Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇನ್ಮುಂದೆ ಕದನ ವಿರಾಮ ಉಲ್ಲಂಘನೆಯಾದರೆ ಪಾಕ್ ಗೆ ತಕ್ಕ ಪ್ರತ್ಯುತ್ತರ: ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ

10/05/2025 11:32 PM

BREAKING: ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ದೃಢಪಡಿಸಿದ ಕೇಂದ್ರ ಸರ್ಕಾರ: ಭಾರತೀಯ ಸೇನೆಗೆ ತಿರುಗೇಟಿಗೆ ಸೂಚನೆ

10/05/2025 11:27 PM

BREAKING: ಪಾಕಿಸ್ತಾನಕ್ಕೆ ಕದನ ವಿರಾಮ ಒಪ್ಪಂದ ಅರ್ಥವಾಗುತ್ತಿಲ್ಲ, ಶೀಘ್ರದಲ್ಲೇ ಭಾರತೀಯ ಸೇವೆ ಪ್ರತ್ಯುತ್ತರ: ಕೇಂದ್ರ ಗೃಹ ಸಚಿವಾಲಯ

10/05/2025 11:22 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕರ್ನಾಟಕದ ವಿಧಾನಸಭಾ ಉಪ ಚುನಾವಣೆಯ 3 ಕ್ಷೇತ್ರಗಳಲ್ಲಿ ಕಾಂಗ್ರೆಸ್ಸಿಗೆ ತಕ್ಕ ಪಾಠ: ಬಿವೈ ವಿಜಯೇಂದ್ರ
KARNATAKA

ಕರ್ನಾಟಕದ ವಿಧಾನಸಭಾ ಉಪ ಚುನಾವಣೆಯ 3 ಕ್ಷೇತ್ರಗಳಲ್ಲಿ ಕಾಂಗ್ರೆಸ್ಸಿಗೆ ತಕ್ಕ ಪಾಠ: ಬಿವೈ ವಿಜಯೇಂದ್ರ

By kannadanewsnow0925/10/2024 2:54 PM

ಬೆಂಗಳೂರು: ಈ ನಾಡಿನ ಜನವಿರೋಧಿ, ಬಡವರ ವಿರೋಧಿ, ರೈತವಿರೋಧಿ, ದಲಿತ ವಿರೋಧಿ ಕಾಂಗ್ರೆಸ್ ಸರಕಾರ ಏನಿದೆಯೋ ಇದಕ್ಕೆ ತಕ್ಕ ಪಾಠ ಕಲಿಸಲು 3 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರು ತೀರ್ಮಾನ ಹಾಗೂ ಸಂಕಲ್ಪ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದರು.

ಸಂಡೂರಿನಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಡೂರಿನಲ್ಲಿ ಬಿಜೆಪಿ ಯುವ ಮುಖಂಡ ಬಂಗಾರು ಹನುಮಂತು ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದ್ದು, ಇವತ್ತು ನಾಮಪತ್ರ ಸಲ್ಲಿಸುತ್ತಿದ್ದಾರೆ. ಸಂಡೂರಿನಲ್ಲಿ ನಮ್ಮೆಲ್ಲ ಪಕ್ಷದ ಹಿರಿಯರು ಸೇರಿದ್ದಾರೆ. ಬಿಜೆಪಿ ಒಗ್ಗಟ್ಟಿನಿಂದ ಚುನಾವಣೆ ಎದುರಿಸಲಿದೆ. ಜೆಡಿಎಸ್ ಪಕ್ಷವೂ ಸಂಪೂರ್ಣ ಸಹಕಾರ ನೀಡುತ್ತಿದೆ ಎಂದರು.

ಸಂಡೂರಿನಲ್ಲಿ ಹಿಂದೆಂದೂ ಬಿಜೆಪಿ ಕಮಲ ಅರಳಿಲ್ಲ. ಜನಾರ್ದನ ರೆಡ್ಡಿ, ಶ್ರೀರಾಮುಲು, ಸೋಮಶೇಖರ ರೆಡ್ಡಿ, ಎಲ್ಲ ಶಾಸಕರು, ಮಾಜಿ ಶಾಸಕರ, ವಿಧಾನಪರಿಷತ್ ಸದಸ್ಯರ, ಪಕ್ಷದ ಹಿರಿಯರ ಶ್ರಮದಿಂದ ಮೊದಲ ಬಾರಿಗೆ ಇಲ್ಲಿ ನಿಶ್ಚಿತವಾಗಿ ಬಿಜೆಪಿಯ ಕಮಲದ ಹೂ ಅರಳಲಿದೆ. ನಮ್ಮೆಲ್ಲರ ಕಾರ್ಯಕರ್ತರು ಉತ್ಸಾಹದಲ್ಲಿದ್ದಾರೆ. ಬಿಜೆಪಿ- ಜೆಡಿಎಸ್ ಶ್ರಮದಿಂದ ಗೆಲುವು ಸಾಧ್ಯವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯದ 3 ವಿಧಾನಸಭಾ ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯುತ್ತಿದೆ. ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನವಾಗಿದೆ. ಶಿಗ್ಗಾವಿಯಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿಯವರು ನಾಮಪತ್ರ ಸಲ್ಲಿಸುತ್ತಿದ್ದಾರೆ. ಚನ್ನಪಟ್ಟಣದಲ್ಲಿ ರಾಜ್ಯದ ಜೆಡಿಎಸ್ ಯುವ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ನಾಮಪತ್ರ ಸಲ್ಲಿಸುತ್ತಿದ್ದಾರೆ. ಸಂಡೂರಿನಲ್ಲಿ ರಾಜ್ಯ ಎಸ್‍ಟಿ ಮೋರ್ಚಾ ಅಧ್ಯಕ್ಷ ಮತ್ತು ಯುವ ಮುಖಂಡ ಬಂಗಾರು ಹನುಮಂತು ಅವರು ಎಲ್ಲ ಪ್ರಮುಖರ ಸಮ್ಮುಖದಲ್ಲಿ ಇವತ್ತು ನಾಮಪತ್ರ ಸಲ್ಲಿಸುತ್ತಿದ್ದಾರೆ ಎಂದು ವಿವರಿಸಿದರು.

ರಾಜ್ಯ ರಾಜಕೀಯದ ದಿಕ್ಸೂಚಿಯನ್ನು ಬದಲಿಸುವ ಶಕ್ತಿ ಈ 3 ಕ್ಷೇತ್ರಗಳ ಉಪ ಚುನಾವಣೆಗೆ ಇದೆ. ಶಿಗ್ಗಾವಿ, ಚನ್ನಪಟ್ಟಣ, ಸಂಡೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗಳು ರಾಜಕೀಯ ದಿಕ್ಕನ್ನು ಬದಲಿಸುವ ಶಕ್ತಿ ಹೊಂದಿವೆ. ರಾಜ್ಯದಲ್ಲಿ ರೈತರ ವಿರೋಧಿ ಸರಕಾರ ಇದೆ. ಬರಗಾಲ ಇದ್ದಾಗಲೂ ಈ ಸರಕಾರ ರೈತರ ಸಂಕಷ್ಟಕ್ಕೆ ಸ್ಪಂದಿಸಿಲ್ಲ. ನೆರೆ ಇದ್ದರೂ ರೈತರ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ. ಮೆಕ್ಕೆಜೋಳ, ಮೆಣಸಿನ ಕಾಯಿ, ಹತ್ತಿ ಬೆಳೆಗಾರರು ಕಂಗಾಲಾಗಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.

ರಾಜ್ಯ ಸರಕಾರ ಕೇಂದ್ರ ಸರಕಾರದ ಕಡೆ ಬೊಟ್ಟು ಮಾಡಿ ಕುಳಿತಿದೆಯೇ ವಿನಾ ರೈತರ ಸಂಕಷ್ಟಕ್ಕೆ ಸ್ಪಂದಿಸುವ ಪ್ರಾಮಾಣಿಕತೆಯನ್ನು ತೋರಿಸುತ್ತಿಲ್ಲ. ಸಿದ್ದರಾಮಯ್ಯರದು ರೈತವಿರೋಧಿ, ಬಡವರ ವಿರೋಧಿ ಸರಕಾರ. ಮತ್ತೊಂದು ಕಡೆ ಎಸ್‍ಇಪಿ, ಟಿಎಸ್‍ಪಿ ಹಣವನ್ನು ಬೇರೆ ಬೇರೆ ಕಾರ್ಯಕ್ರಮಗಳಿಗೆ ವರ್ಗಾಯಿಸಿದ್ದಾರೆ. ಅಹಿಂದ ಹೆಸರು ಹೇಳಿ ಅಧಿಕಾರದ ಚುಕ್ಕಾಣಿ ಹಿಡಿದ ಸಿದ್ದರಾಮಯ್ಯನವರು ಪರಿಶಿಷ್ಟ ಜಾತಿ, ಪಂಗಡಗಳಿಗೆ ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಿದರು.

ಅಭಿವೃದ್ಧಿಯೇ ಆರಂಭವಾಗದ ಕಾರಣ ಶಾಸಕರು ತಲೆ ಎತ್ತಿಕೊಂಡು ಕ್ಷೇತ್ರದಲ್ಲಿ ಓಡಾಡಲು ಸಾಧ್ಯ ಆಗುತ್ತಿಲ್ಲ. ಈ ಸರಕಾರ ಬಂದ ಬಳಿಕ ಅನುದಾನ ಸಿಗುತ್ತಿಲ್ಲವೆಂದು ಸ್ವತಃ ಆರ್.ವಿ.ದೇಶಪಾಂಡೆ ಅವರಂಥ ಹಿರಿಯ ಶಾಸಕರು ಹೇಳಿಕೆ ಕೊಟ್ಟರು. ಕಾಂಗ್ರೆಸ್ ಪಕ್ಷದ ಶಾಸಕ ರಾಜು ಕಾಗೆಯವರು ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆಯ ಮಾತನಾಡಿದ್ದಾರೆ ಎಂದು ವಿವರಿಸಿದರು. ಸಿದ್ದರಾಮಯ್ಯನವರ ಸರಕಾರವು ಅಸ್ತಿತ್ವಕ್ಕೆ ಬಂದು ಒಂದೂಮುಕ್ಕಾಲು ವರ್ಷವಾಗಿದೆ. ಈಗಾಗಲೇ ಸಿದ್ದರಾಮಯ್ಯನವರ ಸರಕಾರದ ವಿರುದ್ಧ ಆಡಳಿತ ವಿರೋಧಿ ಅಲೆ ದೊಡ್ಡ ಮಟ್ಟದಲ್ಲಿ ಸೃಷ್ಟಿಯಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವು ಅಧಿಕಾರಕ್ಕೆ ಬಂದ ಒಂದೂವರೆ ವರ್ಷದಲ್ಲಿ ಇದು ಪ್ರಮುಖ ಉಪ ಚುನಾವಣೆ. ಸರಕಾರ ಅಧಿಕಾರಕ್ಕೆ ಬಂದ 3 ವರ್ಷ, ನಾಲ್ಕು ವರ್ಷಗಳಾದಾಗ ಆಡಳಿತ ವಿರೋಧಿ ಅಲೆ ಕಾಣಿಸಿಕೊಳ್ಳುತ್ತದೆ; ಆದರೆ ರಾಜ್ಯದಲ್ಲಿ ಅತ್ಯಲ್ಪ ಅವಧಿಯಲ್ಲೇ ಅಂದರೆ ಒಂದೂವರೆ ವರ್ಷದಲ್ಲೇ ಆಡಳಿತ ವಿರೋಧಿ ಅಲೆ ಕಾಣಿಸಿಕೊಂಡಿದೆ ಎಂದು ತಿಳಿಸಿದರು.

ಎರಡು ಕಾರಣಗಳಿಗೆ ಆಡಳಿತ ವಿರೋಧಿ ಅಲೆ ಸೃಷ್ಟಿಯಾಗಿದೆ. ಭ್ರಷ್ಟಾಚಾರರಹಿತ ಆಡಳಿತ ನೀಡುವುದಾಗಿ ತಿಳಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ಸಿಗರ ಆಡಳಿತದಲ್ಲಿ ಸಾಲು ಸಾಲು ಹಗರಣಗಳನ್ನು ಬಿಜೆಪಿ ಬೀದಿಗೆ ತರುವ ಕೆಲಸ ಮಾಡಿದೆ. ಮೈಸೂರು ಮುಡಾ ಹಗರಣದಲ್ಲಿ ತಪ್ಪೇ ಮಾಡಿಲ್ಲವೆಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರು 14 ನಿವೇಶನ ಹಿಂದಿರುಗಿಸುವ ಘೋಷಣೆ ಮಾಡಿ ತಪ್ಪನ್ನು ಒಪ್ಪಿಕೊಂಡಿದ್ದಾರೆ ಎಂದು ವಿವರಿಸಿದರು.

ವಾಲ್ಮೀಕಿ ನಿಗಮದ ಹಗರಣ- ಭ್ರಷ್ಟಾಚಾರದಲ್ಲಿ ಲೆಕ್ಕಾಧಿಕಾರಿ ಚಂದ್ರಶೇಖರ್ ಅವರು ಶಿವಮೊಗ್ಗದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಂತರ ಅನೇಕ ಬೆಳವಣಿಗೆ ಆಗಿದೆ. ಹಗರಣ ಆಗಿಲ್ಲವೆಂದು ಮುಖ್ಯಮಂತ್ರಿಗಳು ಹೇಳಿದ್ದರು. ಬಳಿಕ ಅಧಿವೇಶನ ನಡೆಯುವ ಸಂದರ್ಭದಲ್ಲಿ ಸದನದಲ್ಲಿ 187 ಕೋಟಿ ಹಗರಣ ಅಲ್ಲ; 87 ಕೋಟಿ ಹಗರಣ ಎಂದು ಒಪ್ಪಿಕೊಂಡರು. ಸಚಿವರೂ ರಾಜೀನಾಮೆ ಕೊಟ್ಟರು ಎಂದು ಮಾಹಿತಿ ನೀಡಿದರು.

ಭ್ರಷ್ಟಾಚಾರದಲ್ಲಿ ಮುಳುಗಿದ ಈ ಭ್ರಷ್ಟ ಕಾಂಗ್ರೆಸ್ ಸರಕಾರದ ವಿರುದ್ಧ ರಾಜ್ಯದ ಜನರು ಛೀ ಥೂ ಎಂದು ಉಗಿಯುತ್ತಿದ್ದಾರೆ. ಅಹಿಂದ ಹೆಸರು ಹೇಳಿಕೊಂಡು ಅಧಿಕಾರದ ಚುಕ್ಕಾಣಿ ಹಿಡಿದ ಸಿದ್ದರಾಮಯ್ಯನವರು ಎಲ್ಲ ಸಮುದಾಯಗಳನ್ನು ಮರೆತಿದ್ದಾರೆ. ಸಮಾಜ- ಸಮಾಜಗಳ ಮಧ್ಯೆ, ಜಾತಿಗಳ ನಡುವೆ ವಿಷಬೀಜವನ್ನು ಬಿತ್ತುವ ಕೆಲಸದಲ್ಲಿ ಮತ್ತೊಮ್ಮೆ ಸ್ವತಃ ಸಿದ್ದರಾಮಯ್ಯನವರೇ ಅಖಾಡಕ್ಕೆ ಇಳಿದಿರುವುದು ಈ ರಾಜ್ಯದ ದುರ್ದೈವ. ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳ ನಡವಳಿಕೆ ನೋಡಿದರೆ ಅಭಿವೃದ್ಧಿ ಬಗ್ಗೆ ಚಕಾರ ಇಲ್ಲ; ಚರ್ಚೆಯೂ ಇಲ್ಲ ಎಂದು ಟೀಕಿಸಿದರು.

ಈ ಸರಕಾರ ಬಂದ ಬಳಿಕ ಅಭಿವೃದ್ಧಿ ಎಂಬುದು ಪ್ರಾರಂಭವೇ ಆಗಿಲ್ಲ. ಗ್ಯಾರಂಟಿಗಳ ಕುರಿತು ಸಾಕಷ್ಟು ಪ್ರಚಾರ ಪಡೆದುಕೊಂಡರು. ಲೋಕಸಭಾ ಚುನಾವಣೆಗೆ ಮತದಾನಕ್ಕೆ 3-4 ದಿನ ಇದ್ದಾಗ ಎಲ್ಲರ ಖಾತೆಗೆ ದುಡ್ಡು ಜಮಾ ಮಾಡುವ ಕೆಲಸವನ್ನು ಮುಖ್ಯಮಂತ್ರಿ, ಕಾಂಗ್ರೆಸ್ ಸರಕಾರ ಮಾಡಿತ್ತು ಎಂದು ಟೀಕಿಸಿದರು.

18-20 ಸಂಸದರನ್ನು ಗೆಲ್ಲಿಸುವ ಬಡಾಯಿ ಕೊಚ್ಚಿಕೊಳ್ಳುತ್ತಿದ್ದರು. ಇವರ ಅಬ್ಬರದ ಪ್ರಚಾರ, ಜಾಹೀರಾತುಗಳು, ಗ್ಯಾರಂಟಿಗಳ ಅಪಪ್ರಚಾರದ ನಡುವೆ ಬಿಜೆಪಿ- ಜೆಡಿಎಸ್ 19 ಸ್ಥಾನಗಳನ್ನು ಗೆದ್ದಿದೆ. ಬಿಜೆಪಿ- 17 ಸ್ಥಾನಗಳನ್ನು, ಜೆಡಿಎಸ್ 2 ಸ್ಥಾನಗಳನ್ನು ಗೆದ್ದಿದೆ ಎಂದು ವಿವರಿಸಿದರು.

ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ, ಮಾಜಿ ಸಚಿವ ಜನಾರ್ದನ ರೆಡ್ಡಿ, ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್, ಅಭ್ಯರ್ಥಿ ಬಂಗಾರು ಹನುಮಂತು, ಪಕ್ಷದ ಪ್ರಮುಖರು ಇದ್ದರು.

ಕೋಲಾರದಲ್ಲಿ ಹುಚ್ಚುನಾಯಿಯಿಂದ ಭೀಕರ ದಾಳಿ: 10ಕ್ಕೂ ಹೆಚ್ಚು ಜನರಿಗೆ ಗಾಯ

JOB ALERT: ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ: ರಾಜ್ಯ ಸರ್ಕಾರದಿಂದ 4,115 ನೇಮಕಾತಿಗೆ ಗ್ರೀನ್ ಸಿಗ್ನಲ್ | Karnataka Police Recruitment 2024

Share. Facebook Twitter LinkedIn WhatsApp Email

Related Posts

BREAKING : ಕದನ ವಿರಾಮ ಘೋಷಣೆಯಾದರು, ಭಯೋತ್ಪಾದನೆ ಮೂಲೋತ್ಪಾಟನೆಗೆ ಕ್ರಮ : CM ಸಿದ್ದರಾಮಯ್ಯ

10/05/2025 9:02 PM1 Min Read

BIG NEWS : ಮೇ 12 ರಂದು ‘ಬುದ್ಧ ಪೂರ್ಣಿಮ’ ಹಿನ್ನೆಲೆ, ಮಾಂಸ ಮಾರಾಟ ನಿಷೇಧಿಸಿ ‘BBMP’ ಆದೇಶ

10/05/2025 8:26 PM1 Min Read

BREAKING: ಆಪರೇಷನ್ ಸಿಂಧೂರ್: ಎಲ್ಲಾ ಜಿಲ್ಲೆಗಳಲ್ಲಿ ಸಹಾಯ ಕೇಂದ್ರ ತೆರೆದು, ಸಹಾಯವಾಣಿ ಆರಂಭಿಸಿ- ಸಿಎಂ ಸಿದ್ಧರಾಮಯ್ಯ

10/05/2025 5:44 PM2 Mins Read
Recent News

ಇನ್ಮುಂದೆ ಕದನ ವಿರಾಮ ಉಲ್ಲಂಘನೆಯಾದರೆ ಪಾಕ್ ಗೆ ತಕ್ಕ ಪ್ರತ್ಯುತ್ತರ: ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ

10/05/2025 11:32 PM

BREAKING: ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ದೃಢಪಡಿಸಿದ ಕೇಂದ್ರ ಸರ್ಕಾರ: ಭಾರತೀಯ ಸೇನೆಗೆ ತಿರುಗೇಟಿಗೆ ಸೂಚನೆ

10/05/2025 11:27 PM

BREAKING: ಪಾಕಿಸ್ತಾನಕ್ಕೆ ಕದನ ವಿರಾಮ ಒಪ್ಪಂದ ಅರ್ಥವಾಗುತ್ತಿಲ್ಲ, ಶೀಘ್ರದಲ್ಲೇ ಭಾರತೀಯ ಸೇವೆ ಪ್ರತ್ಯುತ್ತರ: ಕೇಂದ್ರ ಗೃಹ ಸಚಿವಾಲಯ

10/05/2025 11:22 PM

BREAKING : ಕದನ ವಿರಾಮ ಉಲ್ಲಂಘಿಸಿ ಪಾಕ್ ನಿಂದ ಮತ್ತೆ ದಾಳಿ : 50ಕ್ಕೂ ಹೆಚ್ಚು ಡ್ರೋನ್ ಧ್ವಂಸಗೊಳಿಸಿದ ಭಾರತ | Watch Video

10/05/2025 9:23 PM
State News
KARNATAKA

BREAKING : ಕದನ ವಿರಾಮ ಘೋಷಣೆಯಾದರು, ಭಯೋತ್ಪಾದನೆ ಮೂಲೋತ್ಪಾಟನೆಗೆ ಕ್ರಮ : CM ಸಿದ್ದರಾಮಯ್ಯ

By kannadanewsnow0510/05/2025 9:02 PM KARNATAKA 1 Min Read

ಬೆಂಗಳೂರು : ಪಹಲ್ಗಾಂ ಉಗ್ರರ ದಾಳಿಗೆ ಭಾರತ ಪ್ರತಿಕಾರ ತೀರಿಸಿಕೊಂಡಿದ್ದು, ಇದೀಗ ಇಂದು ಸಂಜೆ 5 ಗಂಟೆಗೆ ಭಾರತ ಮತ್ತು…

BIG NEWS : ಮೇ 12 ರಂದು ‘ಬುದ್ಧ ಪೂರ್ಣಿಮ’ ಹಿನ್ನೆಲೆ, ಮಾಂಸ ಮಾರಾಟ ನಿಷೇಧಿಸಿ ‘BBMP’ ಆದೇಶ

10/05/2025 8:26 PM

BREAKING: ಆಪರೇಷನ್ ಸಿಂಧೂರ್: ಎಲ್ಲಾ ಜಿಲ್ಲೆಗಳಲ್ಲಿ ಸಹಾಯ ಕೇಂದ್ರ ತೆರೆದು, ಸಹಾಯವಾಣಿ ಆರಂಭಿಸಿ- ಸಿಎಂ ಸಿದ್ಧರಾಮಯ್ಯ

10/05/2025 5:44 PM

BREAKING : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ‘ಮಾಕ್ ಡ್ರಿಲ್’ ನಡೆಸಿ : ಅಧಿಕಾರಿಗಳಿಗೆ CM ಸಿದ್ದರಾಮಯ್ಯ ಸೂಚನೆ

10/05/2025 5:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.