ವಿಜಯಪುರ: ಜಿಲ್ಲೆಯಲ್ಲಿ ಬುಲೆರೋ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಡಿಕ್ಕಿಯ ರಭಸಕ್ಕೆ ಬೈಕ್ ಸವಾರರ ರುಂಡ ದೇಹದಿಂದಲೇ ಬೇರ್ಪಟ್ಟಿದೆ.
ವಿಜಯಪುರ ಜಿಲ್ಲೆಯ ನಿಡಗುಂದಿ ಬಳಿಯಲ್ಲಿ ಬುಲೆರೋ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ರಾಯಚೂರು ಜಿಲ್ಲೆಯ ಜಕ್ಕೇರ ತಾಂಡಾದ ವಜ್ರಮುನಿ ಚೌವ್ಹಾಣ್ ಎಂಬಾತ ರುಂಡವೇ ದೇಹದಿಂದ ಬೇರ್ಪಟ್ಟಿದೆ.
ವಿಜಯಪುರಕ್ಕೆ ಕಬ್ಬು ಕಟಾವು ಮಾಡೋದಕ್ಕೆ ತೆರಳುತ್ತಿದ್ದಂತ ವೇಳೆಯಲ್ಲಿ ಈ ಅಪಘಾತ ಸಂಭವಿಸಿದೆ. ಬುಲೆರೋ ವಾಹನ ಡಿಕ್ಕಿಯಾದ ರಭಸಕ್ಕೆ ವಜ್ರಮುನಿ ದೇಹದಿಂದಲೇ ರುಂಡ ಹಾರಿ ಬೇರ್ಪಟ್ಟಿದೆ. ಸ್ಥಳಕ್ಕೆ ಆಗಮಿಸಿದಂತ ಬಸವನಬಾಗೇವಾಡಿ ಪೊಲೀಸರು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
‘BPL, APL ಕಾರ್ಡ್’ದಾರರೇ ಗಮನಿಸಿ: ಜ.31 ‘e-KYC’ಗೆ ಲಾಸ್ಟ್ ಡೇಟ್, ಮಾಡಿಸದಿದ್ರೆ ಬರಲ್ಲ ರೇಷನ್