Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಸೀತಾಫಲ ಎಲೆ’ಗಳು ಎಷ್ಟೆಲ್ಲಾ ಪ್ರಯೋಜನಕಾರಿ ಗೊತ್ತಾ.? ಸಿಕ್ಕರೆ ಬಿಡ್ಲೇಬೇಡಿ!

04/06/2025 10:05 PM

ಸಾಗರದ ಜನತೆಗೆ ಶಾಸಕ ಗೋಪಾಲಕೃಷ್ಣ ಬೇಳೂರು ಗುಡ್ ನ್ಯೂಸ್ | Namma Clinic

04/06/2025 10:01 PM

ಯಾವ ವಯಸ್ಸಿನ ಜನರು ಎಷ್ಟು ‘ನೀರು’ ಕುಡಿಯಬೇಕು ಗೊತ್ತಾ.?

04/06/2025 9:41 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಡಿ.5ರಂದು ಕಾಂಗ್ರೆಸ್ ನೇತೃತ್ವದಲ್ಲೇ ಹಾಸನದಲ್ಲಿ ಸಮಾವೇಶ: ಡಿಸಿಎಂ ಡಿ.ಕೆ. ಶಿವಕುಮಾರ್
KARNATAKA

ಡಿ.5ರಂದು ಕಾಂಗ್ರೆಸ್ ನೇತೃತ್ವದಲ್ಲೇ ಹಾಸನದಲ್ಲಿ ಸಮಾವೇಶ: ಡಿಸಿಎಂ ಡಿ.ಕೆ. ಶಿವಕುಮಾರ್

By kannadanewsnow0901/12/2024 4:37 PM

ಬೆಂಗಳೂರು : “ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲೇ ಡಿ.5ರಂದು ಹಾಸನದಲ್ಲಿ ಸಮಾವೇಶ ನಡೆಯಲಿದೆ. ಈ ಕಾರ್ಯಕ್ರಮದ ಸಂಪೂರ್ಣ ಜವಾಬ್ದಾರಿಯನ್ನು ನನ್ನ ನೇತೃತ್ವದಲ್ಲಿಯೇ ಕಾಂಗ್ರೆಸ್ ಪಕ್ಷ ವಹಿಸಿಕೊಳ್ಳಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಸಮಾವೇಶದ ಪೂರ್ವಭಾವಿ ಸಭೆ ನಡೆಸಿದ ಬಳಿಕ ಶಿವಕುಮಾರ್ ಅವರು ಮಾಧ್ಯಮಗೋಷ್ಠಿ ಉದ್ದೇಶಿಸಿ ಭಾನುವಾರ ಮಾತನಾಡಿದರು.

“ಪಕ್ಷದ ಅನೇಕ ನಾಯಕರು, ಮುಖಂಡರು ಹಾಸನದಲ್ಲಿ ಸಮಾವೇಶ ಮಾಡಲು ತಿಳಿಸಿದ್ದಾರೆ. ನಮ್ಮ ಪಕ್ಷದ ವತಿಯಿಂದ ಸಚಿವರುಗಳು, ಜಿಲ್ಲಾ ಮಂತ್ರಿಗಳು ಸಮಾವೇಶದ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಈ ಸಮಾವೇಶಕ್ಕೆ ಅನೇಕ ಸಂಘಟನೆಗಳು ಸಮುದಾಯಗಳು ಬೆಂಬಲ ಸೂಚಿಸಿವೆ. ಇವರ ಬೆಂಬಲವನ್ನು ನಾವು ಸ್ವೀಕರಿಸುತ್ತೇವೆ.

ನಾನು ನಾಲ್ಕು ದಿನಗಳ ಕಾಲ ದೆಹಲಿ ಪ್ರವಾಸದಲ್ಲಿದ್ದೆ. ಮುಖ್ಯಮಂತ್ರಿಗಳು ದೆಹಲಿ ಪ್ರವಾಸದಲ್ಲಿದ್ದರು. ದೇಶದಲ್ಲಾಗುತ್ತಿರುವ ವಿದ್ಯಮಾನ ಹಾಗೂ ಸಂವಿಧಾನ ರಕ್ಷಣೆಗೆ ಕಾರ್ಯಕ್ರಮ ರೂಪಿಸಲು ಎಐಸಿಸಿ ನಾಯಕರು ಮಾರ್ಗದರ್ಶನ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಹಾಸನದಲ್ಲಿ ಸಮಾವೇಶ ಮಾಡುತ್ತಿದ್ದೇವೆ. ನಾಲ್ಕು ಜಿಲ್ಲೆಗಳ ನಾಯಕರು ಹಾಗೂ ಪದಾಧಿಕಾರಿಗಳ ಜತೆ ಇದರ ಪೂರ್ವಭಾವಿ ಸಭೆಯನ್ನು ಭಾನುವಾರ (ಇಂದು) ಕೆಪಿಸಿಸಿ ಕಚೇರಿಯಲ್ಲಿ ನಡೆಸಲಾಗಿದೆ. ಸಮಾವೇಶಕ್ಕೆ ಪಕ್ಷದ ಎಲ್ಲಾ ನಾಯಕರಿಗೂ ಆಹ್ವಾನ ನೀಡಲಾಗುವುದು.

ಸಮಾನತೆ, ಸಂವಿಧಾನದ ಬಗ್ಗೆ ಗೌರವ ಹೊಂದಿರುವವರು, ಸ್ವಾಭಿಮಾನಿಗಳಿಗೆ ಈ ಸಮಾವೇಶದಲ್ಲಿ ಭಾಗವಹಿಸುವಂತೆ ಮನವಿ ಮಾಡುತ್ತೇನೆ. ಸಧ್ಯದಲ್ಲೇ ನಾನು ಹಾಗೂ ಕೆಪಿಸಿಸಿ ತಂಡ ಸಮಾವೇಶ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ತಯಾರಿಯನ್ನು ಪರಿಶೀಲಿಸಿ ಅಗತ್ಯ ಮಾರ್ಗದರ್ಶನ ನೀಡಲಾಗುವುದು.

ಜನರ ಕಲ್ಯಾಣ, ಸಂವಿಧಾನ ರಕ್ಷಣೆ, ಸ್ವಾಭಿಮಾನ ರಕ್ಷಣೆ, ಸರ್ಕಾರದ ವಿರುದ್ಧ ಮಾಡುತ್ತಿರುವ ಸುಳ್ಳು ಆರೋಪಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಈ ಸಮಾವೇಶ ಮಾಡಲಾಗುತ್ತಿದೆ. ಸರ್ಕಾರದ ವಿರುದ್ಧ ನಡೆಯುತ್ತಿರುವ ಅಪಪ್ರಚಾರಕ್ಕೆ ಜನ ಈಗಾಗಲೇ ತೀರ್ಪು ಕೊಟ್ಟಿದ್ದಾರೆ. ಎಐಸಿಸಿ ನಾಯಕರ ನಿರ್ದೇಶನದಂತೆ ಮುಂದಿನ ಎರಡು ತಿಂಗಳ ಕಾಲ ಒಂದಲ್ಲಾ ಒಂದು ರೀತಿ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು.

ಈಗಿನಿಂದಲೇ ಪಕ್ಷ ಸಂಘಟನೆ:

ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿನ ಯಶಸ್ಸು ಮುಂದುವರೆಸಿಕೊಂಡು ಹೋಗಲು ಪಕ್ಷ ಸಂಘಟನೆ ಮಾಡಲಾಗುವುದು. ಚುನಾವಣೆ ಬಂದಾಗ ಸಿದ್ಧತೆ ಮಾಡಿಕೊಳ್ಳುವುದಲ್ಲ. ಚುನಾವಣೆ ಮುಗಿದ ಮರು ದಿನದಿಂದಲೇ ಮುಂದಿನ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಬೇಕು.

ಕಾಂಗ್ರೆಸ್ ಸರ್ಕಾರದ ಸಾಧನೆಗಳನ್ನು ಪ್ರತಿ ವಿಭಾಗವಾರು ತಲುಪಿಸಲು ಪಕ್ಷವು ತೀರ್ಮಾನ ಮಾಡಿದೆ.

ಎಲ್ಲಿ ಕಳೆದುಕೊಂಡಿದ್ದೇವೆಯೋ ಅಲ್ಲಿಯೇ ಅದನ್ನು ಹುಡುಕಬೇಕು ಎನ್ನುವುದು ನಮ್ಮ ತತ್ವ. ಹಾಸನದಲ್ಲಿ ಒಂದು ವಿಧಾನಸಭಾ ಕ್ಷೇತ್ರವನ್ನು ಗೆದ್ದಿದ್ದೆವು. ಆದರೆ ಲೋಕಸಭೆಯಲ್ಲಿ ಜನ ಶಕ್ತಿ ತುಂಬಿದರು. ಮೈಸೂರು, ಚಾಮರಾಜನಗರ, ಮಂಡ್ಯದಲ್ಲಿ ಅತ್ಯಂತ ಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಗೆದ್ದಿದ್ದೇವೆ. ಒಂದಷ್ಟು ಕಡೆ ಲೋಕಸಭೆಯಲ್ಲಿ ಸೋತಿದ್ದೇವೆ.

ಶೀಘ್ರದಲ್ಲಿಯೇ ಸಂಡೂರು, ಶಿಗ್ಗಾವಿಯಲ್ಲಿ ಮತದಾರರರಿಗೆ ಕೃತಜ್ಞತಾ ಸಮಾವೇಶವನ್ನು ಆಯೋಜಿಸುವ ಕುರಿತು ಮುಖ್ಯಮಂತ್ರಿಗಳ ಬಳಿ ಚರ್ಚೆ ಮಾಡಲಾಗಿದೆ. ವಿಧಾನಸಭಾ ಅಧಿವೇಶನ ನಡೆಯುವ ಮಧ್ಯಲ್ಲಿಯೇ ಭಾನುವಾರದಂದು ಚನ್ನಪಟ್ಟಣದಲ್ಲಿ ಅಭಿನಂದನಾ ಸಮಾವೇಶ ಆಯೋಜಿಸುವಂತೆ ಸುರೇಶ್ ಹಾಗೂ ಯೋಗೇಶ್ವರ್ ಅವರಿಗೆ ಸೂಚಿಸಿದ್ದೇವೆ.”

ಕೆಲ ಸಚಿವರು ಈ ಸಮಾವೇಶಕ್ಕೂ ಪಕ್ಷಕ್ಕೂ ಸಂಬಂಧವಿಲ್ಲ ಎಂದು ಹೇಳಿದ್ದು, ಈಗ ಸಮಾವೇಶದ ಸ್ವರೂಪ ಬದಲಾಗಿದ್ದು ಏಕೆ ಎಂದು ಕೇಳಿದಾಗ, “ಈ ಸಮಾವೇಶದ ಸ್ವರೂಪ ಎಲ್ಲಿ ನಿರ್ಧಾರವಾಗಿತ್ತು? ಪಕ್ಷದ ಅಧ್ಯಕ್ಷನಾಗಿ ನಾನು ಹೇಳುತ್ತಿದ್ದೇನೆ. ಸಿದ್ದರಾಮಯ್ಯ ಅವರು ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿಗಳೇ ಹೊರತು ಮೈತ್ರಿ ಪಕ್ಷದ ಸಿಎಂ ಅಲ್ಲ. ಇಲ್ಲಿ ಒಂದೇ ಪಕ್ಷ, ಒಂದೇ ಚಿಹ್ನೆ ಇದೆ. ಕೆಲವರ ವೈಯಕ್ತಿಕ ಅಭಿಪ್ರಾಯವೇ ಬೇರೆ. ಈ ವಿಚಾರವಾಗಿ ಎಐಸಿಸಿ ಅಧ್ಯಕ್ಷರು, ಮುಖ್ಯಮಂತ್ರಿಗಳು, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳ ಜತೆ ಚರ್ಚೆ ಮಾಡಿದ್ದೇವೆ” ಎಂದು ತಿಳಿಸಿದರು.

ಕೆಲ ಸಚಿವರು ಮೈಸೂರು ಜಿಲ್ಲಾಧ್ಯಕ್ಷರ ಜತೆ ಪ್ರತ್ಯೇಕ ಸಭೆ ಮಾಡುತ್ತಿರುವ ಬಗ್ಗೆ ಕೇಳಿದಾಗ, “ಕೊನೆ ಘಳಿಗೆಯಲ್ಲಿ ಈ ಸಭೆ ತೀರ್ಮಾನ ಮಾಡಲಾಗಿದೆ. ನಿನ್ನೆ ದೆಹಲಿಯಿಂದ ಆಗಮಿಸಿ ಮಹಾತ್ಮಾ ಗಾಂಧೀಜಿ ಅವರ ಕಾರ್ಯಕ್ರಮದ ಸಭೆ ಮಾಡಿದ್ದೇನೆ. ನಮ್ಮ ಬಳಿ ಅನುಮತಿ ಪಡೆದೆ ಆ ನಾಯಕರು ಮೈಸೂರಿನಲ್ಲಿ ಸಭೆ ಮಾಡುತ್ತಿದ್ದಾರೆ. ನೀವುಗಳು (ಮಾಧ್ಯಮ ಪ್ರತಿನಿಧಿಗಳು) ನಿಮ್ಮ ಮಾಧ್ಯಮ ಸಂಸ್ಥೆಗಳಿಗಿಂತ ಹೇಗೆ ದೊಡ್ಡವರಲ್ಲವೋ, ಹಾಗೆ ನಾವುಗಳು ಪಕ್ಷಕ್ಕಿಂತ ದೊಡ್ಡವರಲ್ಲ. ಎಲ್ಲರಿಗಿಂತ ಪಕ್ಷ ದೊಡ್ಡದು ಎಂದು ಎಲ್ಲರಿಗೂ ಗೊತ್ತಿದೆ” ಎಂದು ತಿಳಿಸಿದರು.

ಹೈಕಮಾಂಡ್ ಗೆ ಹೋಗಿರುವ ಅನಾಮಧೇಯ ಪತ್ರ ಇಷ್ಟೆಲ್ಲಾ ಕೆಲಸ ಮಾಡಿದೆಯೇ ಎಂದು ಕೇಳಿದಾಗ, “ನನಗೆ ಯಾವ ಪತ್ರದ ಬಗ್ಗೆ ಗೊತ್ತಿಲ್ಲ. ಎಐಸಿಸಿ ಅಧ್ಯಕ್ಷರಿಗೆ ಬರೆಯಯಲಾಗಿದೆ ಎಂಬ ಪತ್ರ ಯಾರ ಸೃಷ್ಟಿಯೋ ಗೊತ್ತಿಲ್ಲ. ಯಾರೂ ಕೂಡ ನನ್ನ ಬಳಿ ಈ ವಿಚಾರವಾಗಿ ಚರ್ಚೆ ಮಾಡಿಲ್ಲ” ಎಂದು ತಿಳಿಸಿದರು.

ಸಚಿವ ಚಲುವರಾಯಸ್ವಾಮಿ ಅವರು ಸಭೆಯಿಂದ ಬೇಗ ನಿರ್ಗಮಿಸಿದರು ಎಂದು ಕೇಳಿದಾಗ, “ಅವರ ಜಿಲ್ಲೆಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ ನಡೆಯುತ್ತಿದೆ. ಅವರಿಗೆ ಪೂರ್ವನಿಗದಿತ ಕಾರ್ಯಕ್ರಮ ಇದ್ದ ಕಾರಣ ಅವರು ಬೇಗ ಹೊರಟಿದ್ದಾರೆ. ಈ ಸಭೆಯಲ್ಲಿ ಅವರು ಮೊದಲು ಮಾತನಾಡಿ ತಮ್ಮ ಅಭಿಪ್ರಾಯ ಹಂಚಿಕೊಂಡು ನಂತರ ತೆರಳಿದ್ದಾರೆ” ಎಂದು ತಿಳಿಸಿದರು.

ಹೈಕಮಾಂಡ್ ಸಚಿವರ ಮಾಹಿತಿ ಪಡೆಯುತ್ತಿರುತ್ತದೆ:

ನಿಮ್ಮ ಮೂಲಕ ಹೈಕಮಾಂಡ್ ಸಚಿವರ ಕಾರ್ಯಗಳ ಬಗ್ಗೆ ವರದಿ ಪಡೆಯುತ್ತಿದೆ ಎಂದು ಕೇಳಿದಾಗ, “ನಾನು ಕಳಿಸುವುದೇನಿಲ್ಲ. ನಮ್ಮ ಹೈಕಮಾಂಡ್ ನಾಯಕರು ಅವರದೇ ಆದ ವ್ಯವಸ್ಥೆ ಹೊಂದಿದ್ದು, ಎಲ್ಲರ ಮಾಹಿತಿ ಪಡೆಯುತ್ತಿದ್ದಾರೆ. ಯಾರು ಯಾವ ಕೆಲಸ ಮಾಡುತ್ತಿದ್ದಾರೆ, ಕಾರ್ಯಕರ್ತರು, ಜನರನ್ನು ಭೇಟಿ ಮಾಡುತ್ತಿದ್ದಾರೆ ಮಾಹಿತಿ ಪಡೆಯುತ್ತಿದ್ದಾರೆ” ಎಂದು ತಿಳಿಸಿದರು.

ಕಾನೂನು ಎಲ್ಲರಿಗೂ ಒಂದೇ:

ಚಂದ್ರಶೇಖರನಾಥ ಸ್ವಾಮೀಜಿ ಅವರ ಮೇಲೆ ಎಫ್ ಐಆರ್ ಆಗಿದೆ ಎಂದು ಕೇಳಿದಾಗ, “ಮುಖ್ಯಮಂತ್ರಿಗಳು ಈ ಬಗ್ಗೆ ಉತ್ತರ ನೀಡಿದ್ದಾರೆ. ಸ್ವಾಮೀಜಿಗಳು ಯಾರ ಹಕ್ಕಿನ ಬಗ್ಗೆಯೂ ಪ್ರಶ್ನೆ ಮಾಡುವುದು ಬೇಡ ಎಂದು ಮನವಿ ಮಾಡುತ್ತೇನೆ. ಮಾನವ ಧರ್ಮ ಹಾಗೂ ಸಂವಿಧಾನಕ್ಕೆ ಆದ್ಯತೆ ನೀಡೋಣ. ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ. ಬಿಜೆಪಿ ಸರ್ಕಾರದ ಅವಧಿಯಲ್ಲಿ ನಮ್ಮ ಮೇಲೆ, ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಪೋಸ್ಟರ್ ಅಂಟಿಸಿದ್ದಕ್ಕೆ ಕೇಸು ದಾಖಲಿಸಿಲ್ಲವೇ?” ಎಂದರು.

ಸ್ವಾಮೀಜಿಗಳ ಫೋನ್ ಟ್ಯಾಪಿಂಗ್ ಬಗ್ಗೆ ಅಶೋಕ್ ಏಕೆ ಮಾತನಾಡುತ್ತಿಲ್ಲ?

ಸ್ವಾಮೀಜಿ ಮೇಲೆ ಕೇಸ್ ದಾಖಲಿಸಿದರೆ ಉಗ್ರ ಹೋರಾಟ ಮಾಡುವುದಾಗಿ ಅಶೋಕ ಹೇಳಿದ್ದಾರೆ. ಜೆಡಿಎಸ್ ಸರ್ಕಾರ ಬಾಲಗಂಗಾಧರನಾಥ ಸ್ವಾಮೀಜಿ ಮೇಲೆ ಪ್ರಕರಣ ದಾಖಲಿಸಿದಾಗ ಅಶೋಕ, ಬಿಜೆಪಿ ನಾಯಕರು ಎಲ್ಲಿ ಹೋಗಿದ್ದರು? ಕುಮಾರಸ್ವಾಮಿ ಅವರ ಸರ್ಕಾರದಲ್ಲಿ ನಿರ್ಮಲಾನಂದ ಸ್ವಾಮೀಜಿ ಅವರ ಫೋನ್ ಟ್ಯಾಪಿಂಗ್ ಮಾಡಿದಾಗ ಏಕೆ ಮಾತನಾಡಲಿಲ್ಲ? ಈ ಬಗ್ಗೆ ಸಿಬಿಐ ವರದಿ ಇದೆ. ಇದರ ಬಗ್ಗೆ ಗೊತ್ತಿದೆಯೇ? ಅದರ ಬಗ್ಗೆ ಅವರು ಯಾಕೆ ಮಾತನಾಡುತ್ತಿಲ್ಲ. ಸುಮ್ಮನೆ ಒಣ ರಾಜಕಾರಣ ಮಾಡುವುದನ್ನು ನಿಲ್ಲಿಸಲಿ. ಬೆಂಕಿ ಹಚ್ಚಿ ಬೀಡಿ ಸೇದುವ ಪ್ರಯತ್ನ ನಿಲ್ಲಿಸಲಿ” ಎಂದು ತಿಳಿಸಿದರು.

ಯತ್ನಾಳ್ ಮಾತ್ರವಲ್ಲ, ಇಡೀ ಬಿಜೆಪಿಯೇ ಬಸವಣ್ಣನವರ ವ್ಯಕ್ತಿತ್ವಕ್ಕೆ ಮಸಿ ಬಳಿಯುತ್ತಿದೆ; ಡಿಸಿಎಂ ಡಿ.ಕೆ. ಶಿವಕುಮಾರ್

BREAKING : ಪಶ್ಚಿಮ ಘಟ್ಟ ಪ್ರದೇಶದಲ್ಲಿ ‘ಭೂ ಕಂಪನ’ : ಶಿರಸಿ ಸೇರಿ ಹಲವೆಡೆ 3 ಸೆಕೆಂಡ್ ವರೆಗೆ ಕಂಪಿಸಿದ ಭೂಮಿ

Share. Facebook Twitter LinkedIn WhatsApp Email

Related Posts

ಸಾಗರದ ಜನತೆಗೆ ಶಾಸಕ ಗೋಪಾಲಕೃಷ್ಣ ಬೇಳೂರು ಗುಡ್ ನ್ಯೂಸ್ | Namma Clinic

04/06/2025 10:01 PM1 Min Read

BREAKING: ರಾಜ್ಯದಲ್ಲಿಂದು ಕೊರೋನಾಗೆ ಮತ್ತಿಬ್ಬರು ಬಲಿ: 153 ಜನರಿಗೆ ಸೋಂಕು ದೃಢ | Covid19 Update

04/06/2025 9:06 PM1 Min Read

RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ; ಡಿಸಿಎಂ DKS ವಿಷಾದ, ಮೃತಪಟ್ಟವರಿಗೆ ಸಂತಾಪ

04/06/2025 8:50 PM2 Mins Read
Recent News

‘ಸೀತಾಫಲ ಎಲೆ’ಗಳು ಎಷ್ಟೆಲ್ಲಾ ಪ್ರಯೋಜನಕಾರಿ ಗೊತ್ತಾ.? ಸಿಕ್ಕರೆ ಬಿಡ್ಲೇಬೇಡಿ!

04/06/2025 10:05 PM

ಸಾಗರದ ಜನತೆಗೆ ಶಾಸಕ ಗೋಪಾಲಕೃಷ್ಣ ಬೇಳೂರು ಗುಡ್ ನ್ಯೂಸ್ | Namma Clinic

04/06/2025 10:01 PM

ಯಾವ ವಯಸ್ಸಿನ ಜನರು ಎಷ್ಟು ‘ನೀರು’ ಕುಡಿಯಬೇಕು ಗೊತ್ತಾ.?

04/06/2025 9:41 PM

BREAKING: ರಾಜ್ಯದಲ್ಲಿಂದು ಕೊರೋನಾಗೆ ಮತ್ತಿಬ್ಬರು ಬಲಿ: 153 ಜನರಿಗೆ ಸೋಂಕು ದೃಢ | Covid19 Update

04/06/2025 9:06 PM
State News
KARNATAKA

ಸಾಗರದ ಜನತೆಗೆ ಶಾಸಕ ಗೋಪಾಲಕೃಷ್ಣ ಬೇಳೂರು ಗುಡ್ ನ್ಯೂಸ್ | Namma Clinic

By kannadanewsnow0904/06/2025 10:01 PM KARNATAKA 1 Min Read

ಶಿವಮೊಗ್ಗ: ಸಾಗರದ ಜನರಿಗೆ ಮತ್ತಷ್ಟು ಉತ್ತಮ ಆರೋಗ್ಯ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಮಹತ್ವದ ಹೆಜ್ಜೆ ಇರಿಸಿದ್ದಾರೆ.…

BREAKING: ರಾಜ್ಯದಲ್ಲಿಂದು ಕೊರೋನಾಗೆ ಮತ್ತಿಬ್ಬರು ಬಲಿ: 153 ಜನರಿಗೆ ಸೋಂಕು ದೃಢ | Covid19 Update

04/06/2025 9:06 PM

RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ; ಡಿಸಿಎಂ DKS ವಿಷಾದ, ಮೃತಪಟ್ಟವರಿಗೆ ಸಂತಾಪ

04/06/2025 8:50 PM

ಪೂರ್ವತಯಾರಿ ಇಲ್ಲದೇ ಹುಡುಗಾಟಿಕೆ ಮಾಡಿದ್ದರಿಂದ ಕಾಲ್ತುಳಿತ ದುರ್ಘಟನೆ: ಬಿವೈ ವಿಜಯೇಂದ್ರ ಕಿಡಿ

04/06/2025 8:41 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.