Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಡ್ ರೆಸ್ಟ್ ಮಾಡುವ ಅವಶ್ಯಕತೆಯಿಲ್ಲ, ನೀವು ಈ ಅಭ್ಯಾಸ ತ್ಯಜಿಸಿ ಬೆನ್ನುನೋವಿಗೆ ವಿದಾಯ ಹೇಳಿ!

28/07/2025 10:03 PM

ಸಾಗರದಲ್ಲಿ ಅರಣ್ಯದಲ್ಲಿ ಜಾನುವಾರು ಮೇಯಿಸಲು ನಿಷೇಧ ಆದೇಶಕ್ಕೆ ಖಂಡನೆ: ವಿನೂತನ ರೀತಿಯಲ್ಲಿ ಪ್ರತಿಭಟನೆ

28/07/2025 10:02 PM

ವ್ಯಾಮೋಹಕ್ಕೆ ಒಳಗಾಗಿ ಶಿಥಿಲವಾದ ಮನೆಗಳಲ್ಲಿ ವಾಸ ಮಾಡಬೇಡಿ: ಶಾಸಕ ಗೋಪಾಲಕೃಷ್ಣ ಬೇಳೂರು ಕಿವಿಮಾತು

28/07/2025 9:55 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಾಗರದಲ್ಲಿ ಅರಣ್ಯದಲ್ಲಿ ಜಾನುವಾರು ಮೇಯಿಸಲು ನಿಷೇಧ ಆದೇಶಕ್ಕೆ ಖಂಡನೆ: ವಿನೂತನ ರೀತಿಯಲ್ಲಿ ಪ್ರತಿಭಟನೆ
KARNATAKA

ಸಾಗರದಲ್ಲಿ ಅರಣ್ಯದಲ್ಲಿ ಜಾನುವಾರು ಮೇಯಿಸಲು ನಿಷೇಧ ಆದೇಶಕ್ಕೆ ಖಂಡನೆ: ವಿನೂತನ ರೀತಿಯಲ್ಲಿ ಪ್ರತಿಭಟನೆ

By kannadanewsnow0928/07/2025 10:02 PM

ಶಿವಮೊಗ್ಗ : ಸಾಕುಪ್ರಾಣಿಗಳನ್ನು ಅರಣ್ಯ ಪ್ರದೇಶದಲ್ಲಿ ಮೇಯಲು ಬಿಡದಂತೆ ಅರಣ್ಯ ಸಚಿವರು ಹೊರಡಿಸಿರುವ ಆದೇಶವನ್ನು ಖಂಡಿಸಿ ಸೋಮವಾರ ಜಿಲ್ಲಾ ರೈತ ಸಂಘದ ವತಿಯಿಂದ ನೂರಾರು ಜಾನುವಾರುಗಳ ಸಹಿತ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಲಾಯಿತು.

ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಬೇರೆಬೇರೆ ಗ್ರಾಮದಿಂದ ರೈತರು ತಮ್ಮ ಸಾಕುಪ್ರಾಣಿಗಳಾದ ದನಕರು, ಹೋರಿ, ಎಮ್ಮೆಗಳ ಸಹಿತ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ರೈತ ಸಂಘದ ಪ್ರಮುಖರು ಮುಖ್ಯಮಂತ್ರಿ ಸಿದ್ದರಾಮಯ್ಯ, ಅರಣ್ಯ ಸಚಿವ ಈಶ್ವರ ಖಂಡ್ರೆ, ಮಧು ಬಂಗಾರಪ್ಪ, ಶಾಸಕ ಬೇಳೂರು ಅವರ ಮುಖವಾಡ ಧರಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡರು. ಇದರ ಜೊತೆಗೆ ಮುಖ್ಯಮಂತ್ರಿಗಳು, ಅರಣ್ಯ ಸಚಿವರು, ಶಾಸಕರ ನಡುವಿನ ಅಣುಕು ಪ್ರದರ್ಶನ ಸಹ ನಡೆಸಿ ಗಮನ ಸೆಳೆದರು.

ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ರೈತ ಸಂಘದ ಜಿಲ್ಲಾಧ್ಯಕ್ಷ ದಿನೇಶ್ ಶಿರವಾಳ, ಸಾಕುಪ್ರಾಣಿಗಳನ್ನು ಕಾಡಿನಲ್ಲಿ ಮೇಯಲು ಬಿಡಬಾರದು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೊರಡಿಸಿರುವ ಆದೇಶ ಅತ್ಯಂತ ಅವೈಜ್ಞಾನಿಕವಾಗಿ ನೂರಾರು ವರ್ಷಗಳಿಂದ ರೈತರ ಸಾಕುಪ್ರಾಣಿಗಳು ಕಾಡಿನಲ್ಲಿಯೆ ಮೇಯುವುದು ಸಂಪ್ರದಾಯದAತೆ ಬೆಳೆದು ಬಂದಿದೆ. ಆದರೆ ಅರಣ್ಯ ಸಚಿವರ ನಿರ್ಧಾರ ಆತಂಕಕಾರಿಯಾಗಿದೆ. ಮೇವಿಲ್ಲದೆ ನೂರಾರು ಜಾನುವಾರುಗಳು ನರಳುತ್ತಿದೆ. ಜಾನುವಾರುಗಳನ್ನು ಎಲ್ಲಿ ಮೇಯಿಸಬೇಕು ಎಂದು ರೈತರು ಯೋಚಿಸುತ್ತಿದ್ದಾರೆ. ಮುಂದಿನ ಒಂದು ವರ್ಷದಲ್ಲಿ ಮೇವು ಸಿಗದೆ ಲಕ್ಷಾಂತರ ಜಾನುವಾರುಗಳು ಸಾವನ್ನಪ್ಪುತ್ತದೆ ಎಂದು ವರದಿ ಹೇಳುತ್ತಿದೆ. ಇಂತಹ ಹೊತ್ತಿನಲ್ಲಿ ಸರ್ಕಾರದ ನಿರ್ಧಾರ ಇನ್ನಷ್ಟು ಆತಂಕ ಸೃಷ್ಟಿಸಿದೆ ಎಂದರು.

ಸರ್ಕಾರ ತಕ್ಷಣ ಗೋಮಾಳಗಳನ್ನು ಎಂಪಿಎಂಗೆ ನೀಡಿರುವುದನ್ನು ರದ್ದು ಮಾಡಬೇಕು. ನಡುತೋಪುಗಳನ್ನು ಕಟಾವ್ ಮಾಡಿ ಅಲ್ಲಿ ನೈಸರ್ಗಿಕ ಅರಣ್ಯ ಬೆಳೆಸಬೇಕು. ರೈತರ ಮೇಲೆ ಅರಣ್ಯಾಧಿಕಾರಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ತಕ್ಷಣ ಅರಣ್ಯ ಸಚಿವರು ತಮ್ಮ ಆದೇಶ ಹಿಂದಕ್ಕೆ ಪಡೆಯಬೇಕು. ರೈತರ ಮೇಲೆ ಹಾಕಿರುವ ಕೇಸ್‌ಗಳನ್ನು ರದ್ದು ಮಾಡಿ. ತಕ್ಷಣ ಆದೇಶ ಹಿಂದಕ್ಕೆ ಪಡೆಯದೆ ಹೋದಲ್ಲಿ ರೈತ ಸಂಘ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳುತ್ತದೆ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ರಮೇಶ್ ಕೆಳದಿ, ಡಾ. ರಾಮಚಂದ್ರಪ್ಪ, ಕುಮಾರ್ ಗೌಡ, ಭದ್ರೇಶ್ ಬಾಳಗೋಡು, ಶಿವು ಮೈಲಾರಿಕೊಪ್ಪ, ಚಂದ್ರು ಸಿರಿವಂತೆ, ವ.ಶಂ.ರಾಮಚಂದ್ರ ಭಟ್, ಸುದರ್ಶನ್ ಕೆ.ಎಚ್., ರಾಮಚಂದ್ರ, ಚಂದ್ರಶೇಖರ್ ಇನ್ನಿತರರು ಹಾಜರಿದ್ದರು.

ವ್ಯಾಮೋಹಕ್ಕೆ ಒಳಗಾಗಿ ಶಿಥಿಲವಾದ ಮನೆಗಳಲ್ಲಿ ವಾಸ ಮಾಡಬೇಡಿ: ಶಾಸಕ ಗೋಪಾಲಕೃಷ್ಣ ಬೇಳೂರು ಕಿವಿಮಾತು

‘ಹೋಂ ಸ್ಟೇ ನಿರ್ಮಾಣ’ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಸಹಾಯಧನಕ್ಕೆ ಅರ್ಜಿ ಆಹ್ವಾನ

Share. Facebook Twitter LinkedIn WhatsApp Email

Related Posts

ವ್ಯಾಮೋಹಕ್ಕೆ ಒಳಗಾಗಿ ಶಿಥಿಲವಾದ ಮನೆಗಳಲ್ಲಿ ವಾಸ ಮಾಡಬೇಡಿ: ಶಾಸಕ ಗೋಪಾಲಕೃಷ್ಣ ಬೇಳೂರು ಕಿವಿಮಾತು

28/07/2025 9:55 PM1 Min Read

ಅಡಿಕೆ ಕೊಳೆರೋಗಕ್ಕೆ ಸರ್ಕಾರದಿಂದ ಪರಿಹಾರ ಕೊಡಿಸಲು ಅಗತ್ಯ ಕ್ರಮ: ಶಾಸಕ ಗೋಪಾಲಕೃಷ್ಣ ಬೇಳೂರು

28/07/2025 9:51 PM2 Mins Read

BIG NEWS: ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರಿಗೆ ‘ಕುಟುಂಬ ಪಿಂಚಣಿ ಮಂಜೂರಿ’ನ ಬಗ್ಗೆ ಮಹತ್ವದ ಆದೇಶ

28/07/2025 9:35 PM1 Min Read
Recent News

ಬೆಡ್ ರೆಸ್ಟ್ ಮಾಡುವ ಅವಶ್ಯಕತೆಯಿಲ್ಲ, ನೀವು ಈ ಅಭ್ಯಾಸ ತ್ಯಜಿಸಿ ಬೆನ್ನುನೋವಿಗೆ ವಿದಾಯ ಹೇಳಿ!

28/07/2025 10:03 PM

ಸಾಗರದಲ್ಲಿ ಅರಣ್ಯದಲ್ಲಿ ಜಾನುವಾರು ಮೇಯಿಸಲು ನಿಷೇಧ ಆದೇಶಕ್ಕೆ ಖಂಡನೆ: ವಿನೂತನ ರೀತಿಯಲ್ಲಿ ಪ್ರತಿಭಟನೆ

28/07/2025 10:02 PM

ವ್ಯಾಮೋಹಕ್ಕೆ ಒಳಗಾಗಿ ಶಿಥಿಲವಾದ ಮನೆಗಳಲ್ಲಿ ವಾಸ ಮಾಡಬೇಡಿ: ಶಾಸಕ ಗೋಪಾಲಕೃಷ್ಣ ಬೇಳೂರು ಕಿವಿಮಾತು

28/07/2025 9:55 PM

ಅಡಿಕೆ ಕೊಳೆರೋಗಕ್ಕೆ ಸರ್ಕಾರದಿಂದ ಪರಿಹಾರ ಕೊಡಿಸಲು ಅಗತ್ಯ ಕ್ರಮ: ಶಾಸಕ ಗೋಪಾಲಕೃಷ್ಣ ಬೇಳೂರು

28/07/2025 9:51 PM
State News
KARNATAKA

ಸಾಗರದಲ್ಲಿ ಅರಣ್ಯದಲ್ಲಿ ಜಾನುವಾರು ಮೇಯಿಸಲು ನಿಷೇಧ ಆದೇಶಕ್ಕೆ ಖಂಡನೆ: ವಿನೂತನ ರೀತಿಯಲ್ಲಿ ಪ್ರತಿಭಟನೆ

By kannadanewsnow0928/07/2025 10:02 PM KARNATAKA 2 Mins Read

ಶಿವಮೊಗ್ಗ : ಸಾಕುಪ್ರಾಣಿಗಳನ್ನು ಅರಣ್ಯ ಪ್ರದೇಶದಲ್ಲಿ ಮೇಯಲು ಬಿಡದಂತೆ ಅರಣ್ಯ ಸಚಿವರು ಹೊರಡಿಸಿರುವ ಆದೇಶವನ್ನು ಖಂಡಿಸಿ ಸೋಮವಾರ ಜಿಲ್ಲಾ ರೈತ…

ವ್ಯಾಮೋಹಕ್ಕೆ ಒಳಗಾಗಿ ಶಿಥಿಲವಾದ ಮನೆಗಳಲ್ಲಿ ವಾಸ ಮಾಡಬೇಡಿ: ಶಾಸಕ ಗೋಪಾಲಕೃಷ್ಣ ಬೇಳೂರು ಕಿವಿಮಾತು

28/07/2025 9:55 PM

ಅಡಿಕೆ ಕೊಳೆರೋಗಕ್ಕೆ ಸರ್ಕಾರದಿಂದ ಪರಿಹಾರ ಕೊಡಿಸಲು ಅಗತ್ಯ ಕ್ರಮ: ಶಾಸಕ ಗೋಪಾಲಕೃಷ್ಣ ಬೇಳೂರು

28/07/2025 9:51 PM

BIG NEWS: ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರಿಗೆ ‘ಕುಟುಂಬ ಪಿಂಚಣಿ ಮಂಜೂರಿ’ನ ಬಗ್ಗೆ ಮಹತ್ವದ ಆದೇಶ

28/07/2025 9:35 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.