Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಅಹಮದಾಬಾದ್ ಬಳಿಕ ರಾಜಸ್ಥಾನದಲ್ಲಿ ಭಾರತೀಯ ವಾಯುಪಡೆ ವಿಮಾನ ಪತನ : ಓರ್ವ ಪೈಲಟ್ ಸಾವು!

09/07/2025 1:59 PM

BREAKING : ರಾಜ್ಯದಲ್ಲಿ ಮೂವರು ಶಂಕಿತ ಉಗ್ರರ ಬಂಧನ ಕೇಸ್ : ಬಂಧಿತ ಮೂವರು 6 ದಿನ ‘NIA’ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

09/07/2025 1:52 PM

ಮನೆಯಲ್ಲಿ ‘ಜಿರಳೆ’ ಕಾಟ ಹೆಚ್ಚಗಿದ್ಯಾ.? ಜಸ್ಟ್ ಹೀಗೆ ಓಡಿಸಿ!

09/07/2025 1:36 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕೇಂದ್ರ ಸರ್ಕಾರದ ಯೋಜನೆಗಳು ತಮ್ಮದೇ ಎಂದ ‘ಕಾಂಗ್ರೆಸ್’ಗೆ ಮಾನ ಮರ್ಯಾದೆ ಇಲ್ಲ- ಆರ್ ಅಶೋಕ್ ವಾಗ್ಧಾಳಿ
KARNATAKA

ಕೇಂದ್ರ ಸರ್ಕಾರದ ಯೋಜನೆಗಳು ತಮ್ಮದೇ ಎಂದ ‘ಕಾಂಗ್ರೆಸ್’ಗೆ ಮಾನ ಮರ್ಯಾದೆ ಇಲ್ಲ- ಆರ್ ಅಶೋಕ್ ವಾಗ್ಧಾಳಿ

By kannadanewsnow0912/02/2024 2:40 PM

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಗೌರವಾನ್ವಿತ ರಾಜ್ಯಪಾಲರ ಬಾಯಲ್ಲಿ ಸುಳ್ಳು ಹೇಳಿಸಿದ್ದಲ್ಲದೆ ಬಿಜೆಪಿಯ ಯೋಜನೆಗಳನ್ನು ತಮ್ಮದೇ ಯೋಜನೆಯಾಗಿ ಬಿಂಬಿಸಿಕೊಂಡಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಗೌರವಾನ್ವಿತ ರಾಜ್ಯಪಾಲರ ಬಾಯಲ್ಲಿ ಸುಳ್ಳುಗಳನ್ನು ಹೇಳಿಸಿದೆ. ಹಿಂದಿನ ಬಿಜೆಪಿ ಸರ್ಕಾರ ತಂದ ಯೋಜನೆಗಳನ್ನು, ಕೇಂದ್ರ ಸರ್ಕಾರದ ಯೋಜನೆಗಳನ್ನು ತಮ್ಮದೇ ಯೋಜನೆ ಎಂದು ಕಾಂಗ್ರೆಸ್ ಬಿಂಬಿಸಿಕೊಂಡಿದೆ. ಐದು ಗ್ಯಾರಂಟಿ ತಂದಿದ್ದೇವೆ ಎಂದು ಹೇಳಿದ್ದರೂ ಯುವನಿಧಿ ಇನ್ನೂ ನಿರುದ್ಯೋಗಿಗಳ ಕೈ ಸೇರಿಲ್ಲ. ಬರ ಪರಿಹಾರ ಕೊಟ್ಟಿದ್ದೇವೆ ಎನ್ನುತ್ತಾರೆ. ಆದರೆ ಪರಿಹಾರವನ್ನು ಕಂತಾಗಿ ನೀಡಬಾರದು. ಹಿಂದಿನ ಬಿಜೆಪಿ ಸರ್ಕಾರ ಪರಿಹಾರವನ್ನು ಒಂದೇ ಸಲಕ್ಕೆ ರೈತರ ಖಾತೆಗೆ ಹಾಕಿತ್ತು. ಈ ಸರ್ಕಾರ ಕಂತು ಕಂತಾಗಿ ನೀಡುವುದು ತಪ್ಪು. ನಾವು 25 ಸಾವಿರ ರೂ. ಪರಿಹಾರ ಕೇಳಿದ್ದರೆ, ಆ ವಿಷಯವನ್ನು ಪ್ರಸ್ತಾಪಿಸಿಲ್ಲ. ಕೇವಲ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಲಾಗಿದೆ ಎಂದು ದೂರಿದರು.

ಮಕ್ಕಳಿಗೆ ಚಿಕ್ಕಿ ಮಿಠಾಯಿ ಕೊಟ್ಟು ಅವರ ಕೈಯಲ್ಲೇ ಶೌಚಾಲಯ ತೊಳೆಸಲಾಗುತ್ತಿದೆ. ಶಿವಮೊಗ್ಗ ವಿಮಾನ ನಿಲ್ದಾಣ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಆಗಿತ್ತು. ಮೆಟ್ರೊ ರೈಲು ಯೋಜನೆ ಕೇಂದ್ರ ಸರ್ಕಾರದಿಂದ ಆಗಿದೆ. ಜಲಜೀವನ್ ಮಿಷನ್ ಕೂಡ ಕೇಂದ್ರದ ಕೊಡುಗೆ. ಆದರೂ ಅವೆಲ್ಲ ತಮ್ಮದೇ ಎಂದು ಹೇಳಿಕೊಂಡಿದ್ದಾರೆ. ಹಿಂದೂ ದ್ವೇಷ ಹೆಚ್ಚಿದ್ದು, ಭಯೋತ್ಪಾದನಾ ಚಟುವಟಿಕೆ ಅತಿಯಾಗಿದೆ. ಆದರೂ ಸರ್ವ ಜನಾಂಗದ ಶಾಂತಿಯ ತೋಟ ಎಂದಿದ್ದಾರೆ. ಸರ್ಕಾರ ಕಾನೂನು ಸುವ್ಯವಸ್ಥೆಯನ್ನೇ ಕಾಪಾಡಿಲ್ಲ ಎಂದು ಆಕ್ರೋಶ ಹೊರಹಾಕಿದರು.

ಕನ್ನಡ ಉಳಿವು ಎಂದು ಹೋರಾಟಗಾರರನ್ನು ಜೈಲಿಗೆ ಹಾಕಿದ್ದಾರೆ. ಎಸ್ ಸಿಎಸ್ಪಿ, ಟಿಎಸ್ಪಿ ಹಣವನ್ನು ದಲಿತರಿಗೆ ಬಳಸದೆ ಬೇರೆ ಯೋಜನೆಗಳಿಗೆ ಬಳಸಿದ್ದಾರೆ. ಕಾಂಗ್ರೆಸ್ ಸರ್ಕಾರದಿಂದ ಒಂದೇ ಒಂದು ಕಾಮಗಾರಿ ನಡೆದಿಲ್ಲ ಎಂದು ಶಾಸಕರು ಹೇಳಿದ್ದಾರೆ. 40 ಪರ್ಸೆಂಟ್ ಕಮಿಶನ್ ಸರ್ಕಾರ ಎಂದು ಗುತ್ತಿಗೆದಾರರು ಹೇಳಿದ್ದಾರೆ ಎಂದು ಹೇಳಿದರು.

ರೈತ ಆತ್ಮಹತ್ಯೆ ಹೆಚ್ಚಳ

ಬರಗಾಲವಿದ್ದರೂ ಕಳೆದ ವರ್ಷಕ್ಕಿಂತ ಆತ್ಮಹತ್ಯೆ ಕಡಿಮೆಯಾಗಿದೆ ಎಂದು ಹೋಲಿಸಿಕೊಂಡಿದ್ದಾರೆ. ಇವರದ್ದೇ ಸರ್ಕಾರದ ಸಚಿವ ಶಿವಾನಂದ ಪಾಟೀಲ್‌ ಅವರು ಪರಿಹಾರ ಪಡೆಯಲೆಂದೇ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದು ಕೀಳಾಗಿ ಮಾತಾಡಿದ್ದರು. ಆತ್ಮಹತ್ಯೆ ಹೆಚ್ಚಿದ್ದರೂ ಅದನ್ನು ಮುಚ್ಚಿಟ್ಟು ಸುಳ್ಳು ಹೇಳಿದ್ದಾರೆ. 2 ಸಾವಿರ ರೂ. ಪರಿಹಾರ ಎಂದು ಕಾಟಾಚಾರಕ್ಕೆ ಘೋಷಣೆ ಮಾಡಿ, ನಂತರ ಎಲ್ಲರಿಗೂ ಪರಿಹಾರ ನೀಡುವ ಕೆಲಸ ಮಾಡಿಲ್ಲ. ಫ್ರೂಟ್ಸ್ ತಂತ್ರಾಂಶದಲ್ಲಿ ಇನ್ನೂ ನೋಂದಣಿ ಸಮಸ್ಯೆ ಇದೆ. ಇಷ್ಟಿದ್ದರೂ ರೈತರಿಗೆ ಪರಿಹಾರ ನೀಡಿದ್ದೇವೆ ಎಂದೇ ನಾಚಿಕೆ ಇಲ್ಲದೆ ಹೇಳಿಕೊಂಡಿದ್ದಾರೆ ಎಂದು ದೂರಿದರು.

ಹಿಂದೂ-ಮುಸ್ಲಿಮರ ನಡುವೆ ದ್ವೇಷ ಬಿತ್ತುವ ಕೆಲಸವನ್ನು ಸರ್ಕಾರ ಮಾಡಿದೆ. ಮುಸ್ಲಿಮರಿಗೆ 1 ಸಾವಿರ ಕೋಟಿ ರೂ. ನೀಡುವ ಸರ್ಕಾರ, ಪರಿಹಾರ ಕೇಳಿದರೆ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುತ್ತದೆ ಎಂದರು.

ಕಾಂಗ್ರೆಸ್ ನಿಂದಲೇ ಆರ್ಥಿಕ ಅಸಮಾನತೆ

ದೇಶದಲ್ಲಿ ಆರ್ಥಿಕ ಅಸಮಾನತೆ ಹೆಚ್ಚಿದೆ ಎನ್ನುತ್ತಾರೆ. ಆದರೆ ಗ್ಯಾರಂಟಿಗಾಗಿ ಖಜಾನೆ ಖಾಲಿ ಮಾಡಿಕೊಂಡ ಸರ್ಕಾರ, ಶಾಸಕರಿಗೆ ಅನುದಾನ ನೀಡದೆ ಸತಾಯಿಸುತ್ತಿದೆ. ಯಾವ ಯೋಜನೆಗೂ ಹಣ ನೀಡದೆ ಗ್ಯಾರಂಟಿಗೆ ಮಾತ್ರ ಹಣ ಕೊಟ್ಟಿರುವುದೇ ಆರ್ಥಿಕ ಅಸಮಾನತೆ. ದಲಿತರ ಹಣವನ್ನು ಗ್ಯಾರಂಟಿಗಾಗಿ ಬಳಕೆ ಮಾಡಿರುವುದೇ ಆರ್ಥಿಕ ಅಸಮಾನತೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರದಿಂದ ಕಳೆದ ಐದು ವರ್ಷಗಳಲ್ಲಿ 13.5 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ. ಇಂತಹ ಒಂದೂ ಕೆಲಸವನ್ನು ಕಾಂಗ್ರೆಸ್ ಮಾಡಿಲ್ಲ ಎಂದರು.

BIG NEWS: ರಾಜ್ಯದ ಸರ್ಕಾರಿ ಕಚೇರಿಯಲ್ಲಿ ‘ಬಸವಣ್ಣ’ನ ಭಾವಚಿತ್ರ ಹಾಕುವುದು ಕಡ್ಡಾಯ – ಸಿಎಂ ಸಿದ್ಧರಾಮಯ್ಯ ಆದೇಶ

BREAKING: ‘ಶ್ರೀಲಂಕಾ, ಮಾರಿಷಸ್’ನಲ್ಲಿ ‘UPI ಪಾವತಿ ಸೇವೆ’ ಆರಂಭಿಸಿದ ‘ಭಾರತ’ | UPI Services Launched In Sri Lanka, Mauritius

Share. Facebook Twitter LinkedIn WhatsApp Email

Related Posts

BREAKING : ರಾಜ್ಯದಲ್ಲಿ ಮೂವರು ಶಂಕಿತ ಉಗ್ರರ ಬಂಧನ ಕೇಸ್ : ಬಂಧಿತ ಮೂವರು 6 ದಿನ ‘NIA’ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

09/07/2025 1:52 PM2 Mins Read

ಮನೆಯಲ್ಲಿ ‘ಜಿರಳೆ’ ಕಾಟ ಹೆಚ್ಚಗಿದ್ಯಾ.? ಜಸ್ಟ್ ಹೀಗೆ ಓಡಿಸಿ!

09/07/2025 1:36 PM1 Min Read

BREAKING : ಬೆಂಗಳೂರಲ್ಲಿ ಶಾಪಿಂಗ್ ಹೋಗಿದ್ದಕ್ಕೆ, ಕಾಲಿನಿಂದ ಪತ್ನಿಯ ಕುತ್ತಿಗೆ ತುಳಿದು ಹತ್ಯೆಗೈದ ಪಾಪಿ ಪತಿ!

09/07/2025 12:56 PM1 Min Read
Recent News

BREAKING : ಅಹಮದಾಬಾದ್ ಬಳಿಕ ರಾಜಸ್ಥಾನದಲ್ಲಿ ಭಾರತೀಯ ವಾಯುಪಡೆ ವಿಮಾನ ಪತನ : ಓರ್ವ ಪೈಲಟ್ ಸಾವು!

09/07/2025 1:59 PM

BREAKING : ರಾಜ್ಯದಲ್ಲಿ ಮೂವರು ಶಂಕಿತ ಉಗ್ರರ ಬಂಧನ ಕೇಸ್ : ಬಂಧಿತ ಮೂವರು 6 ದಿನ ‘NIA’ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

09/07/2025 1:52 PM

ಮನೆಯಲ್ಲಿ ‘ಜಿರಳೆ’ ಕಾಟ ಹೆಚ್ಚಗಿದ್ಯಾ.? ಜಸ್ಟ್ ಹೀಗೆ ಓಡಿಸಿ!

09/07/2025 1:36 PM

BREAKING : ಯಾವುದೇ ಕಾರಣಕ್ಕೂ ಸಚಿವ ಸಂಪುಟ ಪುನರ್ ರಚನೆ ಇಲ್ಲ : ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ

09/07/2025 1:25 PM
State News
KARNATAKA

BREAKING : ರಾಜ್ಯದಲ್ಲಿ ಮೂವರು ಶಂಕಿತ ಉಗ್ರರ ಬಂಧನ ಕೇಸ್ : ಬಂಧಿತ ಮೂವರು 6 ದಿನ ‘NIA’ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

By kannadanewsnow0509/07/2025 1:52 PM KARNATAKA 2 Mins Read

ಬೆಂಗಳೂರು : ಉಗ್ರ ಟಿ.ನಾಸಿರ್ ಗೆ ನೆರವು ನೀಡಿದ್ದ ಆರೋಪದ ಮೇಲೆ ಇಂದು NIA ಬೆಂಗಳೂರು ಸೇರಿ 5 ಕಡೆ…

ಮನೆಯಲ್ಲಿ ‘ಜಿರಳೆ’ ಕಾಟ ಹೆಚ್ಚಗಿದ್ಯಾ.? ಜಸ್ಟ್ ಹೀಗೆ ಓಡಿಸಿ!

09/07/2025 1:36 PM

BREAKING : ಬೆಂಗಳೂರಲ್ಲಿ ಶಾಪಿಂಗ್ ಹೋಗಿದ್ದಕ್ಕೆ, ಕಾಲಿನಿಂದ ಪತ್ನಿಯ ಕುತ್ತಿಗೆ ತುಳಿದು ಹತ್ಯೆಗೈದ ಪಾಪಿ ಪತಿ!

09/07/2025 12:56 PM

BREAKING : ಬೆಳಗಾವಿಯಲ್ಲಿ ಘೋರ ದುರಂತ : ಸಾಲದಿಂದ ಬೇಸತ್ತು, ವಿಷ ಸೇವಿಸಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ!

09/07/2025 12:52 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.