Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಲದ ನಿರೀಕ್ಷೆಯಲ್ಲಿರುವವರಿಗೆ ಗುಡ್ ನ್ಯೂಸ್ : ಇನ್ಮುಂದೆ ಚಿನ್ನದಂತೆ ‘ಬೆಳ್ಳಿ ಸಾಲ’ ಪಡೆಯಬಹುದು, ‘RBI’ ಹೊಸ ಸುತ್ತೋಲೆ.!

09/11/2025 6:06 AM

ರಾಜ್ಯದ ಪಡಿತರ ಚೀಟಿದಾರರಿಗೆ ಶಾಕ್ : 6 ತಿಂಗಳಿಂದ ಸಿಗದ ಕಮಿಷನ್, ನವೆಂಬರ್ ನಲ್ಲಿ `ಪಡಿತರ ವಿತರಣೆ’ ಬಂದ್.!

09/11/2025 6:01 AM

ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಆರೋಗ್ಯ ಸಂಜೀವಿನಿ’ ಮಾಹಿತಿಗಾಗಿ ಜಸ್ಟ್ ಈ ಸಂಖ್ಯೆಗೆ ಕರೆ ಮಾಡಿ

09/11/2025 5:53 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ: ಪಾರದರ್ಶಕವಾಗಿ, ಕರಾರುವಕ್ಕಾಗಿ, ನಿಯಮಾನುಸಾರ ಮಾಡಲು ಡಿಸಿ ಸೂಚನೆ
KARNATAKA

ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ: ಪಾರದರ್ಶಕವಾಗಿ, ಕರಾರುವಕ್ಕಾಗಿ, ನಿಯಮಾನುಸಾರ ಮಾಡಲು ಡಿಸಿ ಸೂಚನೆ

By kannadanewsnow0928/04/2025 4:13 PM

ಧಾರವಾಡ : ನ್ಯಾಯಮೂರ್ತಿ ಡಾ.ಎಚ್.ಎಸ್.ನಾಗಮೋಹನದಾಸ ಏಕ ಸದಸ್ಯವಿಚಾರಣಾ ಆಯೋಗದ ಸೂಚನೆ ಪ್ರಕಾರ ಈಗಾಗಲೇ ಗುರುತಿಸಿರುವ 101 ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಯಡಿ, ಉಪ ಜಾತಿಗಳ ಸಮೀಕ್ಷೆ ಮೇ 5 ರಿಂದ ಆರಂಭವಾಗಲಿದೆ. ಸಮೀಕ್ಷೆದಾರರು ಯಾವುದೇ ಒತ್ತಡ, ಪ್ರಭಾವಗಳಿಗೆ ಒಳಗಾಗದೇ, ಅಗತ್ಯ ದಾಖಲೆಗಳ ಅನುಸಾರ ಕರಾರುವಕ್ಕಾಗಿ ಮತ್ತು ನಿಯಮಗಳ ಅನುಸಾರ ಸಮೀಕ್ಷೆ ಮಾಡಬೇಕೆಂದು ತಿಳಿಸಿದರು.

ಅವರು ಇಂದು ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಸಮೀಕ್ಷೆದಾರರ ತರಬೇತಿ ಕಾರ್ಯಾಗಾರ ಉದ್ಘಾಟಿಸಿ, ಮಾತನಾಡಿದರು.

ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025 ರಡಿ, ಉಪಜಾತಿಗಳ ಸಮೀಕ್ಷೆಯನ್ನು ಸರಕಾರವು ಅಭಿವೃದ್ಧಿಪಡಿಸಿರುವ ಆ್ಯಪ್ ಮೂಲಕ ಸಮಾಜ ಕಲ್ಯಾಣ ಇಲಾಖೆ ನೇತೃತ್ವದಲ್ಲಿ ಶಿಕ್ಷಣ ಇಲಾಖೆಯ ಶಿಕ್ಷಕರಿಂದ ಮೂರು ಹಂತಗಳಲ್ಲಿ ಮಾಡಲು ಸೂಚಿಸಲಾಗಿದೆ.

ಮೇ 5 ರಿಂದ 17 ರವರೆಗೆ ಮೊದಲ ಹಂತದಲ್ಲಿ ಸಮೀಕ್ಷೆದಾರರು ಪರಿಶಿಷ್ಟ ಜಾತಿಯವರ ಮನೆಮನೆ ಭೇಟಿ ಮೂಲಕ ಸಮೀಕ್ಷೆ ಮಾಡಿ, ಮಾಹಿತಿ ದಾಖಲಿಸಲಿದ್ದಾರೆ.

ಮೇ 19 ರಿಂದ 21 ರವರೆಗೆ ಎರಡನೇಯ ಹಂತದಲ್ಲಿ ಸಮೀಕ್ಷೆಯಲ್ಲಿ ಉಳಿದವರಿಗಾಗಿ ಮತಗಟ್ಟೆ ಮಟ್ಟದಲ್ಲಿ ಸಮೀಕ್ಷೆದಾರರು ವಿಶೇಷ ಶಿಬಿರ ಆಯೋಜಿಸಿ ಮಾಹಿತಿ ಸಂಗ್ರಹಿಸಿ, ದಾಖಲಿಸುತ್ತಾರೆ. ಮತ್ತು ಮೂರನೇಯ ಹಂತದಲ್ಲಿ ಮೇ 19 ರಿಂದ 23 ರ ವರೆಗೆ ಸಮೀಕ್ಷೆಯಲ್ಲಿ ಹಾಜರಾಗದ, ಬಿಟ್ಟು ಹೋದ ಪರಿಶಿಷ್ಟ ಜಾತಿಯ ಜನರು ಸ್ವತಃ ತಾವೇ ಆನ್ ಲೈನ ಮೂಲಕ ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದರು.

ಸಮೀಕ್ಷೆದಾರರ ಸಹಾಯಕ್ಕಾಗಿ ಕಂಟ್ರೋಲ್ ರೂಮ್:

ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ 2025 ನ್ನು ನಿಗದಿತ ಅವಧಿಯೊಳಗೆ ಮಾಡಬೇಕಿರುವದರಿಂದ ಕ್ಷೇತ್ರಮಟ್ಟದಲ್ಲಿ ಸಮೀಕ್ಷೆದಾರರಿಗೆ ಉಂಟಾಗುವ ಗೊಂದಲ ಹಾಗೂ ತಾಂತ್ರಿಕ ಸಮಸ್ಯೆಗಳನ್ನು ತಕ್ಷಣ ಸ್ಪಂಧಿಸಿ, ಬಗೆ ಹರಿಸಲು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ದಿನದ 24 ಗಂಟೆ ಕಾರ್ಯನಿರ್ವಹಿಸುವ ಕಂಟ್ರೋಲ್ ರೂಮ್ ತೆರೆಯಲಾಗಿದೆ. ಅಲ್ಲಿನ ಸಹಾಯವಾಣಿಗೆ ಕರೆ ಮಾಡಿ, ಸಮೀಕ್ಷೆದಾರರು ಸಹಾಯ ಪಡೆಯಬಹುದು ಎಂದು ಹೇಳಿದರು.

ಕಂಟ್ರೋಲ್ ರೂಮ್ ಸಿಬ್ಬಂದಿಗಳು ತಾವು ಸ್ವೀಕರಿಸುವ ಪ್ರತಿ ಕರೆಗಳನ್ನು ದಾಖಲಿಸಿ, ವಿವರ ಬರೆಯಬೇಕು. ಪರಿಹಾರ ನೀಡಿರುವ ಬಗ್ಗೆ ದಾಖಲಿಸಬೇಕು ಎಂದರು.

ಈ ಸಮೀಕ್ಷೆಯೂ ಮೂಲ ದತ್ತಾಂಶಗಳನ್ನು ಸಂಗ್ರಹಿಸುವದಾಗಿರುವದರಿಂದ ಅತೀ ಮುಖ್ಯವಾಗಿದೆ. ಸಮೀಕ್ಷೆಯೂ ಪಾರದರ್ಶಕವಾಗಿ, ಸಮರ್ಪಕವಾಗಿ ನಡೆಯಬೇಕು. ಈ ನಿಟ್ಟಿನಲ್ಲಿ ತರಬೇತಿ ಪೂರ್ಣಪ್ರಮಾಣದಲ್ಲಿ ಆಗಬೇಕು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಪಿ.ಶುಭ ಅವರು ವೇದಿಕೆಯಲ್ಲಿದ್ದರು.

ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.

ರಾಜ್ಯಮಟ್ಟದ ಸಂಪನ್ಮೂಲ ವ್ಯಕ್ತಿಗಳು ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ 2025 ನಡೆಸುವ ಕುರಿತು ಆ್ಯಪ್ ಮೂಲಕ ಸಮೀಕ್ಷೆ ಮಾಡುವ ಬಗ್ಗೆ ತರಬೇತಿ ನೀಡಿದರು.

ಕಾರ್ಯಾಗಾರದಲ್ಲಿ ಎಲ್ಲ ತಾಲೂಕಿನ ತಹಶಿಲ್ದಾರರು, ಶಿಶು ಅಭಿವೃದ್ಧಿ ಅಧಿಕಾರಿಗಳು, ಕ್ಷೇತ್ರಶಿಕ್ಷಣಾಧಿಕಾರಿಗಳು ಮತ್ತು ಶಿಕ್ಷಣ ಇಲಾಖೆಯಿಂದ ಸಮೀಕ್ಷೆ ಕಾರ್ಯಕ್ಕೆ ನಿಯೋಜನೆಗೊಂಡವರು ಭಾಗವಹಿಸಿದ್ದರು.

18 ಶಾಸಕರ ಅಮಾನತು ರದ್ದು ಪಡಿಸಲು ಮಧ್ಯಸ್ಥಿಕೆ ವಹಿಸಲು ರಾಜ್ಯಪಾಲರಿಗೆ ‘ಬಿಜೆಪಿ ನಿಯೋಗ’ ಮನವಿ

BIG NEWS : ಬೆಂಗಳೂರಿನ ‘ನಮ್ಮ ಮೆಟ್ರೋ’ದಲ್ಲಿ ಊಟ ಮಾಡಿದ ಮಹಿಳೆಗೆ 500 ರೂ.ದಂಡ : ‘BMRCL’ ಮಹತ್ವದ ಪ್ರಕಟಣೆ.!

Share. Facebook Twitter LinkedIn WhatsApp Email

Related Posts

ರಾಜ್ಯದ ಪಡಿತರ ಚೀಟಿದಾರರಿಗೆ ಶಾಕ್ : 6 ತಿಂಗಳಿಂದ ಸಿಗದ ಕಮಿಷನ್, ನವೆಂಬರ್ ನಲ್ಲಿ `ಪಡಿತರ ವಿತರಣೆ’ ಬಂದ್.!

09/11/2025 6:01 AM1 Min Read

ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಆರೋಗ್ಯ ಸಂಜೀವಿನಿ’ ಮಾಹಿತಿಗಾಗಿ ಜಸ್ಟ್ ಈ ಸಂಖ್ಯೆಗೆ ಕರೆ ಮಾಡಿ

09/11/2025 5:53 AM1 Min Read

ಶಿವಮೊಗ್ಗ: ಸಾಗರ ‘ಬೆಳೆಯೂರು ಶಾಲೆ’ಯಲ್ಲಿ ಊಟದ ವಿಚಾರದಲ್ಲಿ ‘ಜಾತಿ ತಾರತಮ್ಯ’, ಪ್ರಶ್ನಿಸಿದ್ದಕ್ಕೆ ಬೆದರಿಕೆ

08/11/2025 10:18 PM2 Mins Read
Recent News

ಸಾಲದ ನಿರೀಕ್ಷೆಯಲ್ಲಿರುವವರಿಗೆ ಗುಡ್ ನ್ಯೂಸ್ : ಇನ್ಮುಂದೆ ಚಿನ್ನದಂತೆ ‘ಬೆಳ್ಳಿ ಸಾಲ’ ಪಡೆಯಬಹುದು, ‘RBI’ ಹೊಸ ಸುತ್ತೋಲೆ.!

09/11/2025 6:06 AM

ರಾಜ್ಯದ ಪಡಿತರ ಚೀಟಿದಾರರಿಗೆ ಶಾಕ್ : 6 ತಿಂಗಳಿಂದ ಸಿಗದ ಕಮಿಷನ್, ನವೆಂಬರ್ ನಲ್ಲಿ `ಪಡಿತರ ವಿತರಣೆ’ ಬಂದ್.!

09/11/2025 6:01 AM

ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಆರೋಗ್ಯ ಸಂಜೀವಿನಿ’ ಮಾಹಿತಿಗಾಗಿ ಜಸ್ಟ್ ಈ ಸಂಖ್ಯೆಗೆ ಕರೆ ಮಾಡಿ

09/11/2025 5:53 AM

ಶಿವಮೊಗ್ಗ: ಸಾಗರ ‘ಬೆಳೆಯೂರು ಶಾಲೆ’ಯಲ್ಲಿ ಊಟದ ವಿಚಾರದಲ್ಲಿ ‘ಜಾತಿ ತಾರತಮ್ಯ’, ಪ್ರಶ್ನಿಸಿದ್ದಕ್ಕೆ ಬೆದರಿಕೆ

08/11/2025 10:18 PM
State News
KARNATAKA

ರಾಜ್ಯದ ಪಡಿತರ ಚೀಟಿದಾರರಿಗೆ ಶಾಕ್ : 6 ತಿಂಗಳಿಂದ ಸಿಗದ ಕಮಿಷನ್, ನವೆಂಬರ್ ನಲ್ಲಿ `ಪಡಿತರ ವಿತರಣೆ’ ಬಂದ್.!

By kannadanewsnow5709/11/2025 6:01 AM KARNATAKA 1 Min Read

ಬೆಂಗಳೂರು : ರಾಜ್ಯದ ಪಡಿತರ ಚೀಟಿದಾರರಿಗೆ ನವೆಂಬರ್ ತಿಂಗಳ ಪಡಿತರ ಸಿಗುವುದು ಅನುಮಾನ ಎನ್ನಲಾಗಿದೆ. ರಾಜ್ಯ ಸರ್ಕಾರದಿಂದ ಕಮಿಷನ್ ಬರದಿದ್ದರಿಂದ…

ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಆರೋಗ್ಯ ಸಂಜೀವಿನಿ’ ಮಾಹಿತಿಗಾಗಿ ಜಸ್ಟ್ ಈ ಸಂಖ್ಯೆಗೆ ಕರೆ ಮಾಡಿ

09/11/2025 5:53 AM

ಶಿವಮೊಗ್ಗ: ಸಾಗರ ‘ಬೆಳೆಯೂರು ಶಾಲೆ’ಯಲ್ಲಿ ಊಟದ ವಿಚಾರದಲ್ಲಿ ‘ಜಾತಿ ತಾರತಮ್ಯ’, ಪ್ರಶ್ನಿಸಿದ್ದಕ್ಕೆ ಬೆದರಿಕೆ

08/11/2025 10:18 PM

ದೀನದಲಿತರ ಬಗ್ಗೆ ಕಾಳಜಿ ಹೊಂದಿದ್ದವರು ಸಿಎಂ ಸಿದ್ದರಾಮಯ್ಯ ಮಾತ್ರ: ಸಚಿವ ಶಿವರಾಜ್ ತಂಗಡಗಿ

08/11/2025 10:01 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.