ರಾಮನಗರ : ಕೇಂದ್ರದಲ್ಲಿ ನಾವು ಮತ್ತೆ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿಯ ಮಾಜಿ ಸಚಿವ ಸಿಪಿ ಯೋಗೇಶ್ವರ್ ಭವಿಷ್ಯ ನುಡಿದಿದ್ದಾರೆ.
BREAKING: ಜಮ್ಮು-ಕಾಶ್ಮೀರದಲ್ಲಿ ‘ಭಾರಿ ಹಿಮಪಾತ’: ಹಲವರಿಗೆ ಗಾಯ
ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಕೋಡಂಬಳ್ಳಿ ಗ್ರಾಮದಲ್ಲಿ ಮಾತನಾಡಿದ ಅವರು, ಕೇಂದ್ರದಲ್ಲಿ ನಾವು ಮತ್ತೆ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ತನ್ನಿಂದ ತಾನೇ ಪತನಗೊಳ್ಳುತ್ತೆ ಎಂದು ಕೊಂಡಂಬಳ್ಳಿ ಗ್ರಾಮದಲ್ಲಿ ಮಾಜಿ ಸಚಿವ ಸಿಪಿ ಯೋಗೇಶ್ವರ್ ಹೇಳಿಕೆ ನೀಡಿದರು.
ಎರಡು ಪಕ್ಷಗಳ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ ಬಿಜೆಪಿ ಜೆಡಿಎಸ್ ಪಕ್ಷದ ಕಾರ್ಯಕರ್ತರು ಒಗ್ಗಟ್ಟಿನಿಂದ ಇದ್ದಾರೆ.ಡಾ. ಸಿ ಎನ್ ಮಂಜುನಾಥ್ ಆರೋಗ್ಯ ಸಚಿವರಾಗಲಿ ಎಂದು ನಿಲ್ಲಿಸಿದ್ದೇವೆ ಮೋದಿ ಸಂಪುಟದಲ್ಲಿ ಆರೋಗ್ಯ ಸಚಿವರಾಗಲಿ ಎಂದು ನಿಲ್ಲಿಸಿದ್ದೇವೆ.
ಬೆಂಗಳೂರಲ್ಲಿ ಹಣಕ್ಕಾಗಿ ಸಾಕು ಮಕ್ಕಳಿಂದ ಮಹಿಳೆ ಕೊಲೆ ಯತ್ನ: ಮನೆಯಲ್ಲಿದ್ದ ನಗದು, ಚಿನ್ನಾಭರಣ ದರೋಡೆ
ಡಾಕ್ಟರ್ ಸಿಎನ್ ಮಂಜುನಾಥ್ ಚುನಾವಣೆಗೆ ನಿಲ್ಲಲ್ಲ ಎಂದು ಹೇಳಿದ್ದರು ಬಹಳ ಕಷ್ಟಪಟ್ಟು ನಾವು ಹೋಗಿ ಸಾಕಷ್ಟು ಮನವಿ ಮಾಡಿಕೊಂಡ್ವಿ ಎಲ್ಲರ ಮನೆಗೆ ಬಳಿಕ ಚುನಾವಣೆಗೆ ನಿಲ್ಲಲು ಮಂಜುನಾಥ್ ಒಪ್ಪಿದ್ದರು ಎಂದು ಮಾಜಿ ಸಚಿವ ಸಿಪಿ ಯೋಗೇಶ್ವರ್ ತಿಳಿಸಿದರು.