ಮೈಸೂರು : ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆ ಪರಿಷ್ಕರಿಸುವುದಾಗಿ ಹೇಳುತ್ತಿದೆ. ಆದರೆ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಬಾರದು. ಗ್ಯಾರಂಟಿ ಯೋಜನೆ ಹೆಸರಿನಲ್ಲಿ ಗೆದ್ದಿರುವ ಕಾಂಗ್ರೆಸ್ ಯೋಜನೆ ಮುಂದುವರಿಸಬೇಕು. ಜನರು ಗ್ಯಾರಂಟಿ ಯೋಜನೆಗಳಿಗಾಗಿ ಅಧಿಕಾರ ನೀಡಿರುವಾಗ ಯೋಜನೆ ನಿಲ್ಲಬಾರದು ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
ನಾಳೆ ಕೆ ಆರ್ಎಸ್ ಡ್ಯಾಮ್ ಪರಿಶೀಲಿಸಲು ತೆರಳುತ್ತಿದ್ದೇನೆ. ಪರಿಶೀಲನೆ ಬಳಿಕ ಮಾಹಿತಿ ತಿಳಿಯುತ್ತದೆ. ನೂರಾರು ವರ್ಷದ ಹಳೆಯ ಡ್ಯಾಮ್ ಆಗಿರುವ ಪರಿಶೀಲಿಸಬೇಕು. ರಾಜ್ಯದಲ್ಲಿ ಕಾಲ ಕಾಲಕ್ಕೆ ಜಲಾಶಯಗಳ ಪರಿಶೀಲನೆ ಆಗಬೇಕು. ಇದು ಸರ್ಕಾರಗಳ ಜವಾಬ್ದಾರಿ. ಪರಿಶೀಲನೆ ನಡೆಸಿ ಆಗಾಗ ದುರಸ್ತಿ ಕೆಲಸ ಮಾಡಬೇಕು. ನೂರಾರು ವರ್ಷಗಳ ಹಳೆಯ ಡ್ಯಾಮ್ ಗಳನ್ನು ಪರಿಶೀಲಿಸಿ ಅಗತ್ಯ ವ್ಯವಸ್ಥೆ ಕಲ್ಪಿಸಬೇಕು ಎಂದರು.
ಇನ್ನೂ ಚಾಮುಂಡಿಬೆಟ್ಟ ಪ್ರಾಧಿಕಾರ ರಚನೆ ಕುರಿತು ಮಾತನಾಡಿದ ಅವರು, ಚಾಮುಂಡಿಬೆಟ್ಟ ಪ್ರಾಧಿಕಾರ ರಚನೆಗೆ ನ್ಯಾಯಾಲಯ ತಡೆ ನೀಡಿರುವುದರಿಂದ ಮತ್ತೆ ಮಾತನಾಡುವುದು ಬೇಡ, ಪ್ರಾಧಿಕಾರ ರಚನೆಗೆ ವಿರೋಧ ಇದೆ.ದೇವಸ್ಥಾನಗಳ ವಿಚಾರದಲ್ಲಿ ಸರ್ಕಾರ ಹಸ್ತಕ್ಷೇಪ ಮಾಡದೆ ಮುಕ್ತವಾಗಿ ಇರುವಂತೆ ಬಿಡಬೇಕು. ಅರಮನೆಯಲ್ಲಿ ಎಂದಿನಂತೆ ಶಾಸ್ರೋಕ್ತವಾಗಿ ನಡೆಯುವ ಕಾರ್ಯಕ್ರಮ ಜರುಗಲಿದೆ. ಅದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದರು.