Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಿದ್ಯುತ್ ಗ್ರಾಹಕರೇ ಗಮನಿಸಿ : ವಿದ್ಯುತ್ ಮಾಪಕವನ್ನು 5 ಅಡಿ ಎತ್ತರದಲ್ಲಿ ಅಳವಡಿಸಿಕೊಳ್ಳಲು ಜೆಸ್ಕಾಂ ಸೂಚನೆ

24/10/2025 1:35 PM

BREAKING : ರಾಜ್ಯ ಸರ್ಕಾರದಿಂದ `UGC’ ವೇತನ ಶ್ರೇಣಿಯ ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : `ತುಟ್ಟಿಭತ್ಯೆ’ ಶೇ.58ಕ್ಕೆ ಹೆಚ್ಚಿಸಿ ಆದೇಶ

24/10/2025 1:30 PM

BREAKING : ರಾಜ್ಯದ `UGC, ICAR, AICTE’ ವೇತನ ಶ್ರೇಣಿಯ ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : `ತುಟ್ಟಿಭತ್ಯೆ’ ಹೆಚ್ಚಿಸಿ ಸರ್ಕಾರ ಆದೇಶ

24/10/2025 1:26 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಿಎಂ ಸಿದ್ಧರಾಮಯ್ಯ ಪತ್ನಿ ಮುಡಾ ಸೈಟ್ ವಾಪಾಸ್ ಕೊಟ್ಟಿದ್ದು ರಾಜಕೀಯ ನಾಟಕ: ರಾಜಕುಮಾರ ಪಾಟೀಲ ತೇಲ್ಕೂರ
KARNATAKA

ಸಿಎಂ ಸಿದ್ಧರಾಮಯ್ಯ ಪತ್ನಿ ಮುಡಾ ಸೈಟ್ ವಾಪಾಸ್ ಕೊಟ್ಟಿದ್ದು ರಾಜಕೀಯ ನಾಟಕ: ರಾಜಕುಮಾರ ಪಾಟೀಲ ತೇಲ್ಕೂರ

By kannadanewsnow0901/10/2024 5:02 PM

ಕಲಬುರಗಿ : ಹೈಕೋರ್ಟ್ ತೀರ್ಪು, ಜನಪ್ರತಿನಿಧಿಗಳ ಕೋರ್ಟಿನ ಆದೇಶದ ಬಳಿಕ ನಿನ್ನೆ ಇ.ಡಿ. ಕೇಸು ದಾಖಲಾಗಿದೆ. ರಾಜ್ಯಪಾಲರು ದೆಹಲಿಯ ಕೈಗೊಂಬೆ ಎನ್ನುತ್ತಿದ್ದ ಸಿದ್ದರಾಮಯ್ಯನವರು ನಿವೇಶನ ವಾಪಸ್ ನೀಡುತ್ತಿರುವುದು ಕಾನೂನಿನ ಕುಣಿಕೆಯಿಂದ ಪಾರಾಗುವ ಉದ್ದೇಶದಿಂದ ಎಂದು ರಾಜಕುಮಾರ ಪಾಟೀಲ ತೇಲ್ಕೂರ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿರುವ ಅವರು ಸಿದ್ದರಾಮಯ್ಯನವರು ತಪ್ಪು ಮಾಡಿದ್ದನ್ನು ಅಧಿಕೃತವಾಗಿ ಒಪ್ಪಿಕೊಂಡಂತಾಗಿದೆ. 2011ರಲ್ಲಿ ಅಂದಿನ ಸಿಎಂ ಆಗಿದ್ದ ಯಡಿಯೂರಪ್ಪ ಅವರ ವಿರುದ್ಧ ಆರೋಪ ಬಂದಿತ್ತು. ಆಗ, ತಪ್ಪು ಮಾಡದಿದ್ದರೆ ಯಾಕೆ ಸೈಟ್ ಸರೆಂಡರ್ ಮಾಡಿದ್ದಾರೆ ಎಂದು ಸಿದ್ದರಾಮಯ್ಯನವರು ಪ್ರಶ್ನಿಸಿದ್ದರು .ಕಳಂಕ, ಆರೋಪಿ ಸ್ಥಾನದಲ್ಲಿರುವ ಸಿದ್ದರಾಮಯ್ಯನವರು ಇನ್ನಾದರೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಅಲ್ಲದೆ, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವ ಮೊದಲು ಗೌರವಾನ್ವಿತ ರಾಜ್ಯಪಾಲರ ಬಳಿ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದಾರೆ.

ಸಿಎಂ ತಮ್ಮ ಸ್ಥಾನದಿಂದ ಇಳಿಯುವುದನ್ನೇ ಕಾಂಗ್ರೆಸ್ ಪಕ್ಷದ ಕೆಲವರು ಕಾಯುತ್ತಿದ್ದಾರೆ ಎಂದು ಮುಖ್ಯಮಂತ್ರಿಗಳ ಆಪ್ತರಾದ ಮಹದೇವಪ್ಪ ಅವರು ಹೇಳಿದ್ದಾರೆ. ಡಿಸಿಎಂ ಶಿವಕುಮಾರ್ ಅವರು ಗೌಪ್ಯವಾಗಿ ಪರಮೇಶ್ವರರನ್ನು ಭೇಟಿ ಮಾಡಿ ಅರ್ಧ ಗಂಟೆ ಚರ್ಚೆ ಮಾಡಿದ್ದಾರೆ. ಶಿವಕುಮಾರ್, ಪರಮೇಶ್ವರ್ ಅವರು, ಇನ್ನೂ ಕೂಡ ಸಿದ್ದರಾಮಯ್ಯರನ್ನು ರಕ್ಷಿಸಲು ಸಾಧ್ಯವಿಲ್ಲ; ಕಷ್ಟ ಆಗುತ್ತಿದೆ, ಪಕ್ಷಕ್ಕೂ ಮುಜುಗರ ಆಗುತ್ತಿದೆ. ಸಿದ್ದರಾಮಯ್ಯರು ಬೇಗ ರಾಜೀನಾಮೆ ಕೊಟ್ಟರೆ ಅಷ್ಟೇ ಒಳಿತೆಂಬ ವಿಚಾರ ಚರ್ಚೆ ಆಗಿದೆ ಎಂಬ ವಿಚಾರ ನಮಗೆ ಲಭಿಸಿದೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ರಾಜ್ಯದ ಭ್ರಷ್ಟ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಕಳೆದ 3-4 ತಿಂಗಳುಗಳಿಂದ ನಿರಂತರವಾಗಿ ಹೋರಾಟ ಮಾಡುತ್ತ ಬಂದಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿಯ ಹಗರಣ, ಮೈಸೂರು ಮುಡಾ ಹಗರಣ, ಎಸ್ಇಪಿ, ಟಿಎಸ್ಪಿ ಹಣದ ದುರುಪಯೋಗ-ಇವೆಲ್ಲ ವಿಚಾರಗಳನ್ನು ಇಟ್ಟುಕೊಂಡು ಹೋರಾಟ ನಡೆಸಿದ್ದೇವೆ. ಹಿಂದಿನ ಅವಧಿಯಲ್ಲಿ 5 ವರ್ಷ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯನವರು, ಭ್ರಷ್ಟಾಚಾರ ಆರೋಪ ಬಂದಾಗ ಲೋಕಾಯುಕ್ತಕ್ಕೆ ಬೀಗ ಹಾಕಿ, ಎಸಿಬಿ ಸ್ಥಾಪಿಸಿದ್ದರು. ಆರೋಪಗಳನ್ನು ಮುಚ್ಚಿ ಹಾಕಲು ಎಸಿಬಿಗೆ ತಮಗೆ ಬೇಕಾದ ಅಧಿಕಾರಿಗಳನ್ನು ನೇಮಿಸಿಕೊಂಡಿದ್ದರು. ಕೆಂಪಣ್ಣ ಆಯೋಗ ಸ್ಥಾಪಿಸಿದ್ದು, ಸಿದ್ದರಾಮಯ್ಯನವರ ವಿರುದ್ಧ ಗುರುತರ ಆರೋಪಗಳನ್ನು ವರದಿಯಲ್ಲಿ ಉಲ್ಲೇಖಿಸಿದ್ದರೂ ಸಿದ್ದರಾಮಯ್ಯನವರು ಕಣ್ಮುಚ್ಚಿ ಕುಳಿತಿದ್ದರು ಎಂದು ಟೀಕಿಸಿದರು.

ಭ್ರಷ್ಟಾಚಾರರಹಿತ ಆಡಳಿತ ಕೊಡುವುದಾಗಿ ಹೇಳಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯನವರ ನೇತೃತ್ವದ ರಾಜ್ಯದ ಕಾಂಗ್ರೆಸ್ ಸರಕಾರವು 187 ಕೋಟಿಯ ವಾಲ್ಮೀಕಿ ನಿಗಮದ ಹಗರಣ, ಮುಡಾ ಹಗರಣ ಮಾಡಿದೆ. ಮುಡಾ ಹಗರಣದಲ್ಲಿ ಅಕ್ರಮವಾಗಿ ಮುಖ್ಯಮಂತ್ರಿಗಳ ಧರ್ಮಪತ್ನಿ ಪಾರ್ವತಿಯವರಿಗೆ 14 ನಿವೇಶನ ನೀಡಿದ್ದು ಒಂದು ಕಡೆ ಇದ್ದರೆ, ಸಿದ್ದರಾಮಯ್ಯನವರು ಸಿಎಂ ಆದ ಬಳಿಕ ಮೈಸೂರು ಮುಡಾದಲ್ಲಿ ಸಾವಿರಾರು ಕೋಟಿ ಬೆಲೆಬಾಳುವ 5 ಸಾವಿರಕ್ಕೂ ಹೆಚ್ಚು ನಿವೇಶನಗಳನ್ನು ಅವರಿಗೆ ಬೇಕಾದ ಪುಡಾರಿಗಳು, ರಿಯಲ್ ಎಸ್ಟೇಟ್ ದಲ್ಲಾಳಿಗಳಿಗೆ ಕೊಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.

ವಿಧಾನ ಪರಿಷತ್ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರು ಆಯ್ಕೆ: ವಿಜಯೇಂದ್ರ ಅಭಿನಂದನೆ

BREAKING : ಬೆಳಗಾವಿಯಲ್ಲಿ ಹೃದಯ ವಿದ್ರಾವಕ ಘಟನೆ : 17 ತಿಂಗಳ ಮಗುವಿನೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ!

BREAKING: ಜಪ್ತಿ ಮಾಡಿದ್ದ ವಸ್ತು ವಾಪಾಸ್ ನೀಡದೇ ದುರುಪಯೋಗ: ಬೆಂಗಳೂರಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ವಿರುದ್ಧ FIR ದಾಖಲು

Share. Facebook Twitter LinkedIn WhatsApp Email

Related Posts

ವಿದ್ಯುತ್ ಗ್ರಾಹಕರೇ ಗಮನಿಸಿ : ವಿದ್ಯುತ್ ಮಾಪಕವನ್ನು 5 ಅಡಿ ಎತ್ತರದಲ್ಲಿ ಅಳವಡಿಸಿಕೊಳ್ಳಲು ಜೆಸ್ಕಾಂ ಸೂಚನೆ

24/10/2025 1:35 PM1 Min Read

BREAKING : ರಾಜ್ಯ ಸರ್ಕಾರದಿಂದ `UGC’ ವೇತನ ಶ್ರೇಣಿಯ ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : `ತುಟ್ಟಿಭತ್ಯೆ’ ಶೇ.58ಕ್ಕೆ ಹೆಚ್ಚಿಸಿ ಆದೇಶ

24/10/2025 1:30 PM1 Min Read

BREAKING : ರಾಜ್ಯದ `UGC, ICAR, AICTE’ ವೇತನ ಶ್ರೇಣಿಯ ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : `ತುಟ್ಟಿಭತ್ಯೆ’ ಹೆಚ್ಚಿಸಿ ಸರ್ಕಾರ ಆದೇಶ

24/10/2025 1:26 PM1 Min Read
Recent News

ವಿದ್ಯುತ್ ಗ್ರಾಹಕರೇ ಗಮನಿಸಿ : ವಿದ್ಯುತ್ ಮಾಪಕವನ್ನು 5 ಅಡಿ ಎತ್ತರದಲ್ಲಿ ಅಳವಡಿಸಿಕೊಳ್ಳಲು ಜೆಸ್ಕಾಂ ಸೂಚನೆ

24/10/2025 1:35 PM

BREAKING : ರಾಜ್ಯ ಸರ್ಕಾರದಿಂದ `UGC’ ವೇತನ ಶ್ರೇಣಿಯ ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : `ತುಟ್ಟಿಭತ್ಯೆ’ ಶೇ.58ಕ್ಕೆ ಹೆಚ್ಚಿಸಿ ಆದೇಶ

24/10/2025 1:30 PM

BREAKING : ರಾಜ್ಯದ `UGC, ICAR, AICTE’ ವೇತನ ಶ್ರೇಣಿಯ ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : `ತುಟ್ಟಿಭತ್ಯೆ’ ಹೆಚ್ಚಿಸಿ ಸರ್ಕಾರ ಆದೇಶ

24/10/2025 1:26 PM

BREAKING: ಬಾಲಿವುಡ್ ನಟರಾದ ಶ್ರೇಯಸ್ ತಲ್ಪಾಡೆ, ಅಲೋಕ್ ನಾಥ್ ಸೇರಿದಂತೆ 22 ಜನರ ವಿರುದ್ಧ ಪ್ರಕರಣ ದಾಖಲು

24/10/2025 1:16 PM
State News
KARNATAKA

ವಿದ್ಯುತ್ ಗ್ರಾಹಕರೇ ಗಮನಿಸಿ : ವಿದ್ಯುತ್ ಮಾಪಕವನ್ನು 5 ಅಡಿ ಎತ್ತರದಲ್ಲಿ ಅಳವಡಿಸಿಕೊಳ್ಳಲು ಜೆಸ್ಕಾಂ ಸೂಚನೆ

By kannadanewsnow5724/10/2025 1:35 PM KARNATAKA 1 Min Read

ಬಳ್ಳಾರಿ ನಗರ ಉಪವಿಭಾಗ-1 ಜೆಸ್ಕಾಂ ವ್ಯಾಪ್ತಿಯಲ್ಲಿ ಕಂಪನಿಯ ನಿಯಮಾನುಸಾರ ಎಲ್ಲಾ ಸ್ಥಾವರದಲ್ಲಿರುವ ಮೀಟರ್ಗಳನ್ನು ಆಪ್ಟಿಕಲ್ ಪ್ರೋಬ್ ಡಿವೈಸ್ ಮೂಲಕವೇ ರೀಡಿಂಗ್…

BREAKING : ರಾಜ್ಯ ಸರ್ಕಾರದಿಂದ `UGC’ ವೇತನ ಶ್ರೇಣಿಯ ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : `ತುಟ್ಟಿಭತ್ಯೆ’ ಶೇ.58ಕ್ಕೆ ಹೆಚ್ಚಿಸಿ ಆದೇಶ

24/10/2025 1:30 PM

BREAKING : ರಾಜ್ಯದ `UGC, ICAR, AICTE’ ವೇತನ ಶ್ರೇಣಿಯ ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : `ತುಟ್ಟಿಭತ್ಯೆ’ ಹೆಚ್ಚಿಸಿ ಸರ್ಕಾರ ಆದೇಶ

24/10/2025 1:26 PM

BREAKING : ಕರ್ನೂಲ್ `ಖಾಸಗಿ ಬಸ್ ಅಗ್ನಿ ದುರಂತ’ದಲ್ಲಿ ಬೆಂಗಳೂರಿನ ಯುವತಿ ಸಜೀವ ದಹನ.!

24/10/2025 1:08 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.