Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೇ.25 ರಂದು ಸಹಕಾರ ಸಂಘದ ಆಡಳಿತ ಮಂಡಳಿಯ ನಿರ್ದೇಶಕರುಗಳ ಚುನಾವಣೆ

09/05/2025 8:31 PM
Expedite survey to collect data on SC reservation Dr Kumar

ಮೇ 28 ರಿಂದ 31 ರವರೆಗೆ ಜಿಲ್ಲೆಯಲ್ಲಿ ಉಪಲೋಕಾಯುಕ್ತರಿಂದ ದೂರು ಸ್ವೀಕಾರ: ಡಾ: ಕುಮಾರ

09/05/2025 8:29 PM
Expedite survey to collect data on SC reservation Dr Kumar

ಪರಿಶಿಷ್ಟ ಜಾತಿ ಒಳಮೀಸಲಾತಿ ದತ್ತಾಂಶ ಸಂಗ್ರಹಿಸಲು ಸಮೀಕ್ಷೆಯನ್ನು ಚುರುಕುಗೊಳಿಸಿ: ಡಾ:ಕುಮಾರ

09/05/2025 8:28 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಕ್ಫ್ ನೆಪದಲ್ಲಿ ವಿಜಯಪುರವನ್ನು ಹಿಂದುತ್ವದ ಪ್ರಯೋಗಶಾಲೆ ಮಾಡುವ ಸಂಚು: ಬಿಜೆಪಿ ವಿರುದ್ಧ ಸಚಿವ ಎಂ ಬಿ ಪಾಟೀಲ ವಾಗ್ದಾಳಿ
KARNATAKA

ವಕ್ಫ್ ನೆಪದಲ್ಲಿ ವಿಜಯಪುರವನ್ನು ಹಿಂದುತ್ವದ ಪ್ರಯೋಗಶಾಲೆ ಮಾಡುವ ಸಂಚು: ಬಿಜೆಪಿ ವಿರುದ್ಧ ಸಚಿವ ಎಂ ಬಿ ಪಾಟೀಲ ವಾಗ್ದಾಳಿ

By kannadanewsnow0908/11/2024 5:29 PM

ವಿಜಯಪುರ: ಕಳೆದ ಹತ್ತು ವರ್ಷಗಳಿಂದ ರಾಜ್ಯ ಮತ್ತು ಕೇಂದ್ರದಲ್ಲಿ ಅಧಿಕಾರದಲ್ಲಿ ಇದ್ದಾಗ ವಕ್ಫ್ ಆಸ್ತಿ ರಕ್ಷಣೆ ಕುರಿತು ಅಪಾರ ಕಾಳಜಿ ತೋರಿದ ಬಿಜೆಪಿ ಈಗ ವಿಜಯಪುರವನ್ನು ಹಿಂದುತ್ವದ ಪ್ರಯೋಗ ಶಾಲೆಯನ್ನಾಗಿ ಮಾಡಲು ಹೊರಟಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಆರೋಪಿಸಿದ್ದಾರೆ.

ಶುಕ್ರವಾರ ಅವರು ಇಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ ಅವರು, ಬಿಜೆಪಿ ಅಧಿಕಾರದ ಅವಧಿಯಲ್ಲಿ ವಕ್ಫ್ ಆಸ್ತಿ ರಕ್ಷಣೆಗೆ ಹೊರಡಿಸಿದ ಹತ್ತಾರು ಸುತ್ತೋಲೆಗಳನ್ನು ಬಿಡುಗಡೆ ಮಾಡಿದರು.

ಕಳೆದ ಒಂದೆರಡು ವಾರಗಳಿಂದ ವಕ್ಫ್ ಆಸ್ತಿ ವಿಚಾರದಲ್ಲಿ ಬಿಜೆಪಿ ಅಪಪ್ರಚಾರ ಮಾಡುತ್ತಿದೆ. ಆದರೆ, ತಾವೇ ಅಧಿಕಾರದಲ್ಲಿ ಇದ್ದಾಗ ರೈತರು, ಧಾರ್ಮಿಕ ಸ್ಥಳಗಳ ಹಾಗೂ ಎಲ್ಲ ಧರ್ಮೀಯರ ಆಸ್ತಿಯನ್ನು ವಕ್ಫ್ ಗೆ ಹಿಂಪಡೆದಿದೆ ಎಂದು ಅವರು ದೂರಿದರು.

ರಾಜ್ಯದಲ್ಲಿ 2019ರಲ್ಲಿ ಬಿಜೆಪಿಯೇ ಅಧಿಕಾರದಲ್ಲಿ ಇತ್ತು. ಆ ವರ್ಷದ ಸೆ.17ರಂದು ದೇವರಹಿಪ್ಪರಗಿ ತಾಲೂಕಿನ ಮಣೂರ ಗ್ರಾಮದ ಮುರುಘೇಂದ್ರ ಶಿವಬಸಪ್ಪ ಖ್ಯಾಡಿ, ಮಾಶಾಬಿ ಮೌಲಾಸಾಬ ಮುಲ್ಲಾ, ಸುಭಾಷ ಧರ್ಮಣ್ಣ ಆನೆಗುಂದಿ ಅವರ ಆಸ್ತಿಗಳನ್ನು ವಕ್ಫ್ ಹೆಸರಿಗೆ ಇಂದೀಕರಣ ಮಾಡಿದೆ. ಇಂಡಿ ತಾ.ನಲ್ಲೂ 2023ರ ಜ.13ರಂದು ಮಾರ್ಸನಹಳ್ಳಿಯ ಗ್ರಾಮದ ನಿಂಗಪ್ಪ ಭೂಮಣ್ಣ ಶಿರಶ್ಯಾಡ ಅವರಿಗೆ ಸೇರಿದ ಆಸ್ತಿಯನ್ನು ಇದೇ ರೀತಿ ವಕ್ಫ್ ಹೆಸರಿಗೆ ಮಾಡಲಾಗಿದೆ ಎಂದು ಅವರು ವಿವರಿಸಿದರು.

2010ರ ಜ.4ರಂದು ಬಿಜೆಪಿ ಸರಕಾರವಿದ್ದಾಗ ವಕ್ಫ್ ಆಸ್ತಿಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಕ್ರಮಗೊಳಿಸಬೇಕೆಂದು ಕಂದಾಯ ಇಲಾಖೆ ಮೂಲಕ ಸುತ್ತೋಲೆ ಹೊರಡಿಸಲಾಗಿತ್ತು. ಬಳಿಕ ಅದೇ ವರ್ಷದ ಮೇ 29ರಂದು ವಕ್ಫ್ ಆಸ್ತಿಗಳ ಅತಿಕ್ರಮಣ ತೆರವಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದರು ಎಂದು ಅವರು ಹೇಳಿದ್ದಾರೆ.

ಇದಾದಮೇಲೂ 2011ರಲ್ಲಿ ಒಮ್ಮೆ ಕಲಬುರಗಿಯ ಪ್ರಾದೇಶಿಕ ವಕ್ಫ್ ಆಸ್ತಿಗಳ ಸಂರಕ್ಷಣೆ ಹಾಗೂ ದಾಖಲೆಗಳನ್ನು ಕ್ರಮಬದ್ಧಗೊಳಿಸುವ ಕುರಿತು, 2011ರ ಏ.23 ರಂದು ವಕ್ಫ್ ಭೂಸ್ವಾಧೀನ ಪರಿಹಾರವನ್ನು ವಕ್ಫ್ ಮಂಡಳಿಯ ಲೆಕ್ಕ ಶೀರ್ಷಿಕೆಗೆ ಕಡ್ಡಾಯವಾಗಿ ಪಾವತಿಸಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದರು ಎಂದು ಅವರು ದಾಖಲೆಗಳನ್ನು ಪ್ರದರ್ಶಿಸಿದರು.

ಬಿಜೆಪಿ ತನ್ನ ಎರಡನೆಯ ಅವಧಿಯ ಸರಕಾರ ಇದ್ದಾಗಲೂ ಹೀಗೆಯೇ ಮಾಡಿದೆ. 2020ರ ಆ.8 ರಂದು ವಕ್ಫ್ ಆಸ್ತಿಗಳನ್ನು ಭೂಮಿ ತಂತ್ರಾಶದಲ್ಲಿ ಫ್ಲಾಗ್ ಮಾಡುವ ಕುರಿತು ಕಂದಾಯ ಇಲಾಖೆಯ ಅಂದಿನ ಉಪ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದರು. ಪುನಃ 2021ರ ಜ.8 ರಂದು ಜಿಲ್ಲಾ ಮಟ್ಟದ ವಕ್ಫ್ ಆಸ್ತಿಗಳ ಕಾರ್ಯಪಡೆ ರಚಿಸಲು ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರಿಂದ ಸುತ್ತೋಲೆ ಹೊರಡಿಸಿತ್ತು. ಆಮೇಲೆ ಸಹ 2021ರ ಜ.27ರಂದು ಗ್ರಾಮ ಠಾಣಾ ವ್ಯಾಪ್ತಿಯಲ್ಲಿರುವ ವಕ್ಸ್ ಆಸ್ತಿಗಳನ್ನು ಪಂಚತಂತ್ರ ಮತ್ತು ಇ-ಸ್ವತ್ತು ತಂತ್ರಾಂಶದಲ್ಲಿ ಫ್ಲಾಗ್ (ಲಾಕ್) ಮಾಡುವ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನಿರ್ದೇಶಕರ ಸುತ್ತೋಲೆ ಹೊರಬಿದ್ದಿತ್ತು ಎಂದು ಪಾಟೀಲ ವಿವರಿಸಿದರು.

2014ರ ತನ್ನ ಪ್ರಣಾಳಿಕೆಯಲ್ಲೂ ಬಿಜೆಪಿ ವಕ್ಫ್ ಮಂಡಳಿಯನ್ನು ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಧಾರ್ಮಿಕ ಮುಖಂಡರ ಜೊತೆ ಸಮಾಲೋಚಿಸಿ, ಅತೀಕ್ರಮಣ ತೆರವುಗೊಳಿಸುವುದಾಗಿ ಹೇಳಿತ್ತು. ಈಗ ಅದು ಬೂಟಾಟಿಕೆ ಮಾಡುತ್ತಿದೆ ಎಂದು ಅವರು ಟೀಕಿಸಿದರು.

2019ರಲ್ಲಿ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಸಂಸತ್ತಿನಲ್ಲಿ ಪ್ರಶ್ನೆ ಕೇಳಿದ್ದಾಗಲೂ ಮೋದಿ ಸರಕಾರವು ವಕ್ಫ್ ಆಸ್ತಿಗಳ ಸಂರಕ್ಷಣೆ ಮತ್ತು ಡಿಜಿಟಲೀಕರಣಕ್ಕೆ ಆದ್ಯತೆ ಕೊಡಲಾಗಿದೆ ಎಂದು ಹೇಳಿತ್ತು. ರಾಜ್ಯದಲ್ಲಿ ಈಗ ನೀಡಿರುವ ಎಲ್ಲಾ ನೋಟೀಸುಗಳನ್ನು ವಾಪಸ್ ಪಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಿದ್ದರಾಮಯ್ಯ ಆದೇಶಿಸಿದ್ದಾರೆ ಎಂದು ಸಚಿವರು ಪ್ರತಿಪಾದಿಸಿದರು.

ಅಲ್ಲದೆ, ನಾನು, ಕಂದಾಯ ಸಚಿವ ಕೃಷ್ಣ ಭೈರೇಗೌಡ ಮತ್ತು ವಕ್ಫ್ ಸಚಿವ ಜಮೀರ ಅಹ್ಮದ್ ಖಾನ್ ಕೂಡ ಈ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದೇವೆ. 2023ರ ಜೂನ್ 1ರಿಂದ 2024ರ ಅ.31ರವರೆಗೆ ರಾಜ್ಯದಲ್ಲಿ ವಕ್ಫ್ ಆಸ್ತಿಗಳಿಗೆ ಸಂಬಂಧಿಸಿದಂತೆ ನೋಟಿಸ್ ಜಾರಿ ಮತ್ತು ತಪ್ಪು ಸರಿಪಡಿಸಲು ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ಮಾಹಿತಿಯನ್ನು ಸಾರ್ವಜನಿಕ ಬಹಿರಂಗ ಪಡಿಸಿದ್ದೇವೆ ಎಂದು ಅವರು ತಿಳಿಸಿದರು.

ಈ ವಿಚಾರಗಳು ಗೊತ್ತಿಲ್ಲದ ಸ್ವಾಮೀಜಿಗಳು ಬಿಜೆಪಿಯ ಹೋರಾಟದಲ್ಲಿ ಪಾಲ್ಗೊಂಡಿದ್ದಾರೆ. ಸ್ವಾಮೀಜಿಗಳಿಗೆ ಈ ದಾಖಲೆಗಳನ್ನು ತಲುಪಿಸುತ್ತೇವೆ. ಆಗ ಸ್ವಾಮೀಜಿಗಳಿಗೆ ಪ್ರಧಾನಿ ಮತ್ತು ಬಿಜೆಪಿ ಮುಖಂಡರ ನಿಜಬಣ್ಣ ತಿಳಿಯಲಿದೆ ಎಂದು ಅವರು ವಿವರಿಸಿದ್ದಾರೆ.

ಜೆಪಿಸಿ ಅಧ್ಯಕ್ಷ ಜಗದಂಬಿಕಾ ಪಾಲ್ ಅವರ ವಿಜಯಪುರ ಭೇಟಿ ಕಾನೂನುಬಾಹಿರ. ಇದರ ಜತೆಗೆ ಯತ್ನಾಳ ಮತ್ತು ಕರಂದ್ಲಾಜೆ ಹೋರಾಟ ಕೆಲವೇ ಗಂಟೆಗಳಲ್ಲಿ ಮುಗಿದಿದೆ ಎಂದು ಅವರು ವ್ಯಂಗ್ಯವಾಡಿದರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕ ಪ್ರೊ.ರಾಜು ಆಲಗೂರ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ, ಉಪಾಧ್ಯಕ್ಷ ಡಾ.ಗಂಗಾಧರ ಸಂಬಣ್ಣಿ, ಮುಖಂಡ ಅಬ್ದುಲ್‌ ಹಮೀದ್ ಮುಷರಫ್ ಉಪಸ್ಥಿತರಿದ್ದರು.

ಬೆಂಗಳೂರು ಜನತೆಗೆ ಗುಡ್ ನ್ಯೂಸ್: ಶೀಘ್ರವೇ 18 ರಸ್ತೆಗಳ ವೈಟ್ ಟಾಪಿಂಗ್ ಕಾಮಗಾರಿ ಪೂರ್ಣ

BIG NEWS: ‘ಗ್ಯಾರಂಟಿ’ಯಿಂದ ಕರ್ನಾಟಕದಲ್ಲಿ ಲೂಟಿಯಾಗಿದೆ, ಮಹಾರಾಷ್ಟ್ರದಲ್ಲಿ ಘೋಷಿಸಬೇಡಿ: ಕೇಂದ್ರ ಸಚಿವೆ ಮುಂದೆ ವ್ಯಕ್ತಿ ಆಕ್ರೋಶ, ತಬ್ಬಿಬ್ಬಾದ ‘ನಿರ್ಮಲಾ’

Share. Facebook Twitter LinkedIn WhatsApp Email

Related Posts

ಮೇ.25 ರಂದು ಸಹಕಾರ ಸಂಘದ ಆಡಳಿತ ಮಂಡಳಿಯ ನಿರ್ದೇಶಕರುಗಳ ಚುನಾವಣೆ

09/05/2025 8:31 PM1 Min Read
Expedite survey to collect data on SC reservation Dr Kumar

ಮೇ 28 ರಿಂದ 31 ರವರೆಗೆ ಜಿಲ್ಲೆಯಲ್ಲಿ ಉಪಲೋಕಾಯುಕ್ತರಿಂದ ದೂರು ಸ್ವೀಕಾರ: ಡಾ: ಕುಮಾರ

09/05/2025 8:29 PM2 Mins Read
Expedite survey to collect data on SC reservation Dr Kumar

ಪರಿಶಿಷ್ಟ ಜಾತಿ ಒಳಮೀಸಲಾತಿ ದತ್ತಾಂಶ ಸಂಗ್ರಹಿಸಲು ಸಮೀಕ್ಷೆಯನ್ನು ಚುರುಕುಗೊಳಿಸಿ: ಡಾ:ಕುಮಾರ

09/05/2025 8:28 PM1 Min Read
Recent News

ಮೇ.25 ರಂದು ಸಹಕಾರ ಸಂಘದ ಆಡಳಿತ ಮಂಡಳಿಯ ನಿರ್ದೇಶಕರುಗಳ ಚುನಾವಣೆ

09/05/2025 8:31 PM
Expedite survey to collect data on SC reservation Dr Kumar

ಮೇ 28 ರಿಂದ 31 ರವರೆಗೆ ಜಿಲ್ಲೆಯಲ್ಲಿ ಉಪಲೋಕಾಯುಕ್ತರಿಂದ ದೂರು ಸ್ವೀಕಾರ: ಡಾ: ಕುಮಾರ

09/05/2025 8:29 PM
Expedite survey to collect data on SC reservation Dr Kumar

ಪರಿಶಿಷ್ಟ ಜಾತಿ ಒಳಮೀಸಲಾತಿ ದತ್ತಾಂಶ ಸಂಗ್ರಹಿಸಲು ಸಮೀಕ್ಷೆಯನ್ನು ಚುರುಕುಗೊಳಿಸಿ: ಡಾ:ಕುಮಾರ

09/05/2025 8:28 PM
Mock show at KRS on May 11, no panic among public: Dr. Kumara

ಕೆ.ಆರ್.ಎಸ್ ನಲ್ಲಿ ಮೇ 11 ರಂದು ಅಣಕು ಪ್ರದರ್ಶನ, ಸಾರ್ವಜನಿಕರಲ್ಲಿ ಆತಂಕ ಬೇಡ : ಡಾ: ಕುಮಾರ

09/05/2025 8:26 PM
State News
KARNATAKA

ಮೇ.25 ರಂದು ಸಹಕಾರ ಸಂಘದ ಆಡಳಿತ ಮಂಡಳಿಯ ನಿರ್ದೇಶಕರುಗಳ ಚುನಾವಣೆ

By kannadanewsnow0709/05/2025 8:31 PM KARNATAKA 1 Min Read

ಹಾಸನ: ಗಂಡಸಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ, ಅರಸೀಕೆರೆ ತಾಲ್ಲೂಕು ಈ ಸಹಕಾರ ಸಂಘದ ಆಡಳಿತ ಮಂಡಳಿಯ…

Expedite survey to collect data on SC reservation Dr Kumar

ಮೇ 28 ರಿಂದ 31 ರವರೆಗೆ ಜಿಲ್ಲೆಯಲ್ಲಿ ಉಪಲೋಕಾಯುಕ್ತರಿಂದ ದೂರು ಸ್ವೀಕಾರ: ಡಾ: ಕುಮಾರ

09/05/2025 8:29 PM
Expedite survey to collect data on SC reservation Dr Kumar

ಪರಿಶಿಷ್ಟ ಜಾತಿ ಒಳಮೀಸಲಾತಿ ದತ್ತಾಂಶ ಸಂಗ್ರಹಿಸಲು ಸಮೀಕ್ಷೆಯನ್ನು ಚುರುಕುಗೊಳಿಸಿ: ಡಾ:ಕುಮಾರ

09/05/2025 8:28 PM
Mock show at KRS on May 11, no panic among public: Dr. Kumara

ಕೆ.ಆರ್.ಎಸ್ ನಲ್ಲಿ ಮೇ 11 ರಂದು ಅಣಕು ಪ್ರದರ್ಶನ, ಸಾರ್ವಜನಿಕರಲ್ಲಿ ಆತಂಕ ಬೇಡ : ಡಾ: ಕುಮಾರ

09/05/2025 8:26 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.