ನವದೆಹಲಿ: ಮುಖ್ಯ ಚುನಾವಣಾ ಆಯುಕ್ತರು (ಸಿಇಸಿ) ಮತ್ತು ಇತರ ಚುನಾವಣಾ ಆಯುಕ್ತರನ್ನು (ಇಸಿ) ನೇಮಕ ಮಾಡದಂತೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ನಿರ್ಬಂಧಿಸುವಂತೆ ಕೋರಿ ಸುಪ್ರೀಂ ಕೋರ್ಟ್ ನಲ್ಲಿ ಹೊಸ ಅರ್ಜಿ ಸಲ್ಲಿಸಲಾಗಿದೆ. ಸರ್ಕಾರದಿಂದ ಇಬ್ಬರು ಚುನಾವಣಾ ಆಯುಕ್ತರ ನೇಮಕವು ಈ ವಾರದ ಕೊನೆಯಲ್ಲಿ ನಿರೀಕ್ಷಿಸಲಾಗಿದೆ.
ಸಿಇಸಿ ಮತ್ತು ಇಸಿಗಳ ನೇಮಕಾತಿಗೆ ಸಂಬಂಧಿಸಿದ ಹೊಸ ಕಾನೂನು ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗೆ ವಿರುದ್ಧವಾಗಿದೆ ಎಂದು ಕಾಂಗ್ರೆಸ್ ನಾಯಕಿ ಜಯಾ ಠಾಕೂರ್ ಸಲ್ಲಿಸಿದ ಅರ್ಜಿಯಲ್ಲಿ ಆರೋಪಿಸಿದ್ದಾರೆ.
ಲೋಕಸಭಾ ಚುನಾವಣೆಯನ್ನು ಶೀಘ್ರದಲ್ಲೇ ಘೋಷಿಸಬಹುದು ಮತ್ತು ಚುನಾವಣಾ ಆಯುಕ್ತ ಅರುಣ್ ಗೋಯೆಲ್ ಈಗಾಗಲೇ ರಾಜೀನಾಮೆ ನೀಡಿರುವುದರಿಂದ ಈ ವಿಷಯದಲ್ಲಿ ತುರ್ತು ಇದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.