Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಖ್ಯಾತ ಹಿನ್ನಲೆ ಗಾಯಕಿ, ನಟಿ `ಆರ್. ಬಾಲಸರಸ್ವತಿ ದೇವಿ’ ನಿಧನ | Balasaraswathy Devi passes away

16/10/2025 9:10 AM

ತೆರಿಗೆ ನಿಯಮಗಳನ್ನು ಪರಿಷ್ಕರಿಸುವಂತೆ ಭಾರತ ಸರ್ಕಾರಕ್ಕೆ ಆಪಲ್ ಮನವಿ

16/10/2025 9:02 AM
vidhana soudha

ರಾಜ್ಯ ಸರ್ಕಾರದಿಂದ `ವಿಕಲಚೇತನರಿಗೆ ಗುಡ್ ನ್ಯೂಸ್’ : `ನಿರುದ್ಯೋಗ ಭತ್ಯೆ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

16/10/2025 9:02 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೋಲು ಖಚಿತ: H.D ಕುಮಾರಸ್ವಾಮಿ ಭವಿಷ್ಯ
KARNATAKA

ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೋಲು ಖಚಿತ: H.D ಕುಮಾರಸ್ವಾಮಿ ಭವಿಷ್ಯ

By kannadanewsnow0904/11/2024 7:01 PM

ಚನ್ನಪಟ್ಟಣ/ರಾಮನಗರ: ಚನ್ನಪಟ್ಟಣದಲ್ಲಿ ಧರ್ಮ ಮತ್ತು ಅಧರ್ಮದ ನಡುವೆ ಯುದ್ಧ ನಡೆಯುತ್ತಿದ್ದು, ನಿಖಿಲ್ ಕುಮಾರಸ್ವಾಮಿ ಅವರು ಗೆಲ್ಲುವ ಮೂಲಕ ಅಧರ್ಮಕ್ಕೆ ಹೀನಾಯ ಸೋಲಾಗಲಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

ಚನ್ನಪಟ್ಟಣ ಉಪ ಚುನಾವಣೆಯ ಕಣದಲ್ಲಿ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ಪರವಾಗಿ ಪ್ರಚಾರದಲ್ಲಿ ಪಾಲ್ಗೊಂಡ ಸಂದರ್ಭದಲ್ಲಿ ಅವರು ಗೊಳ್ಳರದೊಡ್ಡಿ ಗ್ರಾಮದಲ್ಲಿ ಮಾಧ್ಯಮಗಳ ಜತೆ ಮಾತನಾಡಿದರು.

ಕುತಂತ್ರ ಅಧರ್ಮ ಹಾಗೂ ಧರ್ಮದ ನಡುವಿನ ಚುನಾವಣೆ ಇದಾಗಿದೆ. ಈ ಬಾರಿ ನಿಖಿಲ್ ಅಭಿವನ್ಯುವಲ್ಲ. ಅರ್ಜುನನಾಗಿ ಯುದ್ಧ ಎದುರಿಸುತ್ತಿದ್ದಾರೆ. ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರ ಮಹಾಪಡೆ ಅವರಿಗೆ ಸಾಥ್ ಕೊಡುತ್ತಿದ್ದಾರೆ. ಎರಡೂ ಪಕ್ಷಗಳ ನಾಯಕರು ಕೃಷ್ಣನ ಪಾತ್ರ ವಹಿಸಿ ಅಧರ್ಮವನ್ನು ಹಿಮ್ಮೆಟ್ಟಿಸಲಿದ್ದಾರೆ. ಸಚಿವರ ದಂಡು ಚನ್ನಪಟ್ಟಣದಲ್ಲಿದೆ. ಡಿಸಿಎಂ ಇವತ್ತು ಬಂದಿದ್ದಾರೆ, ಎಲ್ಲಾ ಕಂಡೆ ನಮ್ಮನ್ನು ಬೈದುಕೊಂಡು ಹೋಗುತ್ತಿದ್ದಾರೆ ಎಂದು ಕೇಂದ್ರ ಸಚಿವರು ಹೇಳಿದರು.

ಚದುರಂಗ ಆಡಿದವರೆಲ್ಲ ಏನಾದರು?

ಚದುರಂಗ ಆಡಿದವರೆಲ್ಲಾ ಮುಳುಗಿದ್ದಾರೆ ಡಿಕೆಶಿ ಶಿವಕುಮಾರ್ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಸಚಿವರು; ಚದುರಂಗ ಆಟ ಆಡಿ ಮುಳುಗಿ ಎದ್ದವರ ಇತಿಹಾಸ ಇದೆ. ಎಲ್ಲದಕ್ಕೂ ಅಂತಿಮ ಎನ್ನುವುದು ಇದೆ ಎಂದ ಕೇಂದ್ರ ಸಚಿವರು; ಅವರಂತೆ ಚದುರಂಗ ಆಡಿ ಮಹಾ ಸಾಮ್ರಾಜ್ಯಗಳೇ ಆಗಿಹೋಗಿವೆ. ಮೌರ್ಯ ಸಾಮ್ರಾಜ್ಯ ಸೇರಿ ಅನೇಕ ಸಾಮ್ರಾಜ್ಯಗಳ ಕಲಾ ಮುಗಿದುಹೋಗಿದೆ. ಯಾರೂ ಇಲ್ಲಿ ಶಾಶ್ವತ ಅಲ್ಲ. ಇವರು ಕೂಡ ಶಾಶ್ವತ ಅಲ್ಲ ಎಂದು ಅವರು ಕಿಡಿಕಾರಿದರು.

1994ರಲ್ಲಿ ಸೋತು ಕುತಂತ್ರದಿಂದ ಫಲಿತಾಂಶ ಬದಲಾಯಿಸಿದರು. ಆಮೇಲೆ ಅವರು ಏನೆಲ್ಲಾ ಆಟ ಆಡಿದರು ಎನ್ನುವುದು ಗೊತ್ತಿದೆ. ಇಂತಹ ವ್ಯಕ್ತಿಗಳಿಂದ ಚದುರಂಗದ ಆಟ ಕಲಿಯಬೇಕಿಲ್ಲ. ಚನ್ನಪಟ್ಟಣ ಚುನಾವಣೆ ಮುಂದಿನ ರಾಜ್ಯ ರಾಜಕೀಯಕ್ಕೆ ದಿಕ್ಸೂಚಿ ಆಗಲಿದೆ. ರಾಜ್ಯದಲ್ಲಿ ಮುಂದೆ ಸಂಭವಿಸಲಿರುವ ಎಲ್ಲಾ ರಾಜಕೀಯ ಘಟನೆಗಳಿಗೆ ಚನ್ನಪಟ್ಟಣ ಫಲಿತಾಂಶವೇ ನಾಂದಿ ಆಗಲಿದೆ. ಮೂರು ವಿಧಾನಸಭೆ ಕ್ಷೇತ್ರಗಳ ಫಲಿತಾಂಶ ಈ ಕಾಂಗ್ರೆಸ್ ಸರ್ಕಾರದ ಹಣೆಬರಹ ನಿರ್ಧರಿಸಲಿದೆ ಎಂದು ಅವರು ಅಭಿಪ್ರಾಯಪಟ್ಟರು.

ಕುತಂತ್ರದಿಂದ ನಿಖಿಲ್‌ ಅವರನ್ನು ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ, ರಾಮನಗರದಲ್ಲಿ ವಿಧಾನಸಭೆ ಕ್ಷೇತ್ರದಲ್ಲಿ ಸೋಲಿಸಿದರು. ಇವತ್ತು ಡಿಸಿಎಂ ಹುದ್ದೆಯಲ್ಲಿರುವ ವ್ಯಕ್ತಿ ನಿಖಿಲ್ ಅವರನ್ನು ಕಂದ, ಶಿಶು ಎಂದು ಕರೆಯುತ್ತಿದ್ದಾರೆ. ಆ ಶಿಶುವನ್ನು ಕುತಂತ್ರದಿಂದ ಸೋಲಿಸಿದ್ದು ಯಾರು? ಅಭಿಮನ್ಯು ಕೂಡ ಶಿಶುವೇ ಅಲ್ಲವೇ? ಅರ್ಜುನನನ್ನು ಕುತಂತ್ರದಿಂದ ಬೇರೆಡೆಗೆ ಸಾಗಹಾಕಿ ಅಭಿಮನ್ಯುವನ್ನು ಸೋಲಿಸಿ ಹೇಯವಾಗಿ ಕೊಂದರು. ಅದೇ ರೀತಿ ಮಂಡ್ಯ, ರಾಮನಗರದಲ್ಲಿ ನಿಖಿಲ್ ಅವರನ್ನು ಸೋಲಿಸಿದರು. ಈ ಬಾರಿ ನಿಖಿಲ್ ಅಭಿಮನ್ಯುವಲ್ಲ, ಅರ್ಜುನ ಆಗಿದ್ದಾರೆ. ಬಿಜೆಪಿ ಜೆಡಿಎಸ್ ಕಾರ್ಯಕರ್ತರು ಕೃಷ್ಣನ ಸ್ಥಾನದಲ್ಲಿ ನಿಂತು ಅವರಿಗೆ ರಕ್ಷಣೆ ನೀಡುತ್ತಿದ್ದಾರೆ. ಚನ್ನಪಟ್ಟಣ ಚುನಾವಣೆ ಮಹಾಭಾರತದ ಕುರುಕ್ಷೇತ್ರವಾಗಿದೆ ಎಂದು ಕೇಂದ್ರ ಸಚಿವರು ಬಣ್ಣಿಸಿದರು.

ಧ್ವಜದ ನೆರಳಲ್ಲಿ ಲೂಟಿ ಮಾಡಬಹುದೇ?

ಚನ್ನಪಟ್ಟಣ ಕ್ಷೇತ್ರದಲ್ಲಿ ಕುಮಾರಸ್ವಾಮಿ ಅವರು ಒಂದು ದಿನವೂ ಧ್ವಜ ಹಾರಿಸಲಿಲ್ಲ ಎಂದು ಡಿಕೆಶಿ ನೀಡಿರುವ ಹೇಳಿಕೆಗೆ ತಿರುಗೇಟು ಕೊಟ್ಟ ಕೇಂದ್ರ ಸಚಿವ ಕುಮಾರಸ್ವಾಮಿ ಅವರು, ಕ್ಷೇತ್ರದಲ್ಲಿ ಸುತ್ತಾಡಿ ನೋಡಿದರೆ ಯಾರು ಕೆಲಸ ಮಾಡಿದ್ದಾರೆ ಎನ್ನುವುದು ಗೊತ್ತಾಗಲಿದೆ. ಚನ್ನಪಟ್ಟಣ ಮೂಲಸೌಕರ್ಯದಲ್ಲಿ ಪ್ರಥಮ ಸ್ಥಾನದಲ್ಲಿರುವ ವಿಧಾನಸಭೆ ಕ್ಷೇತ್ರ. ಇದಕ್ಕೆ ಕಾರಣ ನಾನು ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ. ಜಾತಿಗಳ ನಡುವೆ ಸಂಘರ್ಷ ಉಂಟು ಕೆಲಸ ಮಾಡಿದ್ದೇನೆ. ಬೆಂಗಳೂರಿಗೆ ಹೋಲಿಸಿದರೆ ಚನ್ನಪಟ್ಟಣದ ಹಳ್ಳಿಗಳ ರಸ್ತೆಗಳೇ ಚೆನ್ನಾಗಿವೆ ಎಂದು ಕುಟುಕಿದರು.

ಇಲ್ಲಿ ಬಾವುಟ ಹಾರಿಸುವುದು ಮುಖ್ಯ ಅಲ್ಲ. ಆದರೆ, ನಂಬಿ ಗೆಲ್ಲಿಸಿದ ಜನರ ಋಣ ತೀರಿಸುವುದು ಮುಖ್ಯ. ಇವರು ಬಂದು ಧ್ವಜ ಹಾರಿಸಿ ಭಾಷಣ ಮಾಡಿದರೆ ಜನರ ಹೊಟ್ಟೆ ತುಂಬುವುದಿಲ್ಲ. ಮೇಲ್ನೋಟಕ್ಕೆ ದೇಜಾರೋಹಣ ಮಾಡಿ ಉಳಿದೆಲ್ಲವನ್ನೂ ಲೂಟಿ ಮಾಡಿದರೆ ಹೇಗೆ? ಅಂತಹ ಕೆಲಸವನ್ನು ನಾನು ಮಾಡಿಲ್ಲ. ಹೌದು, ನಾನು ಒಂದು ಪಕ್ಷದ ರಾಜ್ಯಾಧ್ಯಕ್ಷನಾಗಿ ಧ್ವಜಕ್ಕೆ ನನ್ನ ಗೌರವ ಸಲ್ಲಿಸಿದ್ದೇನೆ ಎಂದು ಕೇಂದ್ರ ಸಚಿವರು ಕಿಡಿಕಾರಿದರು.

ಮತ್ತೊಂದು ಜನ್ಮ ಎತ್ತಿ ಬಂದರೂ ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರವನ್ನು ಅಲುಗಾಡಿಸಲು ಸಾಧ್ಯವಿಲ್ಲ: ಡಿಸಿಎಂ ಡಿಕೆಶಿ ಗುಡುಗು

ಸೆನ್ಸೆಕ್ಸ್ 1,400 ಅಂಕಗಳ ಕುಸಿತ, ಹೂಡಿಕೆದಾರರಿಗೆ 8 ಲಕ್ಷ ಕೋಟಿ ರೂ. ನಷ್ಟ | Share Market Updates

Share. Facebook Twitter LinkedIn WhatsApp Email

Related Posts

vidhana soudha

ರಾಜ್ಯ ಸರ್ಕಾರದಿಂದ `ವಿಕಲಚೇತನರಿಗೆ ಗುಡ್ ನ್ಯೂಸ್’ : `ನಿರುದ್ಯೋಗ ಭತ್ಯೆ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

16/10/2025 9:02 AM1 Min Read

ALERT : ಬೀದಿ ಬದಿಯ `ಸಮೋಸಾ’ ತಿನ್ನುವವರೇ ಎಚ್ಚರ : `ಕ್ಯಾನ್ಸರ್’ ಕಾರಕ ಎಣ್ಣೆ ಬಳಕೆ.!

16/10/2025 8:54 AM1 Min Read

ಉದ್ಯೋಗವಾರ್ತೆ : ಏಕಲವ್ಯ ವಸತಿ ಶಾಲೆಗಳಲ್ಲಿ `7267’ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ | Teacher Recruitment

16/10/2025 8:41 AM3 Mins Read
Recent News

BREAKING : ಖ್ಯಾತ ಹಿನ್ನಲೆ ಗಾಯಕಿ, ನಟಿ `ಆರ್. ಬಾಲಸರಸ್ವತಿ ದೇವಿ’ ನಿಧನ | Balasaraswathy Devi passes away

16/10/2025 9:10 AM

ತೆರಿಗೆ ನಿಯಮಗಳನ್ನು ಪರಿಷ್ಕರಿಸುವಂತೆ ಭಾರತ ಸರ್ಕಾರಕ್ಕೆ ಆಪಲ್ ಮನವಿ

16/10/2025 9:02 AM
vidhana soudha

ರಾಜ್ಯ ಸರ್ಕಾರದಿಂದ `ವಿಕಲಚೇತನರಿಗೆ ಗುಡ್ ನ್ಯೂಸ್’ : `ನಿರುದ್ಯೋಗ ಭತ್ಯೆ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

16/10/2025 9:02 AM

ALERT : ಬೀದಿ ಬದಿಯ `ಸಮೋಸಾ’ ತಿನ್ನುವವರೇ ಎಚ್ಚರ : `ಕ್ಯಾನ್ಸರ್’ ಕಾರಕ ಎಣ್ಣೆ ಬಳಕೆ.!

16/10/2025 8:54 AM
State News
vidhana soudha KARNATAKA

ರಾಜ್ಯ ಸರ್ಕಾರದಿಂದ `ವಿಕಲಚೇತನರಿಗೆ ಗುಡ್ ನ್ಯೂಸ್’ : `ನಿರುದ್ಯೋಗ ಭತ್ಯೆ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

By kannadanewsnow5716/10/2025 9:02 AM KARNATAKA 1 Min Read

ಬೆಂಗಳೂರು : ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ ವತಿಯಿಂದ 11 ಫಲಾನುಭವಿ ಆಧಾರಿತ ಯೋಜನೆಗಳ ಸೌಲಭ್ಯ ಪಡೆಯಲು…

ALERT : ಬೀದಿ ಬದಿಯ `ಸಮೋಸಾ’ ತಿನ್ನುವವರೇ ಎಚ್ಚರ : `ಕ್ಯಾನ್ಸರ್’ ಕಾರಕ ಎಣ್ಣೆ ಬಳಕೆ.!

16/10/2025 8:54 AM

ಉದ್ಯೋಗವಾರ್ತೆ : ಏಕಲವ್ಯ ವಸತಿ ಶಾಲೆಗಳಲ್ಲಿ `7267’ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ | Teacher Recruitment

16/10/2025 8:41 AM

BREAKING :`ಕನ್ನಡ ರಾಜ್ಯೋತ್ಸವ’ದಂದು ಧ್ವಜಾರೋಹಣಕ್ಕೆ ಸಚಿವರುಗಳ ನೇಮಕ : ಇಲ್ಲಿದೆ ಸಂಪೂರ್ಣ ಪಟ್ಟಿ.!

16/10/2025 8:27 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.