Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನೀವು ಇನ್ಮುಂದೆ ‘JEE, NEET’ಗಾಗಿ ಪರೀಕ್ಷಾ ನಗರ ಆಯ್ಕೆ ಮಾಡಲು ಸಾಧ್ಯವಿಲ್ಲ ; ಆಧಾರ್ ವಿಳಾಸದಲ್ಲೇ ಎಕ್ಸಾಂ

09/10/2025 5:33 PM

ಗೋಧಿ ಮತ್ತು ಬೆಲ್ಲದಿಂದ ಈ ಉಪಾಯ ಮಾಡಿದರೆ ಆಕಸ್ಮಿಕವಾಗಿ ಕಂಕಣಭಾಗ್ಯ, ಧನಪ್ರಾಪ್ತಿಯಾಗುವುದು ಖಚಿತ

09/10/2025 5:26 PM

ರಾಜ್ಯದ ಮಹಿಳಾ ನೌಕರರಿಗೆ ‘ವೇತನ ಸಹಿತ ಋತುಚಕ್ರ ರಜೆ’: ಸರ್ಕಾರಿ ನೌಕರರ ಸಂಘದಿಂದ ಸರ್ಕಾರಕ್ಕೆ ಧನ್ಯವಾದ

09/10/2025 5:22 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮದ್ದೂರು ಘಟನೆಗೆ ಕಾಂಗ್ರೆಸ್ ಸರಕಾರವೇ ಕಾರಣ; ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪ
KARNATAKA

ಮದ್ದೂರು ಘಟನೆಗೆ ಕಾಂಗ್ರೆಸ್ ಸರಕಾರವೇ ಕಾರಣ; ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪ

By kannadanewsnow0908/09/2025 4:28 PM

ನವದೆಹಲಿ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಕೆಟ್ಟ ಆಡಳಿತ, ನಡವಳಿಕೆಯಿಂದಲೇ ಮದ್ದೂರಿನಲ್ಲಿ ಗಣಪತಿ ಮೆರವಣಿಗೆ ಮೇಲೆ ಕಲ್ಲು ಎಸೆಯುವಂಥ ಪರಿಸ್ಥಿತಿ ಸೃಷ್ಟಿಯಾಗಿದೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಆರೋಪಿಸಿದರು.

ಘಟನೆಯ ವಿಷಯ ತಿಳಿಯುತ್ತಿದ್ದಂತೆಯೇ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳ ಜತೆ ಮಾತನಾಡಿ ಮಾಹಿತಿ ಪಡೆದುಕೊಂಡ ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು; ಮಂಡ್ಯ ಜಿಲ್ಲೆಯಲ್ಲಿ ಇಷ್ಟು ದೊಡ್ಡಮಟ್ಟದಲ್ಲಿ ಇಂಥ ಕೆಟ್ಟ ಘಟನೆಗಳು ನಡೆಯಲು ಕಾಂಗ್ರೆಸ್ ಸರಕಾರವೇ ಕಾರಣ ಎಂದು ದೂರಿದರು.

ಶಾಂತಿ ನೆಮ್ಮದಿಗೆ ಹೆಸರಾಗಿದ್ದ ಮಂಡ್ಯ ಜಿಲ್ಲೆಗೆ ಬೆಂಕಿ ಹಚ್ಚುವ ಕೆಲಸವಾಗುತ್ತಿದೆ. ಹಿಂದೆಂದೂ ಈ ಜಿಲ್ಲೆಯಲ್ಲಿ ಇಂಥ ಘಟನೆಗಳು ಆಗಿಲ್ಲ. ನಾಗಮಂಗಲದಲ್ಲಿ ಕೆಲ ದುಷ್ಟಶಕ್ತಿಗಳು ಬೆಂಕಿ ಹಾಕುವ ಕೆಲಸ ಮಾಡಿದವು. ಈಗ ಮದ್ದೂರಿನಲ್ಲಿಯೂ ಅಂಥ ಶಕ್ತಿಗಳೇ ಜನರ ನೆಮ್ಮದಿ ಕೆಡಿಸುವ ಹುನ್ನಾರ ನಡೆಸಿವೆ ಎಂದು ಅವರು ಆಪಾದಿಸಿದರು.

ಮಂಡ್ಯ ಜಿಲ್ಲೆ ಯಾವಾಗಲೂ ಶಾಂತಿ ಸೌಹಾರ್ದತೆಗೆ ಹೆಸರಾಗಿದೆ. ಜನರು ಕಷ್ಟಪಟ್ಟು ಕೆಲಸ ಮಾಡುತ್ತಾ ನೆಮ್ಮದಿ ಜೀವನ ಮಾಡುತ್ತಿದ್ದಾರೆ. ಕುವೆಂಪು ಅವರ ಆಶಯದ ಸರ್ವ ಜನಾಂಗದ ಶಾಂತಿಯ ತೋಟವಾಗಿದೆ. ಆದರೆ ಕೆಲ ಶಕ್ತಿಗಳು ವ್ಯವಸ್ಥಿತವಾಗಿ ಜನರ ನೆಮ್ಮದಿ ಹಾಳು ಮಾಡುವ ಕೆಲಸ ಮಾಡುತ್ತಿವೆ. ಕಾಂಗ್ರೆಸ್‌ ಪಕ್ಷದ ಓಲೈಕೆ ರಾಜಕಾರಣದಿಂದ ಇಂಥ ಕೆಟ್ಟ ಪರಿಸ್ಥಿತಿ ರಾಜ್ಯದ ಉದ್ದಗಲಕ್ಕೂ ಸೃಷ್ಟಿಯಾಗಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.

ಶಾಂತಿ ನೆಲೆಸುವುದಕ್ಕೆ ಎಲ್ಲರೂ ಸಹಕಾರ ನೀಡಬೇಕು. ನಾನು ಈಗಾಗಲೇ ಜಿಲ್ಲಾಧಿಕಾರಿ ಮತ್ತು ಪೋಲೀಸ್‌ ವರಿಷ್ಠಾಧಿಕಾರಿಗಳ ಜತೆ ಮಾತನಾಡಿ ಕಿಡಿಗೇಡಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದೇನೆ ಎಂದು ಕೇಂದ್ರ ಸಚಿವರು ಹೇಳಿದರು.

ಸರ್ವ ಜನಾಂಗದ ಶಾಂತಿಯ ತೋಟವಾದ ರಾಜ್ಯಕ್ಕೆ ಬೆಂಕಿ ಹಚ್ಚುವ ಕೆಲಸ ಆಗುತ್ತಿದೆ. ಕಾಂಗ್ರೆಸ್ ನಡವಳಿಕೆ, ಅವರ ಆಡಳಿತವೇ ಈ ಘಟನೆಗೆ ಕಾರಣ. ಹಿಂದೂಗಳು ಅಸಮಾಧಾನವಾಗುವ ರೀತಿಯಲ್ಲಿ ‌ಕಾಂಗ್ರೆಸ್ ಕೆಲಸ ಮಾಡುತ್ತಿದೆ. ಇದನ್ನು ನಾನು ರಾಜಕೀಯ ಉದ್ದೇಶದಿಂದ ಹೇಳುತ್ತಿಲ್ಲ. ರಾಜ್ಯದ ಹಲವೆಡೆ ಗಲಾಟೆಗಳು ನಡೆಯಲು ಕಾಂಗ್ರೆಸ್ ಪಕ್ಷವೇ ಕಾರಣ. ಈ ಮೂಲಕ ಕಾಂಗ್ರೆಸ್ ಪಕ್ಷವು ತನ್ನ ಅವನತಿಯನ್ನು ತಾನೇ ತಂದುಕೊಳ್ಳುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಈ ಹಿಂದೆ ಇಂಥ ಘಟನೆಗಳು ಒಂದೆರಡು ಜಿಲ್ಲೆಗಳಲ್ಲಿ ಅಲ್ಲೊಂದು ಇಲ್ಲೊಂದು ನಡೆಯುತ್ತಿದ್ದವು. ಕಾಂಗ್ರೆಸ್‌ ಸರಕಾರ ಬಂದ ಮೇಲೆ ಎಲ್ಲಾ ಜಿಲ್ಲೆಗಳಲ್ಲಿ ಪ್ರತೀ ಭಾಗದಲ್ಲಿಯೂ ಅವ್ಯಾಹತವಾಗಿ ನಡೆಯುತ್ತಿವೆ. ಆ ಕೆಟ್ಟ ಪರಿಸ್ಥಿತಿ ಕಾಂಗ್ರೆಸ್ ಆಡಳಿತದಲ್ಲಿ ಇಡೀ ರಾಜ್ಯಕ್ಕೆ ವ್ಯಾಪಿಸಿದೆ. ಕೇವಲ ಓಲೈಕೆ ರಾಜಕಾರಣದಿಂದ ಇಷ್ಟೆಲ್ಲಾ ನಡೆಯುತ್ತಿದೆ ಎಂದು ಕೇಂದ್ರ ಸಚಿವರು ದೂರಿದರು.

ಇಂಥ ಗಳಭೆಗಳನ್ನು ನೋಡಿದರೆ ಕಾಂಗ್ರೆಸ್ ಪಕ್ಷದ ಅವನತಿ ಆರಂಭವಾಗಿದೆ ಎಂದು ಅರ್ಥವಾಗುತ್ತದೆ. ಇದೆಲ್ಲವನ್ನೂ ಕಾಂಗ್ರೆಸ್ ಅರ್ಥ ಮಾಡಿಕೊಳ್ಳದಿದ್ದರೆ ಇದು ಸೆಲ್ಪ್ ಸುಸೈಡ್ (ಆತ್ಮಹತ್ಯೆ) ಆಗಲಿದೆ. ಸಾರ್ವಜನಿಕ ಆಸ್ತಿ-ಪಾಸ್ತಿ ಹಾನಿ ಆಗಬಾರದು. ಕಟ್ಟುನಿಟ್ಟಿನ ಕ್ರಮ ಕೈಗೊಂಡು ಕಿಡಿಗೇಡಿಗಳ ಹೆಡೆಮುರಿ ಕಟ್ಟುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದೇನೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ಕೊಟ್ಟರು.

BREAKING: ಶಾಸಕ ವೀರೇಂದ್ರ ವಿರುದ್ಧದ ಅಕ್ರಮ ಆನ್ ಲೈನ್ ಬೆಟ್ಟಿಂಗ್ ಕೇಸ್: 14 ದಿನ ನ್ಯಾಯಾಂಗ ಬಂಧನ

BREAKING : ನೇಪಾಳದಲ್ಲಿ ಸಾಮಾಜಿಕ ಮಾಧ್ಯಮ ನಿಷೇಧ ವಿರೋಧಿಸಿ ಬೃಹತ್ ಪ್ರತಿಭಟನೆ ; ಒರ್ವ ಸಾವು, 80 ಜನರಿಗೆ ಗಾಯ

Share. Facebook Twitter LinkedIn WhatsApp Email

Related Posts

ಗೋಧಿ ಮತ್ತು ಬೆಲ್ಲದಿಂದ ಈ ಉಪಾಯ ಮಾಡಿದರೆ ಆಕಸ್ಮಿಕವಾಗಿ ಕಂಕಣಭಾಗ್ಯ, ಧನಪ್ರಾಪ್ತಿಯಾಗುವುದು ಖಚಿತ

09/10/2025 5:26 PM2 Mins Read

ರಾಜ್ಯದ ಮಹಿಳಾ ನೌಕರರಿಗೆ ‘ವೇತನ ಸಹಿತ ಋತುಚಕ್ರ ರಜೆ’: ಸರ್ಕಾರಿ ನೌಕರರ ಸಂಘದಿಂದ ಸರ್ಕಾರಕ್ಕೆ ಧನ್ಯವಾದ

09/10/2025 5:22 PM1 Min Read

ಮಹಿಳಾ ನೌಕರರಿಗೆ ಮುಟ್ಟಿನ ರಜೆ: ಸಿಎಂ, ಡಿಸಿಎಂಗೆ ಸಾಗರದ ಸರ್ಕಾರಿ ನೌಕರರ ಸಂಘದ ಮಹಿಳಾ ಪದಾಧಿಕಾರಿಗಳು ಧನ್ಯವಾದ

09/10/2025 5:17 PM2 Mins Read
Recent News

ನೀವು ಇನ್ಮುಂದೆ ‘JEE, NEET’ಗಾಗಿ ಪರೀಕ್ಷಾ ನಗರ ಆಯ್ಕೆ ಮಾಡಲು ಸಾಧ್ಯವಿಲ್ಲ ; ಆಧಾರ್ ವಿಳಾಸದಲ್ಲೇ ಎಕ್ಸಾಂ

09/10/2025 5:33 PM

ಗೋಧಿ ಮತ್ತು ಬೆಲ್ಲದಿಂದ ಈ ಉಪಾಯ ಮಾಡಿದರೆ ಆಕಸ್ಮಿಕವಾಗಿ ಕಂಕಣಭಾಗ್ಯ, ಧನಪ್ರಾಪ್ತಿಯಾಗುವುದು ಖಚಿತ

09/10/2025 5:26 PM

ರಾಜ್ಯದ ಮಹಿಳಾ ನೌಕರರಿಗೆ ‘ವೇತನ ಸಹಿತ ಋತುಚಕ್ರ ರಜೆ’: ಸರ್ಕಾರಿ ನೌಕರರ ಸಂಘದಿಂದ ಸರ್ಕಾರಕ್ಕೆ ಧನ್ಯವಾದ

09/10/2025 5:22 PM

ಮಹಿಳಾ ನೌಕರರಿಗೆ ಮುಟ್ಟಿನ ರಜೆ: ಸಿಎಂ, ಡಿಸಿಎಂಗೆ ಸಾಗರದ ಸರ್ಕಾರಿ ನೌಕರರ ಸಂಘದ ಮಹಿಳಾ ಪದಾಧಿಕಾರಿಗಳು ಧನ್ಯವಾದ

09/10/2025 5:17 PM
State News
KARNATAKA

ಗೋಧಿ ಮತ್ತು ಬೆಲ್ಲದಿಂದ ಈ ಉಪಾಯ ಮಾಡಿದರೆ ಆಕಸ್ಮಿಕವಾಗಿ ಕಂಕಣಭಾಗ್ಯ, ಧನಪ್ರಾಪ್ತಿಯಾಗುವುದು ಖಚಿತ

By kannadanewsnow0909/10/2025 5:26 PM KARNATAKA 2 Mins Read

ಈ ಉಪಾಯವನ್ನು ಮಾಡುವುದರಿಂದ ಹೊಸದಾಗಿ ಮನೆಯನ್ನು ಕೊಂಡುಕೊಳ್ಳುವವರಿಗೆ ಹಾಗೂ ಮನೆಯನ್ನು ಕಟ್ಟುತ್ತಿದ್ದು ಹಾಗು ಅದು ಅರ್ಧಕ್ಕೆ ನಿಂತು ಹೋಗಿದ್ದರೆ ಈ…

ರಾಜ್ಯದ ಮಹಿಳಾ ನೌಕರರಿಗೆ ‘ವೇತನ ಸಹಿತ ಋತುಚಕ್ರ ರಜೆ’: ಸರ್ಕಾರಿ ನೌಕರರ ಸಂಘದಿಂದ ಸರ್ಕಾರಕ್ಕೆ ಧನ್ಯವಾದ

09/10/2025 5:22 PM

ಮಹಿಳಾ ನೌಕರರಿಗೆ ಮುಟ್ಟಿನ ರಜೆ: ಸಿಎಂ, ಡಿಸಿಎಂಗೆ ಸಾಗರದ ಸರ್ಕಾರಿ ನೌಕರರ ಸಂಘದ ಮಹಿಳಾ ಪದಾಧಿಕಾರಿಗಳು ಧನ್ಯವಾದ

09/10/2025 5:17 PM

ಕಲಬುರ್ಗಿಯಲ್ಲಿ ಘೋರ ದುರಂತ : ಕೌಟುಂಬಿಕ ಕಲಹ ಹಿನ್ನಲೆ, ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆಗೆ ಶರಣು

09/10/2025 5:00 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.