Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ಅಕ್ರಮ ಮರಳು ಸಾಗಾಟದ ವಿರುದ್ಧ ದೂರು ನೀಡಿದ ವಕೀಲನನ್ನು ಕೊಲೆಗೆ ಯತ್ನ, ಐವರು ಅರೆಸ್ಟ್

16/01/2026 10:02 PM

BREAKING : ಗ್ರೀನ್ ಲ್ಯಾಂಡ್ ಜೊತೆ ಒಪ್ಪಂದ ಮಾಡಿಕೊಳ್ಳದ ದೇಶಗಳ ಮೇಲೆ ಸುಂಕ ; ‘ಟ್ರಂಪ್’ ಹೊಸ ಬೆದರಿಕೆ!

16/01/2026 9:59 PM

BREAKING : ನ್ಯೂಜಿಲೆಂಡ್ ವಿರುದ್ಧದ T20I ಸರಣಿಗೆ ನವೀಕರಿಸಿದ ಭಾರತ ತಂಡ ಪ್ರಕಟ ; ಅಯ್ಯರ್ ಕಂಬ್ಯಾಕ್!

16/01/2026 9:41 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅಂಬೇಡ್ಕರ್ ಕೊಟ್ಟ ಸಾಮಾಜಿಕ ನ್ಯಾಯವನ್ನು ಕಾಂಗ್ರೆಸ್ ಹೈಜಾಕ್ ಮಾಡಿದೆ: ಬಸವರಾಜ ಬೊಮ್ಮಾಯಿ
KARNATAKA

ಅಂಬೇಡ್ಕರ್ ಕೊಟ್ಟ ಸಾಮಾಜಿಕ ನ್ಯಾಯವನ್ನು ಕಾಂಗ್ರೆಸ್ ಹೈಜಾಕ್ ಮಾಡಿದೆ: ಬಸವರಾಜ ಬೊಮ್ಮಾಯಿ

By kannadanewsnow0925/04/2024 4:41 PM

ಹಾವೇರಿ: ದೇಶಕ್ಕೆ ಸಾಮಾಜಿಕ ನ್ಯಾಯ ಕೊಟ್ಟವರು ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರು, ಅವರ ಯೋಜನೆಯನ್ನು ಕಾಂಗ್ರೆಸ್ ಹೈಜಾಕ್ ಮಾಡಿದೆ. ಅಂಬೇಡ್ಕರ್ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್ ಗೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭೆ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಅವರು ಇಂದು ಹಿರೆಕೆರೂರು ವಿಧಾನಸಭಾ ಕ್ಷೇತ್ರದ ಮಕರಿ, ನಾಗವಂದ ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದರು.

ಕಾಂಗ್ರೆಸ್ ನವರು ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿ ಅವರು ಸಂಸತ್ತಿಗೆ ಬರದಂತೆ ನೋಡಿಕೊಂಡಿದ್ದರು. ಅವರು ನಿಧನರಾದಾಗ ದೆಹಲಿಯಲ್ಲಿ ಅವರ ಅಂತ್ಯ ಸಂಸ್ಕಾರಕ್ಕೆ ಆರು ಅಡಿ ಜಾಗವನ್ನೂ ಕಾಂಗ್ರೆಸ್ ಕೊಡಲಿಲ್ಲ. ಈಗ ಅಂಬೇಡ್ಕರ ಬಗ್ಗೆ ಮಾತನಾಡುತ್ತಾರೆ. ಅವರ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್ ನವರಿಗೆ ಇಲ್ಲ ಎಂದು ಹೇಳಿದರು.

ಎಸ್ಸಿ ಎಸ್ಟಿ ಸುಮದಾಯಕ್ಕೆ ಕಾಂಗ್ರೆಸ್ ಯಾವುದೇ ಸಾಮಾಜಿಕ ನ್ಯಾಯ ನೀಡಿಲ್ಲ. ರಾಜ್ಯದಲ್ಲಿ ಎಸ್ಸಿ ಎಸ್ಟಿ ಮೀಸಲಾತಿ ಹೆಚ್ಚಳಕ್ಕೆ ಮೂವತ್ತು ವರ್ಷದಿಂದ ಬೇಡಿಕೆ ಇದ್ದರೂ ಯಾರೂ ಮಾಡಿರಲಿಲ್ಲ. ನನಗೂ ಜೇನುಗೂಡಿಗೆ ಕೈ ಹಾಕಬೇಡಿ ಎಂದು ಹೇಳಿದರು. ನನಗೆ ಜೇನು ಕಡಿದರೂ ಆ ಸಮುದಾಯಗಳಿಗೆ ನ್ಯಾಯ ಕೊಡುತ್ತೇನೆ ಎಂದು ಎಸ್ಟಿಗೆ 3% ರಿಂದ ಶೇ 7% ಕ್ಕೆ ಹೆಚ್ಚಿಸಿದ್ದೇವೆ. ಎಸ್ಸಿ ಸಮುದಾಯಕ್ಕೆ 15% ರಿಂದ ಶೇ 17% ಕ್ಕೆ ಹೆಚ್ಚಳ ಮಾಡಿದ್ದೇನೆ. ಅದನ್ನು ಸಂವಿಧಾನದ ಸೆಡ್ಯೂಲ್ 9ರಲ್ಲಿ ಸೇರಿಸುವಂತೆ ಕೇಳುತ್ತಿದ್ದಾರೆ. ಅದಕ್ಕೂ ಮೊದಲೇ ರಾಜ್ಯದಲ್ಲಿ ಮೀಸಲಾತಿ ಹೆಚ್ಚಳ ಜಾರಿಯಾಗಿದ್ದು, ಇದರಿಂದ ಎಸ್ಟಿ ಸಮುದಾಯದ ಸುಮಾರು 400 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಮೀಸಲಾತಿ ಅಡಿ ಮೆಡಿಕಲ್ ಸೀಟು ದೊರೆತಿದೆ‌. ಸುಮಾರು ನಾಲ್ಕು ಸಾವಿರ ಇಂಜನೀಯರಿಂಗ್ ಹೆಚ್ಚಿಗೆ ಸೀಟು ದೊರೆತಿವೆ ಎಂದು ಹೇಳಿದರು.

ಮೋದಿ ಸುತ್ತ ಚುನಾವಣೆ

ಇಡೀ ದೇಶದಲ್ಲಿ ನರೇಂದ್ರ ನೋದಿ ಸುತ್ತ ಚುನಾವಣೆ ನಡೆಯುತ್ತಿದೆ. ಎಲ್ಲ ವರ್ಗ ಹಾಗೂ ಸಮಾಜದ ಜನರು ಮೋದಿಯವರನ್ನು ಬೆಂಬಲಿಸುತ್ತಿದ್ದಾರೆ. ಅವರು ಹಂತ ಹಂತವಾಗಿ ಬೆಳೆದಿದ್ದಾರೆ‌. ಲಾಲ ಬಹದ್ದೂರು ಶಾಸ್ತ್ರಿ ಅವರ ನಂತರ ಅತ್ಯಂತ ದೇಶ ಭಕ್ತ ಮೋದಿ. ಅವರ ತಾಯಿ ತೀರಿಕೊಂಡಾಗ ಮೂರು ಗಂಟೆಯಲ್ಲಿ ಅವರ ಅಂತ್ಯ ಸಂಸ್ಕಾರ ಮಾಡಿ ಮತ್ತೆ ದೇಶ ಸೇವೆಗೆ ಬಂದರು.

ಮೋದಿಯವರು ಹತ್ತು ವರ್ಷದಲ್ಲಿ ಭಯೋತ್ಪಾದನೆ ನಿರ್ಮೂಲನೆ ಮಾಡಿದರು. ಕಾಂಗ್ರೆಸ್ ಇದ್ದಾಗ ದೇಶದ ಎಲ್ಲ ಭಾಗದಲ್ಲೂ ಭಯೋತ್ಪಾದನೆ‌ ಇತ್ತು. ಮೋದಿ ಬಂದ ಮೇಲೆ ಪಾಕಿಸ್ತಾನದ ಭಯೋತ್ತಾದಕರ ನೆಲೆ ಮೇಲೆ ದಾಳಿ ಮಾಡಿ ದ್ವಂಶ ಮಾಡಿದರು. ಮೋದಿಯವರು ಭಯೋತ್ಪಾದಕರೆ ಭಯ ಪಡೆಯುವಂತೆ ಮಾಡಿದ್ದಾರೆ ಎಂದರು.

ಕಾಂಗ್ರೆಸ್ ನಾಯಕರ ಗರೀಬಿ ಹಠಾವಾಯಿತು

ಇಂದಿರಾ ಗಾಂಧಿ ಗರೀಬಿ ಹಠಾವೊ ಅಂದರು. ಆದರೆ, ದೇಶದ ಬಡತನ ನಿರ್ಮೂಲನೆ ಆಗಲಿಲ್ಲ. ಕಾಂಗ್ರೆಸ್ ನಾಯಕರ ಬಡತನ ನಿರ್ಮೂಲನೆ ಆಯಿತು. ಧಾರವಾಡದಲ್ಲಿ ಮೋರೆ ಅಂತ ಕಾಂಗ್ರೆಸ್ ನಾಯಕ ಇದ್ದರು. ಅವರು ಕಾಂಗ್ರೆಸ್ ನಾಯಕರು ಅಧಿಕಾರ ಇದ್ದಾಗ ಕಬ್ಬು ಇದ್ದ ಹಾಗೆ ಇರುತ್ತಾರೆ‌ ಅಧಿಕಾರ ಹೋದರೆ ಹತ್ತಿಕಟಿಗೆ ಆಗುತ್ತಾರೆ ಎಂದು ಹೇಳಿದರು.

ಮೋದಿಯವರು ಅಸಾಧ್ಯವನ್ನು ಸಾಧ್ಯ ಮಾಡಿದ್ದಾರೆ. ಹತ್ತು ವರ್ಷದಲ್ಲಿ 25 ಕೋಟಿ ಜನರನ್ನು ಬಡತನದಿಂದ ಮೇಲೆ ತಂದಿದ್ದಾರೆ. ಮುಂದಿನ ಐದು ವರ್ಷದಲ್ಲಿ ಇನ್ನೂ ಹದಿನೈದು ಕೋಟಿ ಜನರನ್ನು ಬಡತನ ಮುಕ್ತ ಮಾಡುವುದಾಗಿ ಹೇಳಿದ್ದಾರೆ.

ಜಲ ಜೀವನ ಮಿಷನ್ ಯೋಜನೆ ಅಡಿಯಲ್ಲಿ ದೇಶದ ಎಲ್ಲ ಮನೆಗಳಿಗೂ ನೀರು ಕೊಟ್ಟಿದ್ದಾರೆ. ನನ್ನ ಅವಧಿಯಲ್ಲಿ ಮೂರು ವರ್ಷದಲ್ಲಿ ರಾಜ್ಯದಲ್ಲಿ 30 ಲಕ್ಷ ಮನೆಗಳಿಗೆ ನೀರು ಕೊಟ್ಟಿದ್ದೇವೆ. ಕೊವಿಡ್ ಸಂದರ್ಭದಲ್ಲಿ ದೇಶದ ನೂರ ಮೂವತ್ತು ಕೋಟಿ ಜನರಿಗೆ ಉಚಿತ ಲಸಿಕೆ ಕೊಟ್ಟಿದ್ದಾರೆ. ಇನ್ನೊಂದು ಅಸಾಧ್ಯವಾದ ಕಾರ್ಯ ಭ್ರಷ್ಟರನ್ನು ಹಿಡಿದು ಒಳಗೆ ಹಾಕುವ ಕೆಲಸ ಮಾಡಿದರು. ಯಡಿಯೂರಪ್ಪ ಮೊದಲು ಅಧಿಕಾರಕ್ಕೆ ಬಂದಾಗ ಭಾಗ್ಯ ಲಕ್ಷ್ಮೀ ಯೋಜನೆ ಮಾಡಿದರು. ಈಗ ಆ ಹೆಣ್ಣು ಮಕ್ಕಳು ಭಾಗ್ಯಲಕ್ಷ್ಮೀಯ ಒಂದು ಲಕ್ಷ ಹಣ ಬಂದಿದೆ ಎಂದು ಹೇಳುತ್ತಿದ್ದಾರೆ ಎಂದರು.

ಸುಳ್ಳು ಗ್ಯಾರೆಂಟಿ

ಹೆಣ್ಣುಮಕ್ಕಳಿಗೆ ನಾನು ಸ್ತ್ರೀ ಸಾಮರ್ಥ್ಹ ಯೋಜನೆ ಮಾಡಿದ್ದೇವು. ಅದನ್ನು ಈ ಸರ್ಕಾರ ನಿಲ್ಲಿಸಿದೆ. ರೈತರಿಗೆ ರೈತ ಶಕ್ತಿ ಯೋಜನೆ, ಸ್ವಾಮಿ ವಿವೇಕಾನಂದ ಯೋಜನೆ‌ ನಿಲ್ಲಿಸಿದರು.

ಈಗ ಕಾಂಗ್ರೆಸ್ ಸುಳ್ಳು ಗ್ಯಾರೆಂಟಿ ಹಿಡಿದುಕೊಂಡು ಬರುತ್ತಿದ್ದಾರೆ. ಅದಕ್ಕೆ ರಾಹುಲ್ ಗಾಂಧಿ, ಖರ್ಗೆ, ಸಹಿ ಮಾಡುತ್ತಿದ್ದಾರೆ‌. ಇವರೇನು ರಿಸರ್ವ್ ಬ್ಯಾಂಕ್ ಗೌರ್ನರಾ? ಪ್ರಧಾನ ಮಂತ್ರಿನಾ, ರಾಷ್ಟ್ರಪತಿನಾ ? ಗ್ಯಾರೆಂಟಿ ಕಾರ್ಡ್ ಗಳನ್ನು ಅದೇ ಊರಿನ ಕಾಂಗ್ರೆಸ್ ಕಾರ್ಯಕರ್ತರು ಕೊಡಲು ಬರುವುದಿಲ್ಲ. ಬೇರೆ ಊರಿನ ಹೆಣ್ಣು ಮಕ್ಕಳು ಬಂದು ಗ್ಯಾರೆಂಟಿ ಕಾರ್ಡ್ ಗಳನ್ನು ಹಂಚಿಕೆ ಮಾಡುತ್ತಿದ್ದಾರೆ. ಅವರು ಆರಿಸಿ ಬರುವುದಿಲ್ಲ ಎನ್ನುವ ಸತ್ಯ ಗೊತ್ತಿದೆ. ಹೀಗಾಗಿ ಬೇರೆ ಊರಿನ ಮಹಿಳೆಯರನ್ನು ಕಳುಹಿಸುತ್ತಿದ್ದಾರೆ. ಅವರ ಮೋಸದ ಸುಳ್ಳು ಗ್ಯಾರೆಂಟಿ ಗಳಿಗೆ ಬಲಿಯಾಗಬೇಡಿ ಎಂದು ಮನವಿ ಮಾಡಿದರು.

ಪ್ರಚಾರ ಸಭೆಯಲ್ಲಿ ಮಾಜಿ ಸಚಿವ ಬಿ.ಸಿ.ಪಾಟೀಲ್ ಹಾಜರಿದ್ದರು.

ಮತದಾರರಿಗೆ ಆಮಿಷ ಪ್ರಕರಣ: ‘ಡಿ.ಕೆ ಶಿ​ವಕುಮಾರ್​’ಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್

BREAKING : ‘ವರ್ಲ್ ಪೂಲ್’ನಿಂದ 1000 ಉದ್ಯೋಗಿಗಳು ವಜಾ

Share. Facebook Twitter LinkedIn WhatsApp Email

Related Posts

BIG NEWS: ಅಕ್ರಮ ಮರಳು ಸಾಗಾಟದ ವಿರುದ್ಧ ದೂರು ನೀಡಿದ ವಕೀಲನನ್ನು ಕೊಲೆಗೆ ಯತ್ನ, ಐವರು ಅರೆಸ್ಟ್

16/01/2026 10:02 PM2 Mins Read

ಶಿವಮೊಗ್ಗ: ಜ.18ರಂದು ಸೊರಬ ತಾಲ್ಲೂಕಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

16/01/2026 8:56 PM1 Min Read

ಜಿ ರಾಮ್ ಜಿ ಕಾಯ್ದೆ : ನ್ಯಾಯ ಸಿಗವವರೆಗೂ ಹೋರಾಟ ನಿಲ್ಲಲ್ಲ: ಮದ್ದೂರು ಶಾಸಕ ಕೆ.ಎಂ.ಉದಯ್

16/01/2026 7:56 PM2 Mins Read
Recent News

BIG NEWS: ಅಕ್ರಮ ಮರಳು ಸಾಗಾಟದ ವಿರುದ್ಧ ದೂರು ನೀಡಿದ ವಕೀಲನನ್ನು ಕೊಲೆಗೆ ಯತ್ನ, ಐವರು ಅರೆಸ್ಟ್

16/01/2026 10:02 PM

BREAKING : ಗ್ರೀನ್ ಲ್ಯಾಂಡ್ ಜೊತೆ ಒಪ್ಪಂದ ಮಾಡಿಕೊಳ್ಳದ ದೇಶಗಳ ಮೇಲೆ ಸುಂಕ ; ‘ಟ್ರಂಪ್’ ಹೊಸ ಬೆದರಿಕೆ!

16/01/2026 9:59 PM

BREAKING : ನ್ಯೂಜಿಲೆಂಡ್ ವಿರುದ್ಧದ T20I ಸರಣಿಗೆ ನವೀಕರಿಸಿದ ಭಾರತ ತಂಡ ಪ್ರಕಟ ; ಅಯ್ಯರ್ ಕಂಬ್ಯಾಕ್!

16/01/2026 9:41 PM

BREAKING : ವಾಯು ರಕ್ಷಣೆಗೆ ಆನೆ ಬಲ ; 114 ಹೆಚ್ಚುವರಿ ‘ರಫೇಲ್ ಜೆಟ್’ಗಳ ಖರೀದಿಗೆ ಕೇಂದ್ರ ಸರ್ಕಾರ ಅನುಮೋದನೆ

16/01/2026 9:26 PM
State News
KARNATAKA

BIG NEWS: ಅಕ್ರಮ ಮರಳು ಸಾಗಾಟದ ವಿರುದ್ಧ ದೂರು ನೀಡಿದ ವಕೀಲನನ್ನು ಕೊಲೆಗೆ ಯತ್ನ, ಐವರು ಅರೆಸ್ಟ್

By kannadanewsnow0916/01/2026 10:02 PM KARNATAKA 2 Mins Read

ಶಿವಮೊಗ್ಗ: ಅಕ್ರಮ ಮರಳು ಸಾಗಾಟ ಮಾಡುವವರ ವಿರುದ್ಧ ದೂರು ನೀಡಿದಂತ ವಕೀಲರೊಬ್ಬರನ್ನು ಕೊಲೆಗೆ ಯತ್ನಿಸಿದಂತ ಘಟನೆ ಆನಂದಪುರ ಪೊಲೀಸ್ ಠಾಣೆ…

ಶಿವಮೊಗ್ಗ: ಜ.18ರಂದು ಸೊರಬ ತಾಲ್ಲೂಕಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

16/01/2026 8:56 PM

ಜಿ ರಾಮ್ ಜಿ ಕಾಯ್ದೆ : ನ್ಯಾಯ ಸಿಗವವರೆಗೂ ಹೋರಾಟ ನಿಲ್ಲಲ್ಲ: ಮದ್ದೂರು ಶಾಸಕ ಕೆ.ಎಂ.ಉದಯ್

16/01/2026 7:56 PM

ರಾಮನಾಮ ಮಹಿಮೆ ಉಪದೇಶ ಮಾಡಿದ ಭಗವಾನ್ ಸದ್ಗುರು ಶ್ರೀ ಶ್ರೀಧರಸ್ವಾಮಿ ಮಹಾರಾಜರು: ಇಲ್ಲಿದೆ ಮಹಿಮೆ

16/01/2026 7:27 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.