Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Shocking: ಮತಾಂತರಕ್ಕೆ ಒತ್ತಡ: ವೈಪ್ರೊ ಸಂಸ್ಥೆಯ ಮಾಜಿ ಉದ್ಯೋಗಿಯಿಂದ ಗಂಭೀರ ಆರೋಪ, ಉದ್ಯೋಗಕ್ಕೆ ರಾಜೀನಾಮೆ!

ಜೂನ್ 10ರಂದು ಭಾರತದ ಅತಿ ದೀರ್ಘಕಾಲದ ಚುನಾಯಿತ ಪ್ರಧಾನಿಯಾಗಿ ಮೋದಿ ದಾಖಲೆ | PM Modi

ಸಿಎಂ ಡಿಕೆಶಿ ಮೊದಲ ಕ್ಯಾಬಿನೆಟ್ ಬಿಗ್ ಗಿಫ್ಟ್: ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪಾಸ್ ಸೇರಿದಂತೆ 6 ಮಹತ್ವದ ಘೋಷಣೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಯೋಗೇಶ್ ಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅಪರಾಧಿ, ಜೈಲು: ಕೋರ್ಟ್ ಆದೇಶ
KARNATAKA

BREAKING: ಯೋಗೇಶ್ ಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅಪರಾಧಿ, ಜೈಲು: ಕೋರ್ಟ್ ಆದೇಶ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಧಾರವಾಡದ ಕಾಂಗ್ರೆಶ್ ಶಾಸಕ ವಿನಯ್ ಕುಲಕರ್ಣಿ ಅವರು ಅಪರಾಧಿ ಎಂಬುದಾಗಿ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಮಹತ್ವದ ಆದೇಶ ಮಾಡಿದೆ. ಅಲ್ಲದೇ ಅಪರಾಧಿಗಳನ್ನು ವಶಕ್ಕೆ ಪಡೆಯಲು ಕೋರ್ಟ್ ಆದೇಶಿಸಿದೆ. ಜೊತೆಗೆ ಎ20 ಹಾಗೂ 21 ಆರೋಪಿಗಳನ್ನು ಬಿಡುಗಡೆಗೆ ಆದೇಶಿಸಿದೆ. ಶಿಕ್ಷೆಯ ಪ್ರಮಾಣವನ್ನು ನಾಳೆ ಪ್ರಕಟಿಸಲಿದೆ.

ಬೆಳಿಗ್ಗೆಯಿಂದಲೇ ನ್ಯಾಯಾಲಯದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಪ್ರಕರಣದ ಪ್ರಮುಖ ಆರೋಪಿ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 21 ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗಿದ್ದರು. ನ್ಯಾಯಾಧೀಶರು ಆರಂಭದಲ್ಲಿ ಆರೋಪಿಗಳ ಹಾಜರಾತಿಯನ್ನು ದಾಖಲಿಸಿಕೊಂಡು, ದಾಖಲೆಗಳ ಅಂತಿಮ ಪರಿಶೀಲನೆಗಾಗಿ ತೀರ್ಪನ್ನು ಮಧ್ಯಾಹ್ನ 3 ಗಂಟೆಗೆ ಮುಂದೂಡಿದ್ದರು. ಅದರಂತೆ ಈಗ ಅಂತಿಮ ಆದೇಶ ಹೊರಬಿದ್ದಿದೆ.

ಪ್ರಕರಣದ ಹಿನ್ನೆಲೆ:

  • ಘಟನೆ: ಜೂನ್ 2016ರಲ್ಲಿ ಧಾರವಾಡದಲ್ಲಿ ಯೋಗೇಶ್ ಗೌಡ ಅವರ ಭೀಕರ ಹತ್ಯೆಯಾಗಿತ್ತು.

  • ಆರೋಪ: ಈ ಕೊಲೆಯ ಹಿಂದೆ ಅಂದಿನ ಸಚಿವ, ಹಾಲಿ ಶಾಸಕ ವಿನಯ್ ಕುಲಕರ್ಣಿ ಅವರ ಒಳಸಂಚು ಇದೆ ಎಂಬ ಗಂಭೀರ ಆರೋಪ ಕೇಳಿಬಂದಿತ್ತು.

  • ತನಿಖೆ: ಆರಂಭದಲ್ಲಿ ಸ್ಥಳೀಯ ಪೊಲೀಸರು ತನಿಖೆ ನಡೆಸಿ ಆರು ಜನರನ್ನು ಬಂಧಿಸಿದ್ದರು. ಆದರೆ, ಮೃತರ ಕುಟುಂಬದ ಒತ್ತಾಯದ ಮೇರೆಗೆ 2019ರಲ್ಲಿ ರಾಜ್ಯ ಸರ್ಕಾರ ಪ್ರಕರಣವನ್ನು ಸಿಬಿಐಗೆ (CBI) ಹಸ್ತಾಂತರಿಸಿತ್ತು.

  • ಬಂಧನ: ತನಿಖೆ ಚುರುಕುಗೊಳಿಸಿದ್ದ ಸಿಬಿಐ ಅಧಿಕಾರಿಗಳು ವಿನಯ್ ಕುಲಕರ್ಣಿ ಅವರನ್ನು ಬಂಧಿಸಿ ವಿಚಾರಣೆ ನಡೆಸಿದ್ದರು. ಈ ಪ್ರಕರಣದಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳು ಸೇರಿದಂತೆ ಒಟ್ಟು 21 ಮಂದಿ ಆರೋಪಿಗಳ ಪಟ್ಟಿಯಲ್ಲಿದ್ದರು.

ಸತತ 10 ವರ್ಷಗಳ ಕಾನೂನು ಹೋರಾಟ:

2016ರಿಂದ ಆರಂಭವಾದ ಈ ಕಾನೂನು ಸಮರವು ಹಲವು ತಿರುವುಗಳನ್ನು ಪಡೆದುಕೊಂಡಿತ್ತು. ಸರ್ಕಾರದ ಪರ ವಕೀಲರು ಮತ್ತು ಆರೋಪಿಗಳ ಪರ ವಕೀಲರು ಸಲ್ಲಿಸಿದ್ದ ಸುದೀರ್ಘ ಲಿಖಿತ ವಾದಗಳನ್ನು ಆಲಿಸಿದ್ದ ನ್ಯಾಯಾಲಯವು, ಏಪ್ರಿಲ್ 9 ರಂದು ತೀರ್ಪನ್ನು ಇಂದಿಗೆ ಕಾಯ್ದಿರಿಸಿತ್ತು.

ದಶಕದ ಕಾಲ ನಡೆದ ಈ ವಿಚಾರಣೆಯ ಅಂತ್ಯವು ಉತ್ತರ ಕರ್ನಾಟಕದ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿತ್ತು. ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅಪರಾಧಿ ಎಂಬುದಾಗಿ ಮಹತ್ವದ ತೀರ್ಪು ನೀಡಿದೆ.

ಯೋಗೀಶ್ ಗೌಡ ಕೇಸ್ ದಾಖಲಾಗಿದ್ದ ಆರೋಪಿಗಳ ಲೀಸ್ಟ್ ಹೀಗಿದೆ…

ಎ1 ಬಸವರಾಜ ಮುತ್ತಗಿ

ಎ2 ವಿಕ್ರಮ ಬಳ್ಳಾರಿ

ಎ3 ಕೀರ್ತಿಕುಮಾರ ಬೆಳ್ಳಟ್ಟಿ

ಎ4 ಸಂದೀಪ ಸವದತ್ತಿ

ಎ5 ವಿನಾಯಕ ಕಟಗಿ

ಎ6 ಮಹಾಬಳೇಶ್ವರ ಹೊಂಗಲ

ಎ7 ಸಂತೋಷ್ ಸವದತ್ತಿ

8 ದಿನೇಶ

ಎ9 ಅಶ್ವತ್ಥ್

ಎ10 ಸುನೀಲ್

ಎ11 ನಜೀರ್ ಅಹಮದ್

ಎ12 ಶಾನವಾಜ್

ಎ13 ನೂತನ್

ಎ14 ಹರ್ಷಿತ್

ಎ15 ವಿನಯ್ ಕುಲಕರ್ಣಿ

ಎ16 ಚಂದ್ರಶೇಖರ ಇಂಡಿ

ಎ17 ಶಿವಾನಂದ ಬಿರಾದಾರ

ಎ18 ವಿಕಾಸ್ ಕಲಬುರ್ಗಿ

ಎ19 ಚನ್ನಕೇಶವ ಟಿಂಗರಿಕರ

ಎ20 ವಾಸುದೇವ ನಾಯ್ಕ್

ಎ21 ಸೋಮಶೇಖರ ನ್ಯಾಮಗೌಡ

ಇಬ್ಬರನ್ನು ಹೊರತುಪಡಿಸಿ ಇತರೆ ಆರೋಪಿಗಳಿಗೆ ಶಿಕ್ಷೆ ಪ್ರಕಟ

21 ಆರೋಪಿಗಳ ಪೈಕಿ ಇಬ್ಬರು ಮಾಫಿ ಸಾಕ್ಷಿಯಾಗಿದ್ದರು. ಎ1 ಬಸವರಾಜ ಮುತ್ತಗಿ ಅವರು ಮಾಫಿ ಸಾಕ್ಷಿಯಾಗಿ ಹೇಳಿಕೆ ನೀಡಿದ್ದರು. ಎ17 ಶಿವಾನಂದ ಅವರು ಕೂಡ ಮಾಫಿ ಸಾಕ್ಷಿಯಾದ ಬಳಿಕಪೂ ಪ್ರತಿಕೂಲ ಹೇಳಿಕೆ ನೀಡಿದ್ದರು. ಹೀಗಾಗಿ ಮತ್ತೆ ಎ17 ಆರೋಪಿಯನ್ನಾಗಿಸುವಂತೆ ಸಿಬಿಐ ಅರ್ಜಿ ಸಲ್ಲಿಸಿತ್ತು. ಈ ಇಬ್ಬರನ್ನು ಹೊರತುಪಡಿಸಿ ಉಳಿದವರ ಮೇಲಿನ ಆರೋಪಿಗಳ ಸಂಬಂಧ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಮಹತ್ವದ ತೀರ್ಪು ಪ್ರಕಟಿಸಿದೆ.

Share. Facebook Twitter LinkedIn WhatsApp Email

Related Posts

ಸಿಎಂ ಡಿಕೆಶಿ ಮೊದಲ ಕ್ಯಾಬಿನೆಟ್ ಬಿಗ್ ಗಿಫ್ಟ್: ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪಾಸ್ ಸೇರಿದಂತೆ 6 ಮಹತ್ವದ ಘೋಷಣೆ!

2 Mins Read

BREAKING: ಇಡೀ ರಾಜ್ಯಕ್ಕೆ ರಾಜ್ಯಕ್ಕೆ ಬಿ-ಖಾತಾದಿಂದ ಎ-ಖಾತಾ ಯೋಜನೆ ವಿಸ್ತರಣೆ: ಸಿಎಂ ಡಿ.ಕೆ ಶಿವಕುಮಾರ್ ಘೋಷಣೆ

2 Mins Read

GOOD NEWS: ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸಿಎಂ ಡಿ.ಕೆ ಶಿವಕುಮಾರ್ ಗುಡ್ ನ್ಯೂಸ್: ಎಲ್ಲರಿಗೂ ಫ್ರಿ ಬಸ್ ಪಾಸ್

2 Mins Read
Recent News

Shocking: ಮತಾಂತರಕ್ಕೆ ಒತ್ತಡ: ವೈಪ್ರೊ ಸಂಸ್ಥೆಯ ಮಾಜಿ ಉದ್ಯೋಗಿಯಿಂದ ಗಂಭೀರ ಆರೋಪ, ಉದ್ಯೋಗಕ್ಕೆ ರಾಜೀನಾಮೆ!

ಜೂನ್ 10ರಂದು ಭಾರತದ ಅತಿ ದೀರ್ಘಕಾಲದ ಚುನಾಯಿತ ಪ್ರಧಾನಿಯಾಗಿ ಮೋದಿ ದಾಖಲೆ | PM Modi

ಸಿಎಂ ಡಿಕೆಶಿ ಮೊದಲ ಕ್ಯಾಬಿನೆಟ್ ಬಿಗ್ ಗಿಫ್ಟ್: ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪಾಸ್ ಸೇರಿದಂತೆ 6 ಮಹತ್ವದ ಘೋಷಣೆ!

BREAKING: ಇಡೀ ರಾಜ್ಯಕ್ಕೆ ರಾಜ್ಯಕ್ಕೆ ಬಿ-ಖಾತಾದಿಂದ ಎ-ಖಾತಾ ಯೋಜನೆ ವಿಸ್ತರಣೆ: ಸಿಎಂ ಡಿ.ಕೆ ಶಿವಕುಮಾರ್ ಘೋಷಣೆ

State News
KARNATAKA

ಸಿಎಂ ಡಿಕೆಶಿ ಮೊದಲ ಕ್ಯಾಬಿನೆಟ್ ಬಿಗ್ ಗಿಫ್ಟ್: ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪಾಸ್ ಸೇರಿದಂತೆ 6 ಮಹತ್ವದ ಘೋಷಣೆ!

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಜವಾಬ್ದಾರಿ ವಹಿಸಿಕೊಂಡಿರುವ ಡಿ.ಕೆ. ಶಿವಕುಮಾರ್ ಅವರು ಮೊದಲ ದಿನವೇ ಆಡಳಿತದಲ್ಲಿ ಮುನ್ನುಗ್ಗಿದ್ದಾರೆ. ಇಂದು ನಡೆದ…

BREAKING: ಇಡೀ ರಾಜ್ಯಕ್ಕೆ ರಾಜ್ಯಕ್ಕೆ ಬಿ-ಖಾತಾದಿಂದ ಎ-ಖಾತಾ ಯೋಜನೆ ವಿಸ್ತರಣೆ: ಸಿಎಂ ಡಿ.ಕೆ ಶಿವಕುಮಾರ್ ಘೋಷಣೆ

GOOD NEWS: ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸಿಎಂ ಡಿ.ಕೆ ಶಿವಕುಮಾರ್ ಗುಡ್ ನ್ಯೂಸ್: ಎಲ್ಲರಿಗೂ ಫ್ರಿ ಬಸ್ ಪಾಸ್

BIG BREAKING: ರಾಜ್ಯದಲ್ಲಿ ‘ಭೂ ಗ್ಯಾರಂಟಿ’ ಘೋಷಿಸಿದ ಸಿಎಂ ಡಿ.ಕೆ ಶಿವಕುಮಾರ್: 3 ಅಂತಸ್ತಿನ ಮನೆಗಳಿಗೆ ಒಸಿ ವಿನಾಯ್ತಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.