ಕಲಬುರ್ಗಿ : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬೆಳ್ಳಂಬೆಳಗ್ಗೆ ಕಾಂಗ್ರೆಸ್ ಸಂಸದ ಇ ತುಕಾರಾಮ ಹಾಗೂ ಶಾಸಕರಾದಂತಹ ನಾರಾ ಭರತ್ ರೆಡ್ಡಿ ಕಂಪನಿ ಗಣೇಶ್ ಹಾಗೂ ಡಾ. ಶ್ರೀನಿವಾಸ್ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಇದೆ ವಿಚಾರವಾಗಿ ಕಲ್ಬುರ್ಗಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್ ಶಾಸಕರನ್ನು ಟಾರ್ಗೆಟ್ ಮಾಡಿ ದಾಳಿ ಮಾಡಲಾಗುತ್ತಿದೆ. ಜಾರಿ ನಿರ್ದೇಶನಾಲಯ ಅಧಿಕಾರಿಗಳಿಗೆ ಮೊದಲಿನಿಂದಲೂ ಸಿಟ್ಟಿದೆ. ಇಡಿ ದಾಳಿಯ ಮೂಲಕ ಕಾಂಗ್ರೆಸ್ ಇಬ್ಬಾಗ ಮಾಡಬೇಕು ಎಂಬ ಉದ್ದೇಶವಿದೆ. ಟಾರ್ಚರ್ ಕೊಟ್ಟರೆ ಪಕ್ಷ ಇಬ್ಬಾಗ ಆಗುತ್ತೆ ಅನ್ನೋ ಉದ್ದೇಶ ಇರಬೇಕು.
ಆದರೆ ಅದು ಸಾಧ್ಯವಿಲ್ಲದ ಮಾತು ಎಂದರು.
ಯಾವ ಕಾರಣಕ್ಕೆ ದಾಳಿಯಾಗಿದೆ ಅನ್ನೋದು ಇಡಿಯವರಿಗೆ ಗೊತ್ತಿದೆ. ಇಡಿ ಅಧಿಕಾರಿಗಳ ದಾಳಿ ಇದೇನು ಹೊಸದಲ್ಲ. ಚುನಾವಣೆ ಸಮಯದಲ್ಲಿ ಎಲ್ಲಾ ಪಕ್ಷಗಳ ಹಣ ಸೀಸ್ ಮಾಡಿದ್ದರು. ಇಡೀ ಜತ್ತಿ ಮಾಡಿದ್ದ ಹಣ ಎಲ್ಲಿ ಹೋಯಿತು? ಯಾರಿಗೂ ಗೊತ್ತಿಲ್ಲ ಎಂದು ಕಲಬುರ್ಗಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಹೇಳಿಕೆ ನೀಡಿದರು.