ಬೆಂಗಳೂರು : ಇಂದು ಐತಿಹಾಸಿಕ ದಿನವಾಗಿದ್ದು ಅಯ್ಯೋಧ್ಯಾ ದೆಹಲಿ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನ ಕಾರ್ಯಕ್ರಮವು ಇಡೀ ದೇಶದ ರಾಮ ಭಕ್ತರು ಅತ್ಯಂತ ಸಂತೋಷಪಡುವ ಐತಿಹಾಸಿಕ ದಿನವಾಗಿದೆ. ಅಲ್ಲದೆ ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿಯಿಂದ ಸೀತಾರಾಮ, ಲಕ್ಷ್ಮಣ ಸಮೇತ ಆಂಜನೇಯ ದೇಗುಲ ಉದ್ಘಾಟನೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ದೇವಸ್ಥಾನವನ್ನು ಉದ್ಘಾಟಿಸಲಿದ್ದು, ಬೆಂಗಳೂರು ಪೂರ್ವ ತಾಲೂಕಿನ ಹಿರಂಡಹಳ್ಳಿಯಲ್ಲಿರುವ ದೇವಸ್ಥಾನವನ್ನು ಸಿಎಂ ಉದ್ಘಾಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಸುಮಾರು 32 ಅಡಿ ಎತ್ತರದ ಹನುಮಾನ ಮೂರ್ತಿ ಸೇರಿದಂತೆ ದೇವಸ್ಥಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಲಿದ್ದಾರೆ. ಈ ಒಂದು ದೇವಸ್ಥಾನವನ್ನು ಶ್ರೀರಾಮ ಟ್ರಸ್ಟ್ ನಿಂದ ನಿರ್ಮಿಸಲಾಗಿದೆ ಎಂದು ತಿಳಿದುಬಂದಿದೆ.
ಇನ್ನೊಂದೆಡೆ ಬಿಜೆಪಿ ನಾಯಕರು ಇಂದು ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನ ಕಾರ್ಯಕ್ರಮ ದಿನವಾಗಿರುವುದರಿಂದ ದೇಶದ ವಿವಿಧ ರಾಜ್ಯಗಳಲ್ಲಿ ಅಲ್ಲಿನ ಸರಕಾರಗಳು ಈಗಾಗಲೇ ರಜೆ ಘೋಷಣೆ ಮಾಡಿವೆ ಅದರಂತೆ ಕರ್ನಾಟಕ ರಾಜ್ಯದಲ್ಲೂ ಸಹ ರಾಜ್ಯ ಸರ್ಕಾರ ಇವತ್ತು ಒಂದು ದಿನ ಸಾರ್ವಜನಿಕರ ಜಯ ಘೋಷಿಸಬೇಕು ಎಂದು ಮನವಿ ಮಾಡಿದವು ಆದರೆ ಅದಕ್ಕೆ ಸಿಎಂ ಸಿದ್ದರಾಮಯ್ಯ ಯಾವುದೇ ರೀತಿಯಾದಂತಹ ರಜೆ ಇರುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.