Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಬರಿಮಲೆ ಚಿನ್ನ ಕಳ್ಳತನ ಪ್ರಕರಣ: ಕೇರಳ, ಕರ್ನಾಟಕ ಮತ್ತು ತಮಿಳುನಾಡಿನ 21 ಸ್ಥಳಗಳಲ್ಲಿ ED ಶೋಧ

20/01/2026 9:30 AM

BREAKING : ಆರೋಪ ಸಾಬೀತಾದರೆ ರಾಮಚಂದ್ರರಾವ್ ರನ್ನ ವಜಾ ಮಾಡಲಾಗುತ್ತೆ : ಗೃಹ ಸಚಿವ ಜಿ.ಪರಮೇಶ್ವರ್ 

20/01/2026 9:23 AM

BREAKING : ರಾಜ್ಯದ ಪಿಯು ವಿದ್ಯಾರ್ಥಿಗಳಿಗೆ ಬಿಗ್ ಶಾಕ್ : ಸ್ಟಡಿ ಹಾಲಿಡೇಗೆ ಬ್ರೇಕ್ ಹಾಕಿದ ಶಿಕ್ಷಣ ಇಲಾಖೆ!

20/01/2026 9:19 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » 1 ಗಂಟೆ ಮೇಷ್ಟ್ರಾದ CM ಸಿದ್ದರಾಮಯ್ಯ : ಮಕ್ಕಳಿಗೆ ಸಂವಿಧಾನದ ಬಗ್ಗೆ ಪಾಠ.!
KARNATAKA

1 ಗಂಟೆ ಮೇಷ್ಟ್ರಾದ CM ಸಿದ್ದರಾಮಯ್ಯ : ಮಕ್ಕಳಿಗೆ ಸಂವಿಧಾನದ ಬಗ್ಗೆ ಪಾಠ.!

By kannadanewsnow5704/12/2024 7:51 AM

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಒಂದು ಗಂಟೆ ಕಾಲ “ಮೇಷ್ಟ್ರು” ಆಗಿ ಕಾರ್ಯ ನಿರ್ವಹಿಸಿದರು.

ರಾಜ್ಯದ ನಾನಾ ಭಾಗಗಳಿಂದ ಬಂದಿದ್ದ 50ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿಗಳು ಸಂವಿಧಾನದ ಬಗ್ಗೆ ಪಾಠ ಮಾಡಿದರು.

ಮುಖ್ಯಮಂತ್ರಿಗಳ ಪಾಠವನ್ನು ತದೇಕಚಿತ್ತದಿಂದ ಆಲಿಸಿದ ವಿದ್ಯಾರ್ಥಿಗಳು, ಹಲವಾರು ಪ್ರಶ್ನೆಗಳ ಮೂಲಕ ಸಂವಿಧಾನದ ಬಗ್ಗೆ ಇನ್ನಷ್ಟು ತಿಳಿದುಕೊಂಡರು.

ಸಂವಿಧಾನ ಓದು ಅಭಿಯಾನದ ಅಂಗವಾಗಿ ನಡೆದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಸಿಎಂ ಪಾಠ ಮಾಡುವ ಮೂಲಕ ಗಮನ ಸೆಳೆದರು.

ಮುಖ್ಯಮಂತ್ರಿಗಳ ಪಾಠದ ಸಾರಾಂಶ…

ಸಂವಿಧಾನದ ಶ್ರೇಷ್ಠತೆ ಮತ್ತು ವಿಫಲತೆ ಅದು ಯಾರ ಕೈಯಲ್ಲಿದೆ ಎನ್ನುವವರ ಆಧಾರದ ಮೇಲೆ ನಿರ್ಧಾರವಾಗುತ್ತದೆ ಎನ್ನುವ ಅಂಬೇಡ್ಕರ್ ಅವರ ಮಾತನ್ನು ಮತ್ತು ನಮ್ಮದು ಸರ್ವ ಜನಾಂಗದ ಶಾಂತಿಯ ತೋಟ ಎನ್ನುವ ಕುವೆಂಪು ಅವರ ಮಾತುಗಳನ್ನು ಉಲ್ಲೇಖಿಸಿ ಪಾಠ ಮುಂದುವರೆಸಿದರು.

ಸಂವಿಧಾನದ ಬಗ್ಗೆ ಗೌರವ ಇಲ್ಲದವರ ಕೈಗೆ ಹೋದರೆ, ಎಷ್ಟೇ ಒಳ್ಳೆ ಸಂವಿಧಾನ ಆದರೂ ಪರಿಣಾಮ ಕೆಟ್ಟದಾಗಿರುತ್ತದೆ ಎಂದರು.

ಸಂವಿಧಾನದ ಪೀಠಿಕೆಯಲ್ಲೇ ಇಡೀ ಸಂವಿಧಾನದ ಸಾರಾಂಶ ಇದೆ. ಜಾತ್ಯತೀತತೆ, ಸಾಮಾಜಿಕ ನ್ಯಾಯ ಎರಡೂ ಮೂಲ ಸಂವಿಧನದಲ್ಲಿ ಇರಲಿಲ್ಲ. ಬಳಿಕ ಸೇರ್ಪಡೆಯಾಯಿತು. ಇದನ್ನು ತೆಗೆಯಬೇಕು ಎಂದು ಕೆಲವರು ಸುಪ್ರೀಂಕೋರ್ಟ್ ಗೆ ಹೋಗಿದ್ದರು. ಆದರೆ ಸುಪ್ರೀಂಕೋರ್ಟ್ ಜಾತ್ಯತೀತತೆ ಮತ್ತು ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿಯಿತು ಎಂದರು.

ಭಾರತ ಬಹುತ್ವದ ದೇಶ. ಎಲ್ಲಾ ಜಾತಿ, ಧರ್ಮದವರಿಗೆ ಸಮಾನವಾಗಿ ನಡೆಸಿಕೊಳ್ಳುವುದು ನಮ್ಮ ದೇಶದ ಗುಣ. ಇದೇ ಸಂವಿಧಾನದ ಮೌಲ್ಯ ಎಂದರು.

ಭಾರತದಲ್ಲಿ ಅಸಮಾನತೆ ಸೃಷ್ಟಿಯಾಗಿದ್ದು ಜಾತಿ ವ್ಯವಸ್ಥೆಯಿಂದ. ಜಾತಿ ಆಧಾರದ ಮೇಲೆ ಒಬ್ಬರ ಯೋಗ್ಯತೆ ಅಳೆಯುವುದು ಅನಾಗರಿಕತನ.

ವಿದ್ಯೆ ಮತ್ತು ಸಂಪತ್ತು ಗಳಿಸುವ ಅವಕಾಶ ಶೂದ್ರರಿಗೆ ಮತ್ತು ಮಹಿಳೆಯರಿಗೆ ಇರಲಿಲ್ಲ. ಹೀಗಾಗಿ ಅಸಮಾನತೆ ಸೃಷ್ಟಿಯಾಯಿತು. ಅಪ್ಪ ಅಮ್ಮ ವಿದ್ಯಾವಂತರಾದರೆ ಮಾತ್ರ ಮಕ್ಕಳನ್ನೂ ವಿದ್ಯಾವಂತರನ್ನಾಗಿ ಮಾಡುತ್ತಾರೆ ಎನ್ನುತ್ತಾ ತಾವು ವಿದ್ಯಾಭ್ಯಾಸದಿಂದ ವಂಚಿತರಾಗಿ ಬಳಿಕ ವಿದ್ಯೆ ಕಲಿತು ವಕೀಲರಾದ ಪ್ರಸಂಗವನ್ನು ವಿವರಿಸಿದರು.

ನಮ್ಮ ಸಂವಿಧಾನದ ಹಕ್ಕುಗಳು ಏನೇನು ಅಂತ ಗೊತ್ತಿದ್ದರೆ ಮಾತ್ರ ಅವನ್ನು ಪಡೆದುಕೊಳ್ಳಬಹುದು. ಏಳು ಸ್ವಾತಂತ್ರ್ಯಗಳನ್ನು ನಮ್ಮ ಸಂವಿಧಾನ ಪ್ರತಿಯೊಬ್ಬರಿಗೂ ನೀಡಿದೆ. ಇದನ್ನೆಲ್ಲಾ ಪ್ರತಿಯೊಬ್ಬರೂ ಅರಿತುಕೊಳ್ಳಬೇಕು ಎಂದರು.

ಹೀಗಾಗಿ ಸಂವಿಧಾನ ಓದು ಅಭಿಯಾನವನ್ನು ರಾಜ್ಯಾದ್ಯಂತ ಆರಂಭಿಸಲಾಯಿತು ಎಂದರು. ಸಂವಿಧಾನದ ಧ್ಯೇಯೋದ್ದೇಶ ಮತ್ತು ಆಶಯಗಳನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು ಎಂದು ಕರೆ ನೀಡಿದರು.

ಸಂವಿಧಾನ ದ್ರೋಹಿಗಳು ಸಮಾಜ ದ್ರೋಹಿಗಳು, ಜನ ವಿರೋಧಿಗಳೂ ಕೂಡ ಹೌದು. ಜಾತಿ, ಧರ್ಮದ ಹೆಸರಲ್ಲಿ ಒಬ್ಬರನ್ನು ಅಗೌರವದಿಂದ ಕಾಣುವುದು, ಮತ್ತೊಬ್ಬರು ಸಂವಿಧನೇತರ ಗೌರವ ನಿರೀಕ್ಷಿಸುವುದು ತಪ್ಪು ಎಂದರು.

ಬಸವಣ್ಣನವರು 850 ವರ್ಷಗಳ ಹಿಂದೆಯೇ ಜಾತಿ ವ್ಯವಸ್ಥೆ ಮತ್ತು ಕರ್ಮಸಿದ್ದಾಂತವನ್ನು ಧಿಕ್ಕರಿಸಿದ್ದಾರೆ. ಆದರೆ, ಇವತ್ತಿಗೂ ಇದು ಪೂರ್ತಿ ಹೋಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಸಂವಿಧಾನದಲ್ಲಿ ಕಂದಾಚಾರಗಳಿಗೆ ಅವಕಾಶವಿಲ್ಲ. ಒಂದು ಜಾತಿ, ಒಂದು ಧರ್ಮಕ್ಕೆ ಮಾತ್ರ ಈ ದೇಶ ಸೀಮಿತವಲ್ಲ ಎಂದರು.

1 ಗಂಟೆ ಮೇಷ್ಟ್ರಾದ ಸಿಎಂ ಸಿದ್ದರಾಮಯ್ಯ : ಮಕ್ಕಳಿಗೆ ಸಂವಿಧಾನದ ಬಗ್ಗೆ ಪಾಠ.! Cm Siddaramaiah teaches children about Constitution for 1 hour
Share. Facebook Twitter LinkedIn WhatsApp Email

Related Posts

BREAKING : ಆರೋಪ ಸಾಬೀತಾದರೆ ರಾಮಚಂದ್ರರಾವ್ ರನ್ನ ವಜಾ ಮಾಡಲಾಗುತ್ತೆ : ಗೃಹ ಸಚಿವ ಜಿ.ಪರಮೇಶ್ವರ್ 

20/01/2026 9:23 AM1 Min Read

BREAKING : ರಾಜ್ಯದ ಪಿಯು ವಿದ್ಯಾರ್ಥಿಗಳಿಗೆ ಬಿಗ್ ಶಾಕ್ : ಸ್ಟಡಿ ಹಾಲಿಡೇಗೆ ಬ್ರೇಕ್ ಹಾಕಿದ ಶಿಕ್ಷಣ ಇಲಾಖೆ!

20/01/2026 9:19 AM1 Min Read

BREAKING : ಶಬರಿಮಲೆ ಅಯ್ಯಪ್ಪ ಸ್ವಾಮಿ ಚಿನ್ನ ಕಳವು ಪ್ರಕರಣ : ಬೆಂಗಳೂರು ಸೇರಿ ಮೂರು ಕಡೆ ‘ED’ ದಾಳಿ 

20/01/2026 8:35 AM1 Min Read
Recent News

ಶಬರಿಮಲೆ ಚಿನ್ನ ಕಳ್ಳತನ ಪ್ರಕರಣ: ಕೇರಳ, ಕರ್ನಾಟಕ ಮತ್ತು ತಮಿಳುನಾಡಿನ 21 ಸ್ಥಳಗಳಲ್ಲಿ ED ಶೋಧ

20/01/2026 9:30 AM

BREAKING : ಆರೋಪ ಸಾಬೀತಾದರೆ ರಾಮಚಂದ್ರರಾವ್ ರನ್ನ ವಜಾ ಮಾಡಲಾಗುತ್ತೆ : ಗೃಹ ಸಚಿವ ಜಿ.ಪರಮೇಶ್ವರ್ 

20/01/2026 9:23 AM

BREAKING : ರಾಜ್ಯದ ಪಿಯು ವಿದ್ಯಾರ್ಥಿಗಳಿಗೆ ಬಿಗ್ ಶಾಕ್ : ಸ್ಟಡಿ ಹಾಲಿಡೇಗೆ ಬ್ರೇಕ್ ಹಾಕಿದ ಶಿಕ್ಷಣ ಇಲಾಖೆ!

20/01/2026 9:19 AM

BREAKING: ತಮಿಳುನಾಡಿನಲ್ಲಿ ತೆನ್ಪೆನ್ನೈ ನದಿ ಉತ್ಸವದ ವೇಳೆ ಹೀಲಿಯಂ ಸಿಲಿಂಡರ್ ಸ್ಫೋಟ: ಓರ್ವ ಸಾವು, 18 ಮಂದಿಗೆ ಗಾಯ

20/01/2026 9:14 AM
State News
KARNATAKA

BREAKING : ಆರೋಪ ಸಾಬೀತಾದರೆ ರಾಮಚಂದ್ರರಾವ್ ರನ್ನ ವಜಾ ಮಾಡಲಾಗುತ್ತೆ : ಗೃಹ ಸಚಿವ ಜಿ.ಪರಮೇಶ್ವರ್ 

By kannadanewsnow0520/01/2026 9:23 AM KARNATAKA 1 Min Read

ಬೆಂಗಳೂರು : ರಾಜ್ಯದಲ್ಲಿ ಇಡೀ ಪೊಲೀಸ್ ಇಲಾಖೆಯ ತಲಿತಗ್ಗಿಸುವಂತಹ ಘಟನೆ  ನಡೆದಿದ್ದು, ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ವಿಡಿಯೋ ವೈರಲ್ ಆದ…

BREAKING : ರಾಜ್ಯದ ಪಿಯು ವಿದ್ಯಾರ್ಥಿಗಳಿಗೆ ಬಿಗ್ ಶಾಕ್ : ಸ್ಟಡಿ ಹಾಲಿಡೇಗೆ ಬ್ರೇಕ್ ಹಾಕಿದ ಶಿಕ್ಷಣ ಇಲಾಖೆ!

20/01/2026 9:19 AM

BREAKING : ಶಬರಿಮಲೆ ಅಯ್ಯಪ್ಪ ಸ್ವಾಮಿ ಚಿನ್ನ ಕಳವು ಪ್ರಕರಣ : ಬೆಂಗಳೂರು ಸೇರಿ ಮೂರು ಕಡೆ ‘ED’ ದಾಳಿ 

20/01/2026 8:35 AM

BIG NEWS : ಬೆಂಗಳೂರಲ್ಲಿ ‘GBA’ ಮಹಿಳಾ ಅಧಿಕಾರಿ ಮೇಲೆ ಗುತ್ತಿಗೆದಾರನಿಂದ ದಬ್ಬಾಳಿಕೆ, ನಿಂದನೆ 

20/01/2026 8:30 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.