Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಚಿತ್ರದುರ್ಗ ಜಿಲ್ಲಾಸ್ಪತ್ರೆ ಆವರಣದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ.!

07/10/2025 8:40 AM

ವಾರಸುದಾರರು ಇಲ್ಲದೇ ಬ್ಯಾಂಕ್ ಖಾತೆಗಳಲ್ಲಿ ಕೊಳೆಯುತ್ತಿದೆ ಬರೊಬ್ಬರಿ 1.84 ಲಕ್ಷ ಕೋಟಿ ರೂ.!

07/10/2025 8:30 AM

BREAKING : `ರಣಜಿ ಟೂರ್ನಿ’ಗೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ : ನಾಯಕನಾಗಿ ಮಯಾಂಕ್ ಅಗರ್ವಾಲ್ ಆಯ್ಕೆ | Ranji Trophy 2025

07/10/2025 8:18 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕಾಂಗ್ರೆಸ್ ‌ನಿಂದ ಜನಾಂಗೀಯ ‌ನಿಂದನೆ, ಶಾಂತಿಯ ತೋಟ ಕದಡಿದ್ದಾರೆ: ಆರ್.ಅಶೋಕ ಆಕ್ರೋಶ
KARNATAKA

ಕಾಂಗ್ರೆಸ್ ‌ನಿಂದ ಜನಾಂಗೀಯ ‌ನಿಂದನೆ, ಶಾಂತಿಯ ತೋಟ ಕದಡಿದ್ದಾರೆ: ಆರ್.ಅಶೋಕ ಆಕ್ರೋಶ

By kannadanewsnow0909/05/2024 3:46 PM

ಬೆಂಗಳೂರು: ಸ್ಯಾಮ್ ಪಿತ್ರೋಡಾ ಅವರ ಜನಾಂಗೀಯ ನಿಂದನೆಯ ಹೇಳಿಕೆಯನ್ನು ಬಿಜೆಪಿ ಖಂಡಿಸುತ್ತದೆ. ದಕ್ಷಿಣ ಭಾರತದ ಜನರು ಐದು ಸಾವಿರ ವರ್ಷಗಳ ಇತಿಹಾಸ ಹೊಂದಿದ್ದಾರೆ. ಇದನ್ನು ತಿಳಿಯದೆ ನಮ್ಮನ್ನು ಆಫ್ರಿಕನ್ನರು ಎನ್ನುವ ಮೂಲಕ ಶಾಂತಿಯ ತೋಟವನ್ನು ಕದಡಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಯಾಮ್‌ ಪಿತ್ರೋಡ ಅವರ ಹೇಳಿಕೆ ಕಾಂಗ್ರೆಸ್‌ನ ಮನಸ್ಥಿತಿಯನ್ನು ತೋರಿಸಿದೆ. ವರ್ಣಭೇದ ನೀತಿ ಹಾಗೂ ಬಣ್ಣದ ಕುರಿತು ಮಾತಾಡುವುದು ಕಾಂಗ್ರೆಸ್‌ನ ಡಿಎನ್‌ಎ ಯಲ್ಲೇ ಇದೆ. ಇದಕ್ಕೂ ಮುನ್ನವೇ ಹಿನ್ನೆಲೆ ಗಾಯಕರಾಗಿ ಡಿ.ಕೆ.ಸುರೇಶ್‌ ಈ ಮಾತನಾಡಿದ್ದರು. ಈಗ ದೇಶ ಒಡೆಯುವ, ಛಿದ್ರ ಮಾಡುವ ಮಾತನ್ನು ಪಿತ್ರೋಡಾ ಹೇಳಿದ್ದಾರೆ. ಈ ಮೂಲಕ ಕಾಂಗ್ರೆಸ್‌ನ ಸಿದ್ಧಾಂತವನ್ನು ತಿಳಿಸಿದ್ದಾರೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣದ ಗ್ಯಾರಂಟಿಯನ್ನು ನೀಡಿದ್ದಾರೆ. ಹಿಂದೆ ವರ್ಣಭೇದ ನೀತಿಯಿಂದ ಅನೇಕ ಸಾವು ನೋವುಗಳಾಗಿತ್ತು. ನೆಲ್ಸನ್‌ ಮಂಡೇಲ, ಮಹಾತ್ಮ ಗಾಂಧೀಜಿಯಿಂದ ಇದರ ವಿರುದ್ಧ ಹೋರಾಟ ನಡೆದಿತ್ತು. ಆದರೆ ಕಾಂಗ್ರೆಸ್ ಬಣ್ಣದ ಆಧಾರದಲ್ಲಿ ಜನರ ಮನಸ್ಸನ್ನು ಒಡೆದಿದೆ. 5 ಸಾವಿರ ವರ್ಷಗಳ ಇತಿಹಾಸವಿರುವ ನಮ್ಮನ್ನು ಆಫ್ರಿಕಾದವರು ಎಂದಿದ್ದಾರೆ. ಒಕ್ಕಲಿಗರು, ಲಿಂಗಾಯಿತರು, ದಲಿತರಿಗೆ ಕಾಂಗ್ರೆಸ್‌ ಯಾವ ಬಣ್ಣ ಹಚ್ಚುತ್ತದೆ ಎಂದು ಪ್ರಶ್ನೆ ಮಾಡಿದರು.

ಸೋನಿಯಾ ಗಾಂಧಿ ಇಟಲಿಯಿಂದ ಬಂದಿದ್ದರೂ ಅವರನ್ನು ಭಾರತೀಯರೆಂದು ಒಪ್ಪಿಕೊಳ್ಳುವಂತೆ ಕಾಂಗ್ರೆಸ್‌ ನಾಯಕರು ಒತ್ತಾಯಿಸುತ್ತಾರೆ. ಸೋನಿಯಾ ದೇಶದ ಸೊಸೆ ಎಂದು ನಾವೆಲ್ಲರೂ ಒಪ್ಪಿಕೊಂಡಿದ್ದೇವೆ. ಸೋನಿಯಾ, ರಾಹುಲ್‌ ಗಾಂಧಿ, ಪ್ರಿಯಾಂಕ ಗಾಂಧಿ ವಾಡ್ರಾ ಯಾವ ದೇಶದಿಂದ ಬಂದಿದ್ದಾರೆ ಎಂದು ಮೊದಲು ತಿಳಿಸಬೇಕು. ನುಡಿದಂತೆ ನಡೆಯುವ ಸಿಎಂ ಸಿದ್ದರಾಮಯ್ಯ ಐದು ಗ್ಯಾರಂಟಿ ಹೇಳುತ್ತಾರೆ. ಈಗ ಬಿಳಿ ಗ್ಯಾರಂಟಿ, ಕಪ್ಪು ಗ್ಯಾರಂಟಿ, ಚೈನೀಸ್‌ ಗ್ಯಾರಂಟಿ, ಅರಬ್ಬಿ ಗ್ಯಾರಂಟಿ, ಆಫ್ರಿಕಾ ಗ್ಯಾರಂಟಿಯನ್ನು ನೀಡಿದ್ದಾರೆ ಎಂದರು.

ಮಹಾರಾಷ್ಟ್ರದಲ್ಲಿ ಹುಟ್ಟಿದ ಡಾ.ಬಿ.ಆರ್‌.ಅಂಬೇಡ್ಕರ್‌ ಯಾರು, ಗುಜರಾತ್‌ನಲ್ಲಿ ಹುಟ್ಟಿದ ಗಾಂಧೀಜಿ ಯಾರು, ಬೆಂಗಳೂರು ಕಟ್ಟಿದ ಕೆಂಪೇಗೌಡರು ಯಾರು ಎಂದು ‌ಕಾಂಗ್ರೆಸ್ ಹೇಳಬೇಕು. ಈಗಾಗಲೇ ಕಾಂಗ್ರೆಸ್ ಸರ್ಕಾರ ಹಿಂದೂಗಳನ್ನು ಎರಡನೇ ದರ್ಜೆಯ ಪ್ರಜೆಗಳಾಗಿ ನೋಡುತ್ತಿದೆ. ಮೋದಿ ಎಂದರೆ‌ ಕಪಾಳಕ್ಕೆ ಹೊಡಿ ಎಂದವರು ಪಿತ್ರೋಡಾಗೆ ಹೇಗೆ ಹೊಡೆಯುತ್ತಾರೆ ಎಂದು ಪ್ರಶ್ನೆ ಮಾಡಿದರು.

ಸ್ವಂತ ಮಕ್ಕಳಿಗೆ ಹಕ್ಕಿಲ್ಲ

ಹಿಂದೆ ಬ್ರಿಟಿಷರು ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ಕಾನೂನು ತಂದು ರಾಜ್ಯಗಳನ್ನು ಕಿತ್ತುಕೊಂಡರು. ಅದೇ ರೀತಿ ಈಗಿನ ಕಾಂಗ್ರೆಸ್ ಸ್ವಂತ ಮಕ್ಕಳಿಗೆ ಹಕ್ಕಿಲ್ಲ ಎಂಬ ಕಾನೂನು ತರಲು ಮುಂದಾಗಿದ್ದಾರೆ. ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಲೂಟಿ ಮಾಡಿದ್ದೇವೆ ಎಂದು ಹೇಳಿದ್ದರು. ಅಂತಹ ಲೂಟಿಯ ಸಂಪತ್ತನ್ನು ನರೇಂದ್ರ ಮೋದಿ ಜನರಿಗೆ ನೀಡಲಿದ್ದಾರೆ ಎಂದರು.

ದಕ್ಷಿಣ ಭಾರತದವರು ಆಫ್ರಿಕಾದವರು ಎನ್ನುವುದಾದರೆ ಸಿಎಂ ಸಿದ್ದರಾಮಯ್ಯ ಮೊದಲು ಆಫ್ರಿಕಾಗೆ ಹೋಗಿ ಅಲ್ಲಿ ಸಿಎಂ ಆಗಬೇಕು ಎಂದರು.

ಮುಖ್ಯಮಂತ್ರಿಗಳೇ ಉತ್ತರಿಸಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಸಿಲರಿ ನೀರು, ಜ್ಯೂಸ್ ಕುಡಿದುಕೊಂಡು ಎಸಿಯಲ್ಲಿ ಕುಳಿತು ಪ್ರಧಾನಿ ನರೇಂದ್ರ ‌ಮೋದಿಗೆ ಪ್ರಶ್ನೆ ಮಾಡಿದ್ದಾರೆ. ರಾಜ್ಯ ಸರ್ಕಾರ ಜನರಿಗೆ ನೀರು ನೀಡಿಲ್ಲ, ಹಾಲಿನ ಪ್ರೋತ್ಸಾಹಧನ ನೀಡಿಲ್ಲ, ಆಂಬ್ಯುಲೆನ್ಸ್ ಸಿಬ್ಬಂದಿಗೆ ಸಂಬಳ ನೀಡಿಲ್ಲ, ಬಿಬಿಎಂಪಿ ಗುತ್ತಿಗೆದಾರರಿಗೆ ಬಿಲ್ ಕೊಟ್ಟಿಲ್ಲ, ನೇಹಾ ಹತ್ಯೆಗೆ 120 ದಿನಗಳಲ್ಲಿ ತೀರ್ಪು ಕೊಡುತ್ತೇನೆಂದು ಇನ್ನೂ ತನಿಖೆ ಶುರು ಆಗಿಲ್ಲ. ಪ್ರಧಾನಿ ನರೇಂದ್ರ ಮೋದಿ ಒಂದು ದಿನ ರಜೆ ಇಲ್ಲದೆ ಕೆಲಸ ಮಾಡುತ್ತಿದ್ದಾರೆ. ಆದರೆ ಸಿಎಂ ಸಿದ್ದರಾಮಯ್ಯ ಎಲ್ಲ ಬಗೆಯ ರಜೆ ಪಡೆದು ಮಜಾ ಮಾಡುತ್ತಿದ್ದಾರೆ. ಸದಾ ಕೆಲಸ ಮಾಡುವ ಮೋದಿ ಹಾಗೂ ಕೆಲಸ ಕಳ್ಳ ಸಿಎಂ ಸಿದ್ದರಾಮಯ್ಯ ಅವರ ನಡುವೆ ಎಲ್ಲಿಯ ಹೋಲಿಕೆ ಎಂದು ವ್ಯಂಗ್ಯವಾಡಿದರು‌.

ಚುನಾವಣಾ ಚರ್ಚೆಯಲ್ಲಿ ಚರ್ಮದ ಬಣ್ಣವನ್ನು ತರುವ ಮೂಲಕ ಪ್ರಧಾನಿ ‘ಜನಾಂಗೀಯವಾದಿ’ ಆಗಿದ್ದಾರೆ : ಚಿದಂಬರಂ

ಪೆನ್ ಡ್ರೈವ್ ಪ್ರಕರಣದಲ್ಲಿ ಕುಮಾರಸ್ವಾಮಿನ ಹೋರಾಟ ಮಾಡದಂತೆ ಯಾರು ತಡೆದಿಲ್ಲ: ಡಿಸಿಎಂ ಡಿಕೆಶಿ

Share. Facebook Twitter LinkedIn WhatsApp Email

Related Posts

BREAKING : ಚಿತ್ರದುರ್ಗ ಜಿಲ್ಲಾಸ್ಪತ್ರೆ ಆವರಣದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ.!

07/10/2025 8:40 AM1 Min Read

BREAKING : `ರಣಜಿ ಟೂರ್ನಿ’ಗೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ : ನಾಯಕನಾಗಿ ಮಯಾಂಕ್ ಅಗರ್ವಾಲ್ ಆಯ್ಕೆ | Ranji Trophy 2025

07/10/2025 8:18 AM1 Min Read

ರಾಜ್ಯ ‘ಸರ್ಕಾರಿ ನೌಕರರೇ’ಗಮನಿಸಿ : ‘ಆರೋಗ್ಯ ಸಂಜೀವಿನಿ ಯೋಜನೆಗೆ’ ಈ ದಾಖಲೆಗಳು ಕಡ್ಡಾಯ | Arogya Sanjeevini

07/10/2025 7:58 AM1 Min Read
Recent News

BREAKING : ಚಿತ್ರದುರ್ಗ ಜಿಲ್ಲಾಸ್ಪತ್ರೆ ಆವರಣದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ.!

07/10/2025 8:40 AM

ವಾರಸುದಾರರು ಇಲ್ಲದೇ ಬ್ಯಾಂಕ್ ಖಾತೆಗಳಲ್ಲಿ ಕೊಳೆಯುತ್ತಿದೆ ಬರೊಬ್ಬರಿ 1.84 ಲಕ್ಷ ಕೋಟಿ ರೂ.!

07/10/2025 8:30 AM

BREAKING : `ರಣಜಿ ಟೂರ್ನಿ’ಗೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ : ನಾಯಕನಾಗಿ ಮಯಾಂಕ್ ಅಗರ್ವಾಲ್ ಆಯ್ಕೆ | Ranji Trophy 2025

07/10/2025 8:18 AM

ಸುವಾಸನೆಗೆ ಬೆಲೆ ತೆತ್ತ ಭಾರತೀಯ: ಪರ್ಫ್ಯೂಮ್‌ನಿಂದ US ವೀಸಾ ರದ್ದಾಗಿ ಗಡೀಪಾರಿನ ಭೀತಿ!

07/10/2025 8:13 AM
State News
KARNATAKA

BREAKING : ಚಿತ್ರದುರ್ಗ ಜಿಲ್ಲಾಸ್ಪತ್ರೆ ಆವರಣದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ.!

By kannadanewsnow5707/10/2025 8:40 AM KARNATAKA 1 Min Read

ಚಿತ್ರದುರ್ಗ : ಚಿತ್ರದುರ್ಗದ ಜಿಲ್ಲಾಸ್ಪತ್ರೆ ಆವರಣದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿದೆ.  ಜಿಲ್ಲಾಸ್ಪತ್ರೆ ಸಿಬ್ಬಂದಿ ನವಜಾತ ಶಿಶುವನ್ನು ರಕ್ಷಿಸಿ ಚಿಕಿತ್ಸೆ…

BREAKING : `ರಣಜಿ ಟೂರ್ನಿ’ಗೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ : ನಾಯಕನಾಗಿ ಮಯಾಂಕ್ ಅಗರ್ವಾಲ್ ಆಯ್ಕೆ | Ranji Trophy 2025

07/10/2025 8:18 AM

ರಾಜ್ಯ ‘ಸರ್ಕಾರಿ ನೌಕರರೇ’ಗಮನಿಸಿ : ‘ಆರೋಗ್ಯ ಸಂಜೀವಿನಿ ಯೋಜನೆಗೆ’ ಈ ದಾಖಲೆಗಳು ಕಡ್ಡಾಯ | Arogya Sanjeevini

07/10/2025 7:58 AM

ಪಿಂಚಣಿದಾರರೇ ಗಮನಿಸಿ : ಈ ದಿನಾಂಕದ ಮೊದಲು `ಜೀವನ ಪ್ರಮಾಣಪತ್ರ’ ಸಲ್ಲಿಸದಿದ್ದರೆ ಸಿಗಲ್ಲ ಪಿಂಚಣಿ.!

07/10/2025 7:57 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.