Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಂಗಳೂರಿನ ಕೆಂಪೇಗೌಡ ಏರ್‌ಫೋರ್ಟ್‌ನಲ್ಲಿ 53.87 ಕೋಟಿ ಮೌಲ್ಯದ ಡ್ರಗ್ಸ್ ವಶ : ನಾಲ್ವರು ಅರೆಸ್ಟ್

07/11/2025 5:24 AM

BIG NEWS : ‘ಶಕ್ತಿ ಯೋಜನೆ’ ಎಫೆಕ್ಟ್ : ಮಹಿಳಾ ಪ್ರಯಾಣಿಕರ ಸಂಖ್ಯೆ 2.5 ಪಟ್ಟು ಹೆಚ್ಚಳ : ಅಜೀಂ ಪ್ರೇಮ್‌ಜೀ ವಿವಿ ವರದಿ

07/11/2025 5:20 AM

BIG BREAKING: ಬಾಲಿವುಡ್ ಖ್ಯಾತ ಗಾಯಕಿ, ನಟಿ ಸುಲಕ್ಷಣ ಪಂಡಿತ್ ವಿಧಿವಶ | Sulakshana Pandit No More

06/11/2025 10:59 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘NEPಗೆ ತಿಲಾಂಜಲಿ’ಯೇ ‘ಕಾಂಗ್ರೆಸ್ ಸರ್ಕಾರ’ದ ಸಾಧನೆ: ಶಾಸಕ ಎಸ್.ಸುರೇಶ್ ಕುಮಾರ್ ವಾಗ್ಧಾಳಿ
KARNATAKA

‘NEPಗೆ ತಿಲಾಂಜಲಿ’ಯೇ ‘ಕಾಂಗ್ರೆಸ್ ಸರ್ಕಾರ’ದ ಸಾಧನೆ: ಶಾಸಕ ಎಸ್.ಸುರೇಶ್ ಕುಮಾರ್ ವಾಗ್ಧಾಳಿ

By kannadanewsnow0917/05/2024 3:04 PM

ಬೆಂಗಳೂರು: ಅತ್ಯಂತ ವೈಜ್ಞಾನಿಕವಾಗಿ ರೂಪುಗೊಂಡ ರಾಷ್ಟ್ರೀಯ ಶಿಕ್ಷಣ ನೀತಿಗೆ (ಎನ್‍ಇಪಿ) ರಾಜಕೀಯ ಮೇಲಾಟದ ಕಾರಣ ತಿಲಾಂಜಲಿ ಕೊಟ್ಟು, ರಾಜ್ಯ ಶಿಕ್ಷಣ ನೀತಿ ಜಾರಿಗೊಳಿಸುವುದಾಗಿ ತಿಳಿಸಿದ ಈ ರಾಜ್ಯ ಸರಕಾರ ಇವತ್ತಿನವರೆಗೂ ಯಾವುದೇ ಪ್ರಗತಿಯನ್ನು ಮಾಡದೆ ಇರುವುದು ಒಂದು ಸಾಧನೆ ಎಂದು ಶಾಸಕ ಎಸ್. ಸುರೇಶ್ ಕುಮಾರ್ ಅವರು ವಿಶ್ಲೇಷಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಕಾಂಗ್ರೆಸ್ ಸರಕಾರವು ಕಳೆದ ಒಂದು ವರ್ಷದ ಅವಧಿಯಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ನೀಡಿದ ಕೊಡುಗೆಗಳನ್ನು ಮುಂದಿಡುವುದಾಗಿ ತಿಳಿಸಿದರು. ಈ ಸರಕಾರವು ವಿಶೇಷವಾಗಿ ಪದವಿ ತರಗತಿಗಳಲ್ಲಿ, ಕಾಲೇಜಿನಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಜೊತೆ ಚೆಲ್ಲಾಟ ಆಡುತ್ತಿದೆ ಎಂದು ಆಕ್ಷೇಪಿಸಿದರು.

ಪ್ರಾಥಮಿಕ, ಪ್ರೌಢ ಶಾಲಾ ವಿದ್ಯಾರ್ಥಿಗಳ ಭವಿಷ್ಯವನ್ನೇ ಮಸಕು ಮಾಡುತ್ತಿದೆ ಈ ಸರಕಾರ ಎಂದು ಟೀಕಿಸಿದ ಅವರು, ನಮ್ಮಲ್ಲಿ ಸಿಬಿಎಸ್‍ಇ, ಐಸಿಎಸ್‍ಇ ಸೇರಿದಂತೆ ಕೇಂದ್ರ ಪಠ್ಯಕ್ರಮದ ಶಾಲೆಗಳು, ಜೊತೆಗೆ ಸ್ವಾಯತ್ತ ವಿಶ್ವವಿದ್ಯಾಲಯಗಳು ಇವೆ. ಆ ವಿದ್ಯಾರ್ಥಿಗಳಿಗೆ ಒಂದು ನೀತಿಯಾದರೆ, ಸರಕಾರಿ ಶಾಲೆಗೆ ಇನ್ನೊಂದು ನೀತಿ ಎಂದು ಆರೋಪಿಸಿದರು. ಇದು ಇಬ್ಬಗೆಯ ನೀತಿ ಎಂದರು.

ವಿದ್ಯಾರ್ಥಿಗಳ ಜೀವನದ ಜೊತೆ ಚೆಲ್ಲಾಟ..

ನಮ್ಮ ಸರಕಾರಿ ಶಾಲೆಯ ಮಕ್ಕಳಿಗೆ ಕೌಶಲ್ಯವನ್ನು ಯಾರು ಕಲಿಸುತ್ತಾರೆ? ಇವರು ಒಂದು ಶಿಕ್ಷಣ ನೀತಿ ಸಮಿತಿ ರಚಿಸಿದ್ದರು. ಆ ಸಮಿತಿಯನ್ನು ಸಮರ್ಥವಾಗಿ ಮುನ್ನಡೆಸಲೂ ಈ ರಾಜ್ಯ ಸರಕಾರಕ್ಕೆ ಆಗುತ್ತಿಲ್ಲ. ರಾಜ್ಯ ಸರಕಾರದಲ್ಲಿ ಪೂರ್ಣಾವಧಿ ಶಿಕ್ಷಣ ಸಚಿವರೇ ಇಲ್ಲದಿರುವುದೇ ಇದಕ್ಕೆ ಕಾರಣ ಎಂದು ಎಸ್. ಸುರೇಶ್ ಕುಮಾರ್ ಅವರು ತಿಳಿಸಿದರು.

ಪೂರ್ಣಾವಧಿ ಶಿಕ್ಷಣ ಸಚಿವರ ಅಗತ್ಯವಿದ್ದು, ಅದನ್ನು ಮನಗಾಣದ ಸರಕಾರ ಇದೆ. ಆದ್ದರಿಂದ ವಿದ್ಯಾರ್ಥಿಗಳ ಜೀವನದ ಜೊತೆ ಚೆಲ್ಲಾಟ, ಅವರ ಭವಿಷ್ಯವನ್ನೇ ಹಾಳು ಮಾಡುವ ಕೆಲಸವನ್ನು ರಾಜ್ಯ ಸರಕಾರ ಮಾಡಿದ್ದೇ ದೊಡ್ಡ ಕೊಡುಗೆ ಎಂದು ದೂರಿದರು.

5, 8, 9ನೇ ತರಗತಿಗಳ ಮೌಲ್ಯಮಾಪನ, ಬೋರ್ಡ್ ಎಕ್ಸಾಮ್ ಮಾಡುವುದಾಗಿ ಸರಕಾರ ಹೊರಟಿದೆ. ಮಕ್ಕಳು, ಪೋಷಕರು, ಶಾಲಾ ಮುಖ್ಯಸ್ಥರ ಜೊತೆ ಸಂವಾದ ಮಾಡಿ ಉದ್ದೇಶ ಸ್ಪಷ್ಟಗೊಳಿಸದೇ ನ್ಯಾಯಾಲಯದ ವರೆಗೆ ಪ್ರಕರಣ ಹೋಗಿತ್ತು. ನ್ಯಾಯಾಲಯದ ತಡೆಯಾಜ್ಞೆ, ಅದರ ತೆರವು, ಪರೀಕ್ಷೆ ದಿನ ಪ್ರಕಟಿಸುವುದು- ಹೀಗೆ ನಡೆದು ಈಗ ಫಲಿತಾಂಶ ಪ್ರಕಟಿಸಿಲ್ಲ. ಎಳೆ ಮಕ್ಕಳ ಮನಸ್ಥಿತಿ, ಪೋಷಕರ ಆತಂಕವನ್ನು ಗಣನೆಗೇ ತೆಗೆದುಕೊಂಡಿಲ್ಲ. ಈ ಮಕ್ಕಳಿಗೆ ಮತ ಇಲ್ಲದ ಕಾರಣ ಹೀಗೆ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳ ಜೊತೆ ಚೆಲ್ಲಾಟ, ಅವರ ಜೀವನವನ್ನು ಅಂಧಕಾರಕ್ಕೆ ಒಯ್ಯುತ್ತಿದ್ದಾರೆ. ವಿದ್ಯಾರ್ಥಿ ಜೀವನ ಮಸಕು ಮಾಡುವುದೂ ಒಂದು ಗ್ಯಾರಂಟಿ ಎಂದು ಈ ಸರಕಾರ ಭಾವಿಸಿದೆ ಎಂದು ಟೀಕಿಸಿದರು.

ಮಕ್ಕಳ ಆತಂಕ ನಿವಾರಣೆ, ವಿಷಾದ ವ್ಯಕ್ತಪಡಿಸುವುದು, ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬುವ ಕೆಲಸ ಈ ಸರಕಾರದ ಶಿಕ್ಷಣ ಸಚಿವರಿಂದ ಆಗಿಲ್ಲ ಎಂದ ಅವರು, ನಮ್ಮ ರಾಜ್ಯದ ಸಿಇಟಿ (ಸಾಮಾನ್ಯ ಪ್ರವೇಶ ಪರೀಕ್ಷೆ) ಅತ್ಯಂತ ಚೆನ್ನಾಗಿದೆ ಎಂದು ಹಿಂದೆ ಹೆಸರು ಪಡೆದಿತ್ತು. ಇವತ್ತು ಸಿಇಟಿಯನ್ನು ಹಾಳುಗೆಡಹಿದ ಕೀರ್ತಿ ಈ ಸರಕಾರಕ್ಕೆ ಸಲ್ಲುತ್ತದೆ. ಸರ್ವರ್ ಡೌನ್ ಕಾರಣಕ್ಕೆ ಪ್ರವೇಶಪತ್ರ ಪಡೆಯಲು ವಿದ್ಯಾರ್ಥಿಗಳಿಗೆ ಆಗಲಿಲ್ಲ. ಅದೆಷ್ಟೋ ವಿದ್ಯಾರ್ಥಿಗಳು ನನಗೂ ಫೋನ್ ಮಾಡಿದ್ದು, ನಾನು ಸಚಿವರ ಗಮನಕ್ಕೆ ತಂದಿದ್ದೆ. ಅದಕ್ಕೆ ಲೆಕ್ಕವೇ ಇಲ್ಲ. ಪರೀಕ್ಷಾ ಅಕ್ರಮ ತಡೆ ನೆಪವೊಡ್ಡಿ ಒಂದು ಜಿಲ್ಲೆಯ ಹುಡುಗ ಇನ್ನೊಂದು ಜಿಲ್ಲೆಯಲ್ಲಿ ಪರೀಕ್ಷೆ ಬರೆಯುವಂತೆ ಮಾಡಿದ್ದರು ಎಂದು ಆಕ್ಷೇಪ ಸೂಚಿಸಿದರು. ಮಕ್ಕಳ ಕನಸುಗಳಿಗೆ ಕಲ್ಲು ಹಾಕುವ ಕೆಲಸವನ್ನು ರಾಜ್ಯ ಸರಕಾರ ಮಾಡಿದೆ ಎಂದರು.

ಅತ್ಯಂತ ಕೆಟ್ಟ ರೀತಿಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ…

ಎಸ್ಸೆಸ್ಸೆಲ್ಸಿ ಪರೀಕ್ಷೆ ಯಾವ ರೀತಿ ಮಾಡಬಾರದು ಎಂಬುದಕ್ಕೆ ಮೊನ್ನೆ ನಡೆದ ಪರೀಕ್ಷೆ ಒಳ್ಳೆಯ ಉದಾಹರಣೆ. 3 ಪರೀಕ್ಷೆ ಮಾಡಿ ಮಕ್ಕಳ ಗಾಂಭೀರ್ಯ ಹಾಳು ಮಾಡಿದ್ದಾರೆ. ಆತಂಕ ಹೆಚ್ಚಿಸಿದ್ದಾರೆ. ಮಕ್ಕಳು ಕ್ಯಾಮೆರಾ ಮುಂದೆ ಕುಳಿತು ಬರೆಯುವ ವ್ಯವಸ್ಥೆ ತಂದಿದ್ದಾರೆ. ಇದು ಬೇಸರದ ವಿಷಯ. ಫಲಿತಾಂಶ ಶೇ 30 ಕಡಿಮೆ ಆದಾಗ 1.79 ಲಕ್ಷ ಮಕ್ಕಳಿಗೆ ಕೃಪಾಂಕ ಕೊಟ್ಟು ಪಾಸ್ ಮಾಡಿಸಿ, ಅವರದಲ್ಲದ ತಪ್ಪಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಅತ್ಯಂತ ಕೆಟ್ಟ ರೀತಿಯಲ್ಲಿ ನಡೆಸಿ ಮಕ್ಕಳನ್ನು ಸಂಕಷ್ಟಕ್ಕೆ ದೂಡಿದ ಖ್ಯಾತಿ ಈ ಸರಕಾರದ್ದು ಎಂದು ಎಸ್. ಸುರೇಶ್ ಕುಮಾರ್ ಅವರು ವಿವರಿಸಿದರು.

15 ಸಾವಿರ ಗ್ರಾಜುವೇಟ್ ಪ್ರೈಮರಿ ಟೀಚರ್ಸ್ (ಜಿಪಿಟಿ) ನೇಮಕಾತಿಗೆ ಸರಕಾರ ಮುಂದಾಯಿತು. 2 ತಿಂಗಳಲ್ಲಿ ನೇಮಕಾತಿಗೆ ಅವಕಾಶ ಇದ್ದರೂ ಅಸ್ತವ್ಯಸ್ತತೆ ಮಾಡಿ, ನೇಮಕ ಮಾಡದೇ, ಕೆಲಸ ಕೊಡದೇ ಎಲ್ಲ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಉಂಟಾಗಿದೆ. ಈ ಶೈಕ್ಷಣಿಕ ವರ್ಷವೂ ಸನಿಹದಲ್ಲಿದೆ. ಆದರೆ, ಇದುವರೆಗೂ ರಾಜ್ಯ ಸರಕಾರವು ರಾಜ್ಯದಲ್ಲಿರುವ ಅಧಿಕೃತ ಶಾಲೆಗಳು, ಅನಧಿಕೃತ ಶಾಲೆಗಳ ಪಟ್ಟಿ ಬಿಡುಗಡೆ ಮಾಡಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಲಿಸ್ಟ್ ಬಿಡುಗಡೆಗೆ ಡಿಡಿಪಿಐಗಳಿಗೆ ಸೂಚಿಸಿ ಮೂರ್ನಾಲ್ಕು ತಿಂಗಳಾಗಿದೆ. ಆದರೆ, ಆ ಕೆಲಸ ಆಗಿಲ್ಲ. ಇದು ಮಕ್ಕಳ ಹಕ್ಕುಗಳ ಕುರಿತ ತಿರಸ್ಕಾರವನ್ನು ಸೂಚಿಸುತ್ತದೆ ಎಂದು ನುಡಿದರು. ಇನ್ನೂ ಕೆಲವು ಶಾಲೆಗಳು ಶೈಕ್ಷಣಿಕ ವರ್ಷಾರಂಭಕ್ಕೂ ಮೊದಲೇ ಶಾಲೆ ಪ್ರಾರಂಭಿಸಿವೆ. ಶುಲ್ಕಕ್ಕಾಗಿ ಈ ಕ್ರಮ ಕೈಗೊಂಡಿದ್ದು, ಇದರ ಕುರಿತು ಗಮನ ಸೆಳೆದರೂ ಪ್ರಯೋಜನವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಪುಸ್ತಕ ಯಾವಾಗ ಬರಲಿದೆ ಗೊತ್ತಿಲ್ಲ. ದೇಶದ ಭವಿಷ್ಯ ರೂಪಿಸುವ ಶಿಕ್ಷಣ ವ್ಯವಸ್ಥೆಗೆ ಕಾಂಗ್ರೆಸ್ ಸರಕಾರ ಮಾಡಿದ ಘನಂದಾರಿ ಅಪಚಾರಗಳಿವು ಎಂದು ಅವರು ಅಭಿಪ್ರಾಯಪಟ್ಟರು.

ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವಥನಾರಾಯಣ್, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್ ಅವರು ಭಾಗವಹಿಸಿದ್ದರು.

ಶಿವಮೊಗ್ಗ: ನಾಳೆ, ನಾಡಿದ್ದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

‘SSLC ಪರೀಕ್ಷೆ-2’ಗೆ ನೋಂದಾಯಿಸಿರುವ ವಿದ್ಯಾರ್ಥಿಗಳೇ ಗಮನಿಸಿ : ಜೂ.05 ರವರೆಗೆ ‘ವಿಶೇಷ ತರಗತಿ’ ಆಯೋಜನೆ

Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಿನ ಕೆಂಪೇಗೌಡ ಏರ್‌ಫೋರ್ಟ್‌ನಲ್ಲಿ 53.87 ಕೋಟಿ ಮೌಲ್ಯದ ಡ್ರಗ್ಸ್ ವಶ : ನಾಲ್ವರು ಅರೆಸ್ಟ್

07/11/2025 5:24 AM1 Min Read

BIG NEWS : ‘ಶಕ್ತಿ ಯೋಜನೆ’ ಎಫೆಕ್ಟ್ : ಮಹಿಳಾ ಪ್ರಯಾಣಿಕರ ಸಂಖ್ಯೆ 2.5 ಪಟ್ಟು ಹೆಚ್ಚಳ : ಅಜೀಂ ಪ್ರೇಮ್‌ಜೀ ವಿವಿ ವರದಿ

07/11/2025 5:20 AM1 Min Read

ಮಂಡ್ಯದಲ್ಲಿ 5,000 ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಹೆಡ್ ಕಾನ್ಸ್ ಟೆಬಲ್

06/11/2025 10:13 PM1 Min Read
Recent News

BREAKING : ಬೆಂಗಳೂರಿನ ಕೆಂಪೇಗೌಡ ಏರ್‌ಫೋರ್ಟ್‌ನಲ್ಲಿ 53.87 ಕೋಟಿ ಮೌಲ್ಯದ ಡ್ರಗ್ಸ್ ವಶ : ನಾಲ್ವರು ಅರೆಸ್ಟ್

07/11/2025 5:24 AM

BIG NEWS : ‘ಶಕ್ತಿ ಯೋಜನೆ’ ಎಫೆಕ್ಟ್ : ಮಹಿಳಾ ಪ್ರಯಾಣಿಕರ ಸಂಖ್ಯೆ 2.5 ಪಟ್ಟು ಹೆಚ್ಚಳ : ಅಜೀಂ ಪ್ರೇಮ್‌ಜೀ ವಿವಿ ವರದಿ

07/11/2025 5:20 AM

BIG BREAKING: ಬಾಲಿವುಡ್ ಖ್ಯಾತ ಗಾಯಕಿ, ನಟಿ ಸುಲಕ್ಷಣ ಪಂಡಿತ್ ವಿಧಿವಶ | Sulakshana Pandit No More

06/11/2025 10:59 PM

ಮಂಡ್ಯದಲ್ಲಿ 5,000 ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಹೆಡ್ ಕಾನ್ಸ್ ಟೆಬಲ್

06/11/2025 10:13 PM
State News
KARNATAKA

BREAKING : ಬೆಂಗಳೂರಿನ ಕೆಂಪೇಗೌಡ ಏರ್‌ಫೋರ್ಟ್‌ನಲ್ಲಿ 53.87 ಕೋಟಿ ಮೌಲ್ಯದ ಡ್ರಗ್ಸ್ ವಶ : ನಾಲ್ವರು ಅರೆಸ್ಟ್

By kannadanewsnow0507/11/2025 5:24 AM KARNATAKA 1 Min Read

ಬೆಂಗಳೂರು : ಬೆಂಗಳೂರಲ್ಲಿ ಡ್ರಗ್ಸ್ ವಿರುದ್ಧ ಭರ್ಜರಿ ಕಾರ್ಯಾಚರಣೆ ನಡೆಸಿರುವ ಕಸ್ಟಮ್ಸ್ ಅಧಿಕಾರಿಗಳು, ವಿದೇಶದಿಂದ ರಾಜ್ಯಕ್ಕೆ ಕಳ್ಳ ಮಾರ್ಗದಲ್ಲಿ ಹರಿದು…

BIG NEWS : ‘ಶಕ್ತಿ ಯೋಜನೆ’ ಎಫೆಕ್ಟ್ : ಮಹಿಳಾ ಪ್ರಯಾಣಿಕರ ಸಂಖ್ಯೆ 2.5 ಪಟ್ಟು ಹೆಚ್ಚಳ : ಅಜೀಂ ಪ್ರೇಮ್‌ಜೀ ವಿವಿ ವರದಿ

07/11/2025 5:20 AM

ಮಂಡ್ಯದಲ್ಲಿ 5,000 ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಹೆಡ್ ಕಾನ್ಸ್ ಟೆಬಲ್

06/11/2025 10:13 PM

ಮೈಸೂರು ನಗರ ಸಾರಿಗೆಯಲ್ಲಿನ ಧ್ವನಿ ಸ್ಪಂದನ ಯೋಜನೆಗೆ ‘KSRTC’ಗೆ ‘ಸ್ವಯಂ ಆಕ್ಸೆಸಿಬಿಲಿಟಿ ಪ್ರಶಸ್ತಿ 2025’

06/11/2025 9:36 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.