ಶಿವಮೊಗ್ಗ: ಮಹಿಳೆ ಅಪಹರಣ ಪ್ರಕರಣದಲ್ಲಿ ಶಾಸಕ ಹೆಚ್.ಡಿ ರೇವಣ್ಣ ಬಂಧನವಾಗಿದೆ. ಈ ಬಂಧನದ ಬಗ್ಗೆ ಕಾಂಗ್ರೆಸ್ ಶಾಸಕ ರವಿ ಗಣಿಗ ಅವರು ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಅದೇನು ಅಂತ ಮುಂದೆ ಓದಿ.

ಈ ಕುರಿತಂತೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಶಾಸಕ ರವಿ ಗಣಿಗ ಅವರು, ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರ ಬಂಧನದ ಹಿಂದೆ ಬಿಜೆಪಿಯ ಷಡ್ಯಂತ್ರವಿದೆ ಎಂಬುದಾಗಿ ಗಂಭೀರ ಆರೋಪ ಮಾಡಿದ್ದಾರೆ.

ಈ ಹಿಂದೆ ಜನಾರ್ಧನರೆಡ್ಡಿಯನ್ನು ನಿಯಂತ್ರಿಸೋ ಹುನ್ನಾರ ನಡೆಸಿದ್ದರು. ಅದರಂತೆ ಸಣ್ಣಪುಟ್ಟ ಪಕ್ಷಗಳನ್ನು ಮುಗಿಸೋದಕ್ಕೆ ಬಿಜೆಪಿ ಪಕ್ಷದವರು ಹೊರಟಿದ್ದಾರೆ ಎಂದರು.

ಇದೇ ವೇಳೆಯಲ್ಲಿ ಬಿಜೆಪಿ ಮುಖಂಡ ದೇವರಾಜೇಗೌಡ ಅವರ ಬಗ್ಗೆ ಮಾತನಾಡಿದಂತ ಅವರು, ಹಳೇ ಮೈಸೂರು ಭಾಗದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ನೆಲೆಯಿಲ್ಲ. ಹೀಗಾಗಿ ಜೆಡಿಎಸ್ ಮೂಲಕ ಕಾಂಗ್ರೆಸ್ ಅನ್ನು ಟಾರ್ಗೆಟ್ ಮಾಡಿಕೊಂಡಿದೆ. ಈ ಹಿಂದೆ ಜನಾರ್ಧನರೆಡ್ಡಿ ಮೂಲಕ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಯವರನ್ನು ಬೈಯ್ಯಿಸಿದ್ದರು. ಈಗ ದೇವರಾಜೇಗೌಡ ಮೂಲಕ ಕಾಂಗ್ರೆಸ್ ಪಕ್ಷದ ವಿರುದ್ಧ ಆರೋಪಿಸಲಾಗುತ್ತಿದೆ ಎಂದು ಕಿಡಿಕಾರಿದರು.

BREAKING: ನಾಳೆ CBSE, ICSE 10, 12ನೇ ತರಗತಿ ಪರೀಕ್ಷೆ ಫಲಿತಾಂಶ ಪ್ರಕಟ

BREAKING: ನಾಳೆ CBSE, ICSE 10, 12ನೇ ತರಗತಿ ಪರೀಕ್ಷೆ ಫಲಿತಾಂಶ ಪ್ರಕಟ

Share.
Exit mobile version