ನವದೆಹಲಿ: ಕಾಂಗ್ರೆಸ್ ಗೆ ನಿಯತ್ತಿದ್ದರೆ ತಮ್ಮ ಆಡಳಿತದಲ್ಲಿರುವ ರಾಜ್ಯಗಳಲ್ಲಿ ಮೊದಲು ಗೃಹಲಕ್ಷ್ಮಿ ಯೋಜನೆಯನ್ನು ಜಾರಿ ಮಾಡಲಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಜನರ ವಿಶ್ವಾಸಗಳಿಸುವಲ್ಲಿ ವಿಫಲವಾಗಿದೆ. ಆದರೂ ಈ ರೀತಿಯ ಭರವಸೆ ನೀಡುತ್ತಿದ್ದಾರೆ. ಕಾಂಗ್ರೆಸ್ ತಮ್ಮ ಸರ್ಕಾರ ಇರುವ ರಾಜ್ಯದಲ್ಲಿ ಈ ಯೋಜನೆಗಳನ್ನು ಜಾರಿ ಮಾಡಿಲ್ಲ. ನಿಜವಾಗಿ ಕಾಂಗ್ರೆಸ್ಗೆ ನಿಯತ್ತಿದ್ದರೆ ಅಧಿಕಾರದಲ್ಲಿರುವ ರಾಜ್ಯದಲ್ಲಿ ಮೊದಲು ಈ ಯೋಜನೆ ಜಾರಿ ಮಾಡಲಿ. ಈ ಭರವಸೆ ನೋಡಿದರೆ ಒಟ್ಟಾರೆ ಸುಳ್ಳು ಹೇಳಿ, ಮೋಸ ಮಾಡಿ ಅಧಿಕಾರ ಹಿಡಿಯುವ ವ್ಯಾಮೋಹಕ್ಕೆ ಕಾಂಗ್ರೆಸ್ ನಾಯಕರು ಬಂದಂತೆ ಕಾಣುತ್ತಿದೆ ಎಂದು ಕಿಡಿಕಾರಿದರು.
ಪ್ರಿಯಾಂಕಾ ಗಾಂಧಿ ನಾ ನಾಯಕಿ ಎಂದು ಹೇಳಿಕೊಂಡಿದ್ದಾರೆ ಇದು ಹಾಸ್ಯಾಸ್ಪದವಾಗಿದೆ. ನಾಯಕತ್ವ ಜನರಿಂದ ಬರಬೇಕು, ನಮಗೆ ನಾವೇ ಹೇಳಿಕೊಳ್ಳುವಂತದಲ್ಲ, ಲೇಬಲ್ ಹಚ್ಚಿಕೊಂಡವರು ನಾಯಕರಾಗಲು ಸಾಧ್ಯವಿಲ್ಲ ಎಂದರು.