Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಕಲಬುರ್ಗಿ ಡಿಸಿ ವಿರುದ್ಧ ಅವಹೇಳನಕಾರಿ ಹೇಳಿಕೆ : 2ನೇ ಬಾರಿ ವಿಚಾರಣೆಗೆ ಹಾಜರಾದ ಎನ್.ರವಿಕುಮಾರ್

17/07/2025 11:01 AM

BREAKING : ದಕ್ಷಿಣಕನ್ನಡದಲ್ಲಿ ಮತ್ತೆ ಗುಡ್ಡ ಕುಸಿತ: ಮಂಗಳೂರು-ಬೆಂಗಳೂರು ಹೆದ್ದಾರಿ ಸಂಚಾರ ಸ್ಥಗಿತ

17/07/2025 10:53 AM

BREAKING: ನಾಸಿಕ್ ನಲ್ಲಿ ಕಾರು-ಬೈಕ್ ಡಿಕ್ಕಿ: ಮಹಿಳೆಯರು, ಮಗು ಸೇರಿ 7 ಮಂದಿ ಸಾವು | accident

17/07/2025 10:26 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ಸಿಎಂ ಸಿದ್ಧರಾಮಯ್ಯ ಭೇಟಿ: ರಕ್ಷಣಾ ಪಡೆಗಳ ಸಾಹಸ ಕಾರ್ಯಾಚರಣೆಗೆ ಶ್ಲಾಘನೆ
KARNATAKA

ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ಸಿಎಂ ಸಿದ್ಧರಾಮಯ್ಯ ಭೇಟಿ: ರಕ್ಷಣಾ ಪಡೆಗಳ ಸಾಹಸ ಕಾರ್ಯಾಚರಣೆಗೆ ಶ್ಲಾಘನೆ

By kannadanewsnow0921/07/2024 4:17 PM

ಅಂಕೋಲಾ: ಅತ್ಯಂತ ಅಪಾಯಕಾರಿ ಸನ್ನಿವೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ SDRF ಮತ್ತು NDRF ತಂಡಗಳ ಜೊತೆ ಚರ್ಚೆ ನಡೆಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಕ್ಷಣಾ ಸಿಬ್ಬಂದಿಯ ಕಾರ್ಯಕ್ಷಮತೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಗುಡ್ಡ ಕುಸಿತದಿಂದ ಮುಚ್ಚಿ ಹೋಗಿರುವ ರಸ್ತೆಯ ಎಡಭಾಗದಲ್ಲಿ ಕುಸಿತದ ಗುಡ್ಡ-ಬಲ ಭಾಗದಲ್ಲಿ ಭೋರ್ಗರೆದು ಹರಿಯುತ್ತಿರುವ ಕಾಳಿ ನದಿ ಇದೆ. ಜೊತೆಗೆ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಲ್ಲಿ ಮಣ್ಣಿನಡಿ ಸಿಲುಕಿರುವ ಜೀವಗಳ ಪತ್ತೆ ಕಾರ್ಯ ಬಹಳ ಸವಾಲಿನದ್ದಾಗಿದೆ ಎಂದು ಮುಖ್ಯಮಂತ್ರಿಗಳು ಸಿಬ್ಬಂದಿಯ ಶ್ರಮಕ್ಕೆ ಮೆಚ್ಚುಗೆ ಸೂಚಿಸಿದರು.

ನಾಲ್ಕು ತಂಡಗಳು ಗುಡ್ಡ ಕುಸಿತದ ಕೆಳಗೆ ಸಿಲುಕಿರಬಹುದಾದವರ ಪತ್ತೆಗೆ ರಾಡಾರ್ ತಂತ್ರಜ್ಞಾನ ಬಳಸಿ ಕಾರ್ಯಾಚರಣೆ ನಡೆಸುತ್ತಿವೆ. ಇನ್ನು ನಾಲ್ಕು ತಂಡಗಳು ಮತ್ತೊಂದು ಬದಿಯ ನದಿಯೊಳಗೆ ಕಾರ್ಯಾಚರಣೆ ನಡೆಸುತ್ತಿವೆ. ಈ ಬಗ್ಗೆ ಹಲವು ದಿನಗಳಿಂದ ತಾಲ್ಲೂಕಿನಲ್ಲೇ ಮೊಕ್ಕಾಂ ಹೂಡಿರುವ ಕಂದಾಯ ಸಚಿವ ಕೃಷ್ಣಬೈರೇಗೌಡರು ಮುಖ್ಯಮಂತ್ರಿಗಳಿಗೆ ವಿವರಿಸಿದರು.

ಕಾರ್ಯಾಚರಣೆ ನಡೆಯುತ್ತಿರುವ ಜಾಗ ಮತ್ತು ಮಣ್ಣು ತುಂಬಿರುವ ರಸ್ತೆಯೂ ಕುಸಿಯುವ ಸಾಧ್ಯತೆಗಳ ಬಗ್ಗೆ ಮುಖ್ಯಮಂತ್ರಿಗಳು ಅಧಿಕಾರಿಗಳಿಂದ ಮಾಹಿತಿ ಪಡೆದು ಈ ಬಗ್ಗೆ ಹೆಚ್ಚು ಜಾಗರೂಕರಾಗಿರುವಂತೆ ಎಚ್ಚರಿಸಿದರು.

ಗುಡ್ಡ ಕುಸಿತದ ಸ್ಥಳ ಒಂದು ರೀತಿ ದ್ವೀಪದಂತಾಗಿದೆ. ಸುತ್ತಲೂ ಕಾಳಿ ನದಿ ಭೋರ್ಗರೆದು ಹರಿಯುತ್ತಿದೆ. ನಡುವೆ ಅರ್ಧ ಕುಸಿದ ಗುಡ್ಡ ನಿಂತಿದೆ. ಹೀಗಾಗಿ ಕಾರ್ಯಾಚರಣೆ ವೇಳೆ ಎದುರಾಗಬಹುದಾದ ಅಪಾಯಗಳು ಮತ್ತು ಸವಾಲುಗಳ ಬಗ್ಗೆ ಉನ್ನತ ಮಟ್ಟದ ತಜ್ಞರಿಂದ ಮಾಹಿತಿ ಪಡೆದು ತಂತ್ರಜ್ಞಾನದ ನೆರವು ಪಡೆಯುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಕಂದಾಯ ಸಚಿವ ಕೃಷ್ಣಬೈರೇಗೌಡ, ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಮಾಜಿ ಸಚಿವ ಆರ್.ವಿ.ದೇಶಪಾಂಡೆ, ಶಾಸಕ ಸತೀಶ್ ಸೈಲ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಎಲ್.ಕೆ. ಅತೀಕ್, ಶಾಲಿನಿ ರಜನೀಶ್ ಸೇರಿ ಕಂದಾಯ ಇಲಾಖೆಯ ಹಿರಿಯ ಅಧಿಕಾರಿ ಮತ್ತು ಸಿಬ್ಬಂದಿ ಸ್ಥಳದಲ್ಲಿದ್ದರು.‌

ದರೋಡೆ, ಲೂಟಿ ತಡೆಯಲು ಸೇನೆ ಕರೆಸಬೇಕಿತ್ತಾ?: ಡಿಕೆಶಿಗೆ ಕೇಂದ್ರ ಸಚಿವ HDK ತಿರುಗೇಟು

NEET UG 2024 Row:ನಾಳೆ ಸುಪ್ರೀಂ ಕೋರ್ಟ್ ನಲ್ಲಿ ನೀಟ್ ಕುರಿತ ಅರ್ಜಿಗಳ ವಿಚಾರಣೆ ಪುನರಾರಂಭ

Share. Facebook Twitter LinkedIn WhatsApp Email

Related Posts

BIG NEWS : ಕಲಬುರ್ಗಿ ಡಿಸಿ ವಿರುದ್ಧ ಅವಹೇಳನಕಾರಿ ಹೇಳಿಕೆ : 2ನೇ ಬಾರಿ ವಿಚಾರಣೆಗೆ ಹಾಜರಾದ ಎನ್.ರವಿಕುಮಾರ್

17/07/2025 11:01 AM1 Min Read

BREAKING : ದಕ್ಷಿಣಕನ್ನಡದಲ್ಲಿ ಮತ್ತೆ ಗುಡ್ಡ ಕುಸಿತ: ಮಂಗಳೂರು-ಬೆಂಗಳೂರು ಹೆದ್ದಾರಿ ಸಂಚಾರ ಸ್ಥಗಿತ

17/07/2025 10:53 AM1 Min Read

BREAKING : ಕೊಪ್ಪಳದಲ್ಲಿ ಸತತ ಮಳೆಯಿಂದ ಮನೆ ಕುಸಿದು, ಒಂದೂವರೆ ವರ್ಷದ ಮಗು ಸಾವು : 6 ಜನರಿಗೆ ಗಾಯ!

17/07/2025 10:06 AM1 Min Read
Recent News

BIG NEWS : ಕಲಬುರ್ಗಿ ಡಿಸಿ ವಿರುದ್ಧ ಅವಹೇಳನಕಾರಿ ಹೇಳಿಕೆ : 2ನೇ ಬಾರಿ ವಿಚಾರಣೆಗೆ ಹಾಜರಾದ ಎನ್.ರವಿಕುಮಾರ್

17/07/2025 11:01 AM

BREAKING : ದಕ್ಷಿಣಕನ್ನಡದಲ್ಲಿ ಮತ್ತೆ ಗುಡ್ಡ ಕುಸಿತ: ಮಂಗಳೂರು-ಬೆಂಗಳೂರು ಹೆದ್ದಾರಿ ಸಂಚಾರ ಸ್ಥಗಿತ

17/07/2025 10:53 AM

BREAKING: ನಾಸಿಕ್ ನಲ್ಲಿ ಕಾರು-ಬೈಕ್ ಡಿಕ್ಕಿ: ಮಹಿಳೆಯರು, ಮಗು ಸೇರಿ 7 ಮಂದಿ ಸಾವು | accident

17/07/2025 10:26 AM

ಏಷ್ಯಾದಲ್ಲಿ ಭಾರತ ನಾಲ್ಕನೇ ಆದ್ಯತೆಯ ಮಾರುಕಟ್ಟೆ: BofA ಸಮೀಕ್ಷೆ

17/07/2025 10:18 AM
State News
KARNATAKA

BIG NEWS : ಕಲಬುರ್ಗಿ ಡಿಸಿ ವಿರುದ್ಧ ಅವಹೇಳನಕಾರಿ ಹೇಳಿಕೆ : 2ನೇ ಬಾರಿ ವಿಚಾರಣೆಗೆ ಹಾಜರಾದ ಎನ್.ರವಿಕುಮಾರ್

By kannadanewsnow0517/07/2025 11:01 AM KARNATAKA 1 Min Read

ಕಲಬುರ್ಗಿ : ಕಲ್ಬುರ್ಗಿ ಜಿಲ್ಲಾಧಿಕಾರಿ ಬಹುಷಃ ಪಾಕಿಸ್ತಾನದಿಂದ ಬಂದಿರಬೇಕು ಎಂದು ಪ್ರತಿಭಟನೆ ವೇಳೆ ಬಿಜೆಪಿ ನೀಡಿದ್ದರು. ಈ ಒಂದು ಹೇಳಿಕೆ…

BREAKING : ದಕ್ಷಿಣಕನ್ನಡದಲ್ಲಿ ಮತ್ತೆ ಗುಡ್ಡ ಕುಸಿತ: ಮಂಗಳೂರು-ಬೆಂಗಳೂರು ಹೆದ್ದಾರಿ ಸಂಚಾರ ಸ್ಥಗಿತ

17/07/2025 10:53 AM

BREAKING : ಕೊಪ್ಪಳದಲ್ಲಿ ಸತತ ಮಳೆಯಿಂದ ಮನೆ ಕುಸಿದು, ಒಂದೂವರೆ ವರ್ಷದ ಮಗು ಸಾವು : 6 ಜನರಿಗೆ ಗಾಯ!

17/07/2025 10:06 AM

ALERT : ನಿಮ್ಮ ಮೊಬೈಲ್ ನಲ್ಲಿ ಈ `ಅಪ್ಲಿಕೇಶನ್’ಗಳಿದ್ರೆ ತಕ್ಷಣವೇ ಡಿಲೀಟ್ ಮಾಡಿ.!

17/07/2025 10:05 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.