂರಿನಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶಂಕುಸ್ಥಾಪನೆ ನೆರವೇರಿಸಿ ಕಾಮಗಾರಿಗಳಿಗೆ ಚಾಲನೆ ನೀಡಿದರು.
ನಾರಾಯಣಪುರ ಜಲಾಶಯ ಈ ಯೋಜನೆಯ ಜಲಮೂಲವಾಗಿದ್ದು, 810 ಗ್ರಾಮಗಳಿಗೆ ಸೇರಿದ 1406 ಗ್ರಾಮೀಣ ಜನವಸತಿಗಳಿಗೆ ಈ ಯೋಜನೆಯ ಮೂಲಕ ನೀರು ಸರಬರಾಜು ಆಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರಿನಲ್ಲಿ ಪ್ರಕಟಿಸಿದ್ದಾರೆ.
ನೀರು ಸರಬರಾಜಾಗುವ 810 ಗ್ರಾಮಗಳ 3,42,534 ಮನೆಗಳು ಶುದ್ದ ಕುಡಿಯುವ ನೀರಿನ ಸೌಲಭ್ಯ ಪಡೆಯಲಿದ್ದು, ಸುಮಾರು 30 ತಿಂಗಳ ಅವಧಿಯಲ್ಲಿ ಕಾಮಗಾರಿಗಳು ಪೂರ್ಣಗೊಳ್ಳಲಿವೆ ಎಂದೂ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಈ ಭಾಗದ ಪ್ರತಿಯೊಬ್ಬರು ಪ್ರತಿ ನಿತ್ಯ 55 ಲೀಟರ್ (ಎಲ್.ಪಿ.ಸಿ.ಡಿ) ನೀರನ್ನು ಪಡೆಯಲಿದ್ದು ಈ ಯೋಜನೆಯಡಿ ಮಾನ್ವಿ, ಮಸ್ಕಿ, ಕವಿತಾಳ, ತುರ್ವಿಹಾಳ, ಬಾಳಗನೂರು, ಸಿರವಾರ, ಹಟ್ಟಿ ನಗರ ಸ್ಥಳೀಯ ಸಂಸ್ಥೆಗಳಿಗೂ ನೀರು ಪೂರೈಸಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನಿಡಿದ್ದಾರೆ.
ನೀವು ‘ಮಲೆನಾಡಿನ ದೃಶ್ಯ ವೈಭವ’ವನ್ನು ಕಣ್ ತುಂಬಿಕೊಳ್ಳಬೇಕೇ? ತಪ್ಪದೇ ಈ ವೀಡಿಯೋ ಸಾಂಗ್ ನೋಡಿ | Malnad Yana
BREAKING : ಬೆಂಗಳೂರಲ್ಲಿ ಸಾಂಬಾರ್ ಮಾಡುವ ವಿಚಾರವಾಗಿ ಶುರುವಾದ ಗಲಾಟೆ, ಓರ್ವನ ಕೊಲೆಯಲ್ಲಿ ಅಂತ್ಯ!