ಹಾಸನ : ಹಾಸನದಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಹಾಸನ ಹೊರವಲಯದ ಗೆಂಡೆಕಟ್ಟೆ ಅರಣ್ಯದಲ್ಲಿ ಈ ಒಂದು ಘಟನೆ ನಡೆದಿದ್ದು, ಬಟ್ಟೆ ಬಿಚ್ಚಿ ಭರತ ಎನ್ನುವ ಯುವಕನ ಮೇಲೆ ಯುವಕರ ಗುಂಪು ಹಲ್ಲೆ ಮಾಡಿದೆ.
ಈ ಒಂದು ಘಟನೆಗೆ ಯುವತಿ ಹಾಗು ಹಣದ ವಿಚಾರಕ್ಕೆ ಈ ಒಂದು ಗ್ಯಾಂಗ್ ಹಲ್ಲೆ ನಡೆಸಿರುವ ಅನುಮಾನ ವ್ಯಕ್ತವಾಗಿದೆ. ಯುವಕ ಭರತ್ ಎಷ್ಟೇ ಬೇಡಿಕೊಂಡರೂ ಕೂಡ ಕಿಡಿಗೇಡಿಗಳು ಆತನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಘಟನೆ ಕುರಿತಂತೆ ಬಡಾವಣೆ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ
		







