Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ಜೂ.9ರಿಂದ ದ್ವಿತೀಯ PUC ಪರೀಕ್ಷೆ-3 ಆರಂಭ: ಬೆಂಗಳೂರಿನ ಪರೀಕ್ಷಾ ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆ ಜಾರಿ

06/06/2025 8:30 PM

BREAKING: ಕೊಲೆ ಪ್ರಕರಣದಲ್ಲಿ ಸಾಕ್ಷಿಗೆ ಹಣದ ಆಮಿಷ: ಶಾಸಕ ವಿನಯ್ ಕುಲಕರ್ಣಿ ಜಾಮೀನು ರದ್ದು

06/06/2025 8:18 PM

BREAKING : 2026ರ ಏಪ್ರಿಲ್’ನಲ್ಲಿ ಬಾಂಗ್ಲಾದೇಶದಲ್ಲಿ ‘ರಾಷ್ಟ್ರೀಯ ಚುನಾವಣೆ’ ಆಯೋಜನೆ ; ‘ಮೊಹಮ್ಮದ್ ಯೂನಸ್’ ಘೋಷಣೆ

06/06/2025 7:54 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಕಾಂಗ್ರೆಸ್‌ ಅಭ್ಯರ್ಥಿ’ಯಿಂದ ಚುನಾವಣಾ ಅಕ್ರಮ: ‘ಕುಕ್ಕರ್‌, ಹಣ ಹಂಚಿಕೆ’ ದಾಖಲೆ ಬಿಡುಗಡೆ ಮಾಡಿದ ‘HDK’
KARNATAKA

‘ಕಾಂಗ್ರೆಸ್‌ ಅಭ್ಯರ್ಥಿ’ಯಿಂದ ಚುನಾವಣಾ ಅಕ್ರಮ: ‘ಕುಕ್ಕರ್‌, ಹಣ ಹಂಚಿಕೆ’ ದಾಖಲೆ ಬಿಡುಗಡೆ ಮಾಡಿದ ‘HDK’

By kannadanewsnow0919/03/2024 5:59 PM

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಯಿಂದ ಚುನಾವಣಾ ಅಕ್ರಮಗಳು ಅವ್ಯಾಹತವಾಗಿ ನಡೆಯುತ್ತಿದ್ದು, ಕೂಡಲೇ ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಚುನಾವಣಾ ಆಯೋಗವನ್ನು ಒತ್ತಾಯ ಮಾಡಿದರು.

ಬೆಂಗಳೂರಿನಲ್ಲಿ ಮಂಗಳವಾರ ತುರ್ತು ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು; ಪಾರದರ್ಶಕ ಚುನಾವಣೆ ನಡೆಸುವ ಸಲುವಾಗಿ ಕೂಡಲೇ ಈ ಕ್ಷೇತ್ರದಲ್ಲಿ ಅರೆಸೇನಾ ಪಡೆ ತುಕಡಿ*ಗಳನ್ನು ನಿಯೋಜಿಸಬೇಕು ಎಂದು *ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರನ್ನು ಆಗ್ರಹಪಡಿಸಿದರು.

ಅಲ್ಲದೆ; ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ನಡೆಸುತ್ತಿರುವ ಅಕ್ರಮಗಳಿಗೆ ಮೌನ ಸಹಕಾರ ನೀಡುತ್ತಿರುವ ಈ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಅವರನ್ನು ತಕ್ಷಣವೇ ವರ್ಗಾವಣೆ ಮಾಡಬೇಕು ಎಂದು ಆಯೋಗವನ್ನು ಕುಮಾರಸ್ವಾಮಿ ಅವರು ಒತ್ತಾಯ ಮಾಡಿದರು.

ಕೇಂದ್ರ ಆಯೋಗ ಏನು ಮಾಡುತ್ತಿದೆ?

ಕರ್ನಾಟಕದಲ್ಲಿ ಚುನಾವಣೆ ಆಯೋಗ ಇದೆಯಾ? ಕೇಂದ್ರ ಆಯೋಗ ಏನು ಮಾಡುತ್ತಿದೆ? ಚುನಾವಣೆ ಘೋಷಣೆಯಾದ ನಂತರ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಏನು ನಡೆಯುತ್ತಿದೆ ಎನ್ನುವುದು ಆಯೋಗಕ್ಕೆ ಗೊತ್ತಿಲ್ಲವೇ? ಆಯೋಗದ ಸಿಬ್ಬಂದಿ ಏನು ಮಾಡುತ್ತಿದ್ದಾರೆ? ಭಾನುವಾರ ರಾತ್ರಿ ಈ ಕ್ಷೇತ್ರದಲ್ಲಿ ಏನು ನಡೆದಿದೆ ಎನ್ನುವುದನ್ನು ನೀವು ನೋಡಬೇಕು ಎಂದು ಆಯೋಗವನ್ನು ಒತ್ತಾಯ ಮಾಡಿದ ಕುಮಾರಸ್ವಾಮಿ ಅವರು; ಕಾಂಗ್ರೆಸ್‌ಅಭ್ಯರ್ಥಿ ಮತದಾರರಿಗೆ ಹಂಚಲು ಇರಿಸಲಾಗಿದ್ದ ಕುಕ್ಕರ್‌ʼಗಳ ಲೋಡ್‌ ಇದ್ದ ಲಾರಿಗಳ ಚಿತ್ರಗಳು, ವಿಡಿಯೋಗಳನ್ನು ಮಾಧ್ಯಮಗೋಷ್ಠಿಯಲ್ಲಿ ಬಿಡುಗಡೆ ಮಾಡಿದರು.

100 ನಿಮಿಷದಲ್ಲಿ ಕ್ರಮ ಎಂದಿರಿ, ಇಲ್ಲಿ 48 ಗಂಟೆ ಆಗಿದೆ

ಚುನಾವಣಾ ದಿನಾಂಕ ಘೋಷಣೆಯಾದ ದಿನದಿಂದ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಚುನಾವಣಾ ಅಕ್ರಮಗಳು ಮಿತಿಮೀರಿವೆ. ಕುಕ್ಕರ್ ಮತ್ತು ಹಣವನ್ನು ಅವ್ಯಾಹತವಾಗಿ ಹಂಚಲಾಗುತ್ತಿದೆ. ಮರಳವಾಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯು ಮತದಾರರಿಗೆ ಹಂಚಲು ಇರಿಸಿದ್ದ ಕುಕ್ಕರ್ʼಗಳನ್ನು ಲೋಡ್ ಮಾಡಲಾಗಿದ್ದ ಎರಡು ಲಾರಿಗಳನ್ನು ಜೆಡಿಎಸ್ ಕಾರ್ಯಕರ್ತರು ಹಿಡಿದಿದ್ದಾರೆ. ಮಾಧ್ಯಮಗಳು ಕೂಡ ಅದನ್ನು ತೋರಿಸಿ ವರದಿ ಮಾಡಿವೆ. ದೇಶದಲ್ಲಿ ಇಂಥ ಅಕ್ರಮ ಎಲ್ಲೇ ನಡೆದರೂ ಅದರ ವಿಡಿಯೋ ಅಥವಾ ಫೋಟೋ ತೆಗೆದು ಕಳಿಸಿದರೆ ಕೇವಲ ನೂರು ನಿಮಿಷದಲ್ಲಿ ಕ್ರಮ ಜರುಗಿಸಲಾಗುತ್ತದೆ ಎಂದು ಮುಖ್ಯ ಚುನಾವಣಾ ಆಯುಕ್ತರು ತಮ್ಮ ಮೂರು ಗಂಟೆ ಮಾಧ್ಯಮಗೋಷ್ಠಿಯಲ್ಲಿ ಹೇಳಿದ್ದರು. ಈ ಅಕ್ರಮದ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿ 48 ಗಂಟೆ ಕಳೆದಿದೆ. ಇನ್ನೂ ಕ್ರಮ ಆಗಿಲ್ಲ ಯಾಕೆ? ಎಂದು ಕುಮಾರಸ್ವಾಮಿ ಅವರು ಆಯೋಗವನ್ನು ಪ್ರಶ್ನಿಸಿದರು. ಅಲ್ಲದೆ; ಕುಕ್ಕರ್ ಹಂಚಿಕೆಯ ದಾಖಲೆಯ ವಿಡಿಯೋ, ಫೋಟೋಗಳನ್ನು ಮಾಧ್ಯಮಗೋಷ್ಠಿಯಲ್ಲಿ ಪ್ರದರ್ಶಿಸಿದರು ಅವರು.

ಈ ಬಗ್ಗೆ ತಹಸೀಲ್ದಾರ್ ಅವರಿಗೆ ದೂರು ಕೊಟ್ಟರೆ ಹೌದಾ..? ನನ್ನ ಗಮನಕ್ಕೆ ಬಂದೇ ಇಲ್ಲ ಎನ್ನುತ್ತಾರೆ. ವಾಣಿಜ್ಯ ತೆರಿಗೆ ಇಲಾಖೆಗೆ ಮಾಹಿತಿ ಕೊಟ್ಟರೆ ಜಿಲ್ಲಾಧಿಕಾರಿಗೆ ತಿಳಿಸುತ್ತೇವೆ ಎನ್ನುತ್ತಾರೆ. ಜಿಲ್ಲಾಧಿಕಾರಿ ಅವರನ್ನು ಪ್ರಶ್ನಿಸಿದರೆ ನಮ್ಮ ಗಮನಕ್ಕೆ ಬಂದಿಲ್ಲ, ಪರಿಶೀಲನೆ ನಡೆಸುತ್ತೇವೆ ಎಂದು ಹಾರಿಕೆಯ ಉತ್ತರ ಕೊಡುತ್ತಾರೆ. ಚುನಾವಣೆ ಎಂದರೆ ಇದೇನಾ? ಈ ಅಕ್ರಮಗಳಿಗೆ ಕಡಿವಾಣ ಹಾಕಲು ಕೂಡಲೇ ಆಯೋಗವು ಕ್ಷೇತ್ರದಲ್ಲಿ ಅರೆಸೇನಾ ಪಡೆಯನ್ನು ನಿಯೋಜಿಸಬೇಕು ಎಂದು ಅವರು ಆಗ್ರಹಿಸಿದರು.

ಮಾಧ್ಯಮಗಳ ಮೂಲಕ ಆಯೋಗಕ್ಕೆ ಮನವಿ ಒತ್ತಾಯ ಮಾಡುವುದಷ್ಟೇ ಅಲ್ಲ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಚುನಾವಣಾ ‌ಆಕ್ರಮಗಳ ಕುರಿತು ದಾಖಲೆ ಸಮೇತ ಚುನಾವಣಾ ಆಯೋಗಕ್ಕೆ ದೂರು ಕೊಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿಗಳು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಬೆಂಕಿ ಹಚ್ಚಲು ಕಾರ್ಯಕರ್ತರಿಗೆ ಕರೆ ಕೊಡಬೇಕಾದೀತು

ಚುನಾವಣಾ ಆಯೋಗಕ್ಕೆ ನನ್ನ ನೇರ ಆಗ್ರಹ ಇಷ್ಟೇ. ಕೂಡಲೇ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ನಡೆತಯುತ್ತಿರುವ ಅಕ್ರಮಗಳಿಗೆ ಕಡಿವಾಣ ಹಾಕಬೇಕು. ತಪ್ಪಿದರೆ ನಾನೇ ಕಾರ್ಯಕರ್ತರರಿಗೆ ಕರೆ ಕೊಡಬೇಕಾಗುತ್ತದೆ. ಕುಕ್ಕರ್ ಎಲ್ಲೆಲ್ಲಿ ಅಡಗಿಸಿಟ್ಟಿದ್ದಾರೆ ಎಂಬುದನ್ನು ಪತ್ತೆ ಹಚ್ಚಿ ಅಲ್ಲಿಗೆ ಹೋಗಿ ಬೆಂಕಿ ಹಚ್ಚಿ ಅಂತ ನಮ್ಮ ಕಾರ್ಯಕರ್ತರಿಗೆ ಕರೆ ಕೋಡಬೇಕಾಗುತ್ತದೆ. ಆಮೇಲೆ ಕಾರ್ಯಕರ್ತರ ಮೇಲೆ ಈ ಅಧಿಕಾರಿಗಳು ಕೇಸ್‌ ದಾಖಲಿಸಲಿ ನೋಡೋಣ ಎಂದು ಎಚ್ಚರಿಕೆ ನೀಡಿದರು ಕುಮಾರಸ್ವಾಮಿ ಅವರು.

ಒಣ ಅನುಕಂಪ ತೋರಿದ ಡಿಕೆಶಿಗೆ ತಿರುಗೇಟು

ಜೆಡಿಎಸ್‌-ಬಿಜೆಪಿ ಮೈತ್ರಿಯ ಬಗ್ಗೆ ಸೋಮವಾರ ನಮ್ಮ ಪಕ್ಷದ ಕೋರ್ ಕಮಿಟಿ ಸದಸ್ಯರು ವ್ಯಕ್ತಪಡಿಸಿದ ಭಾವನೆಗಳನ್ನಷ್ಟೇ ನಾನು ಹೇಳಿದ್ದೇನೆ. ನಮ್ಮ ಪಕ್ಷದಿಂದ 28 ಲೋಕಸಭೆ ಕ್ಷೇತ್ರಗಳಲ್ಲಿ ಎರಡೂ ಪಕ್ಷಗಳ ಕಾರ್ಯಕರ್ತರು ಒಟ್ಟಾಗಿ ಹೋಗಬೇಕು ಎಂದು ಹೇಳಿದ್ದೆವು. ಆ ಸಭೆಯಲ್ಲಿ ಪ್ರಮುಖವಾಗಿ ಏನೇನು ಚರ್ಚೆ ಆಗಿತ್ತು ಎಂಬುದನ್ನು ಮಾಧ್ಯಮಗಳ ಮೂಲಕ ಹೇಳಿದ್ದೇನೆ. ಅಂದ ಮಾತ್ರಕ್ಕೆ ನಮಗೆ ಬಿಜೆಪಿ ಮೇಲೆ ವಿಶ್ವಾಸ ಹೋಗಿದೆ ಅಂತ ಅಲ್ಲ. ಆರಂಭದಿಂದಲೂ ನಾವು 3 ಕ್ಷೇತ್ರಗಳನ್ನು ಕೇಳಿದ್ದೇವೆ. ಅದನ್ನು ಹೊರತುಪಡಿಸಿದರೆ ಬಿಜೆಪಿಯವರು ನಮ್ಮನ್ನು ಗೌರವಯುತವಾಗಿ ಕಂಡಿದ್ದಾರೆ. ಇದನ್ನೇ ಕಾಂಗ್ರೆಸ್‌ಪಕ್ಷದ ಸೋಕಾಲ್ಡ್‌ ಟ್ರಬಲ್‌ ಶೂಟರ್‌, ಹಿಂದೆ ನಮ್ಮ ಮೈತ್ರಿ ಸರಕಾರವನ್ನು ತೆಗೆದಿದ್ದವರು ನಮ್ಮ ಕಾರ್ಯಕರ್ತರ ಬಗ್ಗೆ ಅನುಕಂಪದ ಮಾತನ್ನಾಡಿದ್ದಾರೆ. ಯಾವನಿಗೆ ಬೇಕು ಇವರ ಅನುಕಂಪ? ನಮ್ಮ ಕಾರ್ಯಕರ್ತರಿಗೆ ಎಲ್ಲವನ್ನೂ ಎದುರಿಸುವ ಶಕ್ತಿ ಇದೆ ಎಂದು ಡಿ.ಕೆ.ಶಿವಕುಮಾರ್‌ ಅವರನ್ನು ತರಾಟೆಗೆ ತೆಗೆದುಕೊಂಡರು.

ಮಂಡ್ಯ ಕ್ಷೇತ್ರದಲ್ಲಿ ಕೂಡ ಒಂದು ಕೋಟಿ ರೂಪಾಯಿ ಸೀಜ್ ಆಗಿದೆ. ಈ ಹಣ ಅಡಿಕೆ ವ್ಯಾಪಾರದ್ದು ಎಂದು ಹೇಳಿಕೊಂಡಿದ್ದಾರೆ. ನಮ್ಮ ಮಂಡ್ಯ ಜಿಲ್ಲೆಯಲ್ಲಿ ಅಷ್ಟು ಹಣ ದುಡಿಯುವ ಅಡಿಕೆ ವ್ಯಾಪಾರಿಗಳಿದ್ದಾರಾ? ಎಂದು ನನಗೆ ಅಚ್ಚರಿ ಉಂಟಾಯಿತು. ಇದು ಕೂಡ ಕಾಂಗ್ರೆಸ್‌ಅಭ್ಯರ್ಥಿ ಹಣವೇ ಆಗಿದೆ. ಅಲ್ಲಿಯೂ ಕಾಂಗ್ರೆಸ್‌ಪಕ್ಷ ಹಣದ ಹೊಳೆಯನ್ನೇ ಹರಿಸುತ್ತಿದೆ ಎಂದು ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಬಂಡೆಪ್ಪ ಕಾಶೆಂಪೂರ್‌, ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್‌ಕುಮಾರಸ್ವಾಮಿ, ಹಿರಿಯ ಮುಖಂಡರಾದ ಗೊಟ್ಟಿಗೆರೆ ಮಂಜುನಾಥ್‌, ಎ.ಪಿ.ರಂಗನಾಥ್‌ಸೇರಿದಂತೆ ಪಕ್ಷದ ಹಲವಾರು ನಾಯಕರು ಹಾಜರಿದ್ದರು.

ಕೂದಲು ಉದುರುವ ಸಮಸ್ಯೆಗೆ ‘ಈ ಪದಾರ್ಥ’ ಶಾಶ್ವತ ಪರಿಹಾರ, ಏನದು.?

ನಾನೊಬ್ಬ ಸ್ಟ್ರಾಂಗ್ CM, ನಿಮ್ಮ ಹಾಗೆ ವೀಕ್ PM ಅಲ್ಲ: ‘ಮೋದಿ’ ವಿರುದ್ಧ ಸಿದ್ಧರಾಮಯ್ಯ ವಾಗ್ಧಾಳಿ

ಕಾಂಗ್ರೆಸ್‌ ಅಭ್ಯರ್ಥಿಯಿಂದ ಚುನಾವಣಾ ಅಕ್ರಮ: ಕುಕ್ಕರ್‌ ಹಣ ಹಂಚಿಕೆ ದಾಖಲೆ ಬಿಡುಗಡೆ ಮಾಡಿದ HDK Congress candidate's election rigging: HDK releases cooker money distribution documents
Share. Facebook Twitter LinkedIn WhatsApp Email

Related Posts

BIG NEWS: ಜೂ.9ರಿಂದ ದ್ವಿತೀಯ PUC ಪರೀಕ್ಷೆ-3 ಆರಂಭ: ಬೆಂಗಳೂರಿನ ಪರೀಕ್ಷಾ ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆ ಜಾರಿ

06/06/2025 8:30 PM2 Mins Read

BREAKING: ಕೊಲೆ ಪ್ರಕರಣದಲ್ಲಿ ಸಾಕ್ಷಿಗೆ ಹಣದ ಆಮಿಷ: ಶಾಸಕ ವಿನಯ್ ಕುಲಕರ್ಣಿ ಜಾಮೀನು ರದ್ದು

06/06/2025 8:18 PM1 Min Read

ಶಿವಮೊಗ್ಗ DCC ಬ್ಯಾಂಕ್ ಹಗರಣ: ಇಡಿಯಿಂದ ಮಾಜಿ ಅಧ್ಯಕ್ಷ ಆರ್.ಎಂ ಮಂಜುನಾಥ್ ಗೌಡ, ಪತ್ನಿಗೆ ಸೇರಿದ 13.91 ಕೋಟಿ ಆಸ್ತಿ ಜಪ್ತಿ

06/06/2025 7:17 PM1 Min Read
Recent News

BIG NEWS: ಜೂ.9ರಿಂದ ದ್ವಿತೀಯ PUC ಪರೀಕ್ಷೆ-3 ಆರಂಭ: ಬೆಂಗಳೂರಿನ ಪರೀಕ್ಷಾ ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆ ಜಾರಿ

06/06/2025 8:30 PM

BREAKING: ಕೊಲೆ ಪ್ರಕರಣದಲ್ಲಿ ಸಾಕ್ಷಿಗೆ ಹಣದ ಆಮಿಷ: ಶಾಸಕ ವಿನಯ್ ಕುಲಕರ್ಣಿ ಜಾಮೀನು ರದ್ದು

06/06/2025 8:18 PM

BREAKING : 2026ರ ಏಪ್ರಿಲ್’ನಲ್ಲಿ ಬಾಂಗ್ಲಾದೇಶದಲ್ಲಿ ‘ರಾಷ್ಟ್ರೀಯ ಚುನಾವಣೆ’ ಆಯೋಜನೆ ; ‘ಮೊಹಮ್ಮದ್ ಯೂನಸ್’ ಘೋಷಣೆ

06/06/2025 7:54 PM

BREAKING : ‘ಮೆಹುಲ್ ಚೋಕ್ಸಿ’ಗೆ ಬಿಗ್ ಶಾಕ್ ; ಬ್ಯಾಂಕ್ ಖಾತೆ, ಮ್ಯೂಚುವಲ್ ಫಂಡ್‌, ಷೇರುಗಳ ಮುಟ್ಟುಗೋಲಿಗೆ ‘SEBI’ ಆದೇಶ

06/06/2025 7:19 PM
State News
KARNATAKA

BIG NEWS: ಜೂ.9ರಿಂದ ದ್ವಿತೀಯ PUC ಪರೀಕ್ಷೆ-3 ಆರಂಭ: ಬೆಂಗಳೂರಿನ ಪರೀಕ್ಷಾ ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆ ಜಾರಿ

By kannadanewsnow0906/06/2025 8:30 PM KARNATAKA 2 Mins Read

ಬೆಂಗಳೂರು: 2025ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-3 ಜೂನ್.9ರಿಂದ ಆರಂಭಗೊಳ್ಳಲಿದೆ. ಈ ಹಿನ್ನಲೆಯಲ್ಲಿ ಪರೀಕ್ಷಾ ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಿ…

BREAKING: ಕೊಲೆ ಪ್ರಕರಣದಲ್ಲಿ ಸಾಕ್ಷಿಗೆ ಹಣದ ಆಮಿಷ: ಶಾಸಕ ವಿನಯ್ ಕುಲಕರ್ಣಿ ಜಾಮೀನು ರದ್ದು

06/06/2025 8:18 PM

ಶಿವಮೊಗ್ಗ DCC ಬ್ಯಾಂಕ್ ಹಗರಣ: ಇಡಿಯಿಂದ ಮಾಜಿ ಅಧ್ಯಕ್ಷ ಆರ್.ಎಂ ಮಂಜುನಾಥ್ ಗೌಡ, ಪತ್ನಿಗೆ ಸೇರಿದ 13.91 ಕೋಟಿ ಆಸ್ತಿ ಜಪ್ತಿ

06/06/2025 7:17 PM

ಶಿವಮೊಗ್ಗ: ಸಾಗರದ ಮರ್ಕಝ್ ಮ್ಯಾನೇಜರ್ ಶರೀಫ್ ಸಖಾಫಿ ನಿಧನ

06/06/2025 6:56 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.