Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸುಳ್ಳು ಸುದ್ದಿ, ತಪ್ಪು ಮಾಹಿತಿಯನ್ನು ಫ್ಯಾಕ್ಟ್ ಚೆಕ್‌ ಘಟಕದ ಮೂಲಕ ನಿಯಂತ್ರಣ: ಕೇಂದ್ರ ಸಚಿವ ಅಶ್ವಿನಿ ವೈಷ್ಣವ್‌

30/07/2025 10:30 PM

ಮಳೆಗಾಲದಲ್ಲಿ ಜಸ್ಟ್ ಇಷ್ಟು ಮಾಡಿ ಸಾಕು ಯಾವುದೇ ರೋಗಗಳು ನಿಮ್ಮ ಹತ್ತಿರಕ್ಕೂ ಸುಳಿಯೋದಿಲ್ಲ

30/07/2025 9:49 PM

BREAKING : ಡಬಲ್ ಒಲಿಂಪಿಕ್ ಚಾಂಪಿಯನ್ ‘ಲಾರಾ ಡಾಲ್ಮಿಯರ್’ ವಿಧಿವಶ |Laura Dahlmeier No More

30/07/2025 9:38 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇಂದು ‘ಆಶಾಕಿರಣ ಯೋಜನೆ’ಗೆ ಸಿಎಂ ಸಿದ್ಧರಾಮಯ್ಯ ಚಾಲನೆ: ಇನ್ಮುಂದೆ ಕಣ್ಣಿನ ಶಸ್ತ್ರಚಿಕಿತ್ಸೆ, ಕನ್ನಡಕ ‘ಫ್ರೀ’
KARNATAKA

ಇಂದು ‘ಆಶಾಕಿರಣ ಯೋಜನೆ’ಗೆ ಸಿಎಂ ಸಿದ್ಧರಾಮಯ್ಯ ಚಾಲನೆ: ಇನ್ಮುಂದೆ ಕಣ್ಣಿನ ಶಸ್ತ್ರಚಿಕಿತ್ಸೆ, ಕನ್ನಡಕ ‘ಫ್ರೀ’

By kannadanewsnow0918/02/2024 5:40 AM

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹಾವೇರಿಯಲ್ಲಿ ರಾಜ್ಯ ಸರ್ಕಾರದ ಮತ್ತೊಂದು ಯೋಜನೆಯಾಗಿರುವಂತ ಆಶಾಕಿರಣ ಯೋಜನೆಗೆ ಚಾಲನೆ ನೀಡಿದ್ದಾರೆ. ಹೀಗಾಗಿ ಇನ್ಮುಂದೆ ಆಶಾಕಿರಣ ಯೋಜನೆಯಡಿ ಕಣ್ಣಿನ ಸಮಸ್ಯೆಯಿಂದ ಬಳಲುತ್ತಿರೋರಿಗೆ ಶಸ್ತ್ರಚಿಕಿತ್ಸೆ ಉಚಿತವಾಗಿ ಮಾಡಲಾಗುತ್ತದೆ. ಅಲ್ಲದೇ ಫ್ರೀಯಾಗಿ ಕನ್ನಡಕ ಕೂಡ ನೀಡಲಾಗುತ್ತದೆ.

ಈ ಕುರಿತಂತೆ ಮಾಹಿತಿಯನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಂಚಿಕೊಂಡಿದ್ದು, ಹಾವೇರಿಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅವರು ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಆಶಾಕಿರಣ ಯೋಜನೆಯಡಿ ರಾಜ್ಯದ 8 ಜಿಲ್ಲೆಗಳಲ್ಲಿ ಎಲ್ಲ ಜನರ ಕಣ್ಣಿನ ತಪಾಸಣಾ ಕಾರ್ಯವನ್ನ ಆಶಾ ಕಾರ್ಯಕರ್ತೆಯರು ನಡೆಸಿದ್ದರು. ಮೊದಲ ಹಂತದಲ್ಲಿ ಹಾವೇರಿ, ಕಲಬುರಗಿ, ಚಾಮರಾಜನಗರ, ಚಿಕ್ಕಬಳ್ಳಾಪುರ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ ಒಟ್ಟು 56, 59, 036 ಜನರನ್ನು ಆಶಾ ಕಾರ್ಯಕರ್ತೆಯರ ಮೂಲಕ ಪ್ರಾಥಮಿಕ ತಪಾಸಣೆಗೆ ಒಳಪಡಿಸಲಾಗಿತ್ತು.‌ ಇವರಲ್ಲಿ 8,28, 884 ಜನರಿಗೆ ನೇತ್ರ ಸಂಬಂಧಿ ತೊಂದರೆಗಳು ಕಂಡುಬಂದಿದ್ದು, ದ್ವಿತೀಯ ಹಂತದ ಚಿಕಿತ್ಸೆಗೆ ಒಳಪಡಿಸಿದಾಗ 2,45,588 ಮಂದಿಗೆ ದೃಷ್ಟಿ ದೋಷ ಇರುವುದು ಪತ್ತೆಯಾಗಿದೆ. 2.45,588 ಜನರಿಗೂ ಉಚಿತ ಕನ್ನಡಕ ಒದಗಿಸುವ ಕಾರ್ಯ ನಾಳೆಯಿಂದ ಪ್ರಾರಂಭವಾಗಲಿದೆ. ಅಲ್ಲದೇ 39,336 ಜನರಿಗೆ ಕಣ್ಣಿನ ಪೊರೆ ತೊಂದರೆ ಕಂಡು ಬಂದಿದ್ದು, ಇವರಿಗೆ ಕಣ್ಣಿನ ಶಸ್ತ್ರ ಚಿಕಿತ್ಸೆಯನ್ನೂ ಕೂಡಾ ಉಚಿತವಾಗಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.

“ಆಶಾಕಿರಣ” ಎತಡನೇ ಹಂತದಲ್ಲಿ ಚಿತ್ರದುರ್ಗ, ಮಂಡ್ಯ, ರಾಯಚೂರು, ಉತ್ತರ ಕನ್ನಡ ಜಿಲ್ಲೆಯಲ್ಲಿ ಆಶಾಕಿರಣ ಅಭಿಯಾನವನ್ನ ಈಗಾಗಲೇ ಆರಂಭಿಸಲಾಗಿದ್ದು, ಈ ನಾಲ್ಕು ಜಿಲ್ಲೆಗಳಲ್ಲಿ ಒಟ್ಟು 5,277,235 ಜನರನ್ನು ಪ್ರಾಥಮಿಕ ತಪಾಸಣೆಗೆ ಒಳಪಡಿಸಲಾಗಿದೆ. ಇವರಲ್ಲಿ 943,398 ಜನರಲ್ಲಿ ನೇತ್ರ ಸಂಬಂಧಿ ತೊಂದರೆಗಳಿರುವುದು ಪತ್ತೆಯಾಗಿದ್ದು, ಕನ್ನಡಕ ವಿತರಣೆ, ಶಸ್ತ್ರ ಚಿಕಿತ್ಸೆ ಸೇರಿದಂತೆ ಹೆಚ್ಚಿನ ಚಿಕಿತ್ಸೆಗೆ ಕ್ರಮ ವಹಿಸುದಾಗಿ ಹೇಳಿದ್ದಾರೆ.

ಮುಂದಿನ ಹಂತಗಳಲ್ಲಿ ರಾಮನಗರ, ಯಾದಗಿರಿ, ಕೊಡಗು, ಗದಗ ಹಾಗೂ ಚಿಕ್ಕಮಂಗಳೂರು, ಬೀದರ್, ಕೋಲಾರ, ಬಾಗಲಕೋಟೆ ಜಿಲ್ಲೆಗಳನ್ನು ಆಶಾಕಿರಣ ಯೋಜನೆಗಾಗಿ ಆಯ್ಕೆ ಮಾಡಲಾಗಿದೆ. ಹಂತ, ಹಂತವಾಗಿ ರಾಜ್ಯದ ಉಳಿದ ಜಿಲ್ಲೆಗಳಿಗೆ ಯೋಜನೆ ವಿಸ್ತರಿಸಲಾಗುವುದು ಎಂದು ತಿಳಿಸಿದ್ದಾರೆ.

ರಾಜ್ಯದ ಎಲ್ಲ ಜನರಿಗೂ “ಆಶಾಕಿರಣ” ಯೋಜನೆಯಡಿ ಉಚಿತ ಕಣ್ಣಿನ ಆರೈಕೆ ಆರೋಗ್ಯ ಸೇವೆಯನ್ನ ರಾಜ್ಯ ಸರ್ಕಾರದ ಒದಗಿಸುವ ಗುರಿ ಹೊಂದಿದೆ. ಮಕ್ಕಳಿನಿಂದ ಹಿಡಿದು ವಯೋವೃದ್ದರ ವರೆಗು ಎಲ್ಲರ ಕಣ್ಣಿನ ತಪಾಸಣೆಯನ್ನ ಆರೋಗ್ಯ ಇಲಾಖೆ ಜನರ ಮನೆಬಾಗಿಲಿಗೆ ಹೋಗಿ ಆರೋಗ್ಯ ಸೇವೆ ಒದಗಿಸುತ್ತಿದೆ. “ಆಶಾಕಿರಣ” ಯೋಜನೆ ರಾಜ್ಯದ ಜನಸಾಮಾನ್ಯರ ಬಾಳಲ್ಲಿ ಬೆಳಕಾಗಲಿ ಎಂದು ಹೇಳಿದ್ದಾರೆ.

Share. Facebook Twitter LinkedIn WhatsApp Email

Related Posts

ಸಾಗರ ತಾಲ್ಲೂಕು ಕಾರು ಚಾಲಕರು, ಮಾಲೀಕರ ಸಂಘದ ಅಧ್ಯಕ್ಷರಾಗಿ 3ನೇ ಬಾರಿಗೆ ಗಿರೀಶ್ ಕೋವಿ ಅವಿರೋಧ ಆಯ್ಕೆ

30/07/2025 9:38 PM2 Mins Read

10-15 ದಿನಗಳಲ್ಲಿ ಕರ್ನಾಟಕಕ್ಕೆ 1.35 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಪೂರೈಕೆಗೆ ಕೇಂದ್ರದ ಭರವಸೆ: ಬೊಮ್ಮಾಯಿ

30/07/2025 9:26 PM4 Mins Read

2025-26ನೇ ಸಾಲಿನ ‘ದಸರಾ ಕ್ರೀಡಾಕೂಟ’ಕ್ಕೆ ವೇಳಾಪಟ್ಟಿ ಪ್ರಕಟಿಸಿದ ಸರ್ಕಾರ

30/07/2025 8:56 PM1 Min Read
Recent News

ಸುಳ್ಳು ಸುದ್ದಿ, ತಪ್ಪು ಮಾಹಿತಿಯನ್ನು ಫ್ಯಾಕ್ಟ್ ಚೆಕ್‌ ಘಟಕದ ಮೂಲಕ ನಿಯಂತ್ರಣ: ಕೇಂದ್ರ ಸಚಿವ ಅಶ್ವಿನಿ ವೈಷ್ಣವ್‌

30/07/2025 10:30 PM

ಮಳೆಗಾಲದಲ್ಲಿ ಜಸ್ಟ್ ಇಷ್ಟು ಮಾಡಿ ಸಾಕು ಯಾವುದೇ ರೋಗಗಳು ನಿಮ್ಮ ಹತ್ತಿರಕ್ಕೂ ಸುಳಿಯೋದಿಲ್ಲ

30/07/2025 9:49 PM

BREAKING : ಡಬಲ್ ಒಲಿಂಪಿಕ್ ಚಾಂಪಿಯನ್ ‘ಲಾರಾ ಡಾಲ್ಮಿಯರ್’ ವಿಧಿವಶ |Laura Dahlmeier No More

30/07/2025 9:38 PM

ಸಾಗರ ತಾಲ್ಲೂಕು ಕಾರು ಚಾಲಕರು, ಮಾಲೀಕರ ಸಂಘದ ಅಧ್ಯಕ್ಷರಾಗಿ 3ನೇ ಬಾರಿಗೆ ಗಿರೀಶ್ ಕೋವಿ ಅವಿರೋಧ ಆಯ್ಕೆ

30/07/2025 9:38 PM
State News
KARNATAKA

ಸಾಗರ ತಾಲ್ಲೂಕು ಕಾರು ಚಾಲಕರು, ಮಾಲೀಕರ ಸಂಘದ ಅಧ್ಯಕ್ಷರಾಗಿ 3ನೇ ಬಾರಿಗೆ ಗಿರೀಶ್ ಕೋವಿ ಅವಿರೋಧ ಆಯ್ಕೆ

By kannadanewsnow0930/07/2025 9:38 PM KARNATAKA 2 Mins Read

ಶಿವಮೊಗ್ಗ: ಸಾಗರ ತಾಲೂಕಿನ ಕಾರು ಚಾಲಕರು ಮತ್ತು ಮಾಲೀಕರ ಸಂಘದ ಅಧ್ಯಕ್ಷರಾಗಿ ಉದ್ಯಮಿಗಳು, ಕಾಂಗ್ರೆಸ್ ಪಕ್ಷದ ಮುಖಂಡರಾದ ಗಿರೀಶ್ ಕೋವಿ…

10-15 ದಿನಗಳಲ್ಲಿ ಕರ್ನಾಟಕಕ್ಕೆ 1.35 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಪೂರೈಕೆಗೆ ಕೇಂದ್ರದ ಭರವಸೆ: ಬೊಮ್ಮಾಯಿ

30/07/2025 9:26 PM

2025-26ನೇ ಸಾಲಿನ ‘ದಸರಾ ಕ್ರೀಡಾಕೂಟ’ಕ್ಕೆ ವೇಳಾಪಟ್ಟಿ ಪ್ರಕಟಿಸಿದ ಸರ್ಕಾರ

30/07/2025 8:56 PM

CRIME NEWS: ರಾಜ್ಯದಲ್ಲಿ ಮತ್ತೊಂದು ‘ಡಿಜಿಟಲ್ ಅರೆಸ್ಟ್’ ಕೇಸ್: ಬರೋಬ್ಬರಿ 89.90 ಲಕ್ಷ ಕಳೆದುಕೊಂಡ ವ್ಯಕ್ತಿ

30/07/2025 8:38 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.