ಕಾಂಗ್ರೆಸ್ ಹೈಕಮಾಂಡ್ ಸಂಪೂರ್ಣ ದುರ್ಬಲ: ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕಿಡಿ

ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ಸಂಪೂರ್ಣ ದುರ್ಬಲವಾಗಿದೆ. ಮುಡಾ ಹಗರಣದಲ್ಲಿ ಭಾಗಿಯಾಗಿರುವಂತ ಸಿಎಂ ಸಿದ್ಧರಾಮಯ್ಯ ಅವರನ್ನು ಕುರ್ಚಿಯಿಂದ ಕೆಳಗಿಳಿಸಲು ವಿಫಲವಾಗಿದೆ ಎಂಬುದಾಗಿ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕಿಡಿಕಾರಿದ್ದಾರೆ. ಇಂದು ಮಾತನಾಡಿದಂತ ಅವರು, ಕಾಂಗ್ರೆಸ್ಸಿಗರು ಮತ್ತು ಸಿದ್ದರಾಮಯ್ಯನವರು ಕರ್ನಾಟಕವನ್ನು ಎಟಿಎಂ ಮಾಡಿ ತಮ್ಮನ್ನು ತಾವು ಹಾಳು ಮಾಡಿಕೊಂಡರು ಎಂದು ನುಡಿದರು. ಕಾಂಗ್ರೆಸ್ ಪಕ್ಷವು ಭ್ರಷ್ಟಾಚಾರದ ಮೂಲಕ ರಾಷ್ಟ್ರದಲ್ಲಿ ಕರ್ನಾಟಕದ ಮಾನವನ್ನು ಹರಾಜು ಹಾಕುತ್ತಿದೆ ಎಂದು ಟೀಕಿಸಿದರು. ರಾಜೀನಾಮೆ ಕೊಡುವ ಮೂಲಕ ಅಲ್ಪಸ್ವಲ್ವ ಗೌರವವನ್ನು ಉಳಿಸಿಕೊಳ್ಳಿ ಎಂದು … Continue reading ಕಾಂಗ್ರೆಸ್ ಹೈಕಮಾಂಡ್ ಸಂಪೂರ್ಣ ದುರ್ಬಲ: ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕಿಡಿ