Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕಾಂಗ್ರೆಸ್ ನಾಯಕರನ್ನು ಟೀಕೆ ಮಾಡುವುದಕ್ಕೆ MLC ಸ್ಥಾನ ಪಡೆದ ದೊಡ್ಡ ಗಿರಾಕಿ ಛಲವಾದಿ ನಾರಾಯಣಸ್ವಾಮಿ: ರಮೇಶ್ ಬಾಬು

23/05/2025 6:31 PM

BREAKING : ಸಾಂಗ್ಲಿಯಲ್ಲಿ ಬೆಳಗಾವಿ ಮೂಲದ ‘MBBS’ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ!

23/05/2025 6:26 PM

ಮದ್ದೂರು ನಗರಸಭೆಯಾಗಿ ಮೇಲ್ದರ್ಜೆಗೆ: ಸಿಎಂ, ಡಿಸಿಎಂ ಗೆ ಅಭಿನಂದನೆ ಸಲ್ಲಿಸಿದ ಶಾಸಕ ಕೆ.ಎಂ.ಉದಯ್

23/05/2025 6:15 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹೊಟ್ಟೆ ತುಂಬ ಹಿಟ್ಟು-ಬಾಯಿ ತುಂಬ ಅನ್ನ: ಅಮ್ಮನ ಮಾತನ್ನು ಸ್ಮರಿಸಿದ ಸಿಎಂ ಸಿದ್ದರಾಮಯ್ಯ
KARNATAKA

ಹೊಟ್ಟೆ ತುಂಬ ಹಿಟ್ಟು-ಬಾಯಿ ತುಂಬ ಅನ್ನ: ಅಮ್ಮನ ಮಾತನ್ನು ಸ್ಮರಿಸಿದ ಸಿಎಂ ಸಿದ್ದರಾಮಯ್ಯ

By kannadanewsnow0928/09/2024 3:39 PM

ಮೈಸೂರು : ಹೊಟ್ಟೆ ತುಂಬ ಹಿಟ್ಟು-ಬಾಯಿ ತುಂಬ ಅನ್ನ ಎಂದು ನನ್ನಮ್ಮ ಹೇಳುತ್ತಿದ್ದರು. ನಾನು ಅನ್ನ ಭಾಗ್ಯ ಜಾರಿಗೆ ತರಲು ಅನ್ನಕ್ಕಾಗಿ ಕಾದು ನಿಂತ ಪರಿಸ್ಥಿತಿಯೇ ಕಾರಣ ಎಂದು ಮುಖ್ಯಮಂತ್ರಿಗಳು ತಮ್ಮ ಬಾಲ್ಯದ ದಿನಗಳನ್ನು ಸ್ಮರಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ವಿಶ್ವವಿದ್ಯಾನಿಲಯ ಮಾನಸಗಂಗೋತ್ರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ “ಗ್ಯಾರಂಟಿ ಯೋಜನೆಗಳು: ಬಡವರ ಸುರಕ್ಷತೆ ಮತ್ತು ಕಲ್ಯಾಣ” ಕೃತಿ ಬಿಡುಗಡೆ ಮಾಡಿ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.

1949 ನವೆಂಬರ್ 25 ರಂದು ಸಂವಿಧಾನ ಜಾರಿ ಸಭೆಯಲ್ಲಿ ಮಾಡಿದ ಭಾಷಣ ನನ್ನ ಗ್ಯಾರಂಟಿಗಳಿಗೆ ಸ್ಫೂರ್ತಿ.‌ ಅವಕಾಶಗಳಿಂದ ವಂಚಿತರಾಗಿರುವವರಿಗೆ ಸಮಾನ ಅವಕಾಶಗಳು ಸಿಕ್ಕಾಗ ಸಮ ಸಮಾಜ ನಿರ್ಮಾಣ ಸಾಧ್ಯ. ಬಸವಾದಿ ಶರಣರು, ಬುದ್ದ ಕೂಡ ಸಮ ಸಮಾಜದ ಬಗ್ಗೆ ಹೇಳಿದ್ದಾರೆ. ಕೇವಲ ಭಾಷಣಳಿಂದ ಸಮ ಸಮಾಜದ ಆಶಯ ಈಡೇರಲ್ಲ. ಈ ಕಾರಣಕ್ಕೇ ಮೊದಲ ಬಾರಿ ಮುಖ್ಯಮಂತ್ರಿ ಆದಾಗಲೂ ಹಲವು ಭಾಗ್ಯಗಳನ್ನು ಜಾರಿ ಮಾಡಿದೆ ಎನ್ನುತ್ತಾ ತಮ್ಮ ಬಾಲ್ಯದ ಬಡತನದ ದಿನಗಳನ್ನು ಸ್ಮರಿಸಿದರು.

ಹಬ್ಬ ಬಂದಾಗ ಮಾತ್ರ ನಮ್ಮ ಮನೆಯಲ್ಲಿ ಅನ್ನ ಮಾಡ್ತಿದ್ರು. ಅಕ್ಕ ಪಕ್ಕದವರ ಮನೆಯಲ್ಲಿ ಯಾರಿಗಾದ್ರೂ ಹುಷಾರು ತಪ್ಪಿದರೆ ಅವರಿಗೆ ಅನ್ನ ಮಾಡ್ತಿದ್ರು. ಅವರ ಮನೆ ಬಾಗಿಲಲ್ಲಿ ಒಂದು ತುತ್ತು ಅನ್ನಕ್ಕಾಗಿ ಕಾದು ನಿಂತಿದ್ದ ದಿನಗಳು ಇದ್ದವು‌. ಹೀಗೆ ಅನ್ನಕ್ಕೆ ಯಾರೂ ಕಾದು ನಿಲ್ಲಬಾರದು ಎನ್ನುವ ಕಾರಣಕ್ಕೆ ಅನ್ನಭಾಗ್ಯ ಜಾರಿಗೆ ತಂದದ್ದನ್ನು ವಿವರಿಸಿದರು.

ಜಾತಿ ಕಾರಣಕ್ಕಾಗಿ ಸಮಾಜದಲ್ಲಿ ಆರ್ಥಿಕ‌ ಅಸಮಾನತೆ ಸೃಷ್ಟಿ ಆಯಿತು. ಆದ್ದರಿಂದ ಎಲ್ಲರಿಗೂ ಆರ್ಥಿಕ ಶಕ್ತಿ ಕೊಡುವ ಕಾರಣಕ್ಕೆ 2013-18 ರ ವರೆಗೆ ಹಲವು ಕಾರ್ಯಕ್ರಮಗಳನ್ನು ಜಾರಿ ಮಾಡಿದೆವು. ಹಾಗೆಯೇ ಎರಡನೇ ಬಾರಿ ಮುಖ್ಯಮಂತ್ರಿ ಆದಾಗಲೂ ಗ್ಯಾರಂಟಿಗಳ ಮೂಲಕ ಆರ್ಥಿಕ ಶಕ್ತಿ ನೀಡಿದೆವು ಎಂದರು.

ನಮ್ಮ ಭಾಗ್ಯಗಳನ್ನು, ಗ್ಯಾರಂಟಿಗಳನ್ನು ವಿರೋಧಿಗಳು ಆಡಿಕೊಂಡರು. ಈಗಲೂ ಅಪ ಪ್ರಚಾರ ಮಾಡುತ್ತಿದ್ದಾರೆ. ಆದರೆ ನಾನು ಹೋದಲ್ಲಿ ಬಂದಲ್ಲಿ ಗ್ಯಾರಂಟಿಗಳ ಫಲಾನುಭವಿಗಳು ಕಾಂಗ್ರೆಸ್ ಸರ್ಕಾರಕ್ಕೆ ಧನ್ಯತೆ ಅರ್ಪಿಸುತ್ತಿದ್ದಾರೆ ಎನ್ನುತ್ತಾ ಉಚಿತ ಯೋಜನೆಗಳ ಫಲಾನುಭವಿಗಳು ಗೃಹಲಕ್ಷ್ಮಿ ಹಣದಲ್ಲಿ ಮಾಡಿದ ಸಾಧನೆಗಳನ್ನು ವಿವರಿಸಿದರು.

ನರೇಗಾ ಮತ್ತು ಅನ್ನಭಾಗ್ಯ ಯೋಜನೆಗಳು ಕೊರೋನಾ ಸಂದರ್ಭದಲ್ಲಿ ಬಡವರನ್ನು, ಕೆಳ ಮಧ್ಯಮ ವರ್ಗದವರನ್ನು ಬದುಕಿಸಿತು. ಹೀಗಾಗಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಹೆಚ್ಚೆಚ್ಚು ಮಾತಾಡಬೇಕು ಎಂದರು.

ಅನ್ನಭಾಗ್ಯದ ಮೇಲೆ “ಅನ್ನ” ಅಂತಲೇ ಸಿನಿಮಾ ಬಂದಿದೆ. ನಾನೂ ಸಿನಿಮಾ ನೋಡಿದೆ ಎಂದರು.

ಡಾ.ಡಿ.ಶ್ರೀನಿವಾಸ ಮಣಗಳ್ಳಿ ಅವರ ಸಂಪಾದನಾ ಕೃತಿ ಬಿಡುಗಡೆಯ ಈ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ, ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಎಚ್.ಎಂ.ರೇವಣ್ಣ, ಉಪಾಧ್ಯಕ್ಷೆ ಪುಷ್ಪಾ ಅಮರನಾಥ್, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಪುರುಷೋತ್ತಮ ಬಿಳಿಮಲೆ, ವಿಧಾನ ಪರಿಷತ್ ಸದಸ್ಯರಾದ ಡಾ.ತಿಮ್ಮಯ್ಯ, ನಾಟಕಕಾರರಾದ ಕೆ.ವೈ.ನಾರಾಯಣಸ್ವಾಮಿ, ರಾಜ್ಯ ಉನ್ನತ ಶಿಕ್ಷಣ ಅಕಾಡೆಮಿ ನಿರ್ದೇಶಕರಾದ ಪ್ರೊ.ಎಂ.ಚಂದ್ರ ಪೂಜಾರಿ, ಕುಲಪತಿಗಳಾದ ಪ್ರೊ.ಎನ್.ಕೆ.ಲೋಕನಾಥ್, ಸಾಮಾಜಿಕ ಕಾರ್ಯಕರ್ತರಾದ ಅಹಿಂದ ಜವರಪ್ಪ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

ನಾಟಕಕಾರ, ಪ್ರಾಧ್ಯಾಪಕ ಕೆ.ವೈ.ನಾರಾಯಣಸ್ವಾಮಿ ಮಾತನಾಡಿ, ಗ್ಯಾರಂಟಿ ಯೋಜನೆಗಳು ಪ್ರಜಾತಂತ್ರವನ್ನು ಗಟ್ಟಿಗೊಳಿಸಿವೆ. ಡಾ.ಬಿ.ಆರ್.ಅಂಬೇಡ್ಕರ್ ಆಶಯವನ್ನು ಘೋಷಿಸದೇ ಈಡೇರಿಸಿವೆ. ಬಡವರಿಗೆ ಈ ಗ್ಯಾರಂಟಿಗಳು ಸಾಮಾಜಿಕವಾಗಿ ಚಾಲನಾ ಸಾಮರ್ಥ್ಯವನ್ನು ನೀಡಿವೆ. ಸಿದ್ದರಾಮಯ್ಯ ಅವರು ಸೂಕ್ಷ್ಮ ಮನಸ್ಸಿನ ನಾಯಕರು. ಇವರಿಂದ ಮಾತ್ರ ಸಮಾಜಕ್ಕೆ ಈ ಚಾಲನಾ ಸಾಮರ್ಥ್ಯ ನೀಡಲು ಸಾಧ್ಯ. ಹಸಿದವರ ಹೊಟ್ಟೆಗೆ ಅನ್ನ ಕೊಡುವುದೇ ದೇವರಿಗೆ ಕೊಡುವ ಕಾಣಿಕೆ. ಇದನ್ನು ನಾವು ಪ್ರಾಮಾಣಿಕವಾಗಿ ಒಪ್ಪಿ, ಸಾರ್ವಜನಿಕವಾಗಿ ಹೇಳಬೇಕಿದೆ ಎಂದರು.

ಧಾರವಡಾದ ರಾಜ್ಯ ಉನ್ನತ ಶಿಕ್ಷಣ ಅಕಾಡೆಮಿ ನಿರ್ದೇಶಕ ಪ್ರೊ.ಎಂ.ಚಂದ್ರ ಪೂಜಾರಿ ಮಾತನಾಡಿ, ಉಚಿತ ಯೋಜನೆಗಳನ್ನು ಜಾರಿ ತಂದ ಕರ್ನಾಟಕ, ತಮಿಳುನಾಡು, ಕೇರಳ ರಾಜ್ಯಗಳು ಮಾನವ ಅಭಿವೃದ್ಧಿ ಸೂಚ್ಯಂಕಗಳಲ್ಲಿ ಮೊದಲ ಸ್ಥಾನಗಳಲ್ಲಿ ಇದ್ದು ಜಿಡಿಪಿ ಬೆಳವಣಿಗೆ ಉತ್ತಮವಾಗಿವೆ. ಉಚಿತ ಯೋಜನೆಗಳನ್ನು ಜಾರಿ ಮಾಡದ ಉತ್ತರಪ್ರದೇಶ, ಬಿಹಾರ, ಮಧ್ಯಪ್ರದೇಶ ರಾಜ್ಯಗಳು ಮಾನವ ಅಭಿವೃದ್ಧಿ ಸೂಚ್ಯಂಕಗಳಲ್ಲಿ ಅತ್ಯಂತ ಕುಸಿದು, ಜಿಡಿಪಿ ಕೂಡ ಕುಸಿದಿದೆ ಎಂದು ಹೇಳಿದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಮಾತನಾಡಿ, 2017 ರಿಂದ ಭಾರತದ ಆರ್ಥಿಕ ಪರಿಸ್ಥಿತಿ ಕುಸಿಯುತ್ತಾ, ಕೊರೋನಾ ಕಾಲದಲ್ಲಿ ಇನ್ನಷ್ಟು ನೆಲಕಚ್ಚಿತು. ನಿರುದ್ಯೋಗ, ಬಡತನ ಇಮ್ಮಡಿಯಾಗಿ ಜಿಡಿಪಿ ಕುಸಿದಿತ್ತು. ಇಂಥಾ ಭಯಾನಕ ಆರ್ಥಿಕ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ಐದು ಗ್ಯಾರಂಟಿಗಳು ರಾಜ್ಯ ಸ್ಮಶಾನ ಆಗದಂತೆ ತಡೆದಿದೆ. ಕೊರೊನಾ ಕಾಲದ ಬಿಕ್ಕಟ್ಟುಗಳಿಗೆ ಗ್ಯಾರಂಟಿಗಳು ಪರಿಹಾರವಾಯಿತು. ಇದನ್ನು ನಾವೆಲ್ಲಾ ಧೈರ್ಯದಿಂದ ಹೇಳಬೇಕು. ದೇಶಕ್ಕೆ ಮಾದರಿಯಾದ ಈ ಯೋಜನೆಗಳು ಜನಕಲ್ಯಾಣಕ್ಕೆ ಹೇಗೆ ಸಹಕರಿಸಿತು ಎಂಬುದನ್ನು ಹೇಳಬೇಕು ಎಂದರು.

‘ಸಿಎಂ ಸಿದ್ಧರಾಮಯ್ಯ’ ವಿರುದ್ಧದ ಮುಡಾ ಹಗರಣ: ‘CBI ತನಿಖೆ’ಗೆ ಕೋರಿ ರಾಜ್ಯಪಾಲರಿಗೆ ‘CRF’ ದೂರು

BREAKING : ಮುಸ್ಲಿಂರು ‘ಹಮ್ ಪಾಂಚ್ ಹಮಾರಾ ಪಂಚಿಸ್’ ಅಂತಾರೆ : ಶಾಸಕ ಯತ್ನಾಳ್ ವಿವಾದಾತ್ಮಕ ಹೇಳಿಕೆ

Share. Facebook Twitter LinkedIn WhatsApp Email

Related Posts

ಕಾಂಗ್ರೆಸ್ ನಾಯಕರನ್ನು ಟೀಕೆ ಮಾಡುವುದಕ್ಕೆ MLC ಸ್ಥಾನ ಪಡೆದ ದೊಡ್ಡ ಗಿರಾಕಿ ಛಲವಾದಿ ನಾರಾಯಣಸ್ವಾಮಿ: ರಮೇಶ್ ಬಾಬು

23/05/2025 6:31 PM2 Mins Read

BREAKING : ಸಾಂಗ್ಲಿಯಲ್ಲಿ ಬೆಳಗಾವಿ ಮೂಲದ ‘MBBS’ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ!

23/05/2025 6:26 PM1 Min Read

ಮದ್ದೂರು ನಗರಸಭೆಯಾಗಿ ಮೇಲ್ದರ್ಜೆಗೆ: ಸಿಎಂ, ಡಿಸಿಎಂ ಗೆ ಅಭಿನಂದನೆ ಸಲ್ಲಿಸಿದ ಶಾಸಕ ಕೆ.ಎಂ.ಉದಯ್

23/05/2025 6:15 PM2 Mins Read
Recent News

ಕಾಂಗ್ರೆಸ್ ನಾಯಕರನ್ನು ಟೀಕೆ ಮಾಡುವುದಕ್ಕೆ MLC ಸ್ಥಾನ ಪಡೆದ ದೊಡ್ಡ ಗಿರಾಕಿ ಛಲವಾದಿ ನಾರಾಯಣಸ್ವಾಮಿ: ರಮೇಶ್ ಬಾಬು

23/05/2025 6:31 PM

BREAKING : ಸಾಂಗ್ಲಿಯಲ್ಲಿ ಬೆಳಗಾವಿ ಮೂಲದ ‘MBBS’ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ!

23/05/2025 6:26 PM

ಮದ್ದೂರು ನಗರಸಭೆಯಾಗಿ ಮೇಲ್ದರ್ಜೆಗೆ: ಸಿಎಂ, ಡಿಸಿಎಂ ಗೆ ಅಭಿನಂದನೆ ಸಲ್ಲಿಸಿದ ಶಾಸಕ ಕೆ.ಎಂ.ಉದಯ್

23/05/2025 6:15 PM

ಮೇ.25ರಂದು ಬೆಂಗಳೂರಲ್ಲಿ UPSC ಪ್ರಿಲಿಮಿನರಿ ಪರೀಕ್ಷೆ: ಬೆಳಗ್ಗೆ 6 ಗಂಟೆಗೆ ಮೆಟ್ರೋ ಸಂಚಾರ ಆರಂಭ | Namma Metro

23/05/2025 6:04 PM
State News
KARNATAKA

ಕಾಂಗ್ರೆಸ್ ನಾಯಕರನ್ನು ಟೀಕೆ ಮಾಡುವುದಕ್ಕೆ MLC ಸ್ಥಾನ ಪಡೆದ ದೊಡ್ಡ ಗಿರಾಕಿ ಛಲವಾದಿ ನಾರಾಯಣಸ್ವಾಮಿ: ರಮೇಶ್ ಬಾಬು

By kannadanewsnow0923/05/2025 6:31 PM KARNATAKA 2 Mins Read

ಬೆಂಗಳೂರು: ಕಾಂಗ್ರೆಸ್ ‌ಪಕ್ಷದ ನಾಯಕರನ್ನು ಕೇವಲ ಟೀಕೆ ಮಾಡುವುದಕ್ಕೆ ವಿಧಾನ ಪರಿಷತ್ತಿನ ಸದಸ್ಯ ಸ್ಥಾನವನ್ನು ಪಡೆದ ದೊಡ್ಡ ಗಿರಾಕಿ.‌ ಈ…

BREAKING : ಸಾಂಗ್ಲಿಯಲ್ಲಿ ಬೆಳಗಾವಿ ಮೂಲದ ‘MBBS’ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ!

23/05/2025 6:26 PM

ಮದ್ದೂರು ನಗರಸಭೆಯಾಗಿ ಮೇಲ್ದರ್ಜೆಗೆ: ಸಿಎಂ, ಡಿಸಿಎಂ ಗೆ ಅಭಿನಂದನೆ ಸಲ್ಲಿಸಿದ ಶಾಸಕ ಕೆ.ಎಂ.ಉದಯ್

23/05/2025 6:15 PM

ಮೇ.25ರಂದು ಬೆಂಗಳೂರಲ್ಲಿ UPSC ಪ್ರಿಲಿಮಿನರಿ ಪರೀಕ್ಷೆ: ಬೆಳಗ್ಗೆ 6 ಗಂಟೆಗೆ ಮೆಟ್ರೋ ಸಂಚಾರ ಆರಂಭ | Namma Metro

23/05/2025 6:04 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.