Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹಾಸನ: ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

09/05/2025 8:40 PM
Hassan Potato sowing seed sale begins

ಹಾಸನ: ಆಲೂಗೆಡ್ಡೆ ಬಿತ್ತನೆ ಬೀಜ ಮಾರಾಟಕ್ಕೆ ಚಾಲನೆ

09/05/2025 8:38 PM

BREAKING: ಸಾಮಾಜಿಕ ಸಮೀಕ್ಷಾ ವರದಿ ನಿರ್ಣಯ ಮುಂದೂಡಿಕೆ: ರಾಜ್ಯ ಸಚಿವ ಸಂಪುಟದ ನಿರ್ಣಯ

09/05/2025 8:38 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ‘ಸಿದ್ಧಗಂಗಾ ಸ್ವಾಮೀಜಿಗಳಿಗೆ ‘ಭಾರತ ರತ್ನ’ ನೀಡುವಂತೆ ‘ಕೇಂದ್ರ ಸರ್ಕಾರ’ಕ್ಕೆ ಪತ್ರ – ಸಿಎಂ ಸಿದ್ಧರಾಮಯ್ಯ
KARNATAKA

BIG NEWS: ‘ಸಿದ್ಧಗಂಗಾ ಸ್ವಾಮೀಜಿಗಳಿಗೆ ‘ಭಾರತ ರತ್ನ’ ನೀಡುವಂತೆ ‘ಕೇಂದ್ರ ಸರ್ಕಾರ’ಕ್ಕೆ ಪತ್ರ – ಸಿಎಂ ಸಿದ್ಧರಾಮಯ್ಯ

By kannadanewsnow0921/01/2024 4:28 PM

ತುಮಕೂರು: ಶಿವಕುಮಾರಮಹಾಶಿವಯೋಗಿ ಶ್ರೀಗಳು ಬಸವಾದಿ ಶರಣರ ಆಶಯಗಳನ್ನು ಆಚರಿಸಲು ಬದುಕನ್ನು ಮುಡಿಪಾಗಿಟ್ಟು ನುಡಿದಂತೆ ನಡೆದ ಮಹಾಯೋಗಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ಕರ್ನಾಟಕ ರತ್ನ ಶತಾಯುಷಿ ಪರಮಪೂಜ್ಯ ಡಾ.ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳ ಸ್ಮರಣಾರ್ಥ ನಿರ್ಮಿಸಿರುವ “ಸ್ಮೃತಿ ವನ” ವನ್ನು ಉದ್ಘಾಟಿಸಿ, ಶ್ರೀಗಳ 5 ನೇ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಶ್ರೀ ಶ್ರೀ ಶಿವಕುಮಾರಮಹಾಶಿವಯೋಗಿಗಳಿಗೆ ಭಾರತ ರತ್ನ ನೀಡಬೇಕು. ಇದಕ್ಕಾಗಿ ಕೇಂದ್ರಕ್ಕೆ ಪತ್ರ ಬರೆಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.

12 ನೇ ಶತಮಾನದಲ್ಲೇ ಬಸವಾದಿ ಶರಣರು ಜಾತಿ ರಹಿತ, ವರ್ಗ ರಹಿತ ಸಮಾನತಾ ಸಮಾಜ ನಿರ್ಮಾಣಕ್ಕಾಗಿ ಕ್ರಾಂತಿಯನ್ನೇ ಮಾಡಿದ್ದರು. ಮನುಷ್ಯ ಕುಲ ಇರುವವರೆಗೂ ಶಾಶ್ವತ ಆಗಿ ಉಳಿಯುವ ಸಂದೇಶ ಮತ್ತು ಮೌಲ್ಯಗಳನ್ನು ಬಿಟ್ಟು ಹೋಗಿದ್ದಾರೆ. ಈ ಮೌಲ್ಯಗಳನ್ನು ಪಾಲಿಸುವುದೇ ಬಸವಾದಿ ಶರಣರಿಗೆ ಸಲ್ಲಿಸುವ ಗೌರವ ಎಂದರು.‌

ಭಾರತ ಸಂವಿಧಾನದ ಆಶಯ ಮತ್ತು ಬಸವಾದಿ ಶರಣರ ಹೋರಾಟದ ಆಶಯ ಒಂದೇ ಆಗಿದೆ. ನಮಗೆ ಸಂವಿಧಾನ ಧರ್ಮಗ್ರಂಥ ಇದ್ದ ಹಾಗೆ. ಜನರ ಬದುಕನ್ನು ಎತ್ತಿರುವುದೇ ಈ ಸಂವಿಧಾನ ಎಂಬ ಧರ್ಮಗ್ರಂಥದ ಆಶಯ ಎಂದು ವಿವರಿಸಿದರು.

ಕಾಯಕ ಮತ್ತು ದಾಸೋಹ ಎರಡೂ ಜೀವನ ಮೌಲ್ಯಗಳು. ಈ ಮೌಲ್ಯಗಳನ್ನು ಪೂಜ್ಯರು ತಮ್ಮ ಬದುಕಿನುದ್ದಕ್ಕೂ ಆಚರಿಸಿದ್ದರು‌. ಇಂದು 10 ಸಾವಿರ ಮಕ್ಕಳಿಗೆ ಮಠದಲ್ಲಿ ವಿದ್ಯೆ, ವಸತಿ, ಅನ್ನ ಪಡೆಯುತ್ತಿದ್ದಾರೆ ಎಂದರೆ ಶಿವಕುಮಾರಮಹಾಯೋಗಿಗಳ ಬದುಕಿನ ಆಚರಣೆಯೇ ಕಾರಣ ಎಂದು ಮುಖ್ಯಮಂತ್ರಿಗಳು ಅಪಾರ ಮೆಚ್ಚುಗೆ ವ್ಯಕ್ತಪಡಿಸಿದರು.

ನಂಜುಂಡಪ್ಪ ಅವರ ವರದಿಯಂತೆ ಸರ್ಕಾರ ಕೆಲಸ ಮಾಡುತ್ತಿದೆ. ಕಾರ್ಯಕ್ರಮಗಳನ್ನು ರೂಪಿಸುವ ಮೂಲಕ ದಕ್ಷಿಣ ಮತ್ತು ಉತ್ತರ ಕರ್ನಾಟಕ ನಡುವಿನ ಅಭಿವೃದ್ಧಿಯ ತಾರತಮ್ಯವನ್ನು ಹೋಗಲಾಡಿಸಲು ಸರ್ಕಾರ ಶ್ರಮಿಸುತ್ತಿದೆ. ಶಿಕ್ಷಣದ ಮೂಲಕ ತಾರತಮ್ಯ ಮತ್ತು ಅಸಮಾನ ಪ್ರಜ್ಞೆಯನ್ನು ಅಳಿಸಲು ಸಾಧ್ಯವಿದೆ. ನಾನು ಬಸವಾದಿ ಶರಣರ ತತ್ವಾದರ್ಶಗಳು ಸಮಾಜದಲ್ಲಿ ಜಾರಿ ಆದಾಗ ಮಾತ್ರ ಸಮಾನ ಅವಕಾಶಗಳು ಸೃಷ್ಟಿಯಾಗಲು ಸಾಧ್ಯ ಎಂದರು.

ಶಿವಕುಮಾರ ಸ್ವಾಮಿಗಳು ಬದುಕಿನುದ್ದಕ್ಕೂ ಅಕ್ಷರ ಸಂಸ್ಕೃತಿ ಮೂಲಕ ಸಮಾಜದಲ್ಲಿ ಕ್ರಾಂತಿಕಾರಕ‌ ಬದಲಾವಣೆ ತರಲು ಶ್ರಮಿಸಿದರು‌. ಹೀಗಾಗಿ ಶ್ರೀಗಳ ಕಾರ್ಯ, ಕಾಳಜಿ ಮತ್ತು ಅವರ ನಡೆ-ನುಡಿ ಈ ಮಣ್ಣಿನಲ್ಲಿ ಅಜರಾಮರ ಆಗಿ ಉಳಿಯಲಿದೆ ಎಂದರು.

ಬಸವಾದಿ ಶರಣರ ಆಶಯದಂತೆ ನಮ್ಮ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಇದಕ್ಕಾಗಿ ವಾರ್ಷಿಕ 58 ಸಾವಿರ ಕೋಟಿ ರೂಪಾಯಿಗಳನ್ನು ನೀಡಲಾಗುತ್ತಿದೆ. ಇವೆಲ್ಲವೂ ಸಮಸಮಾಜದ ಆಶಯಗಳನ್ನು ಈಡೇರಿಸುವ ದಿಕ್ಕಿನಲ್ಲಿ ನಮ್ಮ ಸರ್ಕಾರ ಇಟ್ಟ ದಿಟ್ಟ ಹೆಜ್ಜೆಗಳಾಗಿವೆ ಎಂದು ವಿವರಿಸಿದರು.

ಪರಮಪೂಜ್ಯ ಸಿದ್ಧಲಿಂಗ ಮಹಾಸ್ವಸಮೀಜಿ, ತೋಂಟದಾರ್ಯ ಸಂಸ್ಥಾನ ಮಠದ ಡಾ.ಶ್ರೀ ತೋಂಟದ ಸಿದ್ಧರಾಮ ಮಹಾಸ್ವಾಮೀಜಿ, ಸಿದ್ಧಗಂಗಾ ಮಠದ ಉತ್ತರಾಧಿಕಾಧಿಕಾರಿಗಳಾದ ಶಿವ ಸಿದ್ಧೇಶ್ವರ ಸ್ವಾಮೀಜಿ ಅವರ ದಿವ್ಯ ಸಾನ್ನಿಧ್ಯದಲ್ಲಿ ಕಾರ್ಯಕ್ರಮಗಳು ನಡೆದವು.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಗೃಹ ಸಚಿವರಾದ ಜಿ.ಪರಮೇಶ್ವರ್, ಸಹಕಾರ ಸಚಿವ ಕೆ.ರಾಜಣ್ಣ, ಅರಣ್ಯ ಸಚಿವ ಈಶ್ವರ್ ಖಂಡ್ರೆ, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ಶಾಸಕರುಗಳಾದ ಜ್ಯೋತಿಗಣೇಶ್, ಸುರೇಶ್ ಗೌಡ, ಶ್ರೀನಿವಾಸ್ ಹಾಗೂ KRIDL ನ ಮಾಜಿ ಅಧ್ಯಕ್ಷ ಎಂ. ರುದ್ರೇಶ್ ಸೇರಿ ಹಲವು ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮಂಗಳೂರಿನಲ್ಲಿ ಮೊದಲಬಾರಿಗೆ ಪತ್ತೆಯಾಯ್ತು ಆಲಿವ್‌ ರಿಡ್ಲೆ ಮೊಟ್ಟೆ…

ಡೀಪ್‌ಫೇಕ್ ವಿಡಿಯೋ ಮಾಡಿದ ಆರೋಪಿ ಬಂಧನ- ರಶ್ಮಿಕಾ ಮಂದಣ್ಣ ಹೇಳಿದ್ದನು?

Share. Facebook Twitter LinkedIn WhatsApp Email

Related Posts

ಹಾಸನ: ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

09/05/2025 8:40 PM1 Min Read
Hassan Potato sowing seed sale begins

ಹಾಸನ: ಆಲೂಗೆಡ್ಡೆ ಬಿತ್ತನೆ ಬೀಜ ಮಾರಾಟಕ್ಕೆ ಚಾಲನೆ

09/05/2025 8:38 PM1 Min Read

BREAKING: ಸಾಮಾಜಿಕ ಸಮೀಕ್ಷಾ ವರದಿ ನಿರ್ಣಯ ಮುಂದೂಡಿಕೆ: ರಾಜ್ಯ ಸಚಿವ ಸಂಪುಟದ ನಿರ್ಣಯ

09/05/2025 8:38 PM1 Min Read
Recent News

ಹಾಸನ: ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

09/05/2025 8:40 PM
Hassan Potato sowing seed sale begins

ಹಾಸನ: ಆಲೂಗೆಡ್ಡೆ ಬಿತ್ತನೆ ಬೀಜ ಮಾರಾಟಕ್ಕೆ ಚಾಲನೆ

09/05/2025 8:38 PM

BREAKING: ಸಾಮಾಜಿಕ ಸಮೀಕ್ಷಾ ವರದಿ ನಿರ್ಣಯ ಮುಂದೂಡಿಕೆ: ರಾಜ್ಯ ಸಚಿವ ಸಂಪುಟದ ನಿರ್ಣಯ

09/05/2025 8:38 PM

ವಾಕಿ-ಟಾಕಿ ಮಾರಾಟ ನಿಷೇಧಿಸಿದ ಕೇಂದ್ರ ಸರ್ಕಾರ: ಅಮೆಜಾನ್, ಫ್ಲಿಪ್ಕಾರ್ಟ್, ಮೀಶೋ, ಒಎಲ್ಎಕ್ಸ್ಗೆ ಸಿಸಿಪಿಎ ನೋಟಿಸ್

09/05/2025 8:36 PM
State News
KARNATAKA

ಹಾಸನ: ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

By kannadanewsnow0709/05/2025 8:40 PM KARNATAKA 1 Min Read

ಹಾಸನ: ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್, ಹಾಸನ ಇಲ್ಲಿ 2025-26ನೇ ಸಾಲಿನ ಪ್ರಥಮ ವರ್ಷ ಡಿಪ್ಲೋಮಾ ಪ್ರವೇಶಕ್ಕಾಗಿ ಮೊದಲು ಬಂದವರಿಗೆ ಮೊದಲ…

Hassan Potato sowing seed sale begins

ಹಾಸನ: ಆಲೂಗೆಡ್ಡೆ ಬಿತ್ತನೆ ಬೀಜ ಮಾರಾಟಕ್ಕೆ ಚಾಲನೆ

09/05/2025 8:38 PM

BREAKING: ಸಾಮಾಜಿಕ ಸಮೀಕ್ಷಾ ವರದಿ ನಿರ್ಣಯ ಮುಂದೂಡಿಕೆ: ರಾಜ್ಯ ಸಚಿವ ಸಂಪುಟದ ನಿರ್ಣಯ

09/05/2025 8:38 PM

GOOD NEWS: ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ಸಿಎಂ ಸಿದ್ಧರಾಮಯ್ಯ ಸಿಹಿಸುದ್ದಿ: ಗೌರವಧನ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್

09/05/2025 8:34 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.