Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಮುಂಬಡ್ತಿ ಮೀಸಲಾತಿ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ.!

20/05/2025 6:24 AM

ಆಪರೇಷನ್ ಸಿಂಧೂರ್ ಗೆ ಟ್ರೇಡ್ ಮಾರ್ಕ್ ಕೋರಿ ಭಾರತದಾದ್ಯಂತ 23 ಅರ್ಜಿಗಳು ಸಲ್ಲಿಕೆ | Operation Sindoor

20/05/2025 6:23 AM

BIG NEWS : ರಾಜ್ಯದ ಎಲ್ಲಾ ಶಾಲೆಗಳಲ್ಲಿ `ಭಾರತೀಯ ಭಾಷಾ ಬೇಸಿಗೆ ಶಿಬಿರ’ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ.!

20/05/2025 6:19 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣದಲ್ಲಿ ಸಿಎಂ ಸಿದ್ಧರಾಮಯ್ಯ ನಿಲುವು ಸ್ಪಷ್ಟಪಡಿಸಬೇಕು: ಬೊಮ್ಮಾಯಿ
KARNATAKA

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣದಲ್ಲಿ ಸಿಎಂ ಸಿದ್ಧರಾಮಯ್ಯ ನಿಲುವು ಸ್ಪಷ್ಟಪಡಿಸಬೇಕು: ಬೊಮ್ಮಾಯಿ

By kannadanewsnow0930/05/2024 5:47 PM

ವಿಜಯನಗರ: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ನಿಲುವು ಸ್ಪಷ್ಟಪಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಆಗ್ರಹಿಸಿದ್ದಾರೆ.

ಹೊಸಪೇಟೆಯಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈ ರೀತಿಯಲ್ಲಿ ಘಟನೆಗಳು ಆಗಿವೆ, ಆಗಿಲ್ಲಾ ಅಂತ ನಾನು ಹೇಳುವುದಿಲ್ಲ. ಆದರೆ, ಹಿಂದಿನವರು ಏನು ಪಾಲನೆ ಮಾಡಿದ್ದರು, ಅದನ್ನು ಈಗಿನ ಸರ್ಕಾರವೂ ಮಾಡಬೇಕು. ಆದರೆ, ಇದೊಂದು ಭಂಡ ಸರ್ಕಾರ ಎಂದು ವಾಗ್ದಾಳಿ ನಡೆಸಿದರು.

ಹಿಂದಿನ ಸರ್ಕಾರದ ಅವಧಿಯಲ್ಲಿ ಗುತ್ತಿಗೆದಾರ ಸಾವಿನ ವಿಚಾರದಲ್ಲಿ ಈಶ್ವರಪ್ಪನವರದ್ದೇನು ಕೂಡ ತಪ್ಪಿರಲಿಲ್ಲ ಆದರೂ, ಈಶ್ವರಪ್ಪ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದರು. ಈಶ್ವರಪ್ಪ ಅವರ ವಿಚಾರದಲ್ಲಿ ವಿಪಕ್ಷನಾಯಕರಿದ್ದ ಸಿದ್ದರಾಮಯ್ಯನವರು ಮಾಡಿದ ರೋಷಾವೇಶ ಈಗ ಯಾಕೆ ಇಲ್ಲಾ. ಈಗ ಅವರೇ ಸಿಎಂ, ಅವರ ಸಚಿವ ಸಂಪುಟದ ಸಚಿವರ ವ್ಯಾಪ್ತಿಯ ವಾಲ್ಮೀಕಿ ನಿಗಮ್ ಹಣ ಲೂಟಿ ಆಗಿದೆ. 14 ಅಕೌಂಟ್ ಗಳ ಮೂಲಕ ಹಗಲು ದರೊಡೆಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ನಿಗಮದ ಅಧಿಕಾರಿ ಡೆತ್ ನೋಟ್ ನಲ್ಲಿ ಎರಡು ಬಾರಿ ಸಚಿವ ನಾಗೇಂದ್ರ ಅವರ ಮೌಖಿಕ ಆದೇಶ ಇತ್ತು ಎಂದು ಉಲ್ಲೇಖ ಮಾಡಿದ್ದಾರೆ. ಆದರೆ, ಇವರು ರಾಜೀನಾಮೆ ತೆಗೆದುಕೊಳ್ಳುವ ನೈತಿಕತೆ ಇಲ್ಲಾ ಇದೊಂದು ಭ್ರಷ್ಟಾಚಾರ ಕೂಟದ ಸರ್ಕಾರ ಎಂದು ಆರೋಪಿಸಿದರು.

ಈ ಪ್ರಕರಣಕ್ಕೂ, ಈಶ್ವರಪ್ಪನವರ ಪ್ರಕರಣಕ್ಕೂ ಹೊಂದಾಣಿಕೆ ಮಾಡುತ್ತಾರೆ, ನಾಚಿಕೆಯಾಗಬೇಕು ಇವರಿಗೆ. ಬಹುಕೋಟಿ ಹಗರಣ ಇದು, ಒಂದೇ ದಿನದಲ್ಲಿ 14 ಅಕೌಂಟ್ ಗೆ ಮಾಯ ಆಗುತ್ತದೆ. ಅಂದರೆ ಸಂಶಯಾಸ್ಪದ ಅಕೌಂಟ್ ಗಳಿಗೆ ಹೋಗಿದೆ. ಇದು ಸಿಬಿಐ ಗೆ ಹೋಗುವಂತಹ ಮುಖ್ಯವಾದ ಕೇಸ್. ಒಂದು ಬ್ಯಾಂಕ್ ಮುಖಾಂತರ ಬೇರೆ ರಾಜ್ಯಕ್ಕೆ ಹಣ ಹೋಗಿದೆ. 10 ಕೋಟಿಗೆ ಹೆಚ್ಚು ಹಗರಣ ಅವ್ಯವಹಾರ ಆಗಿದ್ದರೆ,, ಅದು ಸಿಬಿಐ ತನಿಖೆಗೆ ಹೋಗಬೇಕು ಅಂತ ಇದೆ. ಆದರೆ, ಇವರು ಯಾಕೆ ಸಿಬಿಐಗೆ ಕೊಡುತ್ತಿಲ್ಲ,, ಸಿಒಡಿ ತನಿಖೆ ಮಾಡಿಸುತ್ತಿದ್ದಾರೆ ಎಂದು ಪ್ರಶ್ನಿಸಿದರು.

ಸಿಬಿಐ ತನಿಖೆಯಾಗಬೇಕು

ಚುನಾವಣೆ ಸಮಯದಲ್ಲಿ ಹೈದ್ರಾಬಾದ್ ನ ಒಂದು ಸಹಕಾರಿ ಬ್ಯಾಂಕ್ ಗೆ ಹಣ ವರ್ಗಾವಣೆ ಆಗುತ್ತದೆ ಅಂದರೆ, ರಾಜಕೀಯದಿಂದ ಚುನಾವಣೆಗಾಗಿ ನಡೆದಿರುವ ದರೋಡೆ ಪ್ರಕರಣ ಇದು. ಸರ್ಕಾರ ಏನೇ ಸಮಾಜಾಯಿಸಿ ಕೊಟ್ಟರೂ ಕೂಡ, ಡಿಜಿಟಲ್ ಟ್ರಾಕ್, ಡಿಜಿಟಲ್ ಎವಿಡೆನ್ಸ್ ಇರುವ ಕಾರಣ ಸಿಒಡಿಯಿಂದ ತನಿಖೆಯಾಗುವ ಪ್ರಕರಣ ಅಲ್ಲ. ಈ ಪ್ರಕರಣದಲ್ಲಿ ಸಚಿವ ನಾಗೇಂದ್ರ ರಾಜೀನಾಮೆ ಕೊಡಬೇಕು, ಸಿಬಿಐ ತನಿಖೆಗೆ ಒಳಪಡಿಸಿ ಎಲ್ಲಾ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು, ಹಣ ವಾಪಾಸ್ ಬರಬೇಕು. ಸಿಎಂ ಸಿದ್ದರಾಮಯ್ಯ ಮನಸ್ಸು ಮಾಡಿದರೆ ಹಣ ವಾಪಾಸ್ ತರಬಹುದು, ಚುನಾವಣೆಗೆ ಬಳಕೆಯಾಗಿದ್ರೆ ಏನು ಮಾಡಲು ಆಗುವುದಿಲ್ಲ. ಈ ಪ್ರಕರಣದಲ್ಲಿ ಮನಿ ಟ್ರೈಲ್ ಫಾಲೋ ಮಾಡಬೇಕು ಎಂದು ಹೇಳಿದರು.

ಕಾಂಗ್ರೆಸ್ ಸರ್ಕಾರ ಎಸ್ ಸಿ, ಎಸ್ ಟಿ ಸಮಾಜಕ್ಕೆ ಓಟ್ ಬ್ಯಾಂಕ್ ಆಗಿ ಪರಿವರ್ತನೆ ಮಾಡುವುದು ಬಿಟ್ಟರೆ ಬೇರೆನೂ ಪ್ರಯೋಜನವಿಲ್ಲ. ಎಸ್ಸಿ, ಎಸ್ಟಿ ಸಮುದಾಯದವರು ಮೀಸಲಾತಿ ಹೋರಾಟ ಮಾಡಿದ್ದರೂ ಹೆಚ್ಚಳ ಮಾಡಲಿಲ್ಲಾ ನಾವು ಮೀಸಲಾತಿ ಹೆಚ್ಚಳ ಮಾಡಿದ್ದೇವು. ಇವರು ಬಂದ ಮೇಲೆ ಎಸ್ಸಿಪಿ ಟಿಎಸ್ಪಿ ಹಣ ಕಡಿತವಾಗಿದೆ. ಎಸ್ಸಿ ಎಸ್ಟಿ ಜನಾಂಗಕ್ಕೆ ನ್ಯಾಯ ಸಿಗುವವರೆಗೂ ಹೋರಾಟ ಮಾಡುತ್ತೇವೆ ಎಂದು ಹೇಳಿದರು.

ಕಾನೂನು ಎಲ್ಲರಿಗೂ ಒಂದೆ

ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅದು ಎಸ್ ಐಟಿ ತನಿಖೆಯಾಗುತ್ತಿದೆ, ಪ್ರಕರಣ ತನಿಖೆ ಹಂತದಲ್ಲಿದೆ. ಅಪರಾಧ ಮಾಡಿದವರು, ಶೋಷಣೆ ಮಾಡಿದವರು, ಅದನ್ನು ಪ್ರಚಾರ ಮಾಡಿದವರು ಎಲ್ಲಾ ವಿಚಾರದಲ್ಲಿ ಕಾನೂನು ಇದೆ ತನಿಖೆ ನಡೆಯುತ್ತಿದೆ ಕಾನೂನು ಎಲ್ಲರಿಗೂ ಒಂದೇ ಎಂದರು.

ಕಾನೂನು ಸುವ್ಯವಸ್ಥೆ ಹಾಳಾಗಿದೆ

ರಾಜ್ಯದ ಕಾನೂನು ಸುವ್ಯವಸ್ಥೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಹೆಣ್ಣು ಮಕ್ಕಳು ಸುರಕ್ಷಿತವಾಗಿಲ್ಲ. ನಮ್ಮ ಮಕ್ಕಳು ಶಾಲೆ, ಕಾಲೇಜ್ ಗೆ ಹೋದರೆ ಸುರಕ್ಷಿತವಾಗಿ ವಾಪಾಸ್ ಬರುತ್ತಾರೆ ಅನ್ನುವ ನಂಬಿಕೆ ಇಲ್ಲಾ. ಸಾಮಾನ್ಯ ಜನರಿಗೆ ರಕ್ಷಣೆ ಇಲ್ಲಾ. ರಾಜ್ಯದಲ್ಲಿ ಸಾಮೂಹಿಕ ಕೊಲೆಗಳು ಆಗುತ್ತಿವೆ. ಒಂದೇ ಸಮಯಕ್ಕೆ ಮೂರು ನಾಲ್ಕು ಜನರ ಕೊಲೆ ಆಗುತ್ತಿವೆ. ಸಮಾಜಘಾತುಕರಿಗೆ ಹೆದರಿಕೆ ಇಲ್ಲಾ, ಅವರಿಗೆ ಪೊಲೀಸ್ ಠಾಣೆಗಳಲ್ಲಿ ಅವರಿಗೆ ರಾಜ ಮರ್ಯಾದೆ ಸಿಗುತ್ತಿದೆ. ಆ ಕಾರಣಕ್ಕೆ ಹೆಚ್ಚು ಅಪರಾಧ ಕೃತ್ಯಗಳು ನಡೆಯುತ್ತಿವೆ. ಸಮಾಜಘಾತುಕ ಶಕ್ತಿಗಳಿಗೆ ಎಲ್ಲಿಯವರೆಗೆ ಕಠಿಣ ಕ್ರಮ ಕೈಗೊಳ್ಳುವುದಿಲ್ಲವೋ, ಅಲ್ಲಿಯವರೆಗೆ ಈ ರೀತಿಯ ಕೃತ್ಯ ತಪ್ಪುವುದಿಲ್ಲ. ಸಮಾಜಘಾತುಕರಿಗೆ ಭಯ ಹುಟ್ಟಿಸಬೇಕಿದೆ, ಇಲಾಖೆಯ ಸಡಿಲತನ ನಿಯಂತ್ರಣ ಆಗಬೇಕು. ರಾಜ್ಯ ಸರ್ಕಾರವೇ ಇದಕ್ಕೆ ಹೋಣೆ, ಅವರನ್ನ ನಿಯಂತ್ರಣ ಮಾಡುವ ಅವಶ್ಯಕತೆ ಇದೆ. ಇಲ್ಲದಿದ್ದರೆ ರಾಜ್ಯಕ್ಕೆ ಬರುವ ಬಂಡವಾಳ ವಾಪಾಸ್ ಹೋಗುತ್ತದೆ ಎಂದರು.

ಬೇಜವಾಬ್ದಾರಿ ಹೇಳಿಕೆ

ಇನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ಟಕಾ, ಟಕ್ ಹಣದ ಆಸೆಗೆ ಮಹಿಳೆಯರು ಸಾಲುಗಟ್ಟಿ ನಿಲ್ಲುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಬೇಜವಬ್ದಾರಿಯ ಹೇಳಿಕೆಗಳಿಂದ ಈ ರೀತಿಯಲ್ಲಿ ಆಗುತ್ತದೆ. ಏನು ಹೇಳಬೇಕೋ, ಬೇಡವೋ ಅನ್ನುವುದು ಯೋಚಿಸಿ ಮಾತನಾಡಬೇಕು ಎಂದು ಹೇಳಿದರು.

ಶಿವಮೊಗ್ಗದಲ್ಲಿ 5,000 ಲಂಚ ಪಡೆಯುವಾಗ ‘ಗ್ರಾಮ ಆಡಳಿತ ಅಧಿಕಾರಿ ಸುರೇಶ್’ ಲೋಕಾಯುಕ್ತ ಬಲೆಗೆ

BREAKING: ಬೆಂಗಳೂರಲ್ಲಿ ಹಾಡಹಗಲೇ ಬೆಚ್ಚಿ ಬೀಳಿಸೋ ಘಟನೆ: ಮಚ್ಚು ಬೀಸಿ ಹಫ್ತಾ ವಸೂಲಿ ಮಾಡಿದ ಪುಂಡ

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಮುಂಬಡ್ತಿ ಮೀಸಲಾತಿ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ.!

20/05/2025 6:24 AM2 Mins Read

BIG NEWS : ರಾಜ್ಯದ ಎಲ್ಲಾ ಶಾಲೆಗಳಲ್ಲಿ `ಭಾರತೀಯ ಭಾಷಾ ಬೇಸಿಗೆ ಶಿಬಿರ’ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ.!

20/05/2025 6:19 AM1 Min Read

GOOD NEWS: ರಾಜ್ಯ ಸರ್ಕಾರದಿಂದ ‘ಗ್ರಾಮೀಣ ಜನತೆ’ಗೆ ಮತ್ತೊಂದು ಗುಡ್ ನ್ಯೂಸ್!

20/05/2025 6:10 AM2 Mins Read
Recent News

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಮುಂಬಡ್ತಿ ಮೀಸಲಾತಿ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ.!

20/05/2025 6:24 AM

ಆಪರೇಷನ್ ಸಿಂಧೂರ್ ಗೆ ಟ್ರೇಡ್ ಮಾರ್ಕ್ ಕೋರಿ ಭಾರತದಾದ್ಯಂತ 23 ಅರ್ಜಿಗಳು ಸಲ್ಲಿಕೆ | Operation Sindoor

20/05/2025 6:23 AM

BIG NEWS : ರಾಜ್ಯದ ಎಲ್ಲಾ ಶಾಲೆಗಳಲ್ಲಿ `ಭಾರತೀಯ ಭಾಷಾ ಬೇಸಿಗೆ ಶಿಬಿರ’ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ.!

20/05/2025 6:19 AM

BIG NEWS : ಬಲವಂತದ ಧಾರ್ಮಿಕ ಮತಾಂತರ ಸಂವಿಧಾನಕ್ಕೆ ವಿರುದ್ಧ : ಹೈಕೋರ್ಟ್ ಮಹತ್ವದ ತೀರ್ಪು

20/05/2025 6:11 AM
State News
KARNATAKA

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಮುಂಬಡ್ತಿ ಮೀಸಲಾತಿ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ.!

By kannadanewsnow5720/05/2025 6:24 AM KARNATAKA 2 Mins Read

ಬೆಂಗಳೂರು: ರಾಜ್ಯದ ಅಂಗವೈಕಲ್ಯವುಳ್ಳ ಸರ್ಕಾರಿ ನೌಕರರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಅಂಗವೈಕಲ್ಯ ಉಳ್ಳಂತ ಸರ್ಕಾರಿ ನೌಕರರಿಗೆ ಗ್ರೂಪ್-ಬಿ ಮತ್ತು…

BIG NEWS : ರಾಜ್ಯದ ಎಲ್ಲಾ ಶಾಲೆಗಳಲ್ಲಿ `ಭಾರತೀಯ ಭಾಷಾ ಬೇಸಿಗೆ ಶಿಬಿರ’ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ.!

20/05/2025 6:19 AM

GOOD NEWS: ರಾಜ್ಯ ಸರ್ಕಾರದಿಂದ ‘ಗ್ರಾಮೀಣ ಜನತೆ’ಗೆ ಮತ್ತೊಂದು ಗುಡ್ ನ್ಯೂಸ್!

20/05/2025 6:10 AM

BREAKING : ಬೆಂಗಳೂರು ನಗರದಲ್ಲಿ ಮುಂದುವರೆದ ಮಳೆ ಅಬ್ಬರ : ಐಟಿ ಕಂಪನಿ ಉದ್ಯೋಗಿಗಳಿಗೆ ಇಂದು ‘ವರ್ಕ್ ಫ್ರಮ್ ಹೋಂ’ ಘೋಷಣೆ.!

20/05/2025 6:07 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.