Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಈ ಪುಡಿಯ ಒಂದೇ ಚಮಚದಿಂದ `ಶುಗರ್,ಬಿಪಿ’ ಎಲ್ಲವೂ ಕಂಟ್ರೋಲ್ ಮಾಡಬಹುದು !

17/02/2026 7:53 AM

‘ಮುಂದಿನ ವಾರ ಪ್ರಧಾನಿ ಮೋದಿ ಇಸ್ರೇಲ್ ಗೆ ಭೇಟಿ ನೀಡಲಿದ್ದಾರೆ’: ಬೆಂಜಮಿನ್ ನೆತನ್ಯಾಹು

17/02/2026 7:42 AM

BREAKING : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಕೃತ್ಯ : ಆಸ್ತಿಗಾಗಿ ತಂದೆಯನ್ನೇ ಹತ್ಯೆಗೈದ ಇಬ್ಬರು ಪಾಪಿ ಪುತ್ರರು !

17/02/2026 7:40 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಭವಿಷ್ಯದ ನಗರ ಬೆಂಗಳೂರಿಗೆ ಬನ್ನಿ, ಬಂಡವಾಳ ಹೂಡಿಕೆ ಮಾಡಿ: ದಾವೋಸ್ ನಲ್ಲಿ ಉದ್ಯಮಿಗಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ
KARNATAKA

ಭವಿಷ್ಯದ ನಗರ ಬೆಂಗಳೂರಿಗೆ ಬನ್ನಿ, ಬಂಡವಾಳ ಹೂಡಿಕೆ ಮಾಡಿ: ದಾವೋಸ್ ನಲ್ಲಿ ಉದ್ಯಮಿಗಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ

By kannadanewsnow0921/01/2026 6:02 PM

ದಾವೋಸ್ : “ಬೆಂಗಳೂರು ಭವಿಷ್ಯದ ನಗರ. ಇಲ್ಲಿನ ಹವಾಗುಣ, ಸಂಸ್ಕೃತಿ, ಮಾನವ ಸಂಪನ್ಮೂಲ ಅತ್ಯುತ್ತಮವಾಗಿದೆ. ವಿಶ್ವದ ಅನೇಕ ಕಂಪನಿಗಳು ಇಲ್ಲಿ ಕೆಲಸ ಮಾಡಿ ಬೆಳೆಯುತ್ತಿವೆ. ನೀವೆಲ್ಲರೂ ಬೆಂಗಳೂರಿಗೆ ಬನ್ನಿ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ವಿಶ್ವದ ಉದ್ಯಮಿಗಳಿಗೆ ಆಹ್ವಾನ ನೀಡಿದರು.

ದಾವೋಸ್ ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಂ ಸಮ್ಮೇಳನದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬುಧವಾರ ಮಾತನಾಡಿದರು.

“ಬೆಂಗಳೂರಿನಲ್ಲಿ ಅತ್ಯುತ್ತಮ ಮಾನವ ಸಂಪನ್ಮೂಲವಿದ್ದು, ವಿಶ್ವದ ಪ್ರತಿಷ್ಠಿತ 500 ಕಂಪನಿಗಳು ಬೆಂಗಳೂರಿನಲ್ಲಿವೆ. ಏರೋಸ್ಪೆಸ್, ಐಟಿ, ಮೆಡಿಕಲ್ ಸೇರಿದಂತೆ ಇತರೆ ಕ್ಷೇತ್ರಗಳಲ್ಲಿ ಇಲ್ಲಿನ ಮಾನವ ಸಂಪನ್ಮೂಲ ಕೌಶಲ್ಯ ಹೊಂದಿದೆ. ಕರ್ನಾಟಕದಲ್ಲಿ 70 ಮೆಡಿಕಲ್ ಕಾಲೇಜುಗಳಿದ್ದು, ಪ್ರತಿವರ್ಷ 1.50 ಲಕ್ಷ ಆರೋಗ್ಯ ಕ್ಷೇತ್ರದ ಸಿಬ್ಬಂದಿ ತಯಾರಾಗುತ್ತಿದ್ದಾರೆ. ಜತೆಗೂಡುವುದು ಆರಂಭ, ಜತೆಗೂಡಿ ಚರ್ಚಿಸುವುದು ಪ್ರಗತಿ, ಜತೆಗೂಡಿ ಕೆಲಸ ಮಾಡುವುದು ಯಶಸ್ಸು. ಎಲ್ಲರೂ ಒಟ್ಟಾಗಿ ಸೇರಿ ಪ್ರಗತಿಯತ್ತ ಸಾಗೋಣ” ಎಂದು ತಿಳಿಸಿದರು.

“ಭಾರತ ಹೆಚ್ಚು ಜನಸಂಖ್ಯೆ ಹೊಂದಿರುವ ಪ್ರತಿಭಾವಂತರ ದೇಶ. ನಮ್ಮ ದೇಶ ಮುಂದಿನ 25 ವರ್ಷಗಳಿಗೆ ತಯಾರಿ ನಡೆಸುತ್ತಿದೆ. ನಾನು ಬೆಂಗಳೂರಿನಿಂದ ಬಂದಿದ್ದು, ಇಡೀ ವಿಶ್ವ ಭಾರತವನ್ನು ಬೆಂಗಳೂರು ಮೂಲಕ ನೋಡುತ್ತಿದೆ” ಎಂದು ಹೇಳಿದರು.

“ಬೆಂಗಳೂರು ಏಷ್ಯಾದ ಐಟಿ ರಾಜಧಾನಿಯಾಗಿದೆ. ಭಾರತದಲ್ಲಿ ನಗರಗಳಲ್ಲಿನ ಜನಸಂಖ್ಯೆ ಸುಮಾರು 40%ಗೆ ತಲುಪಿದ್ದು, ಮುಂದಿನ 25 ವರ್ಷಗಳಲ್ಲಿ 50%ಗೆ ಏರಿಕೆಯಾಗುವ ನಿರೀಕ್ಷೆ ಇದೆ. ಇದಕ್ಕೆ ನಾವು ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ” ಎಂದು ವಿವರಿಸಿದರು.

“ಜಾಗತಿಕ ಐಟಿ ರಾಜಧಾನಿ ಕ್ಯಾಲಿಫೋರ್ನಿಯದಲ್ಲಿ 13 ಲಕ್ಷ ಇಂಜಿನಿಯರ್ ವೃತ್ತಿಪರರು ಇದ್ದರೆ, ಬೆಂಗಳೂರಿನಲ್ಲಿ 25 ಲಕ್ಷ ಇಂಜಿನಿಯರಿಂಗ್ ವೃತ್ತಿಪರರು ಇದ್ದಾರೆ. ಇದು ಬೆಂಗಳೂರಿನ ಶಕ್ತಿ. ವಿಶ್ವದ ನಾಯಕರು ಹಾಗೂ ಉದ್ಯಮಿಗಳು ಬೆಂಗಳೂರಿನತ್ತ ಆಕರ್ಷಿತರಾಗಿದ್ದಾರೆ. ಹೀಗಾಗಿ ಬೆಂಗಳೂರಿನ ಸಂಚಾರ ಹಾಗೂ ಮೂಲಭೂತ ಸೌಕರ್ಯ ವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ” ಎಂದು ತಿಳಿಸಿದರು.

“ಮುಂದಿನ ವರ್ಷದ ವೇಳೆಗೆ ಬೆಂಗಳೂರಿನಲ್ಲಿ ಮೆಟ್ರೋ ಸಂಪರ್ಕ 153 ಕಿ.ಮೀ.ಗೆ ವಿಸ್ತರಣೆಯಾಗಲಿದೆ. ಇನ್ನು ಬೆಂಗಳೂರಿನ ಸಾರ್ವಜನಿಕ ಸಾರಿಗೆಯಲ್ಲಿ ಬಸ್ ವ್ಯವಸ್ಥೆ ಅತ್ಯುತ್ತಮವಾಗಿದೆ. 6000 ಬಸ್ ಗಳು ಬೆಂಗಳೂರಿನಲ್ಲಿದ್ದು, ಇದರಲ್ಲಿ 2500 ಎಲೆಕ್ಟ್ರಿಕ್ ಬಸ್ ಗಳು ಇವೆ. ಕರ್ನಾಟಕದಲ್ಲಿ ದಕ್ಷ ಆಡಳಿತವಿದ್ದು, ಎಲ್ಲಾ ರೀತಿಯ ಸಹಕಾರ ನೀಡಲಾಗುವುದು” ಎಂದರು.

“ಕರ್ನಾಟಕದಲ್ಲಿ ಬೆಂಗಳೂರಿನ ಜತೆಗೆ ಎರಡು ಹಾಗೂ ಮೂರನೇ ಹಂತದ ನಗರಗಳಲ್ಲೂ ಉತ್ತಮ ಸಂಚಾರ ವ್ಯವಸ್ಥೆ ಕಲ್ಪಿಸಲಾಗಿದೆ. ನಾವು 2045ರ ಗುರಿ ಇಟ್ಟುಕೊಂಡು ಇಡೀ ರಾಜ್ಯದಲ್ಲಿ ಸಾರಿಗೆ ಸಂಪರ್ಕ ಅಭಿವೃದ್ಧಿಪಡಿಸಲಾಗುತ್ತಿದೆ” ಎಂದು ತಿಳಿಸಿದರು.

BREAKING: ರಾಜ್ಯದಲ್ಲಿ ವಾಹನಗಳ FC, ಸಾಗರೇತರ ನೋಂದಣಿ ನವೀಕರಣಕ್ಕೆ ಮಾರ್ಗಸೂಚಿ ಪ್ರಕಟ: ಈ ನಿಯಮ ಪಾಲನೆ ಕಡ್ಡಾಯ

Share. Facebook Twitter LinkedIn WhatsApp Email

Related Posts

ಈ ಪುಡಿಯ ಒಂದೇ ಚಮಚದಿಂದ `ಶುಗರ್,ಬಿಪಿ’ ಎಲ್ಲವೂ ಕಂಟ್ರೋಲ್ ಮಾಡಬಹುದು !

17/02/2026 7:53 AM2 Mins Read

BREAKING : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಕೃತ್ಯ : ಆಸ್ತಿಗಾಗಿ ತಂದೆಯನ್ನೇ ಹತ್ಯೆಗೈದ ಇಬ್ಬರು ಪಾಪಿ ಪುತ್ರರು !

17/02/2026 7:40 AM1 Min Read

ಈ ಎಲೆಗಳನ್ನು ಕಡಿಮೆ ಅಂದಾಜು ಮಾಡಬೇಡಿ : ಇವು ಮಧುಮೇಹ ಸೇರಿ ಹಲವು ಸಮಸ್ಯೆಗಳಿಗೆ ರಾಮಬಾಣ !

17/02/2026 7:25 AM1 Min Read
Recent News

ಈ ಪುಡಿಯ ಒಂದೇ ಚಮಚದಿಂದ `ಶುಗರ್,ಬಿಪಿ’ ಎಲ್ಲವೂ ಕಂಟ್ರೋಲ್ ಮಾಡಬಹುದು !

17/02/2026 7:53 AM

‘ಮುಂದಿನ ವಾರ ಪ್ರಧಾನಿ ಮೋದಿ ಇಸ್ರೇಲ್ ಗೆ ಭೇಟಿ ನೀಡಲಿದ್ದಾರೆ’: ಬೆಂಜಮಿನ್ ನೆತನ್ಯಾಹು

17/02/2026 7:42 AM

BREAKING : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಕೃತ್ಯ : ಆಸ್ತಿಗಾಗಿ ತಂದೆಯನ್ನೇ ಹತ್ಯೆಗೈದ ಇಬ್ಬರು ಪಾಪಿ ಪುತ್ರರು !

17/02/2026 7:40 AM

ಅಮೇರಿಕಾದಲ್ಲಿ ಉನ್ನತ ಕೌಶಲ್ಯ ಹೊಂದಿರುವ ಕ್ಷೇತ್ರಗಳಲ್ಲಿ ಕೆಲಸ ಮಾಡುವ ಭಾರತೀಯರು ವರ್ಣಭೇದ ವಿರೋಧಕ್ಕೆ ಗುರಿಯಾಗಿದ್ದಾರೆ: ವರದಿ

17/02/2026 7:36 AM
State News
KARNATAKA

ಈ ಪುಡಿಯ ಒಂದೇ ಚಮಚದಿಂದ `ಶುಗರ್,ಬಿಪಿ’ ಎಲ್ಲವೂ ಕಂಟ್ರೋಲ್ ಮಾಡಬಹುದು !

By kannadanewsnow5717/02/2026 7:53 AM KARNATAKA 2 Mins Read

ಮೆಂತ್ಯದಲ್ಲಿ ಕ್ಯಾರೆಟ್’ಗಿಂತ ಹೆಚ್ಚಿನ ವಿಟಮಿನ್ ಎ ಮತ್ತು ಹಾಲಿಗಿಂತ ಹೆಚ್ಚಿನ ಕ್ಯಾಲ್ಸಿಯಂ ಇದೆ. ಈ ಸೂಪರ್‌ಫುಡ್ ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ…

BREAKING : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಕೃತ್ಯ : ಆಸ್ತಿಗಾಗಿ ತಂದೆಯನ್ನೇ ಹತ್ಯೆಗೈದ ಇಬ್ಬರು ಪಾಪಿ ಪುತ್ರರು !

17/02/2026 7:40 AM

ಈ ಎಲೆಗಳನ್ನು ಕಡಿಮೆ ಅಂದಾಜು ಮಾಡಬೇಡಿ : ಇವು ಮಧುಮೇಹ ಸೇರಿ ಹಲವು ಸಮಸ್ಯೆಗಳಿಗೆ ರಾಮಬಾಣ !

17/02/2026 7:25 AM

ಕೀಲು ನೋವು, ಬೆನ್ನು ನೋವು? ವಾರದಲ್ಲಿ 2 ದಿನ ಇದನ್ನು ಸೇವಿಸಿದ್ರೆ ಎಲ್ಲಾ ಸಮಸ್ಯೆಗಳಿಗೂ ಪರಿಹಾರ !

17/02/2026 7:17 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.