Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ವಿಜಯಪುರದಲ್ಲಿ ಪಾಕಿಸ್ತಾನದ ಪರವಾಗಿ ಪೋಸ್ಟ್ ಹಾಕಿದ ವಿದ್ಯಾರ್ಥಿನಿ : ದೇಶದ್ರೋಹ ಪ್ರಕರಣ ದಾಖಲು

09/05/2025 8:52 AM

Breaking : ಬಿಕಾನೇರ್ ಮತ್ತು ಜೈಸಲ್ಮೇರ್ ನಲ್ಲಿ ಪಾಕ್ ಡ್ರೋನ್ ದಾಳಿ , ನಿಷ್ಕ್ರಿಯಗೊಳಿಸಿದ ಭಾರತ | India – Pak war

09/05/2025 8:51 AM

ಭಾರತ-ಪಾಕ್ ಯುದ್ಧ: ಉರಿಯಲ್ಲಿ ಶೆಲ್ ದಾಳಿ: ಮಹಿಳೆ ಸಾವು | India – Pak War

09/05/2025 8:33 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕಾಂಗ್ರೆಸ್ ಪಕ್ಷದಿಂದ ಸದನದ ನೀತಿ, ನಿಯಮಗಳ ಉಲ್ಲಂಘನೆ- BY ವಿಜಯೇಂದ್ರ ಖಂಡನೆ
KARNATAKA

ಕಾಂಗ್ರೆಸ್ ಪಕ್ಷದಿಂದ ಸದನದ ನೀತಿ, ನಿಯಮಗಳ ಉಲ್ಲಂಘನೆ- BY ವಿಜಯೇಂದ್ರ ಖಂಡನೆ

By kannadanewsnow0922/02/2024 8:41 PM

ಬೆಂಗಳೂರು: ಆಡಳಿತ ಪಕ್ಷದವರು ಸದನದ ಎಲ್ಲ ನೀತಿ ನಿಯಮಗಳನ್ನು ಗಾಳಿಗೆ ತೂರಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಖಂಡಿಸಿದರು.

ವಿಧಾನಸೌಧದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಸರಕಾರದ ಕ್ರಮಕ್ಕೆ ಸಭಾಧ್ಯಕ್ಷರು ಕೂಡ ಬೆಂಬಲ ನೀಡಿರುವುದು ದುರದೃಷ್ಟ ಎಂದು ಆಕ್ಷೇಪ ಸೂಚಿಸಿದರು. ಲೋಕಸಭಾ ಚುನಾವಣೆಯಲ್ಲಿ ಸೋಲನ್ನು ಎದುರು ನೋಡುತ್ತಿರುವ ಕಾಂಗ್ರೆಸ್ ಸರಕಾರವು, ರಾಜ್ಯದಲ್ಲಿ ಅಭಿವೃದ್ಧಿಯನ್ನೇ ಮಾಡದ ನಾಲಾಯಕ್ ಸರಕಾರವಾಗಿದೆ ಎಂದು ಅವರು ದೂರಿದರು.

ಈ ನಾಲಾಯಕ್ ಕಾಂಗ್ರೆಸ್ ಸರಕಾರಕ್ಕೆ ಗ್ಯಾರಂಟಿಗಳಿಂದ ತಮ್ಮ ಗೆಲುವು ಸಾಧ್ಯವಿಲ್ಲ ಎಂಬ ಅರಿವಾಗಿದೆ. ಅದಕ್ಕಾಗಿಯೇ ಪದೇಪದೇ ನಿರ್ಣಯ ಮಂಡಿಸಿ, ಕೇಂದ್ರ ಸರಕಾರದ ಮೇಲೆ ಗೂಬೆ ಕೂರಿಸಿ ತಮ್ಮ ರಾಜಕೀಯ ಬೇಳೆ ಬೇಯಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಅವರು ತೀವ್ರವಾಗಿ ಖಂಡಿಸಿದರು.

ಸದನದ ಗೌರವವನ್ನು ಆಡಳಿತ ಪಕ್ಷವಾದ ಕಾಂಗ್ರೆಸ್ ನಾಶ ಮಾಡುತ್ತಿದೆ. ಬಿಜೆಪಿ ಈ ವಿಷಯವನ್ನು ಬಹಳ ಗಂಭೀರವಾಗಿ ತೆಗೆದುಕೊಂಡಿದೆ. ಹಾಗಾಗಿ ನಾವು ಸದನದಲ್ಲಿ ಈ ಕುರಿತು ಧ್ವನಿ ಎತ್ತಿದ್ದೇವೆ. ಕಾನೂನು ಸಚಿವರ ನಡೆಯನ್ನು ಖಂಡಿಸುತ್ತೇವೆ ಎಂದು ತಿಳಿಸಿದರು.

ವಿರೋಧ ಪಕ್ಷದವರಾದ ನಾವು ಸದನದ ನೀತಿ ನಿಯಮಗಳಿಗೆ ಗೌರವ ಕೊಟ್ಟು ಸದನ ಸುಸೂತ್ರವಾಗಿ ನಡೆಯಬೇಕೆಂಬ ನಿಟ್ಟಿನಲ್ಲಿ ಸರಕಾರ ಮತ್ತು ಸಭಾಧ್ಯಕ್ಷರಿಗೆ ಸಹಕಾರ ನೀಡಿದ್ದೇವೆ ಎಂದು ಅವರು ವಿವರಿಸಿದರು. ಆದರೆ, ಇವತ್ತು ಮಾನ್ಯ ಕಾನೂನು ಸಚಿವರು ಏಕಾಏಕಿಯಾಗಿ ಹೆಚ್ಚುವರಿ ವಿಷಯದಡಿ ನಿರ್ಣಯ ಮಂಡಿಸಿದ್ದಾರೆ ಎಂದು ಅವರು ಟೀಕಿಸಿದರು.

ಆಡಳಿತ ಪಕ್ಷವು ವಿಪಕ್ಷದ ತಾಳ್ಮೆ ಪರೀಕ್ಷಿಸುವ ಕೆಲಸ ಮಾಡಿದೆ. ಕೇಂದ್ರ ಸರಕಾರ, ನರೇಂದ್ರ ಮೋದಿಜೀ ಅವರು ಏನು ಸಾಧನೆ ಮಾಡಿದ್ದಾರೆ ಎಂಬುದು ಇಡೀ ದೇಶಕ್ಕೇ ಗೊತ್ತಿದೆ. ಜನತೆಗೂ ಗೊತ್ತಿದೆ. ಮುಂದಿನ ಲೋಕಸಭಾ ಚುನಾವಣೆಯ ಫಲಿತಾಂಶದ ಕುರಿತು ಗಾಬರಿಯಿಂದ ಆಡಳಿತ ಪಕ್ಷವಾದ ಕಾಂಗ್ರೆಸ್‍ನವರು ಈ ರೀತಿ ಕೆಲಸಕ್ಕೆ ಕೈ ಹಾಕಿದ್ದಾರೆ ಎಂದು ತಿಳಿಸಿದರು. ವಿಪಕ್ಷ ನಾಯಕ ಆರ್.ಅಶೋಕ್ ಅವರು ಈ ಸಂದರ್ಭದಲ್ಲಿ ಇದ್ದರು.

BIG Alert: ಪೋಷಕರೇ..! ನೀವು ಮಕ್ಕಳಿಗೆ ‘ಬಾಂಬೆ ಮಿಠಾಯಿ’ ಕೊಡಿಸ್ತಾ ಇದ್ದೀರಾ.? ಇಲ್ಲಿದೆ ‘ಶಾಕಿಂಗ್ ನ್ಯೂಸ್’

ALEART: ‘ಆ್ಯಂಟಿಬಯೋಟಿಕ್‍’ ಮಾತ್ರೆ ಸೇವನೆ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆಯಿಂದ ಮಹತ್ವದ ಎಚ್ಚರಿಕೆ!

Share. Facebook Twitter LinkedIn WhatsApp Email

Related Posts

BREAKING : ವಿಜಯಪುರದಲ್ಲಿ ಪಾಕಿಸ್ತಾನದ ಪರವಾಗಿ ಪೋಸ್ಟ್ ಹಾಕಿದ ವಿದ್ಯಾರ್ಥಿನಿ : ದೇಶದ್ರೋಹ ಪ್ರಕರಣ ದಾಖಲು

09/05/2025 8:52 AM1 Min Read

BREAKING : ಯಾದಗಿರಿಯಲ್ಲಿ ಘೋರ ದುರಂತ : ಹೊಂಡದಲ್ಲಿ ಕಾಲು ಜಾರಿ ಬಿದ್ದು ಬಾಲಕ ಸಾವು

09/05/2025 8:06 AM1 Min Read
high court

BIG NEWS : ದೇಶ ತೊರೆಯುವ ನಿರ್ಧಾರದಲ್ಲಿ ಮಧ್ಯಪ್ರವೇಶಿಸಲ್ಲ : ಪಾಕಿಸ್ತಾನ ಮಕ್ಕಳ ಅರ್ಜಿ ವಜಾಗೊಳಿಸಿದ ಹೈಕೋರ್ಟ್

09/05/2025 7:25 AM1 Min Read
Recent News

BREAKING : ವಿಜಯಪುರದಲ್ಲಿ ಪಾಕಿಸ್ತಾನದ ಪರವಾಗಿ ಪೋಸ್ಟ್ ಹಾಕಿದ ವಿದ್ಯಾರ್ಥಿನಿ : ದೇಶದ್ರೋಹ ಪ್ರಕರಣ ದಾಖಲು

09/05/2025 8:52 AM

Breaking : ಬಿಕಾನೇರ್ ಮತ್ತು ಜೈಸಲ್ಮೇರ್ ನಲ್ಲಿ ಪಾಕ್ ಡ್ರೋನ್ ದಾಳಿ , ನಿಷ್ಕ್ರಿಯಗೊಳಿಸಿದ ಭಾರತ | India – Pak war

09/05/2025 8:51 AM

ಭಾರತ-ಪಾಕ್ ಯುದ್ಧ: ಉರಿಯಲ್ಲಿ ಶೆಲ್ ದಾಳಿ: ಮಹಿಳೆ ಸಾವು | India – Pak War

09/05/2025 8:33 AM

BREAKING : ಭಾರತದ ಕ್ಷಿಪ್ರ ದಾಳಿಗೆ ನಲುಗಿದ ಪಾಕಿಸ್ತಾನ್ : ಚಾಂಬ್ & ಸಿಯಾಲ್ ಕೋಟ್ ನಲ್ಲಿ ತುರ್ತು ಪರಿಸ್ಥಿತಿ ನಿರ್ಮಾಣ!

09/05/2025 8:17 AM
State News
KARNATAKA

BREAKING : ವಿಜಯಪುರದಲ್ಲಿ ಪಾಕಿಸ್ತಾನದ ಪರವಾಗಿ ಪೋಸ್ಟ್ ಹಾಕಿದ ವಿದ್ಯಾರ್ಥಿನಿ : ದೇಶದ್ರೋಹ ಪ್ರಕರಣ ದಾಖಲು

By kannadanewsnow0509/05/2025 8:52 AM KARNATAKA 1 Min Read

ವಿಜಯಪುರ : ಆಪರೇಷನ್ ಸಿಂಧೂರದ ಮೂಲಕ ಪಾಕಿಸ್ತಾನಕ್ಕೆ ಭಾರತ ತಕ್ಕ ಪ್ರತ್ಯುತ್ತರ ನೀಡಿದೆ. ಆದರೂ ಸಹ ಪಾಕಿಸ್ತಾನ ಗಡಿಯಲ್ಲಿ ಮತ್ತೆ…

BREAKING : ಯಾದಗಿರಿಯಲ್ಲಿ ಘೋರ ದುರಂತ : ಹೊಂಡದಲ್ಲಿ ಕಾಲು ಜಾರಿ ಬಿದ್ದು ಬಾಲಕ ಸಾವು

09/05/2025 8:06 AM
high court

BIG NEWS : ದೇಶ ತೊರೆಯುವ ನಿರ್ಧಾರದಲ್ಲಿ ಮಧ್ಯಪ್ರವೇಶಿಸಲ್ಲ : ಪಾಕಿಸ್ತಾನ ಮಕ್ಕಳ ಅರ್ಜಿ ವಜಾಗೊಳಿಸಿದ ಹೈಕೋರ್ಟ್

09/05/2025 7:25 AM

BREAKING : ‘ಆಪರೇಷನ್ ಸಿಂಧೂರ್’ : ಸೈನಿಕರಿಗೆ ಬೆಂಬಲ ಸೂಚಿಸಲು ಇಂದು ಕಾಂಗ್ರೆಸ್‌ ನಿಂದ ‘ತಿರಂಗಾ ಯಾತ್ರೆ’

09/05/2025 6:47 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.