ಬೆಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದಂತೆ, ವಿಧಾನ ಪರಿಷತ್ ಚುನಾವಣೆಯಲ್ಲೂ ಗೆಲುವಿನ ನಗೆ ಬೀರಲಿದೆ. ನೈರುತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಕೆ.ಕೆ ಮಂಜುನಾಥ್ ಕುಮಾರ್ ಗೆಲುವು ಸಾಧಿಸಲಿದ್ದಾರೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.
ನೈರುತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಕೆ.ಕೆ ಮಂಜುನಾಥ್ ಕುಮಾರ್ ಅವರು, ಸಿಎಂ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಈ ವೇಳೆ ಮಾತನಾಡಿದಂತ ಸಿಎಂ ಸಿದ್ಧರಾಮಯ್ಯ ಅವರು, ನೈರುತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಕೆ.ಕೆ ಮಂಜುನಾಥ್ ಕುಮಾರ್ ಶಿಕ್ಷಕರ ನೋವಿಗೆ ಸ್ಪಂದಿಸುವ ರೀತಿಯಲ್ಲಿ ಕೆಲಸ ಮಾಡಲಿದ್ದಾರೆ. ಅವರಿಗೆ ಈ ಬಾರಿಯ ವಿಧಾನ ಪರಿಷತ್ ಚುನಾವಣೆಯಲ್ಲಿ ಗೆಲುವಿನ ಎಲ್ಲಾ ಲಕ್ಷಣಗಳಿದ್ದಾವೆ ಎಂದರು.
ಶಿಕ್ಷಕರ ಕ್ಷೇತ್ರದ ಸಮಸ್ಯೆ ನಿವಾರಿಸೋ ನಿಟ್ಟಿನಲ್ಲಿ ಡಾ.ಕೆ.ಕೆ ಮಂಜುನಾಥ್ ಕುಮಾರ್ ಒಲವು ಇರುವಂತವರು ಆಗಿದ್ದಾರೆ. ನಮ್ಮ ಸರ್ಕಾರವು ಶಿಕ್ಷಕರ ಪರವಾಗಿ ನಿಲ್ಲುತ್ತಿದೆ. ಶಿಕ್ಷಕರು ನಮ್ಮ ಪರವಾಗಿ ನಿಂತು, ನೈರುತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಕೆ.ಕೆ ಮಂಜುನಾಥ್ ಕುಮಾರ್ ಗೆಲ್ಲಿಸುವಂತೆ ಮನವಿ ಮಾಡಿದರು.
ರೈಲ್ವೆ ಪ್ರಯಾಣಿಕರೇ ಗಮನಿಸಿ: ‘ಉದ್ಯಾನ್ ಎಕ್ಸ್ಪ್ರೆಸ್’ ವೇಳಾಪಟ್ಟಿ ಪರಿಷ್ಕರಣೆ
BREAKING : ʻಹೊಸ ಕ್ರಿಮಿನಲ್ ಕಾನೂನುʼಗಳ ವಿರುದ್ಧದ ಅರ್ಜಿಯನ್ನು ಸ್ವೀಕರಿಸಲು ನಿರಾಕರಿಸಿದ ಸುಪ್ರೀಂ ಕೋರ್ಟ್