Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಕೋಲಾರದಲ್ಲಿ ಘೋರ ದುರಂತ : ಕಲ್ಲು ಗಣಿಗಾರಿಕೆ ವೇಳೆ ಬಂಡೆ ಬಿದ್ದು ಹಿಟಾಚಿ ಚಾಲಕ ದುರ್ಮರಣ!

16/01/2026 11:00 AM

ALERT : `Whats App’ ಬಳಕೆದಾರರೇ ಗಮನಿಸಿ : ಫೆ.1ರಿಂದ ಬದಲಾಗಲಿವೆ ಈ ಎಲ್ಲಾ ನಿಯಮಗಳು.!

16/01/2026 10:52 AM

BREAKING : ಷೇರುಪೇಟೆಯಲ್ಲಿ ‘ಸೆನ್ಸೆಕ್ಸ್’ 700 ಅಂಕ ಏರಿಕೆ, 25,850 ರ ಗಡಿ ದಾಟಿದ ‘ನಿಫ್ಟಿ’ |Share Market

16/01/2026 10:42 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕಾವೇರಿ 5 ನೇ ಹಂತದ ಯೋಜನೆಗೆ ನಾಳೆ ಸಿಎಂ ಸಿದ್ದರಾಮಯ್ಯ ಚಾಲನೆ : 110 ಹಳ್ಳಿಗಳಿಗೆ ಕಾವೇರಿ ನೀರು!
KARNATAKA

ಕಾವೇರಿ 5 ನೇ ಹಂತದ ಯೋಜನೆಗೆ ನಾಳೆ ಸಿಎಂ ಸಿದ್ದರಾಮಯ್ಯ ಚಾಲನೆ : 110 ಹಳ್ಳಿಗಳಿಗೆ ಕಾವೇರಿ ನೀರು!

By kannadanewsnow5715/10/2024 5:59 AM

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುವ ಬಹುನಿರೀಕ್ಷಿತ ಕಾವೇರಿ 5ನೇ ಹಂತದ ಯೋಜನೆಯನ್ನು ಅಕ್ಟೋಬರ್‌ 16ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಲೋಕಾರ್ಪಣೆ ಮಾಡಲಿದ್ದಾರೆ. ಈ ಮೂಲಕ ಬೆಂಗಳೂರಿನ 110 ಹಳ್ಳಿಗಳ ಜನರಿಗೆ ಕಾವೇರಿ ನದಿ ನೀರು ಕುಡಿಯೋದಕ್ಕೆ ಸರಬರಾಜು ಮಾಡಿ, ಸಿಗುವಂತೆ ಆಗಲಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜಾಗುವ ಕಾವೇರಿ ಐದನೇ ಹಂತದ ಯೋಜನೆ ಇದೇ ಅ.16ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರಿಂದ ಲೋಕಾರ್ಪಣೆಗೊಳ್ಳಲಿದೆ. ಜೈಕಾ(ಜಪಾನ್ ಇಂಟರ್ ನ್ಯಾಷನಲ್ ಕೋ ಅಪರೇಶನ್ ಏಜೆನ್ಸಿ) ಸಹಭಾಗಿತ್ವದಲ್ಲಿ 4336 ಕೋಟಿ ರೂ.ವೆಚ್ಚದಲ್ಲಿ ಈ ಯೋಜನೆ ಕೈಗೆತ್ತಿಕೊಳ್ಳಲಾಗಿದೆ.

ಬೆಂಗಳೂರಿಗೆ ಹೊಸದಾಗಿ ಸೇರ್ಪಡೆಯಾದ ಹಳ್ಳಿಗಳಿಗೆ ಸಮರ್ಪಕ ನೀರನ್ನು ಒದಗಿಸುವ ಹಾಗೂ ಬೆಂಗಳೂರಿನ ದೂರದೃಷ್ಟಿಯನ್ನಿಟ್ಟುಕೊಂಡು ಮಹತ್ವದ ನಿರ್ಧಾರವನ್ನು 2014ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರ ಈ ಯೋಜನೆ ರೂಪಿಸಿ ಚಾಲನೆ ನೀಡಿದ್ದನ್ನು ಸ್ಮರಿಸಬಹುದು.

ಈ ಯೋಜನೆಯಿಂದ ಬೆಂಗಳೂರು ನಗರಕ್ಕೆ ಹೆಚ್ಚುವರಿಯಾಗಿ 775 ಎಂಎಲ್ಡಿ ನೀರು ಪೂರೈಕೆಯಾಗಲಿದ್ದು, ಮೂಲೆಮೂಲೆಗೂ ಕಾವೇರಿ ನೀರು ಸರಬರಾಜಾಗಲಿದೆ. ಇದರಿಂದ ಹೆಚ್ಚುವರಿಯಾಗಿ 50ಲಕ್ಷ ಜನರು ಇದರ ಸದುಪಯೋಗಪಡೆದುಕೊಳ್ಳಲಿದ್ದಾರೆ ಎಂದು ಉಪಮುಖ್ಯಮಂತ್ರಿಗಳು,ಜಲಸಂಪನ್ಮೂಲ ಸಚಿವರು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ.

ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರಿಂದ ಕಾರ್ಯಕ್ರಮದ ಆಹ್ವಾನಪತ್ರಿಕೆಯನ್ನು ಇಂದು ಬೆಳಗ್ಗೆ ಸ್ವೀಕರಿಸಿ ಈ ವಿಷಯ ತಿಳಿಸಿದರು.

ವೇಗವಾಗಿ ಬೆಳೆಯುತ್ತಿರುವ ಮಹಾನಗರಿ ಬೆಂಗಳೂರಿನ ಭವಿಷ್ಯದ ದೂರದೃಷ್ಟಿಯನ್ನಿಟ್ಟುಕೊಂಡು ಅನುಷ್ಠಾನಗೊಳಿಸಿದ ಮಹತ್ವದ ಯೋಜನೆ ಇದಾಗಿದೆ. ಇದರಿಂದ 110ಹಳ್ಳಿಗಳ ನಿವಾಸಿಗಳಿಗೆ ಹಾಗೂ ಬೆಂಗಳೂರು ನಗರದ ಎಲ್ಲ ನಿವಾಸಿಗಳಿಗೆ ಸಮರ್ಪಕ ನೀರು ಸರಬರಾಜಾಗಲಿದೆ. ಅವಕಾಶಗಳ ನಗರವೆಂದೇ ಖ್ಯಾತಿಯಾಗಿರುವ ಬೆಂಗಳೂರು ನಗರದಲ್ಲಿ ಇನ್ನಷ್ಟು ಮೂಲಸೌಕರ್ಯಗಳನ್ನು ಕಲ್ಪಿಸುವಲ್ಲಿ ಅಗತ್ಯ ಯೋಜನೆಗಳನ್ನು ನಮ್ಮ ಸರಕಾರ ರೂಪಿಸಿದ್ದು,ಅದನ್ನು ಸಾಕಾರಗೊಳಿಸಲಿದ್ದೇವೆ ಎಂದು ಇದೇ ಸಂದರ್ಭದಲ್ಲಿ ಉಪಮುಖ್ಯಮಂತ್ರಿಗಳು ತಿಳಿಸಿದರು.

ಸದರಿ ಯೋಜನೆಯನ್ನು ವೇಗವಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಇತ್ತೀಚೆಗೆ ಖುದ್ದಾಗಿ ಟಿ.ಕೆ.ಹಳ್ಳಿಗೆ ಭೇಟಿ ನೀಡಿ ಪರಿಶೀಲಿಸಿ ಅಗತ್ಯ ಸಲಹೆ-ಸೂಚನೆಗಳನ್ನು ಅಧಿಕಾರಿಗಳಿಗೆ ನೀಡಲಾಗಿದೆ ಎಂದು ತಿಳಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕಾವೇರಿ 5ನೇ ಹಂತದ ಯೋಜನೆ ಮೂಲಕ ಯಶವಂತಪುರ, ದಾಸರಹಳ್ಳಿ, ಬ್ಯಾಟರಾಯನಪುರ, ಬೆಂಗಳೂರು ದಕ್ಷಿಣ, ಮಹದೇವಪುರ, ರಾಜರಾಜೇಶ್ವರಿನಗರ, ಕೆಆರ್ಪುರ, ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ವಿವಿಧ ಹಳ್ಳಿಗಳ ಮನೆ ಮನೆಗೂ ಹಾಗೂ ಬೆಂಗಳೂರು ನಗರದ ಎಲ್ಲೆಡೆ ಕಾವೇರಿ ನೀರು ಸಮರ್ಪಕ ಸರಬರಾಜು ಆಗಲಿದೆ ಎಂದರು.

ಮನೆ ಮನೆಗೆ ಕಾವೇರಿ ತಲುಪಿಸುವ ಬೆಂಗಳೂರು ಜಲಮಂಡಳಿಯ ಈ ಯೋಜನೆಯು ಶೀಘ್ರದಲ್ಲೇ ಬೆಂಗಳೂರನ್ನು ನೀರಿನ ಸಮಸ್ಯೆಯಿಂದ ಮುಕ್ತಿಗೊಳಿಸಲಿದೆ ಎಂಬ ಭರವಸೆಯನ್ನು ವ್ಯಕ್ತಪಡಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರಿನ ಪ್ರತಿಯೊಂದು ಮನೆಗೂ ಸಮರ್ಪಕ ನೀರು ಹರಿಸುವುದು ಜಲಮಂಡಳಿಯ ಗುರಿಯಾಗಿದೆ ಎಂದರು.

ಕಾವೇರಿ ಐದನೇ ಹಂತದ ಲೋಕಾರ್ಪಣೆಯನ್ನು ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ತೊರೆಕಾಡನಹಳ್ಳಿ(ಟಿ.ಕೆ.ಹಳ್ಳಿ)ಯ ಬೆಂಗಳೂರು ಜಲಮಂಡಳಿ ಆವರಣದಲ್ಲಿ ಅ.16ರಂದು ಬೆಳಗ್ಗೆ 10.30ಕ್ಕೆ ಲೋಕಾರ್ಪಣೆಯಾಗಲಿದೆ ಮಳವಳ್ಳಿ ಕ್ಷೇತ್ರದ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಕೇಂದ್ರ/ರಾಜ್ಯ ಸಚಿವರುಗಳು ಹಾಗೂ ಸಂಸದರು ಮತ್ತು ಶಾಸಕರು ಹಾಗೂ ಇನ್ನೀತರ ಎಲ್ಲ ಚುನಾಯಿತ ಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ.

ಮನೆಮನೆಗೂ ಕಾವೇರಿ ನೀರು ತಲುಪಿಸಿ ಸಮೃದ್ಧ ಬೆಂಗಳೂರಿಗೆ ಕೈ ಜೋಡಿಸಿರುವ ಜೈಕಾ ಇಂಡಿಯಾ ಕಚೇರಿಯ ಮುಖ್ಯ ಪ್ರತಿನಿಧಿ ಟೇಕುಚಿ ಟಕುರೋ, ಕೌನ್ಸಲ್ ಜನರಲ್ ಆಫ್ ಜಪಾನ್ ಇನ್ ಇಂಡಿಯಾದ ಟ್ಸುಟೋಮು,ಭಾರತದಲ್ಲಿ ಜಪಾನ್ ರಾಯಭಾರ ಕಚೇರಿಯ ಆರ್ಥಿಕ ಸಚಿವ(ಆರ್ಥಿಕ ಮತ್ತು ಅಭಿವೃದ್ಧಿ)ರಾದ ಹೊಕುಗೋ ಕ್ಯೋಕು ಅವರು ವಿಶೇಷ ಆಹ್ವಾನಿತರಾಗಿ ಆಗಮಿಸಲಿದ್ದಾರೆ.

CM Siddaramaiah to launch Cauvery 5th phase project tomorrow: Cauvery water for 110 villages! ಕಾವೇರಿ 5 ನೇ ಹಂತದ ಯೋಜನೆಗೆ ನಾಳೆ ಸಿಎಂ ಸಿದ್ದರಾಮಯ್ಯ ಚಾಲನೆ : 110 ಹಳ್ಳಿಗಳಿಗೆ ಕಾವೇರಿ ನೀರು!
Share. Facebook Twitter LinkedIn WhatsApp Email

Related Posts

BIG NEWS : ಕೋಲಾರದಲ್ಲಿ ಘೋರ ದುರಂತ : ಕಲ್ಲು ಗಣಿಗಾರಿಕೆ ವೇಳೆ ಬಂಡೆ ಬಿದ್ದು ಹಿಟಾಚಿ ಚಾಲಕ ದುರ್ಮರಣ!

16/01/2026 11:00 AM1 Min Read

ALERT : `Whats App’ ಬಳಕೆದಾರರೇ ಗಮನಿಸಿ : ಫೆ.1ರಿಂದ ಬದಲಾಗಲಿವೆ ಈ ಎಲ್ಲಾ ನಿಯಮಗಳು.!

16/01/2026 10:52 AM2 Mins Read

ಬಳ್ಳಾರಿ ಪಾದಯಾತ್ರೆಗೆ ನನ್ನ ವೈಯಕ್ತಿಕ ವಿರೋಧ ಇಲ್ಲ : ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿಕೆ

16/01/2026 10:36 AM1 Min Read
Recent News

BIG NEWS : ಕೋಲಾರದಲ್ಲಿ ಘೋರ ದುರಂತ : ಕಲ್ಲು ಗಣಿಗಾರಿಕೆ ವೇಳೆ ಬಂಡೆ ಬಿದ್ದು ಹಿಟಾಚಿ ಚಾಲಕ ದುರ್ಮರಣ!

16/01/2026 11:00 AM

ALERT : `Whats App’ ಬಳಕೆದಾರರೇ ಗಮನಿಸಿ : ಫೆ.1ರಿಂದ ಬದಲಾಗಲಿವೆ ಈ ಎಲ್ಲಾ ನಿಯಮಗಳು.!

16/01/2026 10:52 AM

BREAKING : ಷೇರುಪೇಟೆಯಲ್ಲಿ ‘ಸೆನ್ಸೆಕ್ಸ್’ 700 ಅಂಕ ಏರಿಕೆ, 25,850 ರ ಗಡಿ ದಾಟಿದ ‘ನಿಫ್ಟಿ’ |Share Market

16/01/2026 10:42 AM

BREAKING : ಮುಂಬೈ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶ : ಬಿಜೆಪಿ ಮೈತ್ರಿ ಕೂಟಕ್ಕೆ ಭರ್ಜರಿ ಮುನ್ನಡೆ

16/01/2026 10:38 AM
State News
KARNATAKA

BIG NEWS : ಕೋಲಾರದಲ್ಲಿ ಘೋರ ದುರಂತ : ಕಲ್ಲು ಗಣಿಗಾರಿಕೆ ವೇಳೆ ಬಂಡೆ ಬಿದ್ದು ಹಿಟಾಚಿ ಚಾಲಕ ದುರ್ಮರಣ!

By kannadanewsnow0516/01/2026 11:00 AM KARNATAKA 1 Min Read

ಕೋಲಾರ : ಕೋಲಾರದಲ್ಲಿ ಘೋರ ದುರಂತ ಸಂಭವಿಸಿದ್ದು, ಕಲ್ಲು ಗಣಿಗಾರಿಕೆ ವೇಳೆ ಬಂಡೆ ಬಿದ್ದು ಹಿಟಾಚಿ ಚಾಲಕ ಸಂಭವಿಸಿದ್ದು, ಕೋಲಾರ…

ALERT : `Whats App’ ಬಳಕೆದಾರರೇ ಗಮನಿಸಿ : ಫೆ.1ರಿಂದ ಬದಲಾಗಲಿವೆ ಈ ಎಲ್ಲಾ ನಿಯಮಗಳು.!

16/01/2026 10:52 AM

ಬಳ್ಳಾರಿ ಪಾದಯಾತ್ರೆಗೆ ನನ್ನ ವೈಯಕ್ತಿಕ ವಿರೋಧ ಇಲ್ಲ : ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿಕೆ

16/01/2026 10:36 AM

BREAKING : ಕೌಟುಂಬಿಕ ಕಲಹಕ್ಕೆ ಬೇಸತ್ತು ತಾಯಿ, ಮಗಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ : ಮಹಿಳೆ ಸಾವು!

16/01/2026 10:27 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.