Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೇ.24ರಂದು ‘ಸೇಡಂ’ ತಾಲ್ಲೂಕಿನಲ್ಲಿ ಬಿಜೆಪಿಯಿಂದ ‘ಬೃಹತ್ ತಿರಂಗ ಯಾತ್ರೆ’

20/05/2025 9:55 PM

5 ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಎಷ್ಟು ಗೊತ್ತೇ? ಇಲ್ಲಿದೆ ಸಿಎಂ ಸಿದ್ಧರಾಮಯ್ಯ ಕೊಟ್ಟ ವಿವರ

20/05/2025 9:47 PM

ವಾಸಿಸುವವನೇ ನೆಲದ ಒಡೆಯ, ಇದು ನಮ್ಮ ಸಂಕಲ್ಪ: ಸಿಎಂ ಸಿದ್ಧರಾಮಯ್ಯ

20/05/2025 9:40 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನನ್ನ ವಿರುದ್ಧ ಷಡ್ಯಂತ್ರ್ಯಕ್ಕೆ ಕಾಂಗ್ರೆಸ್ ಸರಕಾರ ಟೂಲ್ ಕಿಟ್ ರೂಪಿಸಿದೆ: HDK ಗಂಭೀರ ಆರೋಪ
KARNATAKA

ನನ್ನ ವಿರುದ್ಧ ಷಡ್ಯಂತ್ರ್ಯಕ್ಕೆ ಕಾಂಗ್ರೆಸ್ ಸರಕಾರ ಟೂಲ್ ಕಿಟ್ ರೂಪಿಸಿದೆ: HDK ಗಂಭೀರ ಆರೋಪ

By kannadanewsnow0920/09/2024 6:34 PM

ಮೈಸೂರು: ನನ್ನ ವಿರುದ್ಧ ಡಿನೋಟಿ ಫಿಕೇಶನ್ ಆರೋಪ ಮಾಡಿರುವ ರಾಜ್ಯ ಕಾಂಗ್ರೆಸ್ ಸರಕಾರದ ಮೂವರು ಸಚಿವರ ವಿರುದ್ಧ ಹರಿಹಾಯ್ದಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ಅದೊಂದು ಸ್ಕ್ರಿಪ್ಟೆಡ್ಡ್ ಮಾದ್ಯಮಗೋಷ್ಠಿ ಎಂದು ಲೇವಡಿ ಮಾಡಿದರು.

ಮೈಸೂರು ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಮಾಧ್ಯಮಗಳ ಜತೆ ಮಾತನಾಡಿದ ಅವರು; ಯಾರೂ ಬರೆದುಕೊಟ್ಟ ಸ್ಕ್ರಿಪ್ಟ್ ಅನ್ನು ಮೂವರು ಸಚಿವರು ಮಾಧ್ಯಮಗಳ ಮುಂದೆ ಹೇಳಿದ್ದಾರೆ. ಅಲ್ಲಿ ಅಂದು ಮುಖ್ಯಮಂತ್ರಿ ಆಗಿದ್ದ ನಾನೇನು ಬರೆದಿದ್ದೇನೆ, ನಾನೇನು ಆದೇಶ ಮಾಡಿದ್ದೇನೆ ಎಂಬುದು ಅವರಿಗೆ ಗೊತ್ತಿಲ್ಲವೇ? ಎಂದು ಕುಟುಕಿದರು.

ಈ ಸಂದರ್ಭದಲ್ಲಿ ಸಚಿವರು, ತಮ್ಮ ಹಾಗೂ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ಮಾಡಲು ಸಚಿವರಿಗೆ ಬರೆದುಕೊಡಲಾಗಿದ್ದ ಟೂಲ್ ಕಿಟ್ ಪ್ರತಿಯನ್ನು ಮಾಧ್ಯಮಗಳ ಮುಂದೆ ಪ್ರದರ್ಶಿಸಿದರು.

ನಾನು ಕೇಂದ್ರ ಸಚಿವನಾಗಿದ್ದು ಇವರಿಗೆ ತಡೆಯಲು ಆಗುತ್ತಿಲ್ಲ. ಹೇಗಾದರೂ ನನ್ನನ್ನು ಕಟ್ಟಿ ಹಾಕಲು ಇವರು ಹಣಿಸುತ್ತಲೇ ಇದ್ದಾರೆ. ನನ್ನ ವಿರುದ್ಧ ಒಂದು ವ್ಯವಸ್ಥಿತ ಟೂಲ್ ಕಿಟ್ ರೆಡಿ ಮಾಡಿದ್ದಾರೆ. ಅದನ್ನೇ ಸಇವರಿಗಳು ಬಾಯಿಪಾಠ ಮಾಡಿದ್ದಾರೆ ಎಂದು ಕುಮಾರಸ್ವಾಮಿ ಅವರು ಆರೋಪಿಸಿದರು.

ಸರಿಯಾಗಿ ಸ್ಕ್ರಿಪ್ಟ್ ಬರೆದು ಕೊಟ್ಟಿಲ್ಲ

ಮಾಧ್ಯಮಗೋಷ್ಠಿ ನಡೆಸಿದ ಕೃಷ್ಣ ಭೈರೇಗೌಡ, ದಿನೇಶ್ ಗುಂಡೂರಾವ್ ಮತ್ತು ಸಂತೋಷ್ ಲಾಡ್ ಅವರಿಗೆ ಯಾರೋ ಸರಿಯಾಗಿ ಸ್ಕ್ರಿಪ್ಟ್ ಬರೆದು ಕೊಟ್ಟಿಲ್ಲ. ಅವರು ನನ್ನ ವಿರುದ್ಧ ಸುಳ್ಳಿನ ಕಥೆಯನ್ನೇ ಕಟ್ಟಿದ್ದಾರೆ. ನಾನು ಎಲ್ಲೂ ಕದ್ದು ಹೋಗುವ ಪ್ರಶ್ನೆಯೇ ಇಲ್ಲ. ಸುಳ್ಳು ಹೇಳಿಕೊಂಡು ಬೇರೆಯವರ ನೆರಳನ್ನು ತೆಗೆದುಕೊಳ್ಳುವ ಇವರಂತೆ ನಾನಲ್ಲ ಎಂದು ಗುಡುಗಿದರು.

ನಾನು ಕೇಂದ್ರ ಮಾತ್ರಿಯಾಗಿದ್ದೇ ಇವರಿಗೆ ಸಂಕಟ ಶುರುವಾಗಿದೆ. ನನ್ನ ವಿರುದ್ಧ ಕಾಂಗ್ರೆಸ್ ಪಕ್ಷದ ಸಚಿವರು, ಶಾಸಕರು ಸಾಲ ಸಾಲಾಗಿ ಟೀಕೆ ಮಾಡುತ್ತಿದ್ದಾರೆ. ಇಡೀ ಸರ್ಕಾರದ ಟಾರ್ಗೆಟ್ ನಾನೇ ಆಗಿದ್ದೇನೆ ಎಂದು ಅವರು ಕಿಡಿಕಾರಿದರು.

ಸಚಿವ ಕೃಷ್ಣ ಭೈರೇಗೌಡ ವಿರುದ್ಧ ಪ್ರಹಾರ ನಡೆಸಿದ ಕೇಂದ್ರ ಸಚಿವರು; “ಮಿಸ್ಟರ್ ಕೃಷ್ಣ ಭೈರೇಗೌಡ.. ನನ್ನನ್ನು ಅಲುಗಾಡಿಸಲು ನಿಮ್ಮಿಂದ ಸಾಧ್ಯವಿಲ್ಲ. ನೀವು ಏನೆಲ್ಲ ಷಡ್ಯಂತ್ರ ಮಾಡಿದರೂ ನನ್ನ ಬಗ್ಗೆ ಏನೂ ಸಿಗುವುದಿಲ್ಲ. ಕಂದಾಯ ಇಲಾಖೆಯಲ್ಲಿ ಏನೇನು ನಡೆಯುತ್ತಿದೆ, ನಡೆದಿದೆ ಎನ್ನುವುದು ನನಗೆ ಗೊತ್ತಿದೆ. ಮುಂದಿನ ದಿನಗಳಲ್ಲಿ ನಿಮ್ಮದೆಲ್ಲಾ ಹೊರಗೆ ಬರುತ್ತದೆ ಎಂದು ಎಚ್ಚರಿಕೆ ನೀಡಿದರು

ನಾನು ಬುದ್ಧಿವಂತ ಎನ್ನುತ್ತೀರಿ. ವಿದೇಶದಲ್ಲಿ ಓದಿಕೊಂಡು ಬಂದಿದ್ದೇನೆ ಎನ್ನುತ್ತೀರಿ. ಮಧ ಕೃಷ್ಣಭೈರೇಗೌಡ ವಿದೇಶದಲ್ಲಿ ಓದಿ, ಮೇಧಾವಿ ಎಂದು ಹೇಳುತ್ತೀರಿ. ಆದರೆ, ನಾನು ಹರದನಹಳ್ಳಿ ಎಂಬ ಹಳ್ಳಿಯಲ್ಲಿ ಓದಿ ಬೆಳೆದವನು. ಕೃಷ್ಣ ಭೈರೇಗೌಡರೇ.. ಮಾಧ್ಯಮಗೋಷ್ಠಿಗೂ ಮೊದಲು ಈ ಪ್ರಕರಣದ ಬಗ್ಗೆ, ದಾಖಲೆಗಳ ಬಗ್ಗೆ ಸರಿಯಾದ ಮಾಹಿತಿ ಪದ್ದುಕೊಳ್ಳಬೇಕಿತ್ತು ಅಲ್ಲವೇ? ಎಂದು ಕಂದಾಯ ಮಂತ್ರಿಗೆ ಟಾಂಗ್ ಕೊಟ್ಟರು.

ನಾನು ಇವರಂತೆ ಹಲ್ಕಾ ಕೆಲಸ ಮಾಡಿಲ್ಲ

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೊದಲ ದಿನದಿಂದಲೇ ವರ್ಗಾವಣೆ ದಂಧೆ ಸೇರಿ ಅನೇಕ ಅಕ್ರಮಗಳಲ್ಲಿ ಸರ್ಕಾರ ತೊಡಗಿದೆ. ಪ್ರತಿಪಕ್ಷದಲ್ಲಿ ಇರುವ ನಾನು ಸಹಜವಾಗಿಯೇ ಪ್ರಶ್ನೆ ಮಾಡಿದ್ದೇನೆ. ಅದೇ ಅಪರಾಧ ಆಗಿದೆ ಇವರಿಗೆ. ನಾನು ಸಿದ್ದರಾಮಯ್ಯ ಅವರಂತೆ ಹಲ್ಕಾ ಕೆಲಸ ಮಾಡಿಲ್ಲ ಎಂದು ಕೇಂದ್ರ ಸಚಿವರು ಟೀಕಾ ಪ್ರಹಾರ ನಡೆಸಿದರು.

ಮೂಡಾ ಹಗರಣದಲ್ಲಿ ಸರ್ಕಾರಿ ಜಮೀನನ್ನು ಹೇಗೆ ಕಬಳಿಸಿದ್ದಾರೆ ಎಂಬುದನ್ನು ದಾಖಲೆಗಳೇ ಜಗಜ್ಜಾಹೀರು ಮಾಡಿವೆ. ಆದರೆ, ಅದನ್ನು ಮುಚ್ಚಿಹಾಕಿಕೊಳ್ಳಲು ಆರೋಪ ಮಾಡಿದವರ ವಿರುದ್ಧವೇ ಪ್ರತ್ಯಾರೋಪ ಮಾಡಲಾಗುತ್ತಿದೆ. ಇದು ಇವರ ಮನಸ್ಥಿತಿ ಎಂದು ಅವರು ಟೀಕಿಸಿದರು.

ನನ್ನ ವಿರುದ್ಧದ ಪ್ರಕರಣಕ್ಕೂ ಸಿಎಂ ಸಿದ್ದರಾಮಯ್ಯ ವಿರುದ್ಧದ ಮೂಡಾ ಹಗರಣಕ್ಕೂ ವ್ಯತ್ಯಾಸವಿದೆ. ಅವರಂತೆ ನಾನು ಹಲ್ಕಾ ಕೆಲಸ ಮಾಡಿಲ್ಲ. ನನ್ನ ಪ್ರಕರಣದ ಬಗ್ಗೆ ತನಿಖೆ ಆಗಿದೆ. 2015ರಲ್ಲಿಯೇ ಇದರ ಬಗ್ಗೆ ವಿಸ್ತೃತ ತನಿಖೆ ನಡೆದು ಬಿ ರಿಪೋರ್ಟ್ ಅನ್ನು ಕೂಡ ಹಾಕಲಾಗಿತ್ತು. ಆ ಸಂದರ್ಭದಲ್ಲಿ ಈ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಆಗಿದ್ದರು. ಈಗ ರಾಜಕೀಯ ಸೇಡಿಗಾಗಿ ತೆಗೆದಿದ್ದಾರೆ. ಆಗ ತನಿಖೆ ಮಾಡದೆ ಏನು ಸುಮ್ಮನೆ ಇದ್ದಿದ್ದು ಯಾಕೆ? ಈಗ ನನ್ನನು ಸಿಲುಕಿಸಲು ಪ್ರಯತ್ನಿಸುತ್ತಿದ್ದಾರೆ. ಅವರ ಕುತಂತ್ರ ಫಲಿಸದು ಎಂದು ಕುಮಾರಸ್ವಾಮಿ ಅವರು ಗುಡುಗಿದರು.

ಇವರ ಹಾಗೆಯೇ ನಾನು ಯಾರಿಗೂ ಮೋಸ ಮಾಡಿಲ್ಲ. ಕಂಡವರ ಜಾಮೀನು ಹೊಡೆದುಕೊಂಡಿಲ್ಲ. ಇವರಂತೆ ಯಾರಿಗೂ ಟೋಪಿ ಹಾಕಿ ಜಮೀನು ಮಾಡಿಕೊಂಡಿಲ್ಲ. ನನ್ನ ಪತ್ನಿಯ ಸಂಬಂಧಿಕರು ಆ ಜಮೀನು ತೆಗೆದುಕೊಂಡಿದ್ದಾರೆ. ಆ ಜಮೀನು ಡಿನೋಟಿಫಿಕೇಶನ್ ಆಗಿರುವುದು ನಿಜ. ಎಲ್ಲವೂ ಕಾನೂನಾತ್ಮಕವಾಗಿ ಇದೆ. ತಪ್ಪು ಕೆಲಸ ಮಾಡಿಲ್ಲ. ಒಂದು ವೇಳೆ ನಾನು ತಪ್ಪು ಮಾಡಿ ಕೈಕಟ್ಟಿ ನಿಲ್ಲುವ ಸಮಯ ಬಂದರೆ ರಾಜಕಾರಣದಲ್ಲಿ ಐದು ಸೆಕೆಂಡ್ ಕೂಡ ಇರುವುದಿಲ್ಲ ಎಂದು ಕೇಂದ್ರ ಸಚಿವರು ಆಕ್ರೋಶ ವ್ಯಕ್ತಪಡಿಸಿದರು.

ಮಾಜಿ ಸಚಿವ ಸಾ.ರಾ.ಮಹೇಶ್, ಮಾಜಿ ಶಾಸಕ ಅಶ್ವಿನ್ ಕುಮಾರ್, ವಿಧಾನ ಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ, ಮಾಜಿ ಮೇಯರ್ ರವಿ ಕುಮಾರ್ ಮುಂತಾದವರು ಜತೆಯಲ್ಲಿ ಇದ್ದರು.

ಮುನಿರತ್ನ ನೇತೃತ್ವದಲ್ಲಿ ಏಡ್ಸ್ ಸೋಂಕು ಹರಡುವ ಜಾಲ: ಸಮಗ್ರ ತನಿಖೆಗೆ ಮಾಜಿ ಸಂಸದ ಡಿ.ಕೆ.ಸುರೇಶ್ ಒತ್ತಾಯ

BREAKING: ರಾಜ್ಯ ಸರ್ಕಾರದಿಂದ ‘ಮುಜರಾಯಿ ಇಲಾಖೆ ದೇವಾಲಯ’ಗಳಲ್ಲಿ ಪ್ರಸಾದ ತಯಾರಿಕೆಗೆ ‘ನಂದಿನಿ ತುಪ್ಪ’ ಬಳಸಲು ಆದೇಶ

ಬೆಂಗಳೂರು ಜನತೆ ಗಮನಕ್ಕೆ: ಸೆ.21ರ ನಾಳೆ, ಸೆ.22ರ ನಾಡಿದ್ದು ನಗರದ ಈ ಏರಿಯಾಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

Share. Facebook Twitter LinkedIn WhatsApp Email

Related Posts

ಮೇ.24ರಂದು ‘ಸೇಡಂ’ ತಾಲ್ಲೂಕಿನಲ್ಲಿ ಬಿಜೆಪಿಯಿಂದ ‘ಬೃಹತ್ ತಿರಂಗ ಯಾತ್ರೆ’

20/05/2025 9:55 PM1 Min Read

5 ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಎಷ್ಟು ಗೊತ್ತೇ? ಇಲ್ಲಿದೆ ಸಿಎಂ ಸಿದ್ಧರಾಮಯ್ಯ ಕೊಟ್ಟ ವಿವರ

20/05/2025 9:47 PM1 Min Read

ವಾಸಿಸುವವನೇ ನೆಲದ ಒಡೆಯ, ಇದು ನಮ್ಮ ಸಂಕಲ್ಪ: ಸಿಎಂ ಸಿದ್ಧರಾಮಯ್ಯ

20/05/2025 9:40 PM1 Min Read
Recent News

ಮೇ.24ರಂದು ‘ಸೇಡಂ’ ತಾಲ್ಲೂಕಿನಲ್ಲಿ ಬಿಜೆಪಿಯಿಂದ ‘ಬೃಹತ್ ತಿರಂಗ ಯಾತ್ರೆ’

20/05/2025 9:55 PM

5 ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಎಷ್ಟು ಗೊತ್ತೇ? ಇಲ್ಲಿದೆ ಸಿಎಂ ಸಿದ್ಧರಾಮಯ್ಯ ಕೊಟ್ಟ ವಿವರ

20/05/2025 9:47 PM

ವಾಸಿಸುವವನೇ ನೆಲದ ಒಡೆಯ, ಇದು ನಮ್ಮ ಸಂಕಲ್ಪ: ಸಿಎಂ ಸಿದ್ಧರಾಮಯ್ಯ

20/05/2025 9:40 PM

BREAKING : ರಾಜ್ಯದಲ್ಲಿ ಕೊರೊನ ಹೊಸ ತಳಿಯ 8 ಪ್ರಕರಣ ಪತ್ತೆ : ನಿರ್ಲಕ್ಷ್ಯ ಬೇಡ ಎಂದ ಆರೋಗ್ಯ ಇಲಾಖೆ!

20/05/2025 9:38 PM
State News
KARNATAKA

ಮೇ.24ರಂದು ‘ಸೇಡಂ’ ತಾಲ್ಲೂಕಿನಲ್ಲಿ ಬಿಜೆಪಿಯಿಂದ ‘ಬೃಹತ್ ತಿರಂಗ ಯಾತ್ರೆ’

By kannadanewsnow0920/05/2025 9:55 PM KARNATAKA 1 Min Read

ಸೇಡಂ: ಭಯೋತ್ಪಾದನೆಯ ವಿರುದ್ಧ ಭಾರತದ ದೃಢ ನಿಲುವಿನ ಆಪರೇಷನ್ ಸಿಂಧೂರದಲ್ಲಿ ಭಾರತೀಯ ಸೇನೆ ಅಭೂತ ಪೂರ್ವ ಸಾಧನೆಗೈದಿತ್ತು. ಈ ಹಿನ್ನಲೆಯಲ್ಲಿ…

5 ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಎಷ್ಟು ಗೊತ್ತೇ? ಇಲ್ಲಿದೆ ಸಿಎಂ ಸಿದ್ಧರಾಮಯ್ಯ ಕೊಟ್ಟ ವಿವರ

20/05/2025 9:47 PM

ವಾಸಿಸುವವನೇ ನೆಲದ ಒಡೆಯ, ಇದು ನಮ್ಮ ಸಂಕಲ್ಪ: ಸಿಎಂ ಸಿದ್ಧರಾಮಯ್ಯ

20/05/2025 9:40 PM

BREAKING : ರಾಜ್ಯದಲ್ಲಿ ಕೊರೊನ ಹೊಸ ತಳಿಯ 8 ಪ್ರಕರಣ ಪತ್ತೆ : ನಿರ್ಲಕ್ಷ್ಯ ಬೇಡ ಎಂದ ಆರೋಗ್ಯ ಇಲಾಖೆ!

20/05/2025 9:38 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.