ನವದೆಹಲಿ: ಛತ್ತೀಸ್ ಗಢದಲ್ಲಿ ನಡೆದ ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಭ್ಯರ್ಥಿಯ ಹೆಸರಿನ ‘ಶಿವ’ ಅನ್ನು ಭಗವಾನ್ ರಾಮನಿಗೆ ಹೋಲಿಸಿದ ನಂತರ ರಾಜಕೀಯ ವಿವಾದ ಭುಗಿಲೆದ್ದಿದೆ. ಒಡೆದು ಆಳುವುದು ಕಾಂಗ್ರೆಸ್ ಪಕ್ಷದ ಪ್ರವೃತ್ತಿಯಾಗಿದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗುರುವಾರ ಹೇಳಿದ್ದಾರೆ.

ಒಡೆದು ಆಳುವುದು ಕಾಂಗ್ರೆಸ್ ನ ಪ್ರವೃತ್ತಿಯಾಗಿದೆ. ಕಾಂಗ್ರೆಸ್ ಪ್ರತಿ ವಿಷಯದಲ್ಲೂ ಬ್ರಿಟಿಷರ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗುತ್ತಿದೆ. ಅವರು ಜಾತಿ, ಪ್ರದೇಶ ಮತ್ತು ಭಾಷೆಯ ಹೆಸರಿನಲ್ಲಿ ಸಮಾಜವನ್ನು ವಿಭಜಿಸಿದರು” ಎಂದು ಅವರು ಎಎನ್ಐಗೆ ತಿಳಿಸಿದರು.

Share.
Exit mobile version