Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING ; ಏಷ್ಯಾ ಕಪ್- 2025ರ ಸಂಪೂರ್ಣ ‘ವೇಳಾಪಟ್ಟಿ’ ಪ್ರಕಟ, ಸೆ.14ಕ್ಕೆ ದುಬೈನಲ್ಲಿ ‘ಭಾರತ vs ಪಾಕ್ ಪಂದ್ಯ’ |Asia Cup 2025

02/08/2025 10:01 PM

BREAKING : ಪಾಕ್’ನ ಕೆಲ ಪ್ರದೇಶಗಳಲ್ಲಿ 5.4 ತೀವ್ರತೆಯ ಪ್ರಭಲ ಭೂಕಂಪ ; ಆತಂಕದಲ್ಲಿ ‘ಕುರಾನ್’ ಪಠಿಸಿದ ಜನ |Earthquake

02/08/2025 9:43 PM

BREAKING : ಫುಟ್ಬಾಲ್ ದಂತಕಥೆ ‘ಲಿಯೋನೆಲ್ ಮೆಸ್ಸಿ’ ಭಾರತಕ್ಕೆ ಆಗಮನ, ಡಿ.15ರಂದು ‘ಪ್ರಧಾನಿ ಮೋದಿ’ ಭೇಟಿ

02/08/2025 9:31 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » 11 ಮಸೂದೆಗಳನ್ನು ವಾಪಸ್‌ ಕಳಿಸಿದ ರಾಜ್ಯಪಾಲರ ಕ್ರಮಕ್ಕೆ ‘ಕಾಂಗ್ರೆಸ್ ಶಾಸಕ’ರು ಗರಂ: ಕಾನೂನು ಹೋರಾಟದ ಎಚ್ಚರಿಕೆ
KARNATAKA

11 ಮಸೂದೆಗಳನ್ನು ವಾಪಸ್‌ ಕಳಿಸಿದ ರಾಜ್ಯಪಾಲರ ಕ್ರಮಕ್ಕೆ ‘ಕಾಂಗ್ರೆಸ್ ಶಾಸಕ’ರು ಗರಂ: ಕಾನೂನು ಹೋರಾಟದ ಎಚ್ಚರಿಕೆ

By kannadanewsnow0923/08/2024 7:17 PM

ಬೆಂಗಳೂರು: ಜನರ ವಿಶ್ವಾಸ ಗಳಿಸಿ, ಜನಪ್ರಿಯವಾದ ಸರ್ಕಾರದ ಕಾರ್ಯಚಟುವಟಿಕೆಗೆ ಅಡಿಗಡಿಗೂ ಅಡ್ಡಿ ಮಾಡುತ್ತಿರುವ ರಾಜ್ಯಪಾಲರ ಕ್ರಮ ರಾಜಕೀಯ ಪ್ರೇರಿತ ಎಂದು ಆರೋಪಿಸಿರುವ ಕಾಂಗ್ರೆಸ್‌ ಶಾಸಕರು, ಉಭಯ ಸದನಗಳಲ್ಲಿ ಅಂಗೀಕಾರವಾದ ಮಸೂದೆಗಳನ್ನು ವಾಪಸ್‌ ಮಾಡಿರುವ ರಾಜ್ಯಪಾಲರ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿ, ತೀವ್ರವಾಗಿ ಖಂಡಿಸಿದ್ದಾರೆ.

ಕಾಂಗ್ರೆಸ್‌ ಶಾಸಕರಾದ ಮಂಜುನಾಥ ಭಂಡಾರಿ, ಎಸ್.ರವಿ, ಅನಿಲ್ ಕುಮಾರ್‌, ರಾಜೇಂದ್ರ ರಾಜಣ್ಣ, ದಿನೇಶ್ ಗೂಳಿಗೌಡ, ಸುನಿಲ್ ಗೌಡ ಪಾಟೀಲ್‌, ಚಂದ್ರಶೇಖರ ಪಾಟೀಲ, ಚೆನ್ನರಾಜು, ಮಧು ಮಾದೇಗೌಡ, ಡಾ.ತಿಮ್ಮಯ್ಯ, ರಾಮೋಜಿ ಗೌಡ, DT ಶ್ರೀನಿವಾಸ, ಶರಣಗೌಡ ಪಾಟೀಲ್‌, ಭೀಮರಾವ್‌ ಪಾಟಿಲ, ತಿಪ್ಪಣ್ಣಾ ಕಮಕನೂರು ಅವರು ಜಂಟಿ ಪತ್ರಿಕಾ ಹೇಳಿಕೆ ನೀಡಿ, ರಾಜ್ಯಪಾಲರ ನಡೆಯ ಬಗ್ಗೆ ಧ್ವನಿ ಎತ್ತಿದ್ದಾರೆ.

ಆಗಸ್ಟ್‌ ತಿಂಗಳಲ್ಲಿ ರಾಜ್ಯಪಾಲರು 6 ಪ್ರಮುಖ ಮಸೂದೆಗಳನ್ನು ಹಿಂತಿರುಗಿಸಿದ್ದಾರೆ. ಒಟ್ಟು 11 ವಿಧೇಯಕಗಳನ್ನು ರಾಜ್ಯಪಾಲರು ವಾಪಸ್‌ ಕಳಿಸಿ ವಿರೋಧ ಪಕ್ಷದ ನಾಯಕರಂತೆ ವರ್ತಿಸುತ್ತಿದ್ದಾರೆ

ಕರ್ನಾಟಕ ಸಾರ್ವಜನಿಕ ಭ್ರಷ್ಟಾಚಾರ ತಡೆ ವಿಧೇಯಕ, ಕರ್ನಾಟಕ ಧಾರ್ಮಿಕ ದತ್ತಿ ತಿದ್ದುಪಡಿ ವಿಧೇಯಕ, ಕರ್ನಾಟಕ ಟೌನ್‌ ಆಂಡ್‌ ಕಂಟ್ರೀ ಪ್ಲಾನಿಂಗ್‌ ವಿಧೇಯಕ, ಕರ್ನಾಟಕ ಶಾಸಕಾಂಗ ಸದಸ್ಯರ ಅನರ್ಹತೆ ತಡೆ ವಿಧೇಯಕ, ಕರ್ನಾಟಕ ಪುರಸಭಗಳು ಮತ್ತು ಇತರೇ ಕೆಲವು ಕಾನೂನು ವಿಧೇಯಕ, ಕರ್ನಾಟಕ ಚಲನಚಿತ್ರ ಮತ್ತು ಸಾಂಸ್ಕೃತಿಕ ಕಲಾವಿದರ ಕಲ್ಯಾಣ ವಿಧೇಯಕ, ಕರ್ನಾಟಕ ಸಹಕಾರ ಸಂಘಗಳ ತಿದ್ದುಪಡಿ ವಿಧೇಯಕ, ಕರ್ನಾಟಕ ಸೌಹಾರ್ದ ಸಹಕಾರಿ ತಿದ್ದುಪಡಿ ವಿಧೇಯಕ, ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ, ಗದಗ ಬೆಟಗೇರಿ ವ್ಯಾಪಾರ ಸಂಸ್ಕೃತಿ ಪ್ರದರ್ಶನ ಪ್ರಾಧಿಕಾರ ವಿಧೇಯಕ, ಕರ್ನಾಟಕ ನೋಂದಣಿ ತಿದ್ದುಪಡಿ ವಿಧೇಯಕಗಳನ್ನು ರಾಜ್ಯಪಾಲರು ಇದುವರೆಗೆ ವಾಪಸ್‌ ಮಾಡಿದ್ದಾರೆ. ಈ ಕ್ರಮ ಸರಿಯಲ್ಲ ಎಂದು ಕಾಂಗ್ರೆಸ್ ಶಾಸಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ವಿಧಾನಸಭೆ, ವಿಧಾನ ಪರಿಷತ್‌ನಲ್ಲಿ ಮಸೂದೆಗಳು ಅಂಗೀಕಾರವಾಗಿದ್ದರೂ ಕಾಯ್ದೆಯಲ್ಲಿ ಲೋಪದೋಷಗಳಿದ್ದರೆ, ಸ್ಪಷ್ಟನೆ ಕೇಳುವ ಅಧಿಕಾರ ರಾಜ್ಯಪಾಲರಿಗಿದೆ. ಆದರೆ, ವಿರೋಧಪಕ್ಷದವರು ವಿರೋಧಿಸಿದ್ದಾರೆ ಎಂಬ ಕಾರಣಕ್ಕೆ ಮಸೂದೆಗಳನ್ನು ವಾಪಸ್‌ ಕಳಿಸುವುದು ಸರಿಯಾದ ಕ್ರಮವಲ್ಲ. ಕಾಲಕಾಲಕ್ಕೆ ಕಾನೂನು ತಿದ್ದುಪಡಿ ಮಾಡುವ ಅವಕಾಶವನ್ನು ಸಂವಿಧಾನವೇ ನೀಡಿದೆ. ಜನಪ್ರತಿನಿಧಿಗಳು, ಬಹುಮತದ ಸರ್ಕಾರ ಶಾಸನ ರೂಪಿಸುತ್ತದೆ. ಅದು, ಕೆಳಮನೆ, ಮೇಲ್ಮನೆಯಲ್ಲಿ ಚರ್ಚೆಯಾಗಿ ಅಂಗೀಕಾರವಾಗಬೇಕು. ಅದನ್ನು ರಾಜ್ಯಪಾಲರು ತಮ್ಮ ಅಂಕಿತದೊಂದಿಗೆ ಅಂಗೀಕರಿಸಬೇಕು, ನಂತರ ಕಾಯ್ದೆ ಜಾರಿಯಾಗಬೇಕು ಎಂಬುದು ಕ್ರಮ. ಅದಕ್ಕೆ ಅಡ್ಡಿಪಡಿಸುವುದು ಸಮಂಜಸವಲ್ಲ. ಈ ರೀತಿ ಮಾಡುವುದರಿಂದ ಶಾಸಕ ಸಭೆಗಳ ಮಹತ್ವ ಕಡಿಮೆ ಆಗುತ್ತದೆ. ಒಕ್ಕೂಟದ ವ್ಯವಸ್ಥೆಗೆ ಧಕ್ಕೆಯಾಗುತ್ತದೆ. ಇದರಲ್ಲಿ ರಾಜಕೀಯದ ದುರುದ್ದೇಶ ಕಾಣುತ್ತದೆ ಎಂದು ಶಾಸಕರು ಆರೋಪಿಸಿದ್ದಾರೆ.

ಅವರೇ ಪ್ರಮಾಣವಚನ ಬೋಧಿಸಿದ ಈ ಕಾಂಗ್ರೆಸ್ ಸರ್ಕಾರ ಕ್ಕೆ ಜನ ಬೆಂಬಲ ಇರುವ ರಾಜ್ಯ ಸರ್ಕಾರದ ಮೇಲೆ ರಾಜ್ಯಪಾಲರಿಗೆ ವಿಶ್ವಾಸ ಇದ್ದಂತಿಲ್ಲ. ರಾಜ್ಯಪಾಲರು ನಡೆಯನ್ನು ನೋಡಿದರೆ, ದುರುದ್ದೇಶ ಪೂರ್ವಕವಾಗಿ ಸರ್ಕಾರಕ್ಕೆ ತೊಂದರೆ ಕಡುತ್ತಿರುವಂತೆ ಕಾಣುತ್ತಿದೆ. ಇವರು ಬಿಜೆಪಿ, ಮೈತ್ರಿ ಪಕ್ಷದ ಮಾತು ಕೇಳಿ ರಾಜ್ಯ ಸರ್ಕಾರದ ಕಾರ್ಯಗಳಿಗೆ ಅಡ್ಡಿಪಡಿಸಿದರೆ ಏನೂ ಉಪಯೋಗವಾಗದು ಎಂದಿದ್ದಾರೆ.

ಕಾನೂನು ಹೋರಾಟದ ಎಚ್ಚರಿಕೆ

ರಾಜ್ಯದಲ್ಲಿ ಏಕ ಕಾಲದಲ್ಲಿ 11 ಮಸೂದೆಗಳಿಗೆ ಅಡ್ಡಿಪಡಿಸುವ ಮೂಲಕ ರಾಜ್ಯಪಾಲರು ಕರ್ನಾಟಕದಲ್ಲಿ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ. ಕೇರಳ, ಮಹಾರಾಷ್ಟ್ರ, ಪಂಜಾಬ್‌ನಲ್ಲಿ ಇದೇ ರೀತಿ ಧೋರಣೆಯನ್ನು ಅಲ್ಲಿನ ರಾಜ್ಯಪಾಲರು ಅನುಸರಿಸಿದ್ದರಿಂದ ಸುಪ್ರೀಂ ಕೋರ್ಟ್‌ನಲ್ಲಿ ಕಾನೂನು ಸಮರ ಮಾಡಿ ಮಸೂದೆಗಳಿಗೆ ಅಂಗೀಕಾರ ಪಡೆಯಬೇಕಾಯಿತು. ಎಲ್ಲ ನಿರ್ಣಯಗಳೂ ಶಾಸನ ಸಭೆಯಲ್ಲೇ ಆಗಬೇಕು ಎಂದು ಸುಪ್ರೀಂ ಕೋರ್ಟ್‌ ಕೂಡ ಹೇಳಿದೆ. ಹಾಗಾಗಿ ಕರ್ನಾಟಕದ ರಾಜ್ಯಪಾಲರು ಮತ್ತೊಮ್ಮೆ ತಮ್ಮ ನಿರ್ಧಾರಗಳನ್ನು ಮರುಪರಿಶೀಲಿಸಬೇಕು. ಸಂವಿಧಾನದ ರಕ್ಷಕರಾದ ತಾವು ಪಕ್ಷಪಾತ ಧೋರಣೆಯನ್ನು ಅನುಸರಿಸಬಾರದು. ಉಭಯ ಸದನಗಳಲ್ಲಿ ಅಂಗೀಕಾರವಾರ ಮಸೂದೆಗಳಿಗೆ ಅಂಕಿತ ಹಾಕಿ ಸುಗಮ ಆಡಳಿತಕ್ಕೆ ಅನುವು ಮಾಡಿಕೊಡಬೇಕು. ಇಲ್ಲವಾದಲ್ಲಿ ಜನರ ಆಶೋತ್ತರಗಳನ್ನು ಈಡೇರಿಸುವ ಸಲುವಾಗಿ ಅನಿವಾರ್ಯವಾಗಿ ಕಾನೂನು ಹೋರಾಟ ಮಾಡಬೇಕಾಗುತ್ತದೆ ಎಂದು ಕಾಂಗ್ರೆಸ್ ಶಾಸಕರು ಎಚ್ಚರಿಸಿದ್ದಾರೆ.

‘ಬಿಜೆಪಿ’ಯವರ ಮಾತು ಕೇಳಿ ’15 ಬಿಲ್’ಗಳನ್ನು ರಾಜ್ಯಪಾಲರು ವಾಪಾಸ್ ಕಳುಹಿಸಿದ್ದಾರೆ: ಡಿ.ಕೆ ಶಿವಕುಮಾರ್ ಕಿಡಿ

ಮಂಕಿಪಾಕ್ಸ್ ಕಾಯಿಲೆ ಮುಂಜಾಗ್ರತ ಕ್ರಮವಾಗಿ ವಿಕ್ಟೋರಿಯಾದಲ್ಲಿ 50 ಬೆಡ್ ಮೀಸಲು: ಶರಣ ಪ್ರಕಾಶ್ ಪಾಟೀಲ್

Share. Facebook Twitter LinkedIn WhatsApp Email

Related Posts

ಇದು ಸಕಲ ಸೌಭಾಗ್ಯವನ್ನು ನೀಡುವ ಮಂತ್ರ: ಪಠಿಸಿ ನೋಡಿ, ಪರಿಹಾರ ಖಂಡಿತ

02/08/2025 9:30 PM3 Mins Read

ಹೋರಾಟಗಾರರ ವಿರುದ್ಧ ಸರ್ಕಾರದಿಂದ ಸೇಡಿನ ಕ್ರಮ; ಮಾಜಿ MLC ಹೆಚ್.ಎಂ.ರಮೇಶ್ ಗೌಡ ಕಿಡಿ

02/08/2025 9:26 PM1 Min Read

BREAKING: ರಾಜ್ಯದಲ್ಲಿ ಮಾದಕ ವಸ್ತುಗಳ ನಿಯಂತ್ರಣಕ್ಕೆ ಮಹತ್ವದ ಕ್ರಮ: ಕಾರ್ಯಪಡೆ ಘಟಕ ರಚಿಸಿ ಸರ್ಕಾರ ಅಧಿಕೃತ ಆದೇಶ

02/08/2025 6:22 PM3 Mins Read
Recent News

BREAKING ; ಏಷ್ಯಾ ಕಪ್- 2025ರ ಸಂಪೂರ್ಣ ‘ವೇಳಾಪಟ್ಟಿ’ ಪ್ರಕಟ, ಸೆ.14ಕ್ಕೆ ದುಬೈನಲ್ಲಿ ‘ಭಾರತ vs ಪಾಕ್ ಪಂದ್ಯ’ |Asia Cup 2025

02/08/2025 10:01 PM

BREAKING : ಪಾಕ್’ನ ಕೆಲ ಪ್ರದೇಶಗಳಲ್ಲಿ 5.4 ತೀವ್ರತೆಯ ಪ್ರಭಲ ಭೂಕಂಪ ; ಆತಂಕದಲ್ಲಿ ‘ಕುರಾನ್’ ಪಠಿಸಿದ ಜನ |Earthquake

02/08/2025 9:43 PM

BREAKING : ಫುಟ್ಬಾಲ್ ದಂತಕಥೆ ‘ಲಿಯೋನೆಲ್ ಮೆಸ್ಸಿ’ ಭಾರತಕ್ಕೆ ಆಗಮನ, ಡಿ.15ರಂದು ‘ಪ್ರಧಾನಿ ಮೋದಿ’ ಭೇಟಿ

02/08/2025 9:31 PM

ಇದು ಸಕಲ ಸೌಭಾಗ್ಯವನ್ನು ನೀಡುವ ಮಂತ್ರ: ಪಠಿಸಿ ನೋಡಿ, ಪರಿಹಾರ ಖಂಡಿತ

02/08/2025 9:30 PM
State News
KARNATAKA

ಇದು ಸಕಲ ಸೌಭಾಗ್ಯವನ್ನು ನೀಡುವ ಮಂತ್ರ: ಪಠಿಸಿ ನೋಡಿ, ಪರಿಹಾರ ಖಂಡಿತ

By kannadanewsnow0902/08/2025 9:30 PM KARNATAKA 3 Mins Read

ನಾವು ಎಲ್ಲಾ ಒಳ್ಳೆಯ ವಿಷಯಗಳಿಗೆ ಅಯಸ್ಕಾಂತವಾಗಬೇಕಾದರೆ, ನಾವು ನಮ್ಮ ಬದ್ಧ ಸ್ವಭಾವವನ್ನು ಹೆಚ್ಚಿಸಿಕೊಳ್ಳಬೇಕು. ಒಳ್ಳೆಯದನ್ನು ಆಕರ್ಷಿಸುವ ವಸ್ತು ವಶಂ ಎಂದು…

ಹೋರಾಟಗಾರರ ವಿರುದ್ಧ ಸರ್ಕಾರದಿಂದ ಸೇಡಿನ ಕ್ರಮ; ಮಾಜಿ MLC ಹೆಚ್.ಎಂ.ರಮೇಶ್ ಗೌಡ ಕಿಡಿ

02/08/2025 9:26 PM

BREAKING: ರಾಜ್ಯದಲ್ಲಿ ಮಾದಕ ವಸ್ತುಗಳ ನಿಯಂತ್ರಣಕ್ಕೆ ಮಹತ್ವದ ಕ್ರಮ: ಕಾರ್ಯಪಡೆ ಘಟಕ ರಚಿಸಿ ಸರ್ಕಾರ ಅಧಿಕೃತ ಆದೇಶ

02/08/2025 6:22 PM

ಮತಗಳ್ಳತನ ಆರೋಪ: ಕಾಂಗ್ರೆಸ್ ವಿರುದ್ಧ ಸಂಸದ ಡಾ.ಸಿಎನ್ ಮಂಜುನಾಥ್ ವಾಗ್ಧಾಳಿ

02/08/2025 6:18 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.