ಕಾಂಗ್ರೆಸ್‌ ಸರ್ಕಾರ ರಸ್ತೆಗಳ ಅಭಿವೃದ್ಧಿಯನ್ನು ಮರೆತಿದೆ: ಆರ್.ಅಶೋಕ್

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ರಸ್ತೆಗಳ ಅಭಿವೃದ್ಧಿಯನ್ನು ಮರೆತಿದೆ. ಸಿಎಂ ಸಿದ್ದರಾಮಯ್ಯ ಒಂದು ಲೇಯರ್‌ ಡಾಂಬರೀಕರಣಕ್ಕೆ ಸೂಚನೆ ನೀಡಿದ್ದಾರೆ. ಅದಕ್ಕೆ ಬೇಕಾದ 4-5 ಸಾವಿರ ಕೋಟಿ ರೂ. ಎಲ್ಲಿದೆ? ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಪ್ರಶ್ನೆ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಸ್ತೆಗುಂಡಿಯಿಂದಾಗಿ ಸುಮಾರು ಹನ್ನೆರಡು ಜನರು ಸತ್ತಿದ್ದು, ಇದು ಮೃತ್ಯುಕೂಪವಾಗಿದೆ. ಡಿಸಿಎಂ ಡಿ.ಕೆ.ಶಿವಕುಮಾರ್‌ ಕೂಲಿಂಗ್‌ ಗ್ಲಾಸ್‌ ಹಾಕಿಕೊಂಡು ನಗರ ಪ್ರದಕ್ಷಿಣೆ ಮಾಡಿದರೆ ರಸ್ತೆಗುಂಡಿ ಕಾಣುವುದಿಲ್ಲ. ತೆರಿಗೆ ಪಾವತಿಸಲ್ಲ, ರಸ್ತೆಗುಂಡಿ ನಾವೇ ಮುಚ್ಚುತ್ತೇವೆ ಎಂದು ಜನರು ಹೇಳುತ್ತಿದ್ದಾರೆ. ಬೆಂಗಳೂರು ಸೇರಿದಂತೆ … Continue reading ಕಾಂಗ್ರೆಸ್‌ ಸರ್ಕಾರ ರಸ್ತೆಗಳ ಅಭಿವೃದ್ಧಿಯನ್ನು ಮರೆತಿದೆ: ಆರ್.ಅಶೋಕ್