Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Watch Video: ಟೇಕಪ್ ಆದ 30 ಸೆಕೆಂಡಲ್ಲೇ ಏರ್ ಇಂಡಿಯಾ ವಿಮಾನ ಪತನ: ಬೆಚ್ಚಿ ಬೀಳಿಸೋ ವೀಡಿಯೋ ವೈರಲ್ | Ahmedabad Plane Crash

12/06/2025 9:19 PM

BREAKING : ಭಾರತದ ಗಗನಯಾತ್ರಿ ‘ಶುಭಾಂಶು ಶುಕ್ಲಾ’ ಒಳಗೊಂಡ ‘ಆಕ್ಸಿಯಮ್ ಮಿಷನ್ 4′ ಬಾಹ್ಯಾಕಾಶ ಉಡಾವಣೆ’ ಮತ್ತೆ ಮುಂದೂಡಿಕೆ

12/06/2025 9:11 PM

ರಾಜ್ಯದಲ್ಲಿಂದು ಕೊರೋನಾಘಾತ: 240 ಮಂದಿಗೆ ಕೋವಿಡ್ ಪಾಸಿಟಿವ್

12/06/2025 9:10 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರು ‘ಲಾಲ್ ಬಾಗ್ ಪ್ಲವರ್ ಶೋ’ಗೆ ಸಿಎಂ ಸಿದ್ಧರಾಮಯ್ಯ ಚಾಲನೆ: ಹೀಗಿದೆ ‘ಟಿಕೆಟ್’ ದರ | lal bag Flower Show
KARNATAKA

ಬೆಂಗಳೂರು ‘ಲಾಲ್ ಬಾಗ್ ಪ್ಲವರ್ ಶೋ’ಗೆ ಸಿಎಂ ಸಿದ್ಧರಾಮಯ್ಯ ಚಾಲನೆ: ಹೀಗಿದೆ ‘ಟಿಕೆಟ್’ ದರ | lal bag Flower Show

By kannadanewsnow0908/08/2024 2:23 PM

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ಬೆಂಗಳೂರಿನ ಲಾಲ್ ಬಾಗ್ ಪ್ಲವರ್ ಶೋಗೆ ಚಾಲನೆ ನೀಡಿದು. ಈ ಸಂದರ್ಭದಲ್ಲಿ ಅಂಬೇಡ್ಕರ್ ಮೊಮ್ಮಗ ಕೂಡ ಬಾಗಿಯಾಗಿದ್ದರು. ಹಾಗಾದ್ರೆ ಟಿಕೆಟ್ ದರ ಎಷ್ಟು ಅಂತ ಮುಂದೆ ಓದಿ.

ಅಂಬೇಡ್ಕರ್ ರವರು ಎಂದೆಂದಿಗೂ ಪ್ರಸ್ತುತ. ಈ ಬಾರಿಯ ಫಲಪುಷ್ಪ ಪ್ರದರ್ಶನ ಜನರು ಸಂವಿಧಾನಗಳ ಆಶಯಗಳನ್ನರಿಯಲು ಅಪೂರ್ವ ಅವಕಾಶ ಒದಗಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ವಿಷಯಾಧಾರಿತ ಸ್ವಾತಂತ್ರ್ಯೋತ್ಸವ 216ನೇ ಫಲಪುಷ್ಪ ಪ್ರದರ್ಶನ ಉದ್ಘಾಟಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಯಾವುದೇ ಜಾತಿ, ಧರ್ಮ,ಭಾಷೆ, ಪ್ರದೇಶಗಳಿಗೆ ಸೇರಿದ ಎಲ್ಲ ಜನರಿಗೂ ಸಮಾನ ಅವಕಾಶಗಳು ದೊರೆಯಬೇಕು. ಜನರಿಗೆ ಆರ್ಥಿಕ, ಸಾಮಾಜಿಕ ಸ್ವಾತಂತ್ರ್ಯ ದೊರೆತಾಗ ಮಾತ್ರ ರಾಜಕೀಯ ಸ್ವಾತಂತ್ರ್ಯ ಗಳಿಸಲು ಸಾಧ್ಯ ಎಂಬುದರಲ್ಲಿ ನಂಬಿಕೆಯಿರಿಸಿದ್ದರು. ಅಂಬೇಡ್ಕರ್ ರವರ ಬಾಲ್ಯದಿಂದ ತಮ್ಮ ಜೀವಿತಾವಧಿಯಲ್ಲಿನ ಪ್ರಮುಖ ಸಾಧನೆಗಳನ್ನು ವಿವಿಧ ರೂಪದಲ್ಲಿ ಪ್ರದರ್ಶನದಲ್ಲಿ ಬಿಂಬಿಸಲಾಗಿದ್ದು, ಜನರು ಅವರ ಆಶಯಗಳ ಬಗ್ಗೆ ಅರಿಯಬಹುದಾಗಿದೆ. ಜನರು ಸಂವಿಧಾನದ ಬಗ್ಗೆ ಅರಿವು ಪಡೆದಾಗ ಮಾತ್ರ ಸಂವಿಧಾನದ ರೀತ್ಯ ನಡೆದುಕೊಳ್ಳಲು ಸಾಧ್ಯ. ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾಗಿದ್ದ ಅಂಬೇಡ್ಕರ್ ರವರನ್ನು ಸಂವಿಧಾನ ಶಿಲ್ಪಿ ಎಂದು ಕರೆಯಲಾಗುತ್ತದೆ.ಅಂಬೇಡ್ಕರ್ ರವರು ಎಂದೆಂದಿಗೂ ಪ್ರಸ್ತುತ ಎಂದರು.

ಆಗಸ್ಟ್ 8 ರಿಂದ 19 ವರೆಗೆ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನ

ಭಾರತ ಸ್ವಾತಂತ್ರ್ಯೋತ್ಸವ ಅಂಗವಾಗಿ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿದ್ದು, ಈ ಬಾರಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ವಿಷಯಾಧಾರಿತ ಫಲಪುಷ್ಪ ಪ್ರದರ್ಶನವನ್ನು ಆಗಸ್ಟ್ 8 ರಿಂದ 19 ವರೆಗೆ ಏರ್ಪಡಿಸಲಾಗಿದೆ. ಬಾಬಾಸಾಹೇಬ್ ಅಂಬೇಡ್ಕರ್ ರವರ ಜೀವನಸಾಧನೆ, ದೇಶಕ್ಕೆ ನೀಡದ ಕೊಡುಗೆ, ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ, ಬೌಧ ಮತ ಸ್ವೀಕಾರ, ಸಂವಿಧಾನ ರಚನಾ ಸಮಿತಿಯಲ್ಲಿ ಮಹತ್ವದ ಪಾತ್ರ, ಸಂವಿಧಾನದ ಆಶಯಗಳು, ಪ್ರಜಾಪ್ರಭುತ್ವ ವ್ಯವಸ್ಥೆ ಸೇರಿದಂತೆ ಹಲವು ಪ್ರಮುಖ ವಿಷಯಗಳನ್ನು ಆಧರಿಸಿದ ಫಲಪುಷ್ಪ ಪ್ರದರ್ಶವನ್ನು ಏರ್ಪಡಿಸಲಾಗಿದೆ ಎಂದರು.

ಫಲಪುಷ್ಪ ಪ್ರದರ್ಶನಕ್ಕೆ 12 ಲಕ್ಷ ಜನ ಆಗಮಿಸುವ ನಿರೀಕ್ಷೆ

ತೋಟಗಾರಿಕಾ ಇಲಾಖೆಯ ವತಿಯಿಂದ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಸುಮಾರು 12 ಲಕ್ಷ ಜನರು ಆಗಮಿಸುವ ನಿರೀಕ್ಷೆ ಇದೆ. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಿಂದ ವಿವಿಧ ತಳಿಗಳ ಸುಮಾರು 30 ಲಕ್ಷ ಹೂವುಗಳನ್ನು ಈ ಪುಷ್ಪ ಪ್ರದರ್ಶನದಲ್ಲಿ ಬಳಸಲಾಗಿದೆ ಎಂದರು.

ಹೀಗಿದೆ ಟಿಕೆಟ್ ದರ

ಲಾಲ್‌ಬಾಗ್‌ನ ಎಲ್ಲ ಪ್ರವೇಶ ದ್ವಾರಗಳಲ್ಲಿ ಎಲೆಕ್ಟ್ರಾನಿಕ್‌ ಟಿಕೆಟ್‌ ಯಂತ್ರಗಳ ವ್ಯವಸ್ಥೆ ಮಾಡಲಾಗಿದ್ದು, ಆನ್‌ಲೈನ್‌ ಬುಕ್ಕಿಂಗ್‌ ಪಡೆದುಕೊಳ್ಳುವ ಸೌಲಭ್ಯ ಇದೆ. ವಯಸ್ಕರಿಗೆ ₹80, ರಜೆ ದಿನಗಳಲ್ಲಿ ₹100, ಮಕ್ಕಳಿಗೆ ₹30 ಹಾಗೂ ಸಮವಸ್ತ್ರ ಧರಿಸಿ ಬರುವ ಶಾಲಾ ವಿದ್ಯಾರ್ಥಿಗಳಿಗೆ ಪ್ರವೇಶ ಉಚಿತವಾಗಿದೆ.

7ನೇ ವೇತನ ಆಯೋಗ : ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್ | 7th Pay Commission

ಗಮನಿಸಿ : ಸರ್ಕಾರದ ಈ ಯೋಜನೆಯಡಿ ನಿಮಗೆ ಸಿಗಲಿದೆ 5,000 ರೂ. ಪಿಂಚಣಿ!

BREAKING :`PG’ ವೈದ್ಯರ ಕಡ್ಡಾಯ ಸೇವಾ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆ | Karnataka High Court

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿಂದು ಕೊರೋನಾಘಾತ: 240 ಮಂದಿಗೆ ಕೋವಿಡ್ ಪಾಸಿಟಿವ್

12/06/2025 9:10 PM1 Min Read

BREAKING : ರಾಜ್ಯದ ಖಾಸಗಿ ಅನುದಾನಿತ ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರು, ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : `ನಿವೃತ್ತಿ ವೇತನ’ ಹೆಚ್ಚಳ ಮಾಡಿ ಸರ್ಕಾರ ಆದೇಶ.!

12/06/2025 8:38 PM1 Min Read

ನಿಮ್ಮ ವ್ಯಾಪಾರದ ಯಶಸ್ಸಿಗೆ ಈ ಪರಿಹಾರ ಮಾಡಿ, ಹೆಚ್ಚು ಲಾಭ ಗ್ಯಾರಂಟಿ

12/06/2025 7:10 PM3 Mins Read
Recent News

Watch Video: ಟೇಕಪ್ ಆದ 30 ಸೆಕೆಂಡಲ್ಲೇ ಏರ್ ಇಂಡಿಯಾ ವಿಮಾನ ಪತನ: ಬೆಚ್ಚಿ ಬೀಳಿಸೋ ವೀಡಿಯೋ ವೈರಲ್ | Ahmedabad Plane Crash

12/06/2025 9:19 PM

BREAKING : ಭಾರತದ ಗಗನಯಾತ್ರಿ ‘ಶುಭಾಂಶು ಶುಕ್ಲಾ’ ಒಳಗೊಂಡ ‘ಆಕ್ಸಿಯಮ್ ಮಿಷನ್ 4′ ಬಾಹ್ಯಾಕಾಶ ಉಡಾವಣೆ’ ಮತ್ತೆ ಮುಂದೂಡಿಕೆ

12/06/2025 9:11 PM

ರಾಜ್ಯದಲ್ಲಿಂದು ಕೊರೋನಾಘಾತ: 240 ಮಂದಿಗೆ ಕೋವಿಡ್ ಪಾಸಿಟಿವ್

12/06/2025 9:10 PM

VIDEO : ಟೇಕಾಫ್’ನಿಂದ ಪತನದವರೆಗೂ.! ವಿಮಾನ ಅಪಘಾತದ ಮತ್ತೊಂದು ಭೀಕರ ವಿಡಿಯೋ ಇಲ್ಲಿದೆ!

12/06/2025 9:02 PM
State News
KARNATAKA

ರಾಜ್ಯದಲ್ಲಿಂದು ಕೊರೋನಾಘಾತ: 240 ಮಂದಿಗೆ ಕೋವಿಡ್ ಪಾಸಿಟಿವ್

By kannadanewsnow0912/06/2025 9:10 PM KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾಘಾತವೇ ಉಂಟಾಗಿದೆ. ಇಂದು ಬರೋಬ್ಬರಿ 240 ಜನರಿಗೆ ಕೋವಿಡ್ ಪಾಸಿಟಿವ್ ಅಂತ ವರದಿಯಿಂದ ದೃಢಪಟ್ಟಿದೆ. ಈ…

BREAKING : ರಾಜ್ಯದ ಖಾಸಗಿ ಅನುದಾನಿತ ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರು, ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : `ನಿವೃತ್ತಿ ವೇತನ’ ಹೆಚ್ಚಳ ಮಾಡಿ ಸರ್ಕಾರ ಆದೇಶ.!

12/06/2025 8:38 PM

ನಿಮ್ಮ ವ್ಯಾಪಾರದ ಯಶಸ್ಸಿಗೆ ಈ ಪರಿಹಾರ ಮಾಡಿ, ಹೆಚ್ಚು ಲಾಭ ಗ್ಯಾರಂಟಿ

12/06/2025 7:10 PM

ನೀವು ‘ಸ್ವಚ್ಛ ಬೆಂಗಳೂರು’ ಬಯಸುತ್ತೀರಾ? ಹಾಗಿದ್ರೆ ‘ಕ್ಲೀನ್ ಸಿಟಿ’ಗಾಗಿ ಈ ಸಂಖ್ಯೆಗೆ ‘WhatsApp’ ಮಾಡಿ

12/06/2025 6:56 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.