Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಜಮ್ಮು-ಕಾಶ್ಮೀರದಲ್ಲಿ ಸೇನಾ ವಾಹನ ಕಂದಕಕ್ಕೆ ಉರುಳಿ 10 ಮಂದಿ ಸೈನಿಕರು ಹುತಾತ್ಮ!

22/01/2026 3:24 PM

ಬಿಗ್ ಬಾಸ್ ಸೀಸನ್-12 ವಿಜೇತ ನಟ ಗಿಲ್ಲಿ ನಟರಾಜ್ ನನ್ನು ಸಿಎಂ ಸಿದ್ದರಾಮಯ್ಯ ಅಭಿನಂದಿಸಿ, ಶುಭಾಶಯ

22/01/2026 3:21 PM

ಬಿಎಂಟಿಸಿ ಬಸ್ಸಲ್ಲಿ 6 ರೂಪಾಯಿಯ ಬದಲು ರೂ.62,316 ಪೋನ್ ಪೇ ಮಾಡಿದ ಪ್ರಯಾಣಿಕ: ಮುಂದೆ ಆಗಿದ್ದೇನು ಗೊತ್ತಾ?

22/01/2026 3:16 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪ್ರಧಾನಿ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ : ರಾಜ್ಯದ ಪ್ರಮುಖ ಯೋಜನೆಗಳಿಗೆ ಅನುಮೋದನೆ ನೀಡುವಂತೆ ಮನವಿ
KARNATAKA

ಪ್ರಧಾನಿ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ : ರಾಜ್ಯದ ಪ್ರಮುಖ ಯೋಜನೆಗಳಿಗೆ ಅನುಮೋದನೆ ನೀಡುವಂತೆ ಮನವಿ

By kannadanewsnow5730/06/2024 6:06 AM

ನವದೆಹಲಿ : ದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಅವರನ್ನು ಭೇಟಿಯಾಗಿ ರಾಜ್ಯದ ಪ್ರಮುಖ ಯೋಜನೆಗಳಿಗೆ ಅನುಮೋದನೆ ನೀಡುವ ಕುರಿತು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ಪ್ರಧಾನಿಗಳಿಗೆ ನೀಡಿದ ಮನವಿ ಪತ್ರದಲ್ಲಿನ ಪ್ರಮುಖ ಯೋಜನೆಗಳ ಮಾಹಿತಿ ಹೀಗಿದೆ:

ಬೆಂಗಳೂರು ನಗರಕ್ಕೆ ಕುಡಿಯುವ ನೀರು ಒದಗಿಸುವ ಹಾಗೂ 400 ಮೆ.ವ್ಯಾ ವಿದ್ಯುತ್ ಉತ್ಪಾದನೆ ಮಾಡುವ ಮೇಕೆದಾಟು ಅಣೆಕಟ್ಟು ಯೋಜನೆಯ 9,000 ಕೋಟಿ ರೂ.ಗಳ ಡಿ.ಪಿ.ಆರ್ ಗೆ ಕೇಂದ್ರ ಜಲ ಆಯೋಗದಿಂದ ಅನುಮೋದನೆ ಬಾಕಿ ಇದ್ದು, ಸದರಿ ಯೋಜನೆಯ ಬಗ್ಗೆ ಪ್ರಧಾನಿಗಳು ಖುದ್ದಾಗಿ ಆಸಕ್ತಿ ವಹಿಸಬೇಕೆಂದು ಕೋರಲಾಗಿದೆ.

ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರದ ಬಜೆಟ್ 2023-2024 ರಲ್ಲಿ ಘೋಷಿಸಿದಂತೆ 5,300 ಕೋಟಿ ರೂ.ಗಳ ಬಿಡುಗಡೆ ಹಾಗೂ ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆಗೆ ಶೀಘ್ರವಾಗಿ ತೀರುವಳಿ ನೀಡುವಂತೆ ಜಲಶಕ್ತಿ ಸಚಿವಾಲಯ ಮತ್ತು ಪರಿಸರ ಹಾಗೂ ಅರಣ್ಯ ಮಂತ್ರಾಲಯದ ಅಧಿಕಾರಿಗಳಿಗೆ ಸೂಚಿಸುವಂತೆ ಕೋರಲಾಯಿತು. ಕಿತ್ತೂರು ಕರ್ನಾಟಕ ಭಾಗದ ಜನರ ಬಹುದಿನಗಳ ಕನಸಿನ ಯೋಜನೆಯಾದ ಮಹಾದಾಯಿ ಯೋಜನೆಯಿಂದಾಗಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯಲಿದೆ.

ಬೆಂಗಳೂರು ನಗರದ ಸಂಚಾರ ದಟ್ಟಣೆ ನಿವಾರಣೆಗೆ 60 ಕಿ.ಮೀ ಸುರಂಗ ಮಾರ್ಗಕ್ಕೆ 3,000 ಕೋಟಿ ವೆಚ್ಚವಾಗಲಿದ್ದು, ಯೋಜನೆಯಿಂದ ಹಲವಾರು ಲಾಭಗಳಿವೆ. ಈ ಸುರಂಗ ಮಾರ್ಗ ರಾಷ್ಟ್ರೀಯ ಹೆದ್ದಾರಿ 7ನ್ನು ರಾ.ಹೆ.4 ಕ್ಕೆ ಸಂಪರ್ಕಿಸುವುದರಿಂದ ಕರ್ನಾಟಕ ಸರ್ಕಾರ ಕೇಂದ್ರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಹಯೋಗದೊಂದಿಗೆ ಕೈಗೊಳ್ಳಬಹುದಾಗಿದ್ದು, ಕೇಂದ್ರ ಬಜೆಟ್ ಮೂಲಕ ರಾಜ್ಯ ಸರ್ಕಾರ ಹಾಗೂ ಎನ್.ಹೆಚ್.ಎ.ಐ ಗೆ ಅನುದಾನ ನೀಡುವುದು.

ಸಾರ್ವಜನಿಕ ಸಾರಿಗೆಗೆ ಬೇಡಿಕೆ ಹೆಚ್ಚಿಸಲು ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಶನ್ ಮೆಟ್ರೋ 3ನೇ ಹಂತದ 44.65 ಕಿಮೀ ಗಳನ್ನು ರೂ.15,611 ಕೋಟಿ ವೆಚ್ಚದ ಡಿಪಿಆರ್ ನ್ನೂ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದು ಕೇಂದ್ರ ಸಚಿವ ಸಂಪುಟದ ಅನುಮೋದನೆ ಬಾಕಿ ಇದೆ. ಆದಷ್ಟು ಶೀಘ್ರವಾಗಿ ಅನುಮೋದನೆ ನೀಡುವುದು.

73.04 ಕಿ.ಮೀ ಉದ್ದದ ಅಷ್ಟಪಥ ಪೆರಿಫೆರಲ್ ರಿಂಗ್ ರೋಡ್ ನ್ನು ಖಾಸಗಿ ಸಾರ್ವಜನಿಕ ಸಹಭಾಗಿತ್ವದಲ್ಲಿ ಕೈಗೆತ್ತಿಕೊಳ್ಳಲು ರಾಜ್ಯ ಸರ್ಕಾರ ಅನುಮೋದಿಸಿದೆ. ಕೇಂದ್ರ ಬಜೆಟ್ ನಲ್ಲಿ ಅಗತ್ಯ ಅನುದಾನವನ್ನು ಮೀಸಲಿಡುವುದು.

15ನೇ ಹಣಕಾಸು ಆಯೋಗವು 2021-26 ರ ಅವಧಿಗೆ ಕೆರೆಗಳ ಅಭಿವೃದ್ಧಿ ಹಾಗೂ ಪೇರಿಫೆರಲ್ ರಿಂಗ್ ರೋಡ್ ಗಾಗಿ ಶಿಫಾರಸ್ಸು ಮಾಡಿರುವ 6,000 ಕೋಟಿ ರೂ.ಗಳ ವಿಶೇಷ ಅನುದಾನವನ್ನು ಬಿಡುಗಡೆ ಮಾಡುವುದು.

ಬಿಬಿಎಂಪಿ ವತಿಯಿಂದ ಘನ ತ್ಯಾಜ್ಯ ನಿರ್ವಹಣೆಗಾಗಿ 3,200 ಕೋಟಿ ಅಂದಾಜು ಮೊತ್ತದ ಯೋಜನೆ ಕೈಗೊಳ್ಳುತ್ತಿದ್ದು, ಯೋಜನೆಯ ಶೇ.30% ಅಂದರೆ 960 ಕೋಟಿ ರೂ.ಗಳನ್ನು ಸ್ವಚ್ಛ ಭಾರತ ಅಭಿಯಾನ 2.0ದಡಿ ಕಾರ್ಯಸಾಧ್ಯಾತಾ ಅಂತರ ನಿಧಿ ಒದಗಿಸುವುದು.

ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯಲ್ಲಿ ಏಮ್ಸ್ (AIIMS) ನ್ನೂ ಘೋಷಿಸುವುದು.

ಕಲ್ಯಾಣ ಕರ್ನಾಟಕದ ಭಾಗದ ಏಳು ಜಿಲ್ಲೆಗಳ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ 3,000 ಕೋಟಿ ರೂ.ಗಳ ಅನುದಾನವನ್ನು ಬಜೆಟ್ ನಲ್ಲಿ ಮೀಸಲಿರಿಸಿದ್ದು, ಕೇಂದ್ರ ಸರ್ಕಾರವು ತನ್ನ 2024-25 ರ ಬಜೆಟ್ ನಲ್ಲಿ ಅನುರೂಪದ ಅನುದಾನವನ್ನು ಒದಗಿಸಲು ಹಾಗೂ ಕೇಂದ್ರ ಸರ್ಕಾರದ ಅಭಿವೃದ್ಧಿ ಆಕಾಂಕ್ಷಿ ಜಿಲ್ಲಾ ಕಾರ್ಯಕ್ರಮದಡಿ ಒದಗಿಸುವ ಅನುದಾನವನ್ನು ಹೆಚ್ಚಿಸಲು ಮತ್ತು ಹೊಸ ಕಾರ್ಯಕ್ರಮಗಳನ್ನು ಯೋಜನೆಯಲ್ಲಿ ಸೇರ್ಪಡೆಗೊಳಿಸಲು ಅನುಕೂಲವಾಗುವಂತೆ ಧನಸಹಾಯ ನೀಡುವುದು.

15ನೇ ಹಣಕಾಸು ಆಯೋಗವು 2020-21 ರಲ್ಲಿ ಶಿಫಾರಸ್ಸು ಮಾಡಿದ್ದ ರೂ.5,495 ಕೋಟಿಗಳ ನಿರ್ದಿಷ್ಟ ಅನುದಾನವನ್ನು ಕೇಂದ್ರ ಹಣಕಾಸು ಸಚಿವಾಲಯ ಒಪ್ಪಿಲ್ಲ. ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ದೊಡ್ಡ ಮೊತ್ತದ ಪಾಲು ದೊರಕಿಲ್ಲವಾದ್ದರಿಂದ ಈ ಶಿಫಾರಸ್ಸನ್ನು ಒಪ್ಪಿ ಅನುದಾನವನ್ನು ಬಿಡುಗಡೆ ಮಾಡುವಂತೆ ಪತ್ರದಲ್ಲಿ ಕೋರಲಾಗಿದೆ.

ಸದೃಢ ಕರ್ನಾಟಕದ ಮೂಲಕ‌ ಸಶಕ್ತ ಭಾರತ ನಿರ್ಮಾಣದ ಸಂಕಲ್ಪ ನಮ್ಮ ಸರ್ಕಾರದ್ದಾಗಿದೆ. ಇದಕ್ಕೆ ಪ್ರಧಾನಿಗಳು ಸಕಾರಾತ್ಮಕವಾಗಿ ಸ್ಪಂದಿಸುತ್ತಾರೆ ಎಂಬ ಪೂರ್ಣ ವಿಶ್ವಾಸ ನನಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Cm Siddaramaiah meets PM Modi seeks approval for major projects in the state ಪ್ರಧಾನಿ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ : ರಾಜ್ಯದ ಪ್ರಮುಖ ಯೋಜನೆಗಳಿಗೆ ಅನುಮೋದನೆ ನೀಡುವಂತೆ ಮನವಿ
Share. Facebook Twitter LinkedIn WhatsApp Email

Related Posts

ಬಿಗ್ ಬಾಸ್ ಸೀಸನ್-12 ವಿಜೇತ ನಟ ಗಿಲ್ಲಿ ನಟರಾಜ್ ನನ್ನು ಸಿಎಂ ಸಿದ್ದರಾಮಯ್ಯ ಅಭಿನಂದಿಸಿ, ಶುಭಾಶಯ

22/01/2026 3:21 PM1 Min Read

ಬಿಎಂಟಿಸಿ ಬಸ್ಸಲ್ಲಿ 6 ರೂಪಾಯಿಯ ಬದಲು ರೂ.62,316 ಪೋನ್ ಪೇ ಮಾಡಿದ ಪ್ರಯಾಣಿಕ: ಮುಂದೆ ಆಗಿದ್ದೇನು ಗೊತ್ತಾ?

22/01/2026 3:16 PM2 Mins Read

BREAKING: ಪೌರಾಯುಕ್ತೆಗೆ ಬೆದರಿಕೆ ಕೇಸಲ್ಲಿ ಕೈ ಮುಖಂಡ ರಾಜೀವ್ ಗೌಡ ಬಿಗ್ ಶಾಕ್: FIR ರದ್ದು ಕೋರಿದ್ದ ಅರ್ಜಿ ವಜಾ

22/01/2026 3:09 PM1 Min Read
Recent News

BREAKING : ಜಮ್ಮು-ಕಾಶ್ಮೀರದಲ್ಲಿ ಸೇನಾ ವಾಹನ ಕಂದಕಕ್ಕೆ ಉರುಳಿ 10 ಮಂದಿ ಸೈನಿಕರು ಹುತಾತ್ಮ!

22/01/2026 3:24 PM

ಬಿಗ್ ಬಾಸ್ ಸೀಸನ್-12 ವಿಜೇತ ನಟ ಗಿಲ್ಲಿ ನಟರಾಜ್ ನನ್ನು ಸಿಎಂ ಸಿದ್ದರಾಮಯ್ಯ ಅಭಿನಂದಿಸಿ, ಶುಭಾಶಯ

22/01/2026 3:21 PM

ಬಿಎಂಟಿಸಿ ಬಸ್ಸಲ್ಲಿ 6 ರೂಪಾಯಿಯ ಬದಲು ರೂ.62,316 ಪೋನ್ ಪೇ ಮಾಡಿದ ಪ್ರಯಾಣಿಕ: ಮುಂದೆ ಆಗಿದ್ದೇನು ಗೊತ್ತಾ?

22/01/2026 3:16 PM

BREAKING: ಪೌರಾಯುಕ್ತೆಗೆ ಬೆದರಿಕೆ ಕೇಸಲ್ಲಿ ಕೈ ಮುಖಂಡ ರಾಜೀವ್ ಗೌಡ ಬಿಗ್ ಶಾಕ್: FIR ರದ್ದು ಕೋರಿದ್ದ ಅರ್ಜಿ ವಜಾ

22/01/2026 3:09 PM
State News
KARNATAKA

ಬಿಗ್ ಬಾಸ್ ಸೀಸನ್-12 ವಿಜೇತ ನಟ ಗಿಲ್ಲಿ ನಟರಾಜ್ ನನ್ನು ಸಿಎಂ ಸಿದ್ದರಾಮಯ್ಯ ಅಭಿನಂದಿಸಿ, ಶುಭಾಶಯ

By kannadanewsnow0922/01/2026 3:21 PM KARNATAKA 1 Min Read

ಬೆಂಗಳೂರು: ಕನ್ನಡದ ಬಿಗ್ ಬಾಸ್ ಸೀಸನ್ 12ರ ಆವೃತ್ತಿಯಲ್ಲಿ ಗೆಲುವಿನ ನಗೆಯನ್ನು ಗಿಲ್ಲಿ ನಟ ಬೀರಿದ್ದರು. ಅವರ ಮುಖ್ಯಮಂತ್ರಿ ಸಿದ್ಧರಾಮಯ್ಯ…

ಬಿಎಂಟಿಸಿ ಬಸ್ಸಲ್ಲಿ 6 ರೂಪಾಯಿಯ ಬದಲು ರೂ.62,316 ಪೋನ್ ಪೇ ಮಾಡಿದ ಪ್ರಯಾಣಿಕ: ಮುಂದೆ ಆಗಿದ್ದೇನು ಗೊತ್ತಾ?

22/01/2026 3:16 PM

BREAKING: ಪೌರಾಯುಕ್ತೆಗೆ ಬೆದರಿಕೆ ಕೇಸಲ್ಲಿ ಕೈ ಮುಖಂಡ ರಾಜೀವ್ ಗೌಡ ಬಿಗ್ ಶಾಕ್: FIR ರದ್ದು ಕೋರಿದ್ದ ಅರ್ಜಿ ವಜಾ

22/01/2026 3:09 PM

ರಾಜ್ಯಪಾಲರಿಗೆ ಅಗೌರವ ತೋರಿದ ಸದಸ್ಯರ ವಿರುದ್ಧ ಶಿಸ್ತು ಕ್ರಮಕ್ಕೆ ಆಗ್ರಹ, ಸ್ಪೀಕರ್‌ಗೆ ಪತ್ರ: ಆರ್‌.ಅಶೋಕ ಆಕ್ರೋಶ

22/01/2026 2:42 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.