Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಚಿಕಾಗೋದಲ್ಲಿ ಗುಂಡಿನ ದಾಳಿ ; ನಾಲ್ವರು ಸಾವು, 14 ಮಂದಿಗೆ ಗಾಯ

03/07/2025 4:20 PM

ಬಿಜೆಪಿಯ ಚೀಫ್ ವಿಪ್ ಹೀಗೆ ಚೀಪ್ ಆಗಿ ಮಾತಾಡ್ತಾನೆ : ರವಿಕುಮಾರ್ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್ ಏಕವಚನದಲ್ಲೇ ವಾಗ್ದಾಳಿ

03/07/2025 4:13 PM

ಬಾಡಿಗೆ ಮನೆಯಲ್ಲಿ ವಾಸಿಸೋದು ಅಥ್ವಾ ಬ್ಯಾಂಕ್ ಸಾಲ ಪಡೆದು ಮನೆ ಖರೀದಿಸೋದು! ಎರಡರಲ್ಲಿ ಯಾವುದು ಬೆಸ್ಟ್ ಗೊತ್ತಾ.?

03/07/2025 4:08 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಚಿತ್ರದುರ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ 2 ಲಕ್ಷಕ್ಕೂ ಹೆಚ್ಚು ಅಂತರದಿಂದ ಗೆಲ್ತಾರೆ-ಸಿಎಂ ಸಿದ್ಧರಾಮಯ್ಯ
KARNATAKA

ಚಿತ್ರದುರ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ 2 ಲಕ್ಷಕ್ಕೂ ಹೆಚ್ಚು ಅಂತರದಿಂದ ಗೆಲ್ತಾರೆ-ಸಿಎಂ ಸಿದ್ಧರಾಮಯ್ಯ

By kannadanewsnow0904/04/2024 5:01 PM

ಚಿತ್ರದುರ್ಗ: ಆಪರೇಷನ್ ಕಮಲಕ್ಕೆ ಸಾವಿರಾರು ಕೋಟಿ ಎಲ್ಲಿಂದ ಬಂತು ಮಿಸ್ಟರ್ ಮೋದಿಯವರೇ? ಕಾಂಗ್ರೆಸ್ ಮತ್ತು ಬೇರೆ ಪಕ್ಷದ ಶಾಸಕರುಗಳಿಗೆ ಕೋಟಿ ಕೋಟಿ ಕೊಡುವುದಕ್ಕೆ ಸಾವಿರಾರು ಕೋಟಿ ಹಣ ಎಲ್ಲಿಂದ ಬಂತು. ಅದು ಕಪ್ಪು ಹಣ ಅಲ್ಲವೇ ದೇಶದ ಜನಕ್ಕೆ ಉತ್ತರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದರು.

ಚಿತ್ರದುರ್ಗ ಲೋಕಸಭಾ ಅಭ್ಯರ್ಥಿ ಚಂದ್ರಪ್ಪ ಅವರ ಪರವಾಗಿ ಆಯೋಜಿಸಿದ್ದ ಬೃಹತ್ ಬಹಿರಂಗ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ವಿದೇಶದಿಂದ ಕಪ್ಪು ಹಣ ತಂದು ಪ್ರತಿಯೊಬ್ಬ ಭಾರತೀಯನ ಕುಟುಂಬಕ್ಕೆ 15 ಲಕ್ಷ ರೂಪಾಯಿ ಕೊಡ್ತೀವಿ ಅಂದ್ರಲ್ಲಾ ಕೊಟ್ರಾ? ರೈತರ ಆದಾಯ ದುಪ್ಪಟ್ಟು ಮಾಡ್ತೀವಿ ಅಂತ ಭಾಷಣ ಮಾಡಿದ್ರು. ಆದಾಯ ಒಂದು ರೂಪಾಯಿ ಕೂಡ ಹೆಚ್ಚಾಗಲಿಲ್ಲ. ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡ್ತೀವಿ ಅಂದ್ರಲ್ಲಾ? ಮಾಡಿದ್ರಾ ಮೋದಿಯವರೇ?

ಪೆಟ್ರೋಲ್, ಡೀಸೆಲ್, ಅಡುಗೆ ಗ್ಯಾಸ್, ರಸಗೊಬ್ಬರ, ಎಣ್ಣೆ, ಕಾಳು ಬೇಳೆ ಎಲ್ಲವೂ ಅತ್ಯಂತ ಕಡಿಮೆ ಬೆಲೆಗೆ ಸಿಗುವಂತೆ ಮಾಡ್ತೀನಿ ಅಂದಿದ್ರಲ್ಲಾ ಮಾಡಿದ್ರಾ ಮಿಸ್ಟರ್ ಮೋದಿ?

ನಿಮ್ಮ ಕಾಲದಲ್ಲಿ ಆದ ಬೆಲೆ ಏರಿಕೆಯಿಂದ ಸಂಕಷ್ಟಕ್ಕೆ ಸಿಲುಕಿದ್ದ ಕುಟುಂಬಗಳಿಗೆ ಕೊಂಚ ನೆಮ್ಮದಿ ನೀಡಬೇಕು ಎನ್ನುವ ಕಾರಣದಿಂದ ಐದು ಗ್ಯಾರಂಟಿ ಜಾರಿ ಮಾಡಿದೆವು. ಪ್ರತೀ ಕುಟುಂಬಕ್ಕೆ 4 ರಿಂದ 6 ಸಾವಿರ ರೂಪಾಯಿ ಉಳಿತಾಯವಾಗಿ ನನ್ನ ಜನರ ಕೊಳ್ಳುವ ಶಕ್ತಿ ಹೆಚ್ಚಾಯಿತು. ಇದು ನಮ್ಮ ಸಾಧ್ಯವಾಗಿದ್ದು ಕಾಂಗ್ರೆಸ್ ಸರ್ಕಾರದಿಂದ ಮಿಸ್ಟರ್ ಮೋದಿಯವರೇ.

ಈ ದೇಶದ ಶೇ 95 ರಷ್ಟು ಬಹುಸಂಖ್ಯಾತ ಜನ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಮತ್ತು ಸಮಾನ ಅವಕಾಶಗಳನ್ನು ಒದಗಿಸುತ್ತಿರುವುದು ನಮ್ಮ ಸಂವಿಧಾನ. ಈ ಸಂವಿಧಾನವನ್ನು ಬದಲಾಯಿಸುತ್ತೀವಿ ಎನ್ನುವುದು ಬಿಜೆಪಿಯ ಅಜೆಂಡಾ. ಇದನ್ನು ಬಿಜೆಪಿ ಕೇಂದ್ರ ಸಚಿವರಾಗಿದ್ದವರೇ ಬಹಿರಂಗವಾಗಿ ಹೇಳಿದ್ದಾರೆ. ಆದ್ದರಿಂದ ದೇಶದ ಸಂವಿಧಾನವನ್ನು ಬದಲಾಯಿಸಿ ಮನುಸ್ಮೃತಿ ಜಾರಿಗೆ ತರಲು ಅವಕಾಶ ಕೊಡಬೇಡಿ ಎಂದರು.

ಅಧಿಕಾರದಲ್ಲಿದ್ದಾಗ ಹಣ ಲೂಟಿ ಮಾಡೋದು, ಆಮೇಲೆ ಜನರನ್ನು ಭಾವನಾತ್ಮಕವಾಗಿ ಕೆರಳಿಸಿ ಬಕ್ರಾ ಮಾಡೋದು ಅವರ ಅವಕಾಶ. ಚಿತ್ರದುರ್ಗದ ಬಿಜೆಪಿ ಅಭ್ಯರ್ಥಿ ಕಾರಜೋಳ ಅವರು ಇಲ್ಲಿಯವರಲ್ಲ. ಕಾಂಗ್ರೆಸ್ ಚಂದ್ರಪ್ಪ ಅವರು ಸೋತಾಗಲೂ ಜನರ ನಡುವೆ ಇದ್ದು ತಪಸ್ಸಿನಂತೆ ಜನರ ಸಮಸ್ಯೆಗಳಿಗೆ ಸ್ಪಂದಿಸಿದ್ದಾರೆ. ಸಮಾಜ ಕಲ್ಯಾಣ ಸಚಿವರಾಗಿ ಕಾರಜೋಳ ಅವರು ಹಿಂದುಳಿದವರು, ದಲಿತರು, ಶ್ರಮಿಕರು, ದುಡಿಯುವ ವರ್ಗಗಳಿಗೆ ಏನೇನೂ ಮಾಡಿಲ್ಲ. ಕಾರಜೋಳ ಅವರ ಬಳಿ ಸಿಕ್ಕಾಪಟ್ಟೆ ಹಣ ಇರಬಹುದು. ಆದರೆ ಚಂದ್ರಪ್ಪ ಅವರಲ್ಲಿ ಜನಸೇವೆ ಮಾಡುವ ಸಜ್ಜನಿಕೆ, ಕಾಳಜಿ ಇದೆ. ಆದ್ದರಿಂದ ಚಿತ್ರದುರ್ಗದ ಜನತೆ ಮಿಸ್ಟರ್ ಕಾರಜೋಳ್ ಪ್ಲೀಸ್ ಗೋ ಬ್ಯಾಕ್ ಎಂದು ಒಕ್ಕೋರಲಿನಿಂದ ಹೇಳಬೇಕು ಎಂದು ಕರೆ ನೀಡಿದರು.

ಇವತ್ತಿನವರೆಗೂ ಬಿಜೆಪಿ ರಾಜ್ಯದಲ್ಲಿ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಬಂದಿಲ್ಲ. ಎರಡೂ ಬಾರಿ ಹಿಂಬಾಗಿಲಿನಿಂದಲೇ ಅಧಿಕಾರಕ್ಕೆ ಬಂದಿದ್ದಾರೆ. ವಾಮ ಮಾರ್ಗದ ಬಿಜೆಪಿಗೆ ನಾಡಿನ ಜನತೆ ತಕ್ಕ ಪಾಠ ಕಲಿಸಿದ್ದಾರೆ ಎಂದರು.

ಬಿಜೆಪಿ ರಾಜ್ಯಕ್ಕೆ ಮಾಡಿದ ದ್ರೋಹ ಒಂದಾ, ಎರಡಾ? ಮೋದಿ ಮಹಾದ್ರೋಹಕ್ಕೆ ತಕ್ಕ ಪಾಠ ಕಲಿಸಿ

ಬಿಜೆಪಿ ರಾಜ್ಯಕ್ಕೆ ಮಾಡಿದ ದ್ರೋಹ ಒಂದೆರಡಲ್ಲ. ರಾಜ್ಯಕ್ಕೆ ಪ್ರವಾಹ ಬಂದಾಗ, ಬರಗಾಲ ಬಂದಾಗ ರಾಜ್ಯದ ಜನರ ಕಡೆ ತಿರುಗಿ ಕೂಡ ನೋಡಲಿಲ್ಲ. ರಾಜ್ಯದ ಪಾಲಿನ ಬರಗಾಲದ ಅನುದಾನವನ್ನು ಒಂದು ರೂಪಾಯಿ ಕೂಡ ಕೊಡಲಿಲ್ಲ. ರಾಜ್ಯಕ್ಕೆ ಆದ ಅನ್ಯಾಯವನ್ನು ಬಿಜೆಪಿ ಸಂಸದರು ನೆಪಕ್ಕೂ ಪ್ರಶ್ನಿಸಲಿಲ್ಲ. ರಾಜ್ಯದ ನೀರಾವರಿಗೆ ಹಣ ಕೊಡ್ತೀವಿ ಅಂತ ಕೇಂದ್ರ ಬಜೆಟ್ ನಲ್ಲೂ ಘೋಷಿಸಿದರು. ಅದರಲ್ಲಿ ಒಂದು ರೂಪಾಯಿಯನ್ನೂ ನಮ್ಮ ರಾಜ್ಯಕ್ಕೆ ಕೊಡಲಿಲ್ಲ. ಮೇಲಿಂದ ಮೇಲೆ ರಾಜ್ಯಕ್ಕೆ ದ್ರೋಹ ಮಾಡುತ್ತಿರುವ ತಕ್ಕ ಪಾಠ ಕಲಿಸಿ ಎಂದರು.

ಹಸಿ ಸುಳ್ಳುಗಾರ ಅಮಿತ್ ಶಾ

RSS ನಲ್ಲಿ ಈ BJP ಯವರಿಗೆ ಸುಳ್ಳು ಹೇಳುವ ತರಬೇತಿ ಕೊಡ್ತಾರೆ. ಸುಳ್ಳಿನ ಮೇಲೆ ಸುಳ್ಳು ಹೇಳಿಕೊಂಡು ತಿರುಗ್ತಾ ಇದಾರೆ. ರಾಜ್ಯದ ಜನರ ಪಾಲಿನ ಬರಗಾಲದ ಹಣ ಏಕೆ ವಾಪಾಸ್ ಕೊಡಲಿಲ್ಲ ಎಂದು ನಾಡಿನ ಜನತೆ ಪ್ರಶ್ನೆ ಕೇಳಿದ್ರು. ಆದರೆ ರಾಜ್ಯ ಸರ್ಕಾರ 3 ತಿಂಗಳು ಲೇಟಾಗಿ ಮನವಿ ಮಾಡಿದ್ದಾಗಿ ಅಮಿತ್ ಶಾ ಭಯಾನಕ ಹಸಿ ಸುಳ್ಳು ಹೇಳಿದರು.

ಬಡವರ ರಕ್ತ ಕುಡಿಯುತ್ತಾ ನಾಚಿಕೆ, ಮಾನ, ಮರ್ಯಾದೆ ಇಲ್ಲ ಇವರಿಗೆ. ಇಷ್ಟು ಭೀಕರ ಬರಗಾಲ ಬಂದಿದ್ದರೂ ಒಂದೇ ಒಂದು ರೂಪಾಯಿ ರಾಜ್ಯದ ಪಾಲಿನ ಹಣ ಕೊಡದೆ ಸುಳ್ಳು ಹೇಳಿಕೊಂಡು ತಿರುಗ್ತೀರಲ್ಲಾ, ನಾಚಿಕೆ ಇಲ್ವಾ ಇವರಿಗೆ ಎಂದು ಖಾರವಾಗಿ ಪ್ರಶ್ನಿಸಿದರು.

ಸಚಿವರಾದ ಸತೀಶ್ ಜಾರಕಿಹೊಳಿ, ಡಿ.ಸುಧಾಕರ್, ಲೋಕಸಭಾ ಅಭ್ಯರ್ಥಿ ಚಂದ್ರಪ್ಪ, ದೆಹಲಿಯ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ಶಾಸಕರಾದ ಎನ್.ವೈ.ಗೋಪಾಲಕೃಷ್ಣ, ರಘುಮೂರ್ತಿ,ವೀರೇಂದ್ರ ಪಪ್ಪಿ, ಪಾವಗಡ ವೆಂಕಟೇಶ್, ಗೋವಿಂದಪ್ಪ, ಬಸಂತಪ್ಪ ಸೇರಿ ಚಿತ್ರದುರ್ಗ ದಾವಣಗೆರೆ ಜಿಲ್ಲೆಯ ಶಾಸಕರುಗಳು, ಮಾಜಿ ಶಾಸಕರುಗಳು ಹಾಗೂ ಜಿಲ್ಲೆ ಮತ್ತು ತಾಲ್ಲೂಕು , ಬ್ಲಾಕ್ ಮುಖಂಡರುಗಳು ಉಪಸ್ಥಿತರಿದ್ದರು.

ಗಾಯಕ್ಕೆ ‘ಬ್ಯಾಂಡೇಜ್’ ಬಳಸುತ್ತೀರಾ.? ಇದು ‘ಕ್ಯಾನ್ಸರ್’ಗೆ ಕಾರಣವಾಗ್ಬೋದು ಎಚ್ಚರ ; ಅಧ್ಯಯನ

ಭಾರತೀಯ ಪ್ರವಾಸಿಗರಿಗೆ ಜಪಾನ್ ‘ಇ-ವೀಸಾ’ ಆರಂಭ ; ಅರ್ಜಿ ಸಲ್ಲಿಸುವುದು ಹೇಗೆ.?

ಚಿತ್ರದುರ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ 2 ಲಕ್ಷಕ್ಕೂ ಹೆಚ್ಚು ಅಂತರದಿಂದ ಗೆಲ್ತಾರೆ-ಸಿಎಂ ಸಿದ್ಧರಾಮಯ್ಯ Congress candidate Chandrappa will win by a margin of over 2 lakh votes in Chitradurga: Siddaramaiah
Share. Facebook Twitter LinkedIn WhatsApp Email

Related Posts

ಬಿಜೆಪಿಯ ಚೀಫ್ ವಿಪ್ ಹೀಗೆ ಚೀಪ್ ಆಗಿ ಮಾತಾಡ್ತಾನೆ : ರವಿಕುಮಾರ್ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್ ಏಕವಚನದಲ್ಲೇ ವಾಗ್ದಾಳಿ

03/07/2025 4:13 PM1 Min Read

BREAKING : ರಾಜ್ಯದಲ್ಲಿ ಆನ್ಲೈನ್ ಗೇಮ್ ಗೆ ಮತ್ತೊಂದು ಬಲಿ : ಸೆಲ್ಫಿ ವಿಡಿಯೋ ಮಾಡಿ ನೇಣಿಗೆ ಶರಣಾದ ಯುವಕ!

03/07/2025 3:56 PM1 Min Read

Rain Alert : ವಾಯುಭಾರ ಕುಸಿತ, ಮುಂದಿನ 1 ವಾರ ರಾಜ್ಯಾದ್ಯಂತ ಗಾಳಿ ಸಹಿತ ಭಾರೀ ಮಳೆ : ‘IMD’ ಮುನ್ಸೂಚನೆ

03/07/2025 3:33 PM2 Mins Read
Recent News

BREAKING : ಚಿಕಾಗೋದಲ್ಲಿ ಗುಂಡಿನ ದಾಳಿ ; ನಾಲ್ವರು ಸಾವು, 14 ಮಂದಿಗೆ ಗಾಯ

03/07/2025 4:20 PM

ಬಿಜೆಪಿಯ ಚೀಫ್ ವಿಪ್ ಹೀಗೆ ಚೀಪ್ ಆಗಿ ಮಾತಾಡ್ತಾನೆ : ರವಿಕುಮಾರ್ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್ ಏಕವಚನದಲ್ಲೇ ವಾಗ್ದಾಳಿ

03/07/2025 4:13 PM

ಬಾಡಿಗೆ ಮನೆಯಲ್ಲಿ ವಾಸಿಸೋದು ಅಥ್ವಾ ಬ್ಯಾಂಕ್ ಸಾಲ ಪಡೆದು ಮನೆ ಖರೀದಿಸೋದು! ಎರಡರಲ್ಲಿ ಯಾವುದು ಬೆಸ್ಟ್ ಗೊತ್ತಾ.?

03/07/2025 4:08 PM

BREAKING : ರಾಜ್ಯದಲ್ಲಿ ಆನ್ಲೈನ್ ಗೇಮ್ ಗೆ ಮತ್ತೊಂದು ಬಲಿ : ಸೆಲ್ಫಿ ವಿಡಿಯೋ ಮಾಡಿ ನೇಣಿಗೆ ಶರಣಾದ ಯುವಕ!

03/07/2025 3:56 PM
State News
KARNATAKA

ಬಿಜೆಪಿಯ ಚೀಫ್ ವಿಪ್ ಹೀಗೆ ಚೀಪ್ ಆಗಿ ಮಾತಾಡ್ತಾನೆ : ರವಿಕುಮಾರ್ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್ ಏಕವಚನದಲ್ಲೇ ವಾಗ್ದಾಳಿ

By kannadanewsnow0503/07/2025 4:13 PM KARNATAKA 1 Min Read

ಬೆಂಗಳೂರು : ರಾಜ್ಯ ಸರ್ಕಾರದ ಸಿಎ ಶಾಲಿನಿ ರಜನೀಶ್ ಅವರ ಕುರಿತು ಬಿಜೆಪಿ ಪರಿಷತ್ ಸದಸ್ಯ ಎನ್.ರವಿಕುಮಾರ್ ಸಂಸದೀಯ ಪದ…

BREAKING : ರಾಜ್ಯದಲ್ಲಿ ಆನ್ಲೈನ್ ಗೇಮ್ ಗೆ ಮತ್ತೊಂದು ಬಲಿ : ಸೆಲ್ಫಿ ವಿಡಿಯೋ ಮಾಡಿ ನೇಣಿಗೆ ಶರಣಾದ ಯುವಕ!

03/07/2025 3:56 PM

Rain Alert : ವಾಯುಭಾರ ಕುಸಿತ, ಮುಂದಿನ 1 ವಾರ ರಾಜ್ಯಾದ್ಯಂತ ಗಾಳಿ ಸಹಿತ ಭಾರೀ ಮಳೆ : ‘IMD’ ಮುನ್ಸೂಚನೆ

03/07/2025 3:33 PM

BIG NEWS : ನಮ್ಮ ‘ಆಶಾ ಕಿರಣ’ ಯೋಜನೆಗೆ ವಿಶ್ವ ಆರೋಗ್ಯ ಸಂಸ್ಥೆ ಯ ಪ್ರಶಂಸೆ : CM ಸಿದ್ದರಾಮಯ್ಯ ಮೆಚ್ಚುಗೆ

03/07/2025 3:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.